Homeಮುಖಪುಟಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ.

ಉಭಯ ಸದನಗಳ ಮುಖ್ಯಸ್ಥರು ತಮ್ಮ ನಿರ್ಧಾರಕ್ಕೆ ನಿರ್ದಿಷ್ಟ ಕಾರಣಗಳನ್ನು ಒದಗಿಸಿಲ್ಲ ಎಂದು ವರದಿಗಳು ಹೇಳಿವೆ.

ಮಾರ್ಚ್ 12ರಂದು ಸಲ್ಲಿಸಲಾದ ನೋಟೀಸ್‌ಗಳಿಗೆ ರಾಜ್ಯಸಭೆಯ 63 ಸದಸ್ಯರು ಮತ್ತು ಲೋಕಸಭೆಯ 130 ಸಂಸದರು ಸಹಿ ಹಾಕಿದ್ದರು. ಈ ಮೂಲಕ ನೋಟಿಸ್ ಅಗತ್ಯಕ್ಕೆ ತಕ್ಕ ಸಹಿ ಪಡೆದಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದಲ್ಲಿ ವಿಪಕ್ಷಗಳು, ಜ್ಞಾನೇಶ್ ಕುಮಾರ್ ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಪಕ್ಷಪಾತಿ ಮತ್ತು ತಾರತಮ್ಯದ ನಡವಳಿಕೆ ತೋರುತ್ತಿದ್ದಾರೆ ಎಂದು ಆರೋಪಿಸಿತ್ತು.

ಚುನಾವಣಾ ಅಕ್ರಮಗಳ ತನಿಖೆಗೆ ಜ್ಞಾನೇಶ್ ಕುಮಾರ್ ಅಡ್ಡಿಪಡಿಸಿದ್ದಾರೆ. ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಟಿಎಂಸಿ ಆರೋಪ ಮಾಡಿತ್ತು.

ವರದಿಗಳ ಪ್ರಕಾರ, ಸೋಮವಾರ ಹೊರಡಿಸಲಾದ ಸಂಸತ್ತಿನ ಬುಲೆಟಿನ್‌ಗಳ ಮೂಲಕ ನೋಟಿಸ್‌ಗಳನ್ನು ತಿರಸ್ಕರಿಸಿರುವ ನಿರ್ಧಾರಗಳನ್ನು ತಿಳಿಸಲಾಗಿದೆ. ಸೂಕ್ತ ಪರಿಗಣನೆ ಮತ್ತು ಎಲ್ಲಾ ಸಂಬಂಧಿತ ಆಯಾಮಗಳು ಹಾಗೂ ವಿಷಯಗಳ ಬಗ್ಗೆ ಎಚ್ಚರಿಕೆಯ ಮತ್ತು ವಸ್ತುನಿಷ್ಠ ಮೌಲ್ಯಮಾಪನ ಮಾಡಿದ ನಂತರ ನೋಟಿಸ್‌ಗಳನ್ನು ತಿರಸ್ಕರಿಸಲಾಗಿದೆ ಎಂದು ಬುಲೆಟಿನ್‌ಗಳಲ್ಲಿ ಹೇಳಲಾಗಿದೆ.

“1968ರ ನ್ಯಾಯಾಧೀಶರ ವಿಚಾರಣಾ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಉಲ್ಲೇಖಿಸಿ ಅಧ್ಯಕ್ಷೀಯ ಅಧಿಕಾರಿಗಳು (ಪೀಠಾಧ್ಯಕ್ಷರು) ಈ ಕ್ರಮ ಕೈಗೊಂಡಿದ್ದಾರೆ. ಲಭ್ಯವಿರುವ ದಾಖಲೆಗಳ ಮರುಪರಿಶೀಲನೆ ಮತ್ತು ಸಮಾಲೋಚನೆಯ ನಂತರ ಇಂತಹ ನಿರ್ಣಯಗಳನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರವನ್ನು ಈ ಕಾಯ್ದೆಯು ಅವರಿಗೆ ನೀಡುತ್ತದೆ” ಎಂದು ವರದಿಗಳು ಹೇಳಿವೆ.

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಗೊಳಿಸುವ ಪ್ರಕ್ರಿಯೆಯು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರಂತೆಯೇ ಇರುತ್ತದೆ.

ಲೋಕಸಭೆಯ 100 ಸದಸ್ಯರು ಮತ್ತು ರಾಜ್ಯಸಭೆಯ 50 ಸದಸ್ಯರು ಸಹಿ ಮಾಡಿದರೆ ಮಾತ್ರ ವಜಾ ನಿರ್ಣಯದ ಪ್ರಕ್ರಿಯೆ ಆರಂಭಿಸಲು ಸಾಧ್ಯವಾಗುತ್ತದೆ. ಒಂದು ವೇಳೆ ಈ ನಿರ್ಣಯವು ಎರಡೂ ಸದನಗಳಲ್ಲಿ ಅಂಗೀಕಾರಗೊಂಡರೆ, ಈ ಬಗ್ಗೆ ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗುತ್ತದೆ. ಸಮಿತಿಯು ದುರ್ನಡತೆಯನ್ನು ಪತ್ತೆಹಚ್ಚಿದರೆ ಮಾತ್ರ ಸಂಸತ್ತಿನಲ್ಲಿ ಮತದಾನ ನಡೆಯುತ್ತದೆ. ಈ ನಿರ್ಣಯಕ್ಕೆ ಮೂರನೇ ಎರಡರಷ್ಟು (2/3) ಬಹುಮತ ದೊರೆತರೆ, ಚುನಾವಣಾ ಆಯುಕ್ತರನ್ನು ಪದಚ್ಯುತಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗುತ್ತದೆ.

ಸೋಮವಾರ, ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಸಾಮಾಜಿಕ ಮಾಧ್ಯಮದಲ್ಲಿ ನೋಟಿಸ್ ತಿರಸ್ಕಾರಕ್ಕೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಎಂದು ಹೇಳಿದ್ದು, ಕೇಂದ್ರ ಸರ್ಕಾರ ನಮ್ಮ ಮಹಾನ್ ಸಂಸತ್ತನ್ನು ಅಪಹಾಸ್ಯ ಮಾಡುತ್ತಿದೆ ಎಂದಿದ್ದಾರೆ.

“ವಿರೋಧ ಪಕ್ಷಗಳ ಸಂಸದರು ಸಲ್ಲಿಸಿದ್ದ ನೋಟಿಸ್ ಸ್ವೀಕರಿಸಿದ್ದ ರಾಜ್ಯಸಭೆಯ ಕೊನೆಯ ಅಧ್ಯಕ್ಷರಿಗೆ ಏನಾಯಿತು ಎಂಬುವು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

2025ರ ಜುಲೈನಲ್ಲಿ, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರನ್ನು ವಜಾಗೊಳಿಸುವಂತೆ ಕೋರಿ ವಿರೋಧ ಪಕ್ಷಗಳು ಸಲ್ಲಿಸಿದ್ದ ನೋಟಿಸ್ ಅನ್ನು ಅಂಗೀಕರಿಸಲಾಗಿದೆ ಎಂದು ವರದಿಯಾಗಿತ್ತು. ನಂತರ, ಆ ಸಮಯದಲ್ಲಿ ರಾಜ್ಯಸಭೆಯ ಅಧ್ಯಕ್ಷರಾಗಿದ್ದ ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಅನಾರೋಗ್ಯದ ಕಾರಣಗಳನ್ನು ನೀಡಿ ಹಠಾತ್ ರಾಜೀನಾಮೆ ನೀಡಿದ್ದರು.

ಧನ್ಕರ್ ಅವರ ಹಠಾತ್ ರಾಜೀನಾಮೆಯ ಬಗ್ಗೆ ಹಲವಾರು ವಿರೋಧ ಪಕ್ಷಗಳ ನಾಯಕರು ಪ್ರಶ್ನೆಗಳನ್ನು ಎತ್ತಿದ್ದರು. ಧನ್ಕರ್ ಅವರ ನಿರ್ಧಾರದ ಹಿಂದೆ ದೊಡ್ಡ ಕಾರಣಗಳಿವೆ ಎಂದು ಜೈರಾಮ್ ರಮೇಶ್ ಆ ಸಮಯದಲ್ಲಿ ಹೇಳಿದ್ದರು.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...