Homeಅಂತರಾಷ್ಟ್ರೀಯಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

- Advertisement -
- Advertisement -

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ.

ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಮತ್ತು ಇರಾನ್ ಪರವಾಗಿ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗ ಶಾಂತಿ ಮಾತುಕತೆಯಲ್ಲಿ ಭಾಗವಹಿಸುತ್ತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಮತ್ತು ಅಲ್ಲಿನ ವಿದೇಶಾಂಗ ಸಚಿವರು ಮಧ್ಯಸ್ಥಿಕೆ ವಹಿಸುತ್ತಿದ್ದಾರೆ.

ಜೆ.ಡಿ ವ್ಯಾನ್ಸ್ ನಿಯೋಗದಲ್ಲಿ ಅಧ್ಯಕ್ಷ ಟ್ರಂಪ್ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಅಧ್ಯಕ್ಷ ಟ್ರಂಪ್ ಅವರ ಅಳಿಯ ಮತ್ತು ಸಲಹೆಗಾರ ಜೇರೆಡ್ ಕುಶ್ನರ್, ರಕ್ಷಣಾ ಇಲಾಖೆ ಅಥವಾ ನೌಕಾಪಡೆಯ ಉನ್ನತ ಅಧಿಕಾರಿ ಬ್ರಾಡ್ ಕೂಪರ್ ಮತ್ತು ಹೆಚ್ಚುವರಿಯಾಗಿ, ರಾಷ್ಟ್ರೀಯ ಭದ್ರತಾ ಮಂಡಳಿ (ಎನ್‌ಎಸ್‌ಸಿ) ಮತ್ತು ವಿದೇಶಾಂಗ ಇಲಾಖೆಯ ತಜ್ಞರು ಇರಲಿದ್ದಾರೆ.

ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಕಾರ್ಯದರ್ಶಿ ಅಲಿ ಅಕ್ಬರ್ ಅಹ್ಮದಿಯಾನ್, ಇರಾನ್ ಕೇಂದ್ರೀಯ ಬ್ಯಾಂಕ್ ಗವರ್ನರ್ (ಆರ್ಥಿಕ ನಿರ್ಬಂಧಗಳ ಚರ್ಚೆಗಾಗಿ) ಅಬ್ದೋಲ್ನಾಸರ್ ಹೆಮ್ಮತಿ, ಹಿರಿಯ ರಾಜತಾಂತ್ರಿಕ ಮಜಿದ್ ತಖ್ತ್ ರಾವಂಚಿ ಮತ್ತು ಮಾಜಿ ಐಆರ್‌ಜಿಸಿ ಕಮಾಂಡರ್ ಮೊಹಮ್ಮದ್ ಬಘೇರ್ ಜೊಲ್ಘಾದರ್ ಇರಲಿದ್ದಾರೆ.

ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ಪರವಾಗಿ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಜೊತೆ ವಿದೇಶಾಂಗ ಸಚಿವ ಇಶಾಕ್ ದಾರ್, ಸೇನಾ ಮುಖ್ಯಸ್ಥ (ಭದ್ರತೆ ಮತ್ತು ಕಾರ್ಯತಂತ್ರದ ಮಾತುಕತೆಗಾಗಿ) ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಸರ್ದಾರ್ ಅಯಾಝ್ ಸಾದಿಕ್ ಮತ್ತು ಆಂತರಿಕ ಸಚಿವ (ಭದ್ರತಾ ವ್ಯವಸ್ಥೆಗಳ ಉಸ್ತುವಾರಿ) ಮೊಹ್ಸಿನ್ ನಖ್ವಿ ಇರಲಿದ್ದಾರೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್‌ ಮೇಲೆ ವೈಮಾನಿಕ ದಾಳಿ ನಡೆಸುವ ಮೂಲಕ ಸಂಘರ್ಷ ಪ್ರಾರಂಭಗೊಂಡಿತ್ತು. ನಂತರ ಏಪ್ರಿಲ್ 7ರಂದು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಘೋಷಿಸಲಾದ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಪ್ರಸ್ತುತ ಜಾರಿಯಲ್ಲಿದೆ.

ತಾತ್ಕಾಲಿಕ ಕದನ ವಿರಾಮಕ್ಕೆ ಎರಡು ಬೃಹತ್ ಮಿಲಿಟರಿ ಶಕ್ತಿಯ ರಾಷ್ಟ್ರಗಳನ್ನು ಒಪ್ಪಿಸಿರುವುದೇ ಪಾಕಿಸ್ತಾನದ ರಾಜತಾಂತ್ರಿಕತೆಗೆ ದೊರೆತ ದೊಡ್ಡ ಗೆಲವು ಎಂದು ಹೇಳಲಾಗ್ತಿದೆ. ಹಾಗಾಗಿ, ಶಾಶ್ವತ ಕದನ ವಿರಾಮಕ್ಕಾಗಿ ಶಾಂತಿ ಮಾತುಕತೆ ವಿಚಾರದಲ್ಲಿ ಪಾಕಿಸ್ತಾನ ಬಹಳ ಮುತುವರ್ಜಿ ವಹಿಸಿದೆ.

ಅಮೆರಿಕವು ಮುಖ್ಯವಾಗಿ ಇರಾನ್‌ನ ಪರಮಾಣು ಅಸ್ತ್ರ ತಯಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಹಾರ್ಮುಝ್  ಜಲಸಂಧಿಯನ್ನು ಅಂತಾರಾಷ್ಟ್ರೀಯ ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದೆ. ಇದಕ್ಕೆ ಪ್ರತಿಯಾಗಿ, ಇರಾನ್ ತನ್ನ ಮೇಲಿನ ಆರ್ಥಿಕ ನಿರ್ಬಂಧಗಳ ತೆರವು ಮತ್ತು ಅಮೆರಿಕದಲ್ಲಿ ಸ್ಥಗಿತಗೊಂಡಿರುವ ತನ್ನ ಆಸ್ತಿಗಳ ಬಿಡುಗಡೆಗೆ ಒತ್ತಾಯಿಸುತ್ತಿದೆ. ಆದರೆ, ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಈ ಮಾತುಕತೆಗೆ ದೊಡ್ಡ ಅಡ್ಡಿಯಾಗಿ ಪರಿಣಮಿಸಿದ್ದು, ಲೆಬನಾನ್‌ನಲ್ಲಿ ಸಂಪೂರ್ಣ ಕದನ ವಿರಾಮ ಏರ್ಪಡುವವರೆಗೂ ಶಾಶ್ವತ ಒಪ್ಪಂದ ಸಾಧ್ಯವಿಲ್ಲ ಎಂದು ಇರಾನ್ ಪಟ್ಟು ಹಿಡಿದಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಈ ಮಾತುಕತೆಯನ್ನು “ಮಾಡು ಇಲ್ಲವೇ ಮಡಿ” (make-or-break) ಕ್ಷಣವೆಂದು ಬಣ್ಣಿಸಿದ್ದು, ಇಡೀ ವಿಶ್ವದ ಗಮನ ಈಗ ಇಸ್ಲಾಮಾಬಾದ್‌ನತ್ತ ನೆಟ್ಟಿದೆ. ಮಾತುಕತೆಯನ್ನು ಯಶಸ್ವಿಗೊಳಿಸಲು ಪಾಕಿಸ್ತಾನದ ಉನ್ನತ ಸೇನಾ ಅಧಿಕಾರಿಗಳು ಕೂಡ ಭದ್ರತೆ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನೇರ ಮಾತುಕತೆ ಇಲ್ಲ

ಅಮೆರಿಕ ಮತ್ತು ಇರಾನ್ ನಡುವೆ ನೇರ ಮುಖಾಮುಖಿ ಮಾತುಕತೆ ನಡೆಯುತ್ತಿಲ್ಲ. ಬದಲಾಗಿ, ಈ ಮಾತುಕತೆಯು ‘ಪರೋಕ್ಷ’ ರೂಪದಲ್ಲಿರಲಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಪ್ರತಿನಿಧಿಗಳು ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವೆ ಸಂದೇಶಗಳನ್ನು ರವಾನಿಸಲಿದ್ದಾರೆ.

ವರದಿಗಳ ಪ್ರಕಾರ, ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮತ್ತು ಇರಾನ್‌ನ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ಅವರು ಒಂದೇ ವೇದಿಕೆಯಲ್ಲಿ ಕುಳಿತು ಮಾತನಾಡುತ್ತಿಲ್ಲ. ಇಬ್ಬರೂ ಪ್ರತ್ಯೇಕ ಕೊಠಡಿಗಳಲ್ಲಿದ್ದು, ಮಧ್ಯಸ್ಥಿಕೆದಾರರ ಮೂಲಕ ತಮ್ಮ ಬೇಡಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.

ಅಮೆರಿಕದೊಂದಿಗೆ ನೇರವಾಗಿ ಮಾತನಾಡಲು ಇರಾನ್ ನಿರಾಕರಿಸಿದೆ. ತನ್ನ ಮೇಲಿನ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕುವವರೆಗೂ ಮತ್ತು ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ನಿಲ್ಲುವವರೆಗೂ ನೇರ ಮಾತುಕತೆಗೆ ಅವಕಾಶವಿಲ್ಲ ಎಂಬುದು ಇರಾನ್‌ನ ನಿಲುವಾಗಿದೆ.

ಈ ಹಿಂದೆಯೂ (ಉದಾಹರಣೆಗೆ ವಿಯೆನ್ನಾ ಮಾತುಕತೆಗಳಲ್ಲಿ) ಇರಾನ್ ಮತ್ತು ಅಮೆರಿಕ ನಡುವೆ ಐರೋಪ್ಯ ಒಕ್ಕೂಟ ಅಥವಾ ಇತರ ದೇಶಗಳ ಮೂಲಕ ಇಂತಹ ಪರೋಕ್ಷ ಮಾತುಕತೆಗಳೇ ನಡೆದಿದ್ದವು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....