Homeಮುಖಪುಟಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

- Advertisement -
- Advertisement -

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ.

ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ ಜೋಗಿಂದರ್ ಪಾಲ್ ಸಿಂಗ್ ಮತ್ತು ಮಂಜಿತ್ ಕೌರ್ ದಂಪತಿ ಮಕ್ಕಳನ್ನು ಕಳೆದುಕೊಂಡವರು.

ದಂಪತಿಯ ಹಿರಿಯ ಮಗ ಜಸ್ವಿಂದರ್ ಸಿಂಗ್ 2015ರಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಗ ಮೃತಪಟ್ಟಿದ್ದ. ಈತ, ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯ (NDPS Act) ಅಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ.

ಏಳು ವರ್ಷಗಳ ಹಿಂದೆ ((2017-18ರಲ್ಲಿ) ಎರಡನೇ ಮಗ ಬಲ್ವಿಂದರ್ ಸಿಂಗ್ ಕೂಡ ಸಾವನ್ನಪ್ಪಿದ್ದ. ಈತ ತನ್ನ ಮನೆಯಲ್ಲೇ ಸಂಭವಿಸಿದ ಅಗ್ನಿ ಅವಘಡಕ್ಕೆ ಬಲಿಯಾಗಿದ್ದ. ಬಲ್ವಿಂದರ್ ಮಾದಕ ವ್ಯಸನಿಯಾಗಿದ್ದ. ಘಟನೆ ನಡೆದ ದಿನ ಮಾದಕ ವಸ್ತು ಸೇವಿಸಿದ ನಂತರ ಸಿಗರೇಟ್ ಸೇದುತ್ತಾ ಕೋಣೆಯಲ್ಲಿ ಮಲಗಿದ್ದಾಗ ಹಾಸಿಗೆಗೆ ಬೆಂಕಿ ತಗುಲಿ ಇಡೀ ಕೋಣೆ ಸುಟ್ಟು ಹೋಗಿತ್ತು ಎಂದು ವರದಿಯಾಗಿದೆ.

ಪೊಲೀಸ್ ಮತ್ತು ಸರ್ಕಾರಿ ಅಧಿಕಾರಿಗಳ ವರದಿಯ ಪ್ರಕಾರ, ಬಲ್ವಿಂದರ್ ಸಿಂಗ್ ಸಾವು ನೇರವಾಗಿ ಡ್ರಗ್ಸ್ ಸೇವನೆಯಿಂದ ಆಗಿದ್ದಲ್ಲ, ಬದಲಾಗಿ ಬೆಂಕಿ ಮತ್ತು ಸುಟ್ಟ ಗಾಯಗಳಿಂದ ಸಂಭವಿಸಿದೆ ಎಂದು ದಾಖಲಿಸಲಾಗಿದೆ. ಆದರೂ, ಪರೋಕ್ಷವಾಗಿ ಆತನ ಮಾದಕ ವಸ್ತು ಸೇವನೆಯೇ ಸಾವಿಗೆ ಕಾರಣ ಎಂದು ಕುಟುಂಬ ಹೇಳುತ್ತಿದೆ.

ದಂಪತಿಯ ಮೂರನೇ ಮಗ ರವಿ ಸಿಂಗ್ 2021ರಲ್ಲಿ ಮಾದಕ ವ್ಯಸನಕ್ಕೆ ಬಲಿಯಾಗಿದ್ದ. ರವಿ ದೀರ್ಘಕಾಲದ ಮಾದಕ ವ್ಯಸನದಿಂದ ಬಳಲುತ್ತಿದ್ದ. ಅತಿಯಾದ ಮಾದಕ ವಸ್ತುಗಳ ಸೇವನೆಯಿಂದಾಗಿ ಸಾವಿಗೀಡಾದ ಎನ್ನಲಾಗಿದೆ.

ಸಾವಿಗೂ ಮೊದಲು ರವಿ ಅವರ ಮೇಲೆ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ರವಿ ಸಾವಿನ ನಂತರ, 2023ರಲ್ಲಿ ನಾಲ್ಕನೇ ಮಗ ಮಿಥುನ್ ಕೂಡ ಡ್ರಗ್ಸ್‌ಗೆ ಬಲಿಯಾದ. ಮಿಥುನ್ ದೀರ್ಘಕಾಲದಿಂದ ಡ್ರಗ್ಸ್‌ಗೆ ದಾಸನಾಗಿದ್ದ. ಅತಿಯಾದ ಮಾದಕ ವಸ್ತು ಸೇವನೆಯಿಂದಾಗಿ ಆರೋಗ್ಯ ಕ್ಷೀಣಿಸಿ ಮೃತಪಟ್ಟ ಎನ್ನಲಾಗಿದೆ.

ಮಿಥುನ್ ಮೇಲೆ ಮಾದಕ ವಸ್ತುಗಳ ಮಾರಾಟ ಅಥವಾ ಬಳಕೆಗೆ ಸಂಬಂಧಿಸಿದಂತೆ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜೋಗಿಂದರ್ ಪಾಲ್ ಸಿಂಗ್ ಮತ್ತು ಮಂಜಿತ್ ಕೌರ್ ಅವರ ಐದನೇ ಮತ್ತು ಕೊನೆಯ ಮಗ ಸೋನು (32), ಮಂಗಳವಾರ (ಏಪ್ರಿಲ್ 8, 2026) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸೋನು ದೀರ್ಘಕಾಲದ ಮಾದಕ ವ್ಯಸನದಿಂದಾಗಿ ತೀವ್ರವಾದ ಲಿವರ್ ಸೋಂಕು, ಎದೆನೋವು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಅಮೃತಸರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪರೀಕ್ಷೆಗಳ ಪ್ರಕಾರ, ಸೋನುಗೆ ಹೆಚ್‌ಐವಿ ಪಾಸಿಟಿವ್ ಆಗಿತ್ತು. ಆತನ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿತ್ತು. ಅಂತಿಮವಾಗಿ ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಹೃದಯಾಘಾತದಿಂದ ಆತ ಮೃತಪಟ್ಟಿದ್ದಾನೆ.

ಸೋನು ಸ್ಥಿತಿ ಗಂಭೀರವಾಗಿದ್ದಾಗ ಅವರ ತಾಯಿ ಮಂಜಿತ್ ಕೌರ್ ಕಣ್ಣೀರಿಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ತಕ್ಷಣ ಪಂಜಾಬ್ ಸರ್ಕಾರ ಸೋನು ಅನ್ನು ಅಮೃತಸರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯ ವೆಚ್ಚ ಭರಿಸುವುದಾಗಿ ಘೋಷಿಸಿತ್ತು. ಆದರೆ, ಆಸ್ಪತ್ರೆಗೆ ದಾಖಲಾದ 24 ಗಂಟೆಗಳ ಒಳಗೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ವರದಿಯಾಗಿದೆ.

ಸೋನು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು (ಒಂದು ಎರಡು ವರ್ಷದ ಮಗ ಮತ್ತು ಆರು ತಿಂಗಳ ಮಗಳು) ಅಗಲಿದ್ದಾನೆ. ಈ ಸಾವಿನೊಂದಿಗೆ ಜೋಗಿಂದರ್ ಪಾಲ್ ಸಿಂಗ್ ಮತ್ತು ಮಂಜಿತ್ ಕೌರ್ ದಂಪತಿಯ ಐವರು ಪುತ್ರರೂ ಮಾದಕ ವ್ಯಸನದ ಜಾಲಕ್ಕೆ ಬಲಿಯಾದಂತಾಗಿದೆ.

“ಸೋಮವಾರ (ಏ.6) ವೈದ್ಯಕೀಯ ಕಾಲೇಜಿಗೆ ಬಂದ ನಂತರ ಅವರನ್ನು (ಸೋನು) ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ ಚೇತರಿಕೆಯ ಲಕ್ಷಣಗಳು ಕಂಡುಬಂದರೂ, ನಂತರ ಪರಿಸ್ಥಿತಿ ಕ್ಷೀಣಿಸಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರು ಮೃತಪಟ್ಟರು. ಕುಟುಂಬದ ಆರ್ಥಿಕ ಸಂಪನ್ಮೂಲಗಳು ಈಗಾಗಲೇ ಖಾಲಿಯಾಗಿದ್ದರಿಂದ, ನಾನು ವೈದ್ಯಕೀಯ ಕಾಲೇಜು ಅಧಿಕಾರಿಗಳಿಗೆ ವಿನಂತಿಸಿದೆ. ಅವರು ಮೃತದೇಹವನ್ನು ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಿದರು” ಎಂದು ಕಪುರ್ಥಲಾದ ಸಿವಿಲ್ ಸರ್ಜನ್ ಸಂಜೀವ್ ಭಗತ್ ಹೇಳಿರುವುದಾಗಿ timesofindia.indiatimes.com ಬುಧವಾರ (ಏ.8) ವರದಿ ಮಾಡಿದೆ.

ಸೋನು ಸಾವಿನ ವಿಚಾರವನ್ನು ಮಂಗಳವಾರ ಸಂಜೆ ತಡವಾಗಿ ಆತನ ತಾಯಿಗೆ ತಿಳಿಸಲಾಯಿತು. ಈ ವೇಳೆ ಅವರು ಕುಸಿದು ಬಿದ್ದರು. ತನ್ನ ಐವರು ಮಕ್ಕಳನ್ನೂ ಮಾದಕ ವ್ಯಸನಕ್ಕೆ ಬಲಿ ಕೊಟ್ಟೆ ಎಂದು ಅಳಲು ತೋಡಿಕೊಂಡರು. ಸೋಮವಾರ ಆಡಳಿತಾರೂಢ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಕಪುರ್ಥಲಾ ಪೊಲೀಸರು ತಾಯಿಯ ಹೇಳಿಕೆಯನ್ನು ವಿರೋಧಿಸಿ ಪ್ರತ್ಯೇಕ ಹೇಳಿಕೆ ನೀಡಿದ್ದರು. ಆಕೆಯ ಉಳಿದ ನಾಲ್ವರು ಮಕ್ಕಳು ಎಂಟು ವರ್ಷಗಳ ಅವಧಿಯಲ್ಲಿ ಬೇರೆ ಬೇರೆ ಕಾರಣಗಳಿಂದ ಸಾವನ್ನಪ್ಪಿದ್ದಾರೆ. ಅದರಲ್ಲಿ ಒಬ್ಬ ಮಾದಕ ವ್ಯಸನದಿಂದ ಮತ್ತು ಇನ್ನೊಬ್ಬ ಮಾದಕ ದ್ರವ್ಯ ಪ್ರಕರಣದಲ್ಲಿ ಜೈಲಿನಲ್ಲಿದ್ದಾಗ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದರು. ಆದರೆ ಆ ತಾಯಿ ಮಾತ್ರ, “ನನ್ನ ಎಲ್ಲಾ ಮಕ್ಕಳು ‘ಚಿಟ್ಟಾ’ (ಮಾದಕ ದ್ರವ್ಯ) ವ್ಯಸನಿಗಳಾಗಿದ್ದರು” ಎಂಬುವುದಾಗಿ ಕಣ್ಣೀರಿಡುತ್ತಿದ್ದರು ಎಂದು ವರದಿ ವಿವರಿಸಿದೆ.

ತನ್ನ ಐವರು ಮಕ್ಕಳೂ ಮಾದಕ ವ್ಯಸನಿಗಳಾಗಿದ್ದರು ಎಂಬ ಹೇಳಿಕೆಯನ್ನು ಪೊಲೀಸರು ಅಲ್ಲಗಳೆದಿದ್ದು ಆ ತಾಯಿಯ ಆಕ್ರೋಶ ಮತ್ತು ಆಕ್ರಂದನಕ್ಕೆ ಕಾರಣವಾಯಿಗಿತ್ತು. “ನನ್ನ ಮಗನ ಚಿಕಿತ್ಸೆಗೆ ಸಹಾಯ ಮಾಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಶ್ಲಾಘಿಸುತ್ತೇನೆ, ಆದರೆ ಪೊಲೀಸರನ್ನು ಕೆಟ್ಟವರೆಂದೇ ಕರೆಯುತ್ತೇನೆ. ಕಪುರ್ಥಲಾದ ಪೊಲೀಸ್ ಅಧಿಕಾರಿಯೊಬ್ಬರು ನಾನು ಸುಳ್ಳು ಸುದ್ದಿ ಹರಡುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ ಒಬ್ಬ ತಾಯಿಯ ನೋವು ಅರ್ಥವಾಗುವುದಿಲ್ಲ” ಎಂದು ತಾಯಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ತನ್ನ ನಾಲ್ವರು ಗಂಡುಮಕ್ಕಳು ತಮ್ಮ 20ರ ಹರೆಯದಲ್ಲೇ ಸಾವನ್ನಪ್ಪಿದ್ದಾರೆ ಎಂದು ಆಕೆ (ತಾಯಿ) ಸೋಮವಾರ ತಿಳಿಸಿದ್ದರು. ಜೀವಂತವಾಗಿದ್ದ ಒಬ್ಬನೇ ಮಗ 30 ವರ್ಷ ದಾಟಿದ್ದರೂ, ಈಗ ಆತ ಕೂಡ ಮೃತಪಟ್ಟಿದ್ದಾನೆ. ಪ್ರಸ್ತುತ ವೃದ್ಧ ದಂಪತಿ ತಮ್ಮ ನಾಲ್ವರು ಮೊಮ್ಮಕ್ಕಳನ್ನು ಸಲಹುವ ಜವಾಬ್ದಾರಿಯೊಂದಿಗೆ ಅನಾಥರಾಗಿ ಉಳಿದಿದ್ದಾರೆ ಎಂದು ವರದಿ ಹೇಳಿದೆ.

“ನನ್ನ ಕೊನೆಯ ಮಗ ಕೂಡ ಮಾದಕ ವ್ಯಸನಿ ಎಂದು ತಿಳಿದಿದ್ದರೂ, ಆತನಿಗೆ ಮದುವೆ ಮಾಡಿಸಿದ್ದೆ. ನಾವು ಅವನಿಗೆ ಚಿಕಿತ್ಸೆ ಕೊಡಿಸಿದ್ದೆವು. ಆತ ಸ್ವಲ್ಪ ಸಮಯದವರೆಗೆ ಗುಣಮುಖನಾಗಿದ್ದ. ನನ್ನ ಕುಟುಂಬದ ಹೆಸರು ಮುಂದುವರಿಯಬೇಕೆಂದು ನಾನು ಬಯಸಿದ್ದೆ” ಎಂದು timesofindia.indiatimes.com ವರದಿ ವಿವರಿಸಿದೆ.

ಮೃತ ಸೋನು ತಾಯಿ ಸೇರಿದಂತೆ ಪಾಂಡೋರಿ ಮೊಹಲ್ಲಾದ ಇತರ ಮಹಿಳೆಯರು ತಮ್ಮ ಪ್ರದೇಶವು ಮಾದಕ ದ್ರವ್ಯದ ವ್ಯಸನಕ್ಕೆ ಸಿಲುಕಿದೆ. ಅದು ಈಗಾಗಲೇ ಅನೇಕ ಯುವಕರ ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಸೋಮವಾರ ಪೊಲೀಸರು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ, ಅಲ್ಲಿನ ಮಹಿಳೆಯರು ಮಾದಕ ದ್ರವ್ಯಗಳ ಸುಲಭ ಲಭ್ಯತೆಯ ಬಗ್ಗೆ ತಮ್ಮ ಆಕ್ರೋಶ ಮತ್ತು ವೇದನೆಯನ್ನು ಹೊರಹಾಕಿದ್ದಾರೆ. ಚಿಕಿತ್ಸೆಗಾಗಿ ಮೂವರು ಮಾದಕ ವ್ಯಸನಿಗಳನ್ನು ಅವರ ಕುಟುಂಬದವರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಅದೇ ಮೊಹಲ್ಲಾದ ಮತ್ತೊಬ್ಬ ಮಹಿಳೆ ಚರಂಜಿತ್ ಕೌರ್, ತನ್ನ ಇಬ್ಬರು ಗಂಡು ಮಕ್ಕಳು ಕೂಡ ಮಾದಕ ವ್ಯಸನಕ್ಕೆ ಬಲಿಯಾಗಿರುವುದಾಗಿ ಹೇಳಿದ್ದಾರೆ. ಒಬ್ಬ ಏಳು ವರ್ಷಗಳ ಹಿಂದೆ ಮತ್ತು ಇನ್ನೊಬ್ಬ ಸುಮಾರು ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂಬುವುದಾಗಿ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.




 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...