Homeಮುಖಪುಟಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

- Advertisement -
- Advertisement -

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ ಗ್ರಾಸವಾಗಿದೆ.

ಈ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಅಂತಹ ಆಚರಣೆಯ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಶ್ರೀ ದಾದಾಜಿ ದರ್ಬಾರ್ ಪಾತಾಳೇಶ್ವರ ಮಹಾದೇವ ದೇವಸ್ಥಾನವು ಚೈತ್ರ ನವರಾತ್ರಿಯ ಭಾಗವಾಗಿ ದೊಡ್ಡ ಪ್ರಮಾಣದ ಅಭಿಷೇಕ ಆಚರಣೆಯನ್ನು ನಡೆಸಿತು. ಈ ಕಾರ್ಯಕ್ರಮವು ಮಾರ್ಚ್ 18 ರಿಂದ ಏಪ್ರಿಲ್ 7 ರವರೆಗೆ ನಡೆಯಿತು, ಇದರಲ್ಲಿ 41 ಟನ್ ತುಪ್ಪವನ್ನು ಬಳಸಿದ ಬೃಹತ್ ಮಹಾಯಜ್ಞ ನಡೆಸಲಾಗಿದೆ. ಪ್ರತಿನಿತ್ಯ ನೂರಾರು ಲೀಟರ್ ಹಾಲು ಬಳಸಲಾಗಿದೆ ಎಂದು ಭಕ್ರೊಬ್ಬರು ತಿಳಿಸಿದ್ದಾರೆ.

“ಈ ಕಾರ್ಯಕ್ರಮಕ್ಕಾಗಿ ಸುಮಾರು 5 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅನ್ನು ಸಿದ್ಧಪಡಿಸಲಾಗಿತ್ತು. ಪ್ರತಿದಿನ ಸಾವಿರಾರು ಭಕ್ತರು ಕುಳಿತು ಈ ಭವ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಮಹಾಯಜ್ಞದಲ್ಲಿ, ಚಿನ್ನ, ಬೆಳ್ಳಿ ಮತ್ತು ಔಷಧೀಯ ಗಿಡಮೂಲಿಕೆಗಳು ಸೇರಿದಂತೆ ಒಟ್ಟು 41 ಟನ್ ವಸ್ತುಗಳನ್ನು ಬಳಸಲಾಗುತ್ತಿತ್ತು” ಎಂದು ಸಂಘಟಕರು ಹೇಳಿದರು.

“ಪ್ರತಿದಿನ, 151 ಲೀಟರ್ ಹಾಲನ್ನು ನೈವೇದ್ಯವಾಗಿ ಬಳಸಲಾಗುತ್ತಿತ್ತು. ಒಂದು ನಿರ್ದಿಷ್ಟ ದಿನದಂದು, 1,100 ಲೀಟರ್ ಬಳಸಲಾಗುತ್ತಿತ್ತು. ಬುಧವಾರ, 11,000 ಲೀಟರ್ ಹಾಲನ್ನು ಬಳಸಲಾಗುತ್ತಿತ್ತು. ಬಾಬಾ ವರಿಗೆ ನರ್ಮದಾಜಿ ತಾಯಿಯಂತೆ” ಎಂದು ಭಕ್ತರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆದರೆ, ಧಾರ್ಮಿಕ ಆಚರಣೆ ಹೆಸರಿನಲ್ಲಿ ನದಿಗೆ ಹಾಲು ಸುರಿದು ಮಲಿನ ಮಾಡಲಾಗಿದೆ ಎಂದು ಹಲವರು ಪ್ರಶ್ನಿಸಿದ್ದಾರೆ. ನದಿಗೆ ಟ್ಯಾಂಕರ್‌ನಿಂದ ಹಾಲು ಹರಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಭಾರಿ ವೈರಲ್ ಆಗಿದೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆಹಾರ ನೀಡಲು ಇಷ್ಟು ದೊಡ್ಡ ಪ್ರಮಾಣದ ಹಾಲನ್ನು ಬಳಸಬಹುದಿತ್ತು ಎಂದು ಹಲವಾರು ಬಳಕೆದಾರರು ಗಮನಸೆಳೆದರು. ಇನ್ನು ಕೆಲವರು ಕಳವಳ ವ್ಯಕ್ತಪಡಿಸಿ, ನದಿಗೆ ಹಾಲನ್ನು ಸುರಿಯುವುದರಿಂದ ಜೀವರಾಸಾಯನಿಕ ಆಮ್ಲಜನಕದ ಬೇಡಿಕೆ (ಬಿಒಡಿ) ಹೆಚ್ಚಾಗುತ್ತದೆ, ಜಲಚರಗಳಿಗೆ ಅಪಾಯವಾಗುತ್ತದೆ. ಆಮ್ಲಜನಕದ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...