Homeಕರ್ನಾಟಕಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

ಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

- Advertisement -
- Advertisement -

ಒಂದು ಪತ್ರ

‘ಪೌರತ್ವ’ ಕಾಯ್ದೆಯನ್ನು ವಿರೋಧಿಸಿ ಇತ್ತೀಚೆಗೆ ಮಂಗಳೂರಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್‍ನಿಂದ ಇಬ್ಬರು ಮೃತಪಟ್ಟು ಅನೇಕರು ಗಾಯಗೊಂಡಿರುವ ಸುದ್ದಿಯ ಗಂಭೀರತೆಯನ್ನು ತಗ್ಗಿಸಲು ಕೆಲವೂಂದು ಟಿ.ವಿ. ವಾಹಿನಿಗಳು ಪ್ರಯತ್ನಿಸುತ್ತಿದೆ. ಉತ್ತರಪ್ರದೇಶದಲ್ಲಿ ಸಂಘಪರಿವಾರದ ಜನರು ಹಾಡುಹಗಲೇ ಪೊಲೀಸರನ್ನು ಅಟ್ಟಾಡಿಸಿಕೊಂಡು ಕೊಂದ ಹಾಗೂ ಅವರ ಜೀಪಿನಲ್ಲಿಯೇ ಹತ್ಯೆಮಾಡಿದಾಗ ಜಾಗ್ರತಗೊಳ್ಳದ ಪೊಲೀಸ್‍ಪ್ರೇಮ ಈಗ ಯಡಿಯೂರಪ್ಪರವರ ನೆಚ್ಚಿನ ಪದದಲ್ಲಿ ಹೇಳುವುದಾದರೆ ನೂರಕ್ಕೆ ನೂರು ಜಾಗೃತವಾಗಿದೆ. ಅದಿರಲಿ.

ಪ್ರತಿಭಟನೆಯ ದೃಶ್ಯಾವಳಿಯ ತುಣುಕುಗಳನ್ನು ಪೋಣಿಸಿ ಪ್ರತಿಭಟನಾಕಾರರನ್ನೇ ಅಪರಾಧಿಗಳು ಎಂಬಂತೆ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿರುವ ಕನ್ನಡದ ಕೆಲವು ವಾಹಿನಿಗಳ ಮನೋಸ್ಥಿತಿ ಇಲ್ಲಿಯ ಮುಸ್ಲಿಮರಿಗೆ ಅಜ್ಞಾತವಲ್ಲ.

ಪಬ್ಲಿಕ್ ಟಿ.ವಿ. ಎಂಬ ಒಂದು ವಾಹಿನಿ ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೂಳಿಸಿದ ದೃಶ್ಯಾವಳಿಗಳ ಕುರಿತು ನಡೆಸಿದ ಪ್ಯಾನಲ್ ಚರ್ಚೆಯಲ್ಲಿ ಆ್ಯಂಕರ್‍ನೊಬ್ಬ ಪ್ರತಿಭಟನೆಗಾರರ ಪರವಾಗಿ ಭಾಗವಹಿಸಿದ ಅಶ್ರಫ್ ಎಂಬವರಿಗೆ ಎನ್.ಆರ್.ಸಿ, ಸಿ.ಎ.ಎ. ಎಂದರೇನೆಂದು ಎಂಬ ಪ್ರಶ್ನೆಯನ್ನು ಕೀ ಕೊಟ್ಟ ಗೊಂಬೆಯಂತೆ ಪುನರಾವರ್ತಿಸಿ ಅತನ ಚಾನಲ್ ಪ್ರಸಾರಗೊಳಿಸಿದ ದೃಶ್ಯಾವಳಿಯ ಸಾಚಾತನವನ್ನು ಪ್ರಶ್ನಿಸಲು ಅವಕಾಶವನ್ನೇ ಕೊಡಲಿಲ್ಲ. ಚರ್ಚೆಯ ನಡುವೆ ಅದರ ತುಣುಕುಗಳನ್ನು ಪ್ರಸಾರಗೊಳಿಸುತ್ತಲೂ ಇದ್ದರು. ಆದರೆ ಕ್ಯಾಪ್ಟನನ ಚಾನೆಲ್ ನೈಜಸಂಗತಿ ಹೊರಬಾರದಂತೆ ಪೌರತ್ವದ ಬೇಲಿ ಹಾಕಿತು. ಚಾಣಕ್ಯರಾದ ಅಶ್ರಫ್ ಬಾರಿಬಾರಿಗೂ ಚರ್ಚೆಯ ದಿಕ್ಕು ತಪ್ಪಿಸಬೇಡಿ ಎಂದು ವಿನಂತಿಸಿದರೂ ಪ್ರಯೋಜನವಾಗಲಿಲ್ಲ. ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೊಳಿಸಿದಂತೆ ಅವರು ನಡೆಸಿದ ದೌರ್ಜನ್ಯದ ದೃಶ್ಯಾವಳಿಗಳು ಲೋಕವನ್ನೆಲ್ಲ ಜಾಲಾಡುವ ಈ ಚಾನಲ್‍ಗೆ ಲಭ್ಯವಾಗದೆ ಹೋಯಿತೇ? ಸಂಘರ್ಷಪೀಡಿತ ಸಿರಿಯಾದ ಪಟ್ಟಣವಾದ ‘ಇದ್ಲಿಬ್’ಅನ್ನು ‘ಇದ್ರಿಸ್’ ಎಂದು ಉಚ್ಚರಿಸುವ ವಾಹಿನಿಯ ಕ್ಯಾಪ್ಟನ್ (ಹೀಗೆಂದು ಅಕ್ಕರೆಯಿಂದ ಕರೆಯುತ್ತಿದ್ದ ಒಬ್ಬ ಆ್ಯಂಕರ್ ಈಗ ಬೇರೊಂದು ಚಾನೆಲ್‍ನಲ್ಲಿದ್ದಾರೆ) ಮುಸ್ಲಿಮರ ಪರವಾಗಿ ಪ್ರಕಟಿಸದಿರಲು (ಎಲ್ಲಾ ಚಾನೆಲ್‍ಗಳು ಹಾಗೆ ಪ್ರಸಾರಗೊಳಿಸಿದ ನಂತರ) ಅಸಾಧ್ಯವಾದಾಗ ಒಂದು ಔದಾರ್ಯವೆಂಬಂತೆ ಪ್ರಸಾರಗೊಳಿಸುತ್ತಿರುವುದನ್ನು ಮುಸ್ಲಿಮರು ಬಲ್ಲರು. ಆತನ ಹಾವಭಾವ, ಮಾತಿನ ಶೈಲಿ, ಸ್ವರಗಳ ಏರಿಳಿತದಿಂದ ಇದನ್ನು ಗಮನಿಸಬಹುದಾಗಿದೆ. ಬಾರಿಬಾರಿಗೂ ತನ್ನನ್ನು ಚೆಡ್ದಿ ಎಂದು ಕರೆಯುತ್ತಾರೆಂದು ಅವಲತ್ತುಕೊಳ್ಳುವ ಅಥವಾ ಸಂತೋಷಪಡುವ ಕ್ಯಾಪ್ಟನ್ ಈಗ ಪ್ಯಾಂಟ್ ಬಂದಿರುವುದರಿಂದ ಚೆಡ್ಡಿ ಕಾಲಹರಣಗೊಂಡಿದೆಯೆಂದು ನೆನಪಿಸಿ ಕೊಡುವುದನ್ನು ಮರೆಯುವುದಿಲ್ಲ.

ಕೆಲವು ಚಾನೆಲ್‍ಗಳು ಮುಸ್ಲಿಮರ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಾಗ ಒಂದಿಬ್ಬರು ಕಾಯಂ ಗಿರಾಕಿಗಳನ್ನು ಪ್ಯಾನೆಲ್‍ನಲ್ಲಿ ಕೂರಿಸಿ ಪೂರ್ವ ನಿರ್ಧರಿತವಾದಂತೆ ಸೋಲಿಸಿ ಹಿಂದೆ ಕಳುಹಿಸಿಬಿಡುತ್ತವೆ. ಜಿಲ್ಲೆಯ ವಿದ್ಯಾವಂತ, ಬುದ್ಧಿವಂತ ಮುಸ್ಲಿಮ್ ಪ್ರತಿಭೆಗಳನ್ನು ಪ್ಯಾನಲ್ ಚರ್ಚೆಗೆ ಕೂರಿಸುವ ಧೈರ್ಯ ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ಮುಸ್ಲಿಮರ ನೈಜ ಸಮಸ್ಯೆಗಳು ಹೊರಬರುವುದು ಅವರಿಗೆ ಬೇಕಿಲ್ಲ.
ಪೌರತ್ವ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದಿಂದ ಬರುವ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ಲಭಿಸುತ್ತದೆ. ಅಕ್ರಮ ವಲಸಿಗನಾದ ಓರ್ವ ಮುಸ್ಲಿಮ್ ಹಿಂದೂಧರ್ಮಕ್ಕೆ ಮತಾಂತರವಾದರೆ ಅವನಿಗೆ ಪೌರತ್ವ ಲಭಿಸುತ್ತದೆಯೇ? ಹಾಗೆಯೇ ಓರ್ವ ಹಿಂದೂ ಇಸ್ಲಾಮಿಗೆ ಮತಾಂತರವಾದರೆ ಅವನ ಪೌರತ್ವ ರದ್ದಾಗುತ್ತದೆಯೇ? ಒಟ್ಟಾರೆಯಗಿ ಧರ್ಮಾಧಾರಿತ ಪೌರತ್ವ ಸಂವಿಧಾನದ ಮೂಲಭೂತ ಸ್ವರೂಪಕ್ಕೆ ವಿರುದ್ಧವಾಗಿದೆ.

ಕನ್ನಡದ ಚಾನೆಲ್‍ಗಳು ದಿನಬೆಳಗಾದರೆ ಪ್ರಸಾರಗೊಳಿಸುತ್ತಿರುವ ಜ್ಯೋತಿಷ್ಯ, ಫಲ ಜ್ಯೋತಿಷ್ಯ, ವಾಸ್ತು, ಹೀಗೂ ಉಂಟೇ? ಮುಂತಾದ ಕಾರ್ಯಕ್ರಮದ ಪ್ರಕಾರ ಈ ಲೋಕ ಅದೆಷ್ಟೋ ಸಲ ನಿರ್ನಾಮವಾಗಬೇಕಿತ್ತು| ಕರಾವಳಿಯಂತೂ ನೂರಾರುಬಾರಿ ಸುನಾಮಿಗೆ ಕೊಚ್ಚಿಹೋಗಬೇಕಿತ್ತು| ಮಲೆಯಾಳಂ ಚಾನೆಲ್‍ಗಳು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಲು ಪ್ರಯತ್ನಿಸುವಾಗ ನಮ್ಮ ಕೆಲವು ಚಾನೆಲ್‍ಗಳು ಜನರನ್ನು ಮೂಢನಂಬಿಕೆ, ಕಂದಾಚಾರಗಳ ಕೂಪಕ್ಕೆ ತಳ್ಳುತ್ತಿದೆ. ನಮ್ಮ ಚಾನೆಲ್‍ಗಳು ಹತ್ತಿಪ್ಪತ್ತು ಮಂದಿಯನ್ನು ಗುಡ್ಡೆ ಹಾಕಿಕೊಂಡು ಚಾನೆಲನ್ನು ಮೀನು ಮಾರುಕಟ್ಟೆಯಾಗಿ ಮಾರ್ಪಡಿಸಿರುವ ಸುಳ್ಳಿನ ಸರದಾರ ಅರ್ನಾಬ್ ಗೋಸ್ವಾಮಿಯನ್ನು ಅನುಸರಿಸುವ ಬದಲು ಎನ್.ಡಿ.ಟಿ.ವಿ.ಯ ರವೀಶ್‍ಕುಮಾರ್ ಹಾಗೂ ಇಂಡಿಯಾ ಟುಡೆಯ ರಾಜ್‍ದೀಪ್ ಸರ್ದೇಸಾಯಿ ಅವರನ್ನು ಅನುಸರಿಸಲಿ. ಬಿ.ಬಿ.ಸಿ, ಸಿ.ಎನ್.ಎನ್, ಅಲ್ ಜಝೀರ ಪ್ರಸಾರಗೊಳಿಸುವ ಅಂತರ್ ರಾಷ್ಟ್ರೀಯ ಸುದ್ದಿಗಳನ್ನು ಮರುಪ್ರಸಾರಗೊಳಿಸಿ (ಮೌಢ್ಯ ಬಿತ್ತರಿಸುವ ಬದಲಿಗೆ) ತಮ್ಮ ಚಾನೆಲ್‍ಗಳ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಲಿ. ರಿಮೋಟ್ ಜನರ ಕೈಯಲ್ಲಿಯೇ ಇರುವುದರಿಂದ ಜನರು ತಾವು ಹೇಳಿದ್ದನ್ನೇ ಪರಮಸತ್ಯವೆಂದು ನಂಬುತ್ತಾರೆ ಎಂಬ ಭ್ರಮೆ ಯಾರಿಗೂ ಬೇಡ.

ಜಿಲ್ಲೆಯಮಟ್ಟಿಗೆ ಹೇಳುವುದಾದರೆ ಬೆಳಗ್ಗಿನ ಪತ್ರಿಕೆಗಳಿಗಿಂತ ಸಂಜೆ ಪತ್ರಿಕೆಗಳೇ ಹೆಚ್ಚು ಜಾತ್ಯತೀತವಾದಿಯಾಗಿವೆ. ಅವುಗಳ ಸಂಘಪರಿವಾರಕ್ಕೆ ನೀಡಿದಷ್ಟೇ ಪ್ರಾಮುಖ್ಯತೆಯನ್ನು ಇತರರಿಗೂ ನೀಡುವ ಮೂಲಕ ತಕ್ಕಡಿಯ ಮುಳ್ಳನ್ನು ನೇರವಾಗಿರಿಸಲು ಪ್ರಯತ್ನಿಸುತ್ತಿದೆ. ರಾಜ್ಯಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜಾವಾಣಿ, ವಾರ್ತಾಭಾರತಿ, ನ್ಯಾಯಪಥದಂತಹ ಪತ್ರಿಕೆಗಳಿರುವಂತೆ ಒಂದು ಚಾನಲ್‍ನ ಅಗತ್ಯವಿದೆ. ಜಾತ್ಯತೀತ ಪ್ರೇಮಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವರೆಂದು ಆಶಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...