Homeಕರ್ನಾಟಕಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

- Advertisement -
- Advertisement -

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಕೆಪಿಆರ್‌ಎಸ್‌ ಜಿಲ್ಲಾ ಸಮಿತಿ ಆಗ್ರಹಿಸಿದೆ.

“ಕಲ್ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಮನೆ ವೃತ್ತದಲ್ಲಿ ಗ್ರಂಥಾಲಯವಿತ್ತು. ಈ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಸಾರ್ವಜನಿಕರ ಉಪಯೋಗಕ್ಕಾಗಿ ಇದನ್ನು ದುರಸ್ತಿಗೊಳಿಸಿ, ಕಟ್ಟಡವನ್ನು ಉನ್ನತೀಕರಿಸಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಅನುಗುಣವಾಗಿ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ಅಭಿವೃದ್ಧಿಗೊಳಿಸಲು ವಾಸುದೇವ ರವರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಪಂಚಾಯತಿ ಆಸ್ತಿ ಕಬಳಿಸುವ ದುರುದ್ದೇಶ ಹೊಂದಿದ್ದ, ಇದೇ ಸರ್ವೆ ನಂಬರ್ ಗೆ ಹೊಂದಿಕೊಂಡು ಇರುವ ಬಹು ಕೋಟಿ ಬೆಲೆ ಬಾಳುವ ಸುಮಾರು 11 ಎಕರೆ ಸರ್ಕಾರಿ ಭೂಮಿ ಕಬಳಿಸುವ ದುರುದ್ದೇಶದಿಂದ ಆಶೋಕ ನೇತೃತ್ವದ ಸುಮಾರು ಎಂಟು ಜನರಷ್ಟು ಇದ್ದ ಗೂಂಡಾಗಳು, ದಿನಾಂಕ 08-04-26 ರಂದು ಸಂಜೆ 6-30 ರ ಸಮಯದಲ್ಲಿ ಗ್ರಂಥಾಲಯ ದುರಸ್ತಿ ಕಾರ್ಯ ಮೇಲ್ವಿಚಾರಣೆ ನಡೆಸುತ್ತಿದ್ದ ವಾಸುದೇವ ರವರ ಮೇಲೆ ಹಲ್ಲೆ ನಡೆಸಿ ಗ್ರಂಥಾಲಯ ದುರಸ್ತಿ ಕಾರ್ಯ ನಿಲ್ಲಿಸುವಂತೆ ಜೀವ ಬೆದರಿಕೆ ಹಾಕಿದ್ದಾರೆ. ಸ್ಥಳೀಯ ಜನರ ಸಕಾಲಿಕ ಮಧ್ಯಪ್ರವೇಶದಿಂದ ವಾಸುದೇವರವರ ಪ್ರಾಣ ಉಳಿದಿದೆ” ಎಂದು ” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆ ನುಗ್ಗೇಹಳ್ಳಿ ಪಿಎಸ್ ಐ ರವರಿಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಭೇಟಿ ನೀಡದೇ ಹಾಗೂ ದೂರು ದಾಖಲಿಸಿಕೊಳ್ಳಲು ಅನಗತ್ಯ ವಿಳಂಬ ಮಾಡುವ ಮೂಲಕ ದೌರ್ಜನ್ಯ ನಡೆಸಿದ ಗೂಂಡಾಗಳ ರಕ್ಷಣೆಗೆ ಪ್ರಯತ್ನಿಸಿದ್ದಾರೆ. ಇಂತಹ ಗಂಭೀರ ಸ್ವರೂಪದ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆದಾಗಲೂ ದೂರು ತೆಗೆದುಕೊಳ್ಳಲು ನಿರಾಕರಿಸಿದ ಕುರಿತು ಇಲಾಖೆ ವಿಚಾರಣೆ ನಡೆಸಬೇಕು, ಕೂಡಲೇ ಎಲ್ಲಾ ಗೂಂಡಾಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಗೃಹ ಸಚಿವರನ್ನು ಹಾಗೂ ರಾಜ್ಯ ಸರ್ಕಾರವನ್ನು ಕರ್ನಾಟಕ ಪ್ರಾಂತ ರೈತ ಸಂಘ ಹಾಸನ ಜಿಲ್ಲಾ ಸಮಿತಿ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...