Homeಮುಖಪುಟ"ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ" ದೆಹಲಿ...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ (ಏ.3) ದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮಾಲೋಚನಾ ಸಭೆಯೊಂದು ವಿಕೋಪಕ್ಕೆ ತಿರುಗಿದ್ದು, ಟ್ರಾನ್ಸ್‌ಜೆಂಡರ್ ಸಮುದಾಯದ ಒಳಗಡೆಯೇ ಜಾತಿ ತಾರತಮ್ಯ ಎಷ್ಟು ಆಳವಾಗಿ ಬೇರೂರಿದೆ ಎಂಬುವುದು ಬಯಲಾಗಿದೆ.

ದಲಿತ ಮತ್ತು ಟ್ರಾನ್ಸ್‌ಜೆಂಡರ್ ಹಕ್ಕುಗಳ ಹಿರಿಯ ಹೋರಾಟಗಾರ್ತಿ ಗ್ರೇಸ್ ಬಾನು ಅವರು ಏಪ್ರಿಲ್ 3ರಂದು ದೆಹಲಿಯ ‘ದಿ ಲಲಿತ್’ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೀವ್ರವಾದ ಮೌಖಿಕ ದಾಳಿ ಮತ್ತು ದೈಹಿಕ ದೌರ್ಜನ್ಯದ ಬೆದರಿಕೆಯನ್ನು ಎದುರಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆಯಲ್ಲಿ ಈ ಭೀಕರ ಅನುಭವದ ಬಗ್ಗೆ ವಿವರವಾದ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.

ಆರಂಭದಲ್ಲಿ, ಈ ಸಮಾಲೋಚನಾ ಸಭೆಯ ಕಾರ್ಯಸೂಚಿಯ ಪ್ರಕಾರ ಪ್ರಖ್ಯಾತ ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರ್ತಿ, ಬಾಲಿವುಡ್ ನಟಿ, ಭರತನಾಟ್ಯ ನೃತ್ಯಗಾರ್ತಿ ಹಾಗೂ ಕಿನ್ನರ್ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಆಗಿರುವ ಲಕ್ಷ್ಮಿ ನಾರಾಯಣ ತ್ರಿಪಾಠಿ (ಎನ್‌ಎನ್‌ಟಿ) ಅವರನ್ನು ಮುಖ್ಯ ಭಾಷಣಕಾರರನ್ನಾಗಿ ನಿಗದಿಪಡಿಸಲಾಗಿತ್ತು.

“ಆಕೆ (ಲಕ್ಷ್ಮಿ ನಾರಾಯಣ ತ್ರಿಪಾಠಿ) ಅನುಸರಿಸುವ ಬ್ರಾಹ್ಮಣ್ಯದ ಹಿಂದುತ್ವ ಸಿದ್ಧಾಂತದ ಕಾರಣದಿಂದಾಗಿ, ಮತ್ತೊಬ್ಬ ಅಂಬೇಡ್ಕರ್ ವಾದಿ ಹೋರಾಟಗಾರ್ತಿ ಮತ್ತು ನಾನು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ್ದೆವು. ನಮ್ಮ ಆಕ್ಷೇಪಣೆಗಳನ್ನು ಪರಿಗಣಿಸಿ, ಆಯೋಜಕರಾದ ಹಮ್‌ಸಫರ್ ಟ್ರಸ್ಟ್, ಕೆಎಸ್‌ಎಫ್ ಮತ್ತು ನಾಜ್ ಸಂಸ್ಥೆಗಳು ಪರಿಷ್ಕೃತ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದವು, ಆ ನಂತರವಷ್ಟೇ ನಾನು ಕಾರ್ಯಕ್ರಮಕ್ಕೆ ಹಾಜರಾದೆ. ಸಮಾಲೋಚನೆಯ ವೇಳೆ, ಲಕ್ಷ್ಮಿ ನಾರಾಯಣ ತ್ರಿಪಾಠಿ ಅವರು ‘ಜೈ ಶ್ರೀ ಮಹಾಕಾಲ್’ ಮತ್ತು ‘ನಾನು ಬ್ರಾಹ್ಮಣಳು ಎಂದು ಹೆಮ್ಮೆಪಡುತ್ತೇನೆ’ ಎಂದು ಹೇಳುವ ಮೂಲಕ ಭಾಷಣ ಪ್ರಾರಂಭಿಸಿದರು; ಇದಕ್ಕೆ ನಾನು ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಅಷ್ಟೇ ಅಲ್ಲದೆ, ಅವರು ಮಾತನಾಡುವಾಗ ಅಥವಾ ಆನಂತರವೂ ನಾನು ಯಾವುದೇ ಅಡ್ಡಿಪಡಿಸಲಿಲ್ಲ ಅಥವಾ ಪ್ರತಿಕ್ರಿಯಿಸಲಿಲ್ಲ. ವಾಸ್ತವವಾಗಿ, ಅವರು ಅಲ್ಲಿ ನೆರೆದಿದ್ದ ಕೆಲವು ಯುವ ಟ್ರಾನ್ಸ್‌ಜೆಂಡರ್‌ಗಳನ್ನು ಅವರು ತಮ್ಮ ಮಕ್ಕಳೆಂದೇ ಕರೆದರು” ಎಂದು ಬಾನು ತಿಳಿಸಿದ್ದಾರೆ.

ಬಾನು ಅವರ ಹೇಳಿಕೆಯ ಪ್ರಕಾರ, ಅವರು ಸಭೆಯನ್ನು “ಜೈ ಭೀಮ್!” ಎಂದು ಸ್ವಾಗತಿಸಿ, “ನಾವೆಲ್ಲರೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ರಮಾಬಾಯಿ ಅವರ ಮೊಮ್ಮಕ್ಕಳು” ಎಂದು ಹೇಳಿದ ನಂತರ ಸಂಘರ್ಷ ಭುಗಿಲೆದ್ದಿದೆ. ಬಾನು ಕೇಂದ್ರದ ತಿದ್ದುಪಡಿ ಕಾಯ್ದೆಯನ್ನು “ಹಿಂದುತ್ವ ಬ್ರಾಹ್ಮಣಶಾಹಿ ಪಿತೃಪ್ರಧಾನ ಕಾಯ್ದೆ” ಎಂದು ಟೀಕಿಸಿದ್ದರು ಎನ್ನಲಾಗಿದೆ.

“ನಾನು ಮಾತನಾಡಿದ ಸಮಿತಿ ಚರ್ಚೆಯು ಊಟದ ಸಮಯಕ್ಕೆ ಹತ್ತಿರವಾಗುತ್ತಿದ್ದಂತೆ ಮುಕ್ತಾಯವಾಯಿತು. ತದನಂತರ, ಲಕ್ಷ್ಮಿ ನಾರಾಯಣ ತ್ರಿಪಾಠಿ ಪ್ರತಿಕ್ರಿಯಿಸಲು ಮುಂದಾದರು. ಸಂಘಟಕರು ಸ್ವಲ್ಪ ಕಾಯುವಂತೆ ಸೂಚಿಸಿದರೂ ಸಹ, ಮೈಕ್ ಕೈಗೆತ್ತಿಕೊಂಡ ತ್ರಿಪಾಠಿ ಅವರು, ಆಕ್ರಮಣಕಾರಿ ಮತ್ತು ಜಾತಿ ನಿಂದನೆಯ ಧಾಟಿಯಲ್ಲಿ ನನ್ನ ಹೆಸರನ್ನು ನೇರವಾಗಿ ಪ್ರಸ್ತಾಪಿಸಿ ಕೂಗಾಡಿದರು. ತಾನು ಬ್ರಾಹ್ಮಣಳು ಎಂಬುದನ್ನು ಪ್ರತಿಪಾದಿಸಿದ ಅವರು, ತಾನೂ ಕೂಡ ಯಾವುದೇ ದಲಿತರಷ್ಟೇ ತುಳಿತಕ್ಕೆ ಒಳಗಾದ ಸಂತ್ರಸ್ತೆ ಎಂದು ವಾದಿಸಿದರು,” ಎಂದು ಬಾನು ವಿವರಿಸಿದ್ದಾರೆ. ಬಾನು ಅವರ ಪ್ರಕಾರ, ಲಕ್ಷ್ಮಿ ಅವರು ಮೈಕ್ ಕಸಿದುಕೊಂಡು, ಜಾತಿವಾದಿ ಧಾಟಿಯಲ್ಲಿ ಬಾನು ಮೇಲೆ ಕಿರುಚಾಡಿದ್ದಾರೆ ಮತ್ತು ತಮ್ಮ ಬ್ರಾಹ್ಮಣ ಅಸ್ಮಿತೆಯನ್ನು ಎತ್ತಿಹಿಡಿದಿದ್ದಾರೆ.

en.themooknayak.com ವರದಿ ಪ್ರಕಾರ, ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಪುರುಷ ಬಾಡಿಬಿಲ್ಡರ್, ವಕೀಲ ಮತ್ತು ಹೋರಾಟಗಾರ ಆರ್ಯನ್ ಪಾಶಾ ಅವರು ಹಿಂದಿಯಲ್ಲಿ ಬಾನು ಅವರ ಮೇಲೆ ಕಿರುಚಾಡಿದಾಗ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿತು: “ನೀನು ನಿಜವಾಗಿಯೂ ಅಂಬೇಡ್ಕರ್ ಮಗಳೇ ಎಂದು ತಿಳಿಯಲು ನಾವು ನಿನ್ನ ಡಿಎನ್ಎ ಪರೀಕ್ಷೆ ಮಾಡುತ್ತೇವೆ!” ಎಂದು ಅವರು ಕೂಗಿದರು. ಬಾನು ಅವರಿಗೆ ಹಿಂದಿ ಅರ್ಥವಾಗುವುದಿಲ್ಲ ಎಂಬುದು ತಿಳಿದಿದ್ದರೂ, ಪಾಶಾ ಅವರು ಮೈಕ್ ಹಿಡಿದು ಅವರ ಬಳಿ ನಡೆದು ಬಂದು, ದೈಹಿಕವಾಗಿ ಹೆದರಿಸುವ ಉದ್ದೇಶದಿಂದ ಅತ್ಯಂತ ಹತ್ತಿರದಲ್ಲಿ ಬೆದರಿಸುವಂತೆ ನಿಂತರು ಎಂದು ಆರೋಪಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೋಯಲ್ ಘೋಷ್ ಎಂಬವರು ಪಾಶಾ ಅವರ ವರ್ತನೆಯನ್ನು ಪ್ರಶ್ನಿಸಿದಾಗ, ಅವರು ಘೋಷ್ ಅವರ ಕಾಲರ್ ಹಿಡಿದು ಎಳೆದಾಡಿದರು ಎಂದು ಆರೋಪಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸಹ-ಪ್ಯಾನಲಿಸ್ಟ್‌ಗಳು ಮಧ್ಯಪ್ರವೇಶಿಸಿ ಅವರನ್ನು ತಡೆಯಬೇಕಾಯಿತು ಎಂದು ವರದಿ ಉಲ್ಲೇಖಿಸಿದೆ.

ಈ ಇಡೀ ಘಟನೆಯುದ್ದಕ್ಕೂ ಬಾನು ಅವರು ಶಾಂತತೆಯನ್ನು ಕಾಪಾಡಿಕೊಂಡರು. ಆಯೋಜಕರಾದ ಹಮ್‌ಸಫರ್ ಟ್ರಸ್ಟ್, ಕೆಎಸ್‌ಎಫ್ ಮತ್ತು ನಾಜ್ ಫೌಂಡೇಶನ್ ನಂತರ ವೈಯಕ್ತಿಕವಾಗಿ ಬಾನು ಅವರ ಕ್ಷಮೆಯಾಚಿಸಿದರಾದರೂ, ಸಾರ್ವಜನಿಕವಾಗಿ ತಟಸ್ಥ ನಿಲುವನ್ನು ತಳೆದರು ಎಂದಿದೆ.

themooknayak.com ಈ ಗಂಭೀರ ಆರೋಪಗಳ ಕುರಿತು ಪ್ರತಿಕ್ರಿಯೆ ಮತ್ತು ವಿವರಣೆ ಕೋರಿ ಲಕ್ಷ್ಮಿ ನಾರಾಯಣ ತ್ರಿಪಾಠಿ ಅವರನ್ನು ಸಂಪರ್ಕಿಸಿತು, ಆದರೆ ಯಾವುದೇ ಪ್ರತಿಕ್ರಿಯೆಗೆ ಅವರು ಲಭ್ಯವಾಗಿಲ್ಲ. ಆಯೋಜಕ ತಂಡದ ಸದಸ್ಯರೊಬ್ಬರು ಸಹ ಈ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಇಂಜಿನಿಯರಿಂಗ್ ಕಾಲೇಜಿಗೆ ಪ್ರವೇಶ ಪಡೆದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಆಗಿರುವ ಗ್ರೇಸ್ ಬಾನು ಅವರು, ಪ್ರಮುಖ ದಲಿತ-ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರ್ತಿ ಹಾಗೂ ‘ಟ್ರಾನ್ಸ್ ರೈಟ್ಸ್ ನೌ ಕಲೆಕ್ಟಿವ್’ (Trans Rights Now Collective) ಸಂಸ್ಥೆಯ ಸಂಸ್ಥಾಪಕಿಯಾಗಿದ್ದಾರೆ. ದಲಿತ ಮತ್ತು ಬಹುಜನ ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ ಸೇರಿದಂತೆ ಅಂತರ್-ವಿಭಾಗೀಯ ಹಕ್ಕುಗಳಿಗಾಗಿ ಅವರು ದೀರ್ಘಕಾಲದಿಂದ ಪ್ರತಿಪಾದಿಸುತ್ತಿದ್ದಾರೆ ಮತ್ತು 2026ರ ತಿದ್ದುಪಡಿ ಮಸೂದೆಯನ್ನು ವಿರೋಧಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಅಂಚಿನಲ್ಲಿರುವ ಸಮುದಾಯಗಳ ಒಳಗೂ ಇರುವ ಜಾತಿ ತಾರತಮ್ಯದ ಕಹಿ ಸತ್ಯವನ್ನು ಈ ಆಘಾತಕಾರಿ ಘಟನೆ ಮತ್ತೊಮ್ಮೆ ಬಯಲು ಮಾಡಿದೆ. ಈ ಘಟನೆಯಿಂದ ತೀವ್ರವಾಗಿ ನೊಂದಿರುವ ಗ್ರೇಸ್ ಬಾನು ನಂತರ ಹೀಗೆ ಬರೆದಿದ್ದಾರೆ, “ನಾನು ಅತ್ಯಂತ ದುಃಖಿತ ಹೃದಯದಿಂದ ಇದನ್ನು ಬರೆಯುತ್ತಿದ್ದೇನೆ… ನನ್ನ ಕೊನೆಯ ಉಸಿರಿರುವವರೆಗೂ ನಾನು ಬಾಬಾಸಾಹೇಬ್ ಮತ್ತು ರಮಾಬಾಯಿಯವರ ಮೊಮ್ಮಗಳು ಎಂದು ಹೇಳುತ್ತಲೇ ಇರುತ್ತೇನೆ. ಜೈ ಭೀಮ್! ಜೈ ರಮಾಬಾಯಿ!”

ಇತ್ತೀಚಿನ ಮಾಹಿತಿಯ ಪ್ರಕಾರ, ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಇತ್ತೀಚೆಗಷ್ಟೇ ಸಂಸತ್ತಿನಲ್ಲಿ ಅಂಗೀಕಾರಗೊಂಡ ಈ ತಿದ್ದುಪಡಿಯು, ಒಬ್ಬ ವ್ಯಕ್ತಿಯು ತನ್ನ ಲಿಂಗವನ್ನು ತಾನೇ ನಿರ್ಧರಿಸಿಕೊಳ್ಳುವ (Self-determination) ಹಕ್ಕನ್ನು ಕಸಿದುಕೊಂಡಿದೆ.

Courtesy : en.themooknayak.com


 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...