Homeಮುಖಪುಟಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ.

ರತುವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಡಿ ಮೊತ್ತಕೀನ್ ಆಲಂ ಅವರ ಹೆಸರನ್ನು ಮರು ಸೇರ್ಪಡೆಗೊಳಿಸುವಂತೆ ನ್ಯಾಯಮಂಡಳಿ ಆದೇಶಿಸಿದೆ. ಈ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಮನವಿ ನ್ಯಾಯಮಂಡಳಿಯ ಆದೇಶದ ನಂತರ, ಅಂತಿಮ ಕ್ಷಣದಲ್ಲಿ ಆಲಂ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ತನ್ನ ಹೆಸರು ತೆಗೆದು ಹಾಕಿರುವ ಸಂಬಂಧ ಆಲಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಾಹ್ನ 12.30ರೊಳಗೆ ಆಲಂ ಅವರ ಪ್ರಕರಣವನ್ನು ಇತ್ಯರ್ಥಪಡಿಸುವಂತೆ ನ್ಯಾಯಮಂಡಳಿಗೆ ಆದೇಶಿಸಿತ್ತು.

ಆಲಂ ಅವರ ಆದೇಶ ಸೋಮವಾರ ಬಂದರೆ, ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ನ್ಯಾಯಮಂಡಳಿ ಭಾನುವಾರ ಆದೇಶಿಸಿತ್ತು. ಮೊತಾಬ್ ಶೇಖ್ ಕೂಡ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.

ಆಲಂ ಅವರ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಂಗ ಅಧಿಕಾರಿ, ವಿಚಾರಣೆಯ ಸಮಯದಲ್ಲಿ ಆಲಂ ಸಲ್ಲಿಸಿದ ದಾಖಲೆಗಳಲ್ಲಿ ತಂದೆಯ ಹೆಸರು ವಿಭಿನ್ನವಾಗಿದೆ. ಆಲಂ ಮತ್ತು ಅವರ ಪೋಷಕರ ವಯಸ್ಸಿನ ಅಂತರವು ತುಂಬಾ ಹೆಚ್ಚಾಗಿದೆ ಎಂದು ಹೇಳಿರುವುದನ್ನು ನ್ಯಾಯಮಂಡಳಿ ಗಮನಿಸಿದೆ.

“ಅರ್ಜಿದಾರರ (ಆಲಂ) ಪೋಷಕರು ಯಾರು ಎಂದು ಪ್ರಶ್ನಿಸುವ ಅಧಿಕಾರ ತನಿಖಾಧಿಕಾರಿಗೆ ಇಲ್ಲ. ಅಂತಹ ಅಧಿಕಾರ ಇರುವುದಕ್ಕೆ ಯಾವುದೇ ಪುರಾವೆಯೂ ಇಲ್ಲ. ಆದ್ದರಿಂದ, ಕೇವಲ ಪೋಷಕರ ಬಗ್ಗೆ ಸಂಶಯವಿದೆ ಎಂಬ ಕಾರಣಕ್ಕೆ ಅರ್ಜಿದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಮಂಡಳಿ ಹೇಳಿದೆ.

ನ್ಯಾಯಮಂಡಳಿಯ ನಿವೃತ್ತ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರು, ಆಲಂ ನವೆಂಬರ್ ತಿಂಗಳಲ್ಲೇ ಅಗತ್ಯ ದಾಖಲೆಗಳೊಂದಿಗೆ ತಮ್ಮ ವಿವರಗಳ ನಮೂನೆಯನ್ನು ಸಲ್ಲಿಸಿದ್ದರು ಎಂಬುದನ್ನು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಆಲಂ ಅವರ ತಂದೆಯ ಹೆಸರು ಇಂಗ್ಲಿಷ್ ಬಜಾರ್ ವಿಧಾನಸಭಾ ಕ್ಷೇತ್ರದ 1971ರ ಮತ್ತು 2002ರ ಮತದಾರರ ಪಟ್ಟಿಯಲ್ಲಿ ಕಂಡುಬಂದಿದೆ. ಅಷ್ಟೇ ಅಲ್ಲದೆ, ಆಲಂ ಅವರು 2016ರ ವಿಧಾನಸಭಾ ಚುನಾವಣೆಯಲ್ಲಿ ಮಾಣಿಕ್‌ಚಕ್ ಕ್ಷೇತ್ರದಿಂದ ಗೆದ್ದಿದ್ದರು ಎಂಬ ಅಂಶವನ್ನೂ ನ್ಯಾಯಮೂರ್ತಿ ಗಮನಿಸಿದ್ದಾರೆ.

ಚುನಾವಣಾ ಆಯೋಗವು ಪರಿಷ್ಕರಣಾ ಪ್ರಕ್ರಿಯೆಯ ಸಮಯದಲ್ಲಿ ಆಲಂ ಅವರಿಗೆ ನೋಟಿಸ್ ನೀಡಿತ್ತು. ದಾಖಲೆಗಳಲ್ಲಿ ಅವರ ತಂದೆಯ ಹೆಸರಿನಲ್ಲಿ ವ್ಯತ್ಯಾಸವಿದೆ ಎಂದು ಹೇಳಿತ್ತು. ಆಲಂ ಮತ್ತು ಅವರ ಪೋಷಕರ ನಡುವಿನ ವಯಸ್ಸಿನ ಅಂತರವು 50 ವರ್ಷಗಳಿಗಿಂತ ಹೆಚ್ಚಿದೆ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...