Homeಮುಖಪುಟಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ :...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ (ಏ.5) ಮರುಸೇರ್ಪಡೆಗೊಳಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ನ್ಯಾಯಮಂಡಳಿಯು ನಿರ್ಧರಿಸಿದ ಮೊದಲ ಪ್ರಕರಣ ಶೇಖ್ ಅವರದ್ದಾಗಿದೆ. ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರು ತಮ್ಮ ಆದೇಶದಲ್ಲಿ, ಶೇಖ್ ಅವರ ಹೆಸರು ಕೈಬಿಟ್ಟ ಕಾರಣಗಳನ್ನು ಚುನಾವಣಾ ಆಯೋಗ ಒದಗಿಸಿಲ್ಲ. ಇದಕ್ಕೆ ಅವರು ‘ತಾಂತ್ರಿಕ ಕಾರಣಗಳನ್ನು’ ಉಲ್ಲೇಖಿಸಿದ್ದಾರೆ ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದ್ದು, ಫಲಿತಾಂಶವು ಮೇ 4ರಂದು ಪ್ರಕಟವಾಗಲಿದೆ.

ಚುನಾವಣೆ ಮುಂಚಿತವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆದ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು 9 ರಾಜ್ಯಗಳಲ್ಲಿ ಪಶ್ಚಿಮ ಬಂಗಾಳವೂ ಸೇರಿದೆ.

ಎಸ್‌ಐಆರ್‌ ಬಳಿಕ 2026ರ ಫೆಬ್ರವರಿ 28ರಂದು ಚುನಾವಣಾ ಆಯೋಗ ಮೊದಲ ಮತದಾರರ ಪಟ್ಟಿ ಪ್ರಕಟಿಸಿತ್ತು. ಇದರಲ್ಲಿ ಬರೋಬ್ಬರಿ 61 ಲಕ್ಷ ಹೆಸರುಗಳನ್ನು ಕೈಬಿಡಲಾಗಿತ್ತು. ಇದಕ್ಕೂ ಮೊದಲು 2025ರ ಡಿಸೆಂಬರ್‌ನಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಕರಡು ಪಟ್ಟಿಯಲ್ಲಿ ಹೆಸರು ಕೈಬಿಟ್ಟಿರುವುದರ ವಿರುದ್ಧ ಸಲ್ಲಿಸಲಾದ ಆಕ್ಷೇಪಣೆಗಳ ಆಧಾರದ ಮೇಲೆ, ಸುಮಾರು 60 ಲಕ್ಷ “ಸಂದೇಹಾಸ್ಪದ ಮತ್ತು ಬಾಕಿ ಉಳಿದಿರುವ” ಪ್ರಕರಣಗಳ ನ್ಯಾಯ ನಿರ್ಣಯ ಪ್ರಕ್ರಿಯೆಯು ಮುಂದುವರಿದಿದೆ.

ಎಸ್‌ಐಆರ್‌ ಕಾರ್ಯ ಪೂರ್ಣಗೊಳಿಸಲು ಸಹಾಯ ಮಾಡುವ ಸಲುವಾಗಿ ಜಿಲ್ಲಾ ನ್ಯಾಯಾಧೀಶರು ಅಥವಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ 2026ರ ಫೆಬ್ರವರಿ 20ರಂದು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ವಿರುದ್ಧದ ಮೇಲ್ಮನವಿಗಳ ವಿಚಾರಣೆಗಾಗಿ, ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಾಧೀಶರನ್ನು ಒಳಗೊಂಡ ಮೇಲ್ಮನವಿ ನ್ಯಾಯಮಂಡಳಿಯನ್ನು (Appellate Tribunal) ರಚಿಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 10ರಂದು ಆದೇಶಿಸಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸುವ ಅರ್ಜಿಯನ್ನು ನ್ಯಾಯಾಂಗ ಅಧಿಕಾರಿಯು ತಿರಸ್ಕರಿಸಿದಲ್ಲಿ, ಅಂತಹ ವ್ಯಕ್ತಿಯು ಈ ಮೇಲ್ಮನವಿ ನ್ಯಾಯಮಂಡಳಿಯ ಮೊರೆ ಹೋಗಬಹುದು.

ಮತದಾನ ದಿನಾಂಕ ಹತ್ತಿರ ಬರುತ್ತಿದ್ದರೂ, ತಾನು ರಚಿಸಿದ 19 ನ್ಯಾಯಮಂಡಳಿಗಳನ್ನು ಚುನಾವಣಾ ಆಯೋಗವು ಇನ್ನೂ ಭೌತಿಕವಾಗಿ ಸ್ಥಾಪಿಸಿಲ್ಲ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶೇಖ್ ಅವರ ಪ್ರಕರಣದ ಆದೇಶವು “ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೇಗೆ ಅಳಿಸಲಾಗಿದೆ ಎಂಬುದನ್ನು ಸಾಬೀತುಪಡಿಸುತ್ತದೆ” ಎಂದು ಅವರ ವಕೀಲರಾದ ಫಿರ್ದೌಸ್ ಶಮೀಮ್ ಹೇಳಿದ್ದಾರೆ.

ನ್ಯಾಯಮಂಡಳಿ ಹೇಳಿದ್ದೇನು?

ಭಾನುವಾರ (ಏ.5) ರಾತ್ರಿ 8 ಗಂಟೆಯೊಳಗೆ ಹೆಚ್ಚುವರಿ ಪಟ್ಟಿಯ ಮೂಲಕ ಶೇಖ್ ಅವರನ್ನು ಮುರ್ಷಿದಾಬಾದ್‌ನ ಮಾನ್ಯ ಮತದಾರರೆಂದು ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ನ್ಯಾಯಮೂರ್ತಿ ಶಿವಜ್ಞಾನಂ ಅವರ ನಿರ್ದೇಶನ ನೀಡಿದ್ದಾರೆ.

ಶೇಖ್ ಸಲ್ಲಿಸಿದ ಪಾಸ್‌ಪೋರ್ಟ್ ಸರಿಯಾದ ಪುರಾವೆಯಾಗಿದೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಅಲ್ಲದೆ, ಶೇಖ್ ತಂದೆಯ ಹೆಸರಿನಲ್ಲಿ ಯಾವುದೇ ವ್ಯತ್ಯಾಸವಿಲ್ಲದಿರುವುದನ್ನು ಎಲ್ಲಾ ದಾಖಲೆಗಳಲ್ಲಿಯೂ ಅವರು ಬೆಟ್ಟು ಮಾಡಿದ್ದಾರೆ.

“ಮೇಲ್ಮನವಿದಾರರು (ಮೊತಾಬ್ ಶೇಖ್) ತಮ್ಮ ವಂಶವೃಕ್ಷವನ್ನೂ (family tree) ನ್ಯಾಯಮಂಡಳಿಯ ಮುಂದೆ ಮಂಡಿಸಿದ್ದಾರೆ. ತಮ್ಮ ಆರು ಮಂದಿ ಒಡಹುಟ್ಟಿದವರು, ಅವರ ಸಂಗಾತಿಗಳು ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಉಳಿದೆಲ್ಲಾ ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿವೆ ಮತ್ತು ಅಲ್ಲಿ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ” ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಶೇಖ್ ಅವರ ಹೆಸರನ್ನು ಕೈಬಿಡಲು ನ್ಯಾಯಾಂಗ ಅಧಿಕಾರಿಯು ನೀಡಿದ ಕಾರಣಗಳನ್ನು ಪರಿಶೀಲಿಸಲು ತನಗೆ ಸಾಧ್ಯವಾಗಿಲ್ಲ ಎಂದೂ ನ್ಯಾಯಮೂರ್ತಿ ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ಕೈಬಿಟ್ಟಿರುವುದರ ವಿರುದ್ಧ ನ್ಯಾಯಮಂಡಳಿಯನ್ನು ಸಂಪರ್ಕಿಸುವಂತೆ ಏಪ್ರಿಲ್ 2ರಂದು ಸುಪ್ರೀಂ ಕೋರ್ಟ್ ಶೇಖ್ ಅವರಿಗೆ ಸೂಚಿಸಿತ್ತು. ಇದಾಗಿ ಕೆಲ ದಿನಗಳಲ್ಲಿ ಈ ಬೆಳವಣಿಗೆ ನಡೆಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಶೇಖ್ ಅವರು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಮರುಸ್ಥಾಪಿಸಲು ಮತ್ತು ನಾಮಪತ್ರ ಸಲ್ಲಿಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇಲ್ಮನವಿ ನ್ಯಾಯಮಂಡಳಿಗಳನ್ನು ತಕ್ಷಣವೇ ಕಾರ್ಯರೂಪಕ್ಕೆ ತರಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆಯೂ ಅವರು ಕೋರಿದ್ದರು.

ತೀರ್ಪು ನೀಡಿದ ನಂತರ ಚುನಾವಣಾ ಆಯೋಗವು ಹಲವಾರು ಪೂರಕ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ.ಶನಿವಾರದವರೆಗೆ 60 ಲಕ್ಷ ಪ್ರಕರಣಗಳ ಪೈಕಿ 57 ಲಕ್ಷ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯನ್ನು ಉಲ್ಲೇಖಿಸಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಆದಾಗ್ಯೂ, ಈ ಪ್ರಕರಣಗಳ ಪೈಕಿ ಎಷ್ಟು ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ ಎಂಬ ಬಗ್ಗೆ ಚುನಾವಣಾ ಆಯೋಗವು ಸ್ಪಷ್ಟಪಡಿಸಿಲ್ಲ.

ನ್ಯಾಯಾಂಗ ಅಧಿಕಾರಿಗಳು ಸುಮಾರು 49 ಲಕ್ಷ ಪ್ರಕರಣಗಳ ಕುರಿತು ನಿರ್ಧಾರ ಕೈಗೊಂಡಾಗ, ಅದರಲ್ಲಿ ಸುಮಾರು 22 ಲಕ್ಷ ಅಂದರೆ ಶೇಕಡ 45 ರಷ್ಟು ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...