Homeಕರ್ನಾಟಕಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

ಮಂಗಳೂರು ಪ್ರತಿಭಟನೆ ಕನ್ನಡ ನ್ಯೂಸ್ ಚಾನೆಲ್‍ಗಳ ಪಕ್ಷಪಾತದ ಧೋರಣೆ

- Advertisement -
- Advertisement -

ಒಂದು ಪತ್ರ

‘ಪೌರತ್ವ’ ಕಾಯ್ದೆಯನ್ನು ವಿರೋಧಿಸಿ ಇತ್ತೀಚೆಗೆ ಮಂಗಳೂರಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್‍ನಿಂದ ಇಬ್ಬರು ಮೃತಪಟ್ಟು ಅನೇಕರು ಗಾಯಗೊಂಡಿರುವ ಸುದ್ದಿಯ ಗಂಭೀರತೆಯನ್ನು ತಗ್ಗಿಸಲು ಕೆಲವೂಂದು ಟಿ.ವಿ. ವಾಹಿನಿಗಳು ಪ್ರಯತ್ನಿಸುತ್ತಿದೆ. ಉತ್ತರಪ್ರದೇಶದಲ್ಲಿ ಸಂಘಪರಿವಾರದ ಜನರು ಹಾಡುಹಗಲೇ ಪೊಲೀಸರನ್ನು ಅಟ್ಟಾಡಿಸಿಕೊಂಡು ಕೊಂದ ಹಾಗೂ ಅವರ ಜೀಪಿನಲ್ಲಿಯೇ ಹತ್ಯೆಮಾಡಿದಾಗ ಜಾಗ್ರತಗೊಳ್ಳದ ಪೊಲೀಸ್‍ಪ್ರೇಮ ಈಗ ಯಡಿಯೂರಪ್ಪರವರ ನೆಚ್ಚಿನ ಪದದಲ್ಲಿ ಹೇಳುವುದಾದರೆ ನೂರಕ್ಕೆ ನೂರು ಜಾಗೃತವಾಗಿದೆ. ಅದಿರಲಿ.

ಪ್ರತಿಭಟನೆಯ ದೃಶ್ಯಾವಳಿಯ ತುಣುಕುಗಳನ್ನು ಪೋಣಿಸಿ ಪ್ರತಿಭಟನಾಕಾರರನ್ನೇ ಅಪರಾಧಿಗಳು ಎಂಬಂತೆ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿರುವ ಕನ್ನಡದ ಕೆಲವು ವಾಹಿನಿಗಳ ಮನೋಸ್ಥಿತಿ ಇಲ್ಲಿಯ ಮುಸ್ಲಿಮರಿಗೆ ಅಜ್ಞಾತವಲ್ಲ.

ಪಬ್ಲಿಕ್ ಟಿ.ವಿ. ಎಂಬ ಒಂದು ವಾಹಿನಿ ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೂಳಿಸಿದ ದೃಶ್ಯಾವಳಿಗಳ ಕುರಿತು ನಡೆಸಿದ ಪ್ಯಾನಲ್ ಚರ್ಚೆಯಲ್ಲಿ ಆ್ಯಂಕರ್‍ನೊಬ್ಬ ಪ್ರತಿಭಟನೆಗಾರರ ಪರವಾಗಿ ಭಾಗವಹಿಸಿದ ಅಶ್ರಫ್ ಎಂಬವರಿಗೆ ಎನ್.ಆರ್.ಸಿ, ಸಿ.ಎ.ಎ. ಎಂದರೇನೆಂದು ಎಂಬ ಪ್ರಶ್ನೆಯನ್ನು ಕೀ ಕೊಟ್ಟ ಗೊಂಬೆಯಂತೆ ಪುನರಾವರ್ತಿಸಿ ಅತನ ಚಾನಲ್ ಪ್ರಸಾರಗೊಳಿಸಿದ ದೃಶ್ಯಾವಳಿಯ ಸಾಚಾತನವನ್ನು ಪ್ರಶ್ನಿಸಲು ಅವಕಾಶವನ್ನೇ ಕೊಡಲಿಲ್ಲ. ಚರ್ಚೆಯ ನಡುವೆ ಅದರ ತುಣುಕುಗಳನ್ನು ಪ್ರಸಾರಗೊಳಿಸುತ್ತಲೂ ಇದ್ದರು. ಆದರೆ ಕ್ಯಾಪ್ಟನನ ಚಾನೆಲ್ ನೈಜಸಂಗತಿ ಹೊರಬಾರದಂತೆ ಪೌರತ್ವದ ಬೇಲಿ ಹಾಕಿತು. ಚಾಣಕ್ಯರಾದ ಅಶ್ರಫ್ ಬಾರಿಬಾರಿಗೂ ಚರ್ಚೆಯ ದಿಕ್ಕು ತಪ್ಪಿಸಬೇಡಿ ಎಂದು ವಿನಂತಿಸಿದರೂ ಪ್ರಯೋಜನವಾಗಲಿಲ್ಲ. ಪೊಲೀಸರ ಮೇಲಿನ ದಾಳಿಯನ್ನು ಪ್ರಸಾರಗೊಳಿಸಿದಂತೆ ಅವರು ನಡೆಸಿದ ದೌರ್ಜನ್ಯದ ದೃಶ್ಯಾವಳಿಗಳು ಲೋಕವನ್ನೆಲ್ಲ ಜಾಲಾಡುವ ಈ ಚಾನಲ್‍ಗೆ ಲಭ್ಯವಾಗದೆ ಹೋಯಿತೇ? ಸಂಘರ್ಷಪೀಡಿತ ಸಿರಿಯಾದ ಪಟ್ಟಣವಾದ ‘ಇದ್ಲಿಬ್’ಅನ್ನು ‘ಇದ್ರಿಸ್’ ಎಂದು ಉಚ್ಚರಿಸುವ ವಾಹಿನಿಯ ಕ್ಯಾಪ್ಟನ್ (ಹೀಗೆಂದು ಅಕ್ಕರೆಯಿಂದ ಕರೆಯುತ್ತಿದ್ದ ಒಬ್ಬ ಆ್ಯಂಕರ್ ಈಗ ಬೇರೊಂದು ಚಾನೆಲ್‍ನಲ್ಲಿದ್ದಾರೆ) ಮುಸ್ಲಿಮರ ಪರವಾಗಿ ಪ್ರಕಟಿಸದಿರಲು (ಎಲ್ಲಾ ಚಾನೆಲ್‍ಗಳು ಹಾಗೆ ಪ್ರಸಾರಗೊಳಿಸಿದ ನಂತರ) ಅಸಾಧ್ಯವಾದಾಗ ಒಂದು ಔದಾರ್ಯವೆಂಬಂತೆ ಪ್ರಸಾರಗೊಳಿಸುತ್ತಿರುವುದನ್ನು ಮುಸ್ಲಿಮರು ಬಲ್ಲರು. ಆತನ ಹಾವಭಾವ, ಮಾತಿನ ಶೈಲಿ, ಸ್ವರಗಳ ಏರಿಳಿತದಿಂದ ಇದನ್ನು ಗಮನಿಸಬಹುದಾಗಿದೆ. ಬಾರಿಬಾರಿಗೂ ತನ್ನನ್ನು ಚೆಡ್ದಿ ಎಂದು ಕರೆಯುತ್ತಾರೆಂದು ಅವಲತ್ತುಕೊಳ್ಳುವ ಅಥವಾ ಸಂತೋಷಪಡುವ ಕ್ಯಾಪ್ಟನ್ ಈಗ ಪ್ಯಾಂಟ್ ಬಂದಿರುವುದರಿಂದ ಚೆಡ್ಡಿ ಕಾಲಹರಣಗೊಂಡಿದೆಯೆಂದು ನೆನಪಿಸಿ ಕೊಡುವುದನ್ನು ಮರೆಯುವುದಿಲ್ಲ.

ಕೆಲವು ಚಾನೆಲ್‍ಗಳು ಮುಸ್ಲಿಮರ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಾಗ ಒಂದಿಬ್ಬರು ಕಾಯಂ ಗಿರಾಕಿಗಳನ್ನು ಪ್ಯಾನೆಲ್‍ನಲ್ಲಿ ಕೂರಿಸಿ ಪೂರ್ವ ನಿರ್ಧರಿತವಾದಂತೆ ಸೋಲಿಸಿ ಹಿಂದೆ ಕಳುಹಿಸಿಬಿಡುತ್ತವೆ. ಜಿಲ್ಲೆಯ ವಿದ್ಯಾವಂತ, ಬುದ್ಧಿವಂತ ಮುಸ್ಲಿಮ್ ಪ್ರತಿಭೆಗಳನ್ನು ಪ್ಯಾನಲ್ ಚರ್ಚೆಗೆ ಕೂರಿಸುವ ಧೈರ್ಯ ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ಮುಸ್ಲಿಮರ ನೈಜ ಸಮಸ್ಯೆಗಳು ಹೊರಬರುವುದು ಅವರಿಗೆ ಬೇಕಿಲ್ಲ.
ಪೌರತ್ವ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದಿಂದ ಬರುವ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ಲಭಿಸುತ್ತದೆ. ಅಕ್ರಮ ವಲಸಿಗನಾದ ಓರ್ವ ಮುಸ್ಲಿಮ್ ಹಿಂದೂಧರ್ಮಕ್ಕೆ ಮತಾಂತರವಾದರೆ ಅವನಿಗೆ ಪೌರತ್ವ ಲಭಿಸುತ್ತದೆಯೇ? ಹಾಗೆಯೇ ಓರ್ವ ಹಿಂದೂ ಇಸ್ಲಾಮಿಗೆ ಮತಾಂತರವಾದರೆ ಅವನ ಪೌರತ್ವ ರದ್ದಾಗುತ್ತದೆಯೇ? ಒಟ್ಟಾರೆಯಗಿ ಧರ್ಮಾಧಾರಿತ ಪೌರತ್ವ ಸಂವಿಧಾನದ ಮೂಲಭೂತ ಸ್ವರೂಪಕ್ಕೆ ವಿರುದ್ಧವಾಗಿದೆ.

ಕನ್ನಡದ ಚಾನೆಲ್‍ಗಳು ದಿನಬೆಳಗಾದರೆ ಪ್ರಸಾರಗೊಳಿಸುತ್ತಿರುವ ಜ್ಯೋತಿಷ್ಯ, ಫಲ ಜ್ಯೋತಿಷ್ಯ, ವಾಸ್ತು, ಹೀಗೂ ಉಂಟೇ? ಮುಂತಾದ ಕಾರ್ಯಕ್ರಮದ ಪ್ರಕಾರ ಈ ಲೋಕ ಅದೆಷ್ಟೋ ಸಲ ನಿರ್ನಾಮವಾಗಬೇಕಿತ್ತು| ಕರಾವಳಿಯಂತೂ ನೂರಾರುಬಾರಿ ಸುನಾಮಿಗೆ ಕೊಚ್ಚಿಹೋಗಬೇಕಿತ್ತು| ಮಲೆಯಾಳಂ ಚಾನೆಲ್‍ಗಳು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಲು ಪ್ರಯತ್ನಿಸುವಾಗ ನಮ್ಮ ಕೆಲವು ಚಾನೆಲ್‍ಗಳು ಜನರನ್ನು ಮೂಢನಂಬಿಕೆ, ಕಂದಾಚಾರಗಳ ಕೂಪಕ್ಕೆ ತಳ್ಳುತ್ತಿದೆ. ನಮ್ಮ ಚಾನೆಲ್‍ಗಳು ಹತ್ತಿಪ್ಪತ್ತು ಮಂದಿಯನ್ನು ಗುಡ್ಡೆ ಹಾಕಿಕೊಂಡು ಚಾನೆಲನ್ನು ಮೀನು ಮಾರುಕಟ್ಟೆಯಾಗಿ ಮಾರ್ಪಡಿಸಿರುವ ಸುಳ್ಳಿನ ಸರದಾರ ಅರ್ನಾಬ್ ಗೋಸ್ವಾಮಿಯನ್ನು ಅನುಸರಿಸುವ ಬದಲು ಎನ್.ಡಿ.ಟಿ.ವಿ.ಯ ರವೀಶ್‍ಕುಮಾರ್ ಹಾಗೂ ಇಂಡಿಯಾ ಟುಡೆಯ ರಾಜ್‍ದೀಪ್ ಸರ್ದೇಸಾಯಿ ಅವರನ್ನು ಅನುಸರಿಸಲಿ. ಬಿ.ಬಿ.ಸಿ, ಸಿ.ಎನ್.ಎನ್, ಅಲ್ ಜಝೀರ ಪ್ರಸಾರಗೊಳಿಸುವ ಅಂತರ್ ರಾಷ್ಟ್ರೀಯ ಸುದ್ದಿಗಳನ್ನು ಮರುಪ್ರಸಾರಗೊಳಿಸಿ (ಮೌಢ್ಯ ಬಿತ್ತರಿಸುವ ಬದಲಿಗೆ) ತಮ್ಮ ಚಾನೆಲ್‍ಗಳ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಲಿ. ರಿಮೋಟ್ ಜನರ ಕೈಯಲ್ಲಿಯೇ ಇರುವುದರಿಂದ ಜನರು ತಾವು ಹೇಳಿದ್ದನ್ನೇ ಪರಮಸತ್ಯವೆಂದು ನಂಬುತ್ತಾರೆ ಎಂಬ ಭ್ರಮೆ ಯಾರಿಗೂ ಬೇಡ.

ಜಿಲ್ಲೆಯಮಟ್ಟಿಗೆ ಹೇಳುವುದಾದರೆ ಬೆಳಗ್ಗಿನ ಪತ್ರಿಕೆಗಳಿಗಿಂತ ಸಂಜೆ ಪತ್ರಿಕೆಗಳೇ ಹೆಚ್ಚು ಜಾತ್ಯತೀತವಾದಿಯಾಗಿವೆ. ಅವುಗಳ ಸಂಘಪರಿವಾರಕ್ಕೆ ನೀಡಿದಷ್ಟೇ ಪ್ರಾಮುಖ್ಯತೆಯನ್ನು ಇತರರಿಗೂ ನೀಡುವ ಮೂಲಕ ತಕ್ಕಡಿಯ ಮುಳ್ಳನ್ನು ನೇರವಾಗಿರಿಸಲು ಪ್ರಯತ್ನಿಸುತ್ತಿದೆ. ರಾಜ್ಯಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜಾವಾಣಿ, ವಾರ್ತಾಭಾರತಿ, ನ್ಯಾಯಪಥದಂತಹ ಪತ್ರಿಕೆಗಳಿರುವಂತೆ ಒಂದು ಚಾನಲ್‍ನ ಅಗತ್ಯವಿದೆ. ಜಾತ್ಯತೀತ ಪ್ರೇಮಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವರೆಂದು ಆಶಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...