Homeಮುಖಪುಟ'Dr. Nimo Yadav', 'Nehr Who' ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

- Advertisement -
- Advertisement -

‘Dr. Nimo Yadav’ ಮತ್ತು ‘Nehr Who’ ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ.

‘Dr. Nimo Yadav’ ಖಾತೆಯನ್ನು ನಿರ್ವಗಹಿಸುತ್ತಿರುವ ಪ್ರತೀಕ್ ಶರ್ಮಾ ಮತ್ತು ‘Nehr Who’ ಖಾತೆಯನ್ನು ನಿರ್ವಹಿಸುತ್ತಿರುವ ಕುಮಾರ್ ನಯನ್ ಅವರು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಒಟ್ಟು 12 ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸಚಿವಾಲಯ ಆದೇಶಿಸಿತ್ತು.

ದೆಹಲಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರು ಖಾತೆಗಳ ಮೇಲಿನ ನಿರ್ಬಂಧ ತಕ್ಷಣ ತೆರವುಗೊಳಿಸಲು ಆದೇಶಿಸಿದ್ದಾರೆ.

ವಕೀಲರಾದ ವೃಂದಾ ಗ್ರೋವರ್ (ಅರ್ಜಿದಾರರ ಪರ) ಮತ್ತು ಎಎಸ್‌ಜಿ ಚೇತನ್ ಶರ್ಮಾ (ಕೇಂದ್ರ ಸರ್ಕಾರದ ಪರ) ನಡುವಿನ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ಈ ಮಹತ್ವದ ಆದೇಶ ನೀಡಿದ್ದಾರೆ.

ಇಡೀ ಎಕ್ಸ್ ಖಾತೆಯನ್ನೇ ನಿರ್ಬಂಧಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಕೇವಲ ಕೆಲವು ವಿವಾದಾತ್ಮಕ ಪೋಸ್ಟ್‌ಗಳಿಗಾಗಿ ಸಂಪೂರ್ಣ ಖಾತೆಯನ್ನು ಸ್ಥಗಿತಗೊಳಿಸುವುದು ಕಾನೂನುಬಾಹಿರ ಎಂದು ಅರ್ಜಿದಾರರ ಪರ ವಕೀಲರಾದ ವೃಂದಾ ಗ್ರೋವರ್ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಸರ್ಕಾರದ ಪರ ವಾದಿಸಿ ಎಎಸ್‌ಜಿ ಚೇತನ್ ಶರ್ಮಾ ಅವರು ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ದೇಶದ ಭದ್ರತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಅಗತ್ಯವಾಗಿತ್ತು ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳು ಸೆಕ್ಷನ್ 69A ಅಡಿಯಲ್ಲಿ ಹೊರಡಿಸಲಾದ ಆದೇಶಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಅಂತಿಮವಾಗಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಮಾತ್ರ ತಡೆಹಿಡಿದು, ಇಡೀ ಖಾತೆಯನ್ನು ಮರುಸ್ಥಾಪಿಸುವುದು ನ್ಯಾಯಸಮ್ಮತ ಎಂದು ಆದೇಶ ನೀಡಿದ್ದಾರೆ.

ಹೈಕೋರ್ಟ್‌ನ ಆದೇಶವು ಕೇವಲ ಖಾತೆಗಳ ಮರುಸ್ಥಾಪನೆಗೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆಯೂ ಸ್ಪಷ್ಟ ನಿರ್ದೇಶನ ನೀಡಿದೆ.

ಅರ್ಜಿದಾರರು (ಖಾತೆದಾರರು) ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ಪರಿಶೀಲನಾ ಸಮಿತಿಯ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಐಟಿ ಕಾಯ್ದೆಯ ಸೆಕ್ಷನ್ 69A ಪ್ರಕಾರ ನಿರ್ದಿಷ್ಟ ಪೋಸ್ಟ್‌ಗಳನ್ನು ನಿರ್ಬಂಧಿಸಿರುವುದು ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಕೇಂದ್ರ ಸರ್ಕಾರವು ಸಮಿತಿಯ ಮುಂದೆ ಸಾಬೀತುಪಡಿಸಬೇಕಾಗುತ್ತದೆ.

ಈ ಪ್ರಕ್ರಿಯೆಯಲ್ಲಿ ‘ನೈಸರ್ಗಿಕ ನ್ಯಾಯದ ತತ್ವ’ಗಳನ್ನು ಪಾಲಿಸಬೇಕು ಎಂದು ಹೈಕೋರ್ಟ್ ಒತ್ತಿ ಹೇಳಿದೆ. ಅಂದರೆ, ಅರ್ಜಿದಾರರಿಗೆ ತಮ್ಮ ವಾದವನ್ನು ಮಂಡಿಸಲು ಪೂರ್ಣ ಅವಕಾಶ ನೀಡಬೇಕು ಮತ್ತು ಯಾವುದೇ ಪೂರ್ವಾಗ್ರಹವಿಲ್ಲದೆ ವಿಚಾರಣೆ ನಡೆಯಬೇಕು ಎಂದರ್ಥ.

ಒಟ್ಟಾರೆಯಾಗಿ, ಸಂಪೂರ್ಣ ಖಾತೆಯನ್ನು ನಿರ್ಬಂಧಿಸುವ ಬದಲು, ಕೇವಲ ಆಕ್ಷೇಪಾರ್ಹ ಅಂಶಗಳನ್ನು ಮಾತ್ರ ಕಾನೂನುಬದ್ಧವಾಗಿ ಪರಿಶೀಲಿಸಲು ನ್ಯಾಯಾಲಯ ಈ ಮಾರ್ಗವನ್ನು ಸೂಚಿಸಿದೆ.

ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮಾರ್ಚ್ 18, 2026 ರಂದು ‘Dr. Nimo Yadav’ ಮತ್ತು ‘Nehr Who’ ಸೇರಿದಂತೆ ಕೆಲವು ಎಕ್ಸ್ ಖಾತೆಗಳನ್ನು ನಿರ್ಬಂಧಿಸಲು ರಹಸ್ಯ ಆದೇಶ ಹೊರಡಿಸಿತ್ತು. 

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಈ ಖಾತೆಗಳು ಅವಹೇಳನಕಾರಿ ಮತ್ತು ತಪ್ಪು ಮಾಹಿತಿ ಹರಡುತ್ತಿವೆ ಎಂದು ಸಚಿವಾಲಯ ವಾದಿಸಿತ್ತು. ಎಡಿಟ್ ಮಾಡಿದ ಫೋಟೋಗಳು, ವಿಡಿಯೋಗಳು ಮತ್ತು ಎಐ ತಂತ್ರಜ್ಞಾನ ಬಳಸಿ ಸಿದ್ಧಪಡಿಸಿದ ಪೋಸ್ಟ್‌ಗಳ ಮೂಲಕ ಸರ್ಕಾರಕ್ಕೆ ಮುಜುಗರ ಉಂಟುಮಾಡಲಾಗುತ್ತಿದೆ ಎಂಬುದು ಸಚಿವಾಲಯದ ಆರೋಪವಾಗಿತ್ತು.

ಇಂತಹ ಪೋಸ್ಟ್‌ಗಳು ಸಾರ್ವಜನಿಕ ಶಾಂತಿಗೆ ಭಂಗ ತರಬಹುದು ಮತ್ತು ದೇಶದ ಭದ್ರತೆಗೆ ಧಕ್ಕೆ ತರಬಹುದು ಎಂದು ಸಚಿವಾಲಯ ಹೇಳಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಈ ಖಾತೆಗಳನ್ನು ನಿರ್ಬಂಧಿಸಲು ಸರ್ಕಾರ ಆದೇಶಿಸಿತ್ತು. ಈ ಕಾಯ್ದೆಯು ದೇಶದ ಸಾರ್ವಭೌಮತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಇಂತಹ ಕ್ರಮಕ್ಕೆ ಅವಕಾಶ ನೀಡುತ್ತದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...