Homeಮುಖಪುಟಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ ‘C2’ ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಂಬಂಧ ಸುಪ್ರೀಂ ಕೋರ್ಟ್ ಸೋಮವಾರ (ಏ.13) ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಕೀಲ ಪ್ರಶಾಂತ್ ಭೂಷಣ್ ಅವರ ವಾದಗಳನ್ನು ಆಲಿಸಿತು. ಈ ವಿಷಯವು ದೇಶದಾದ್ಯಂತ ರೈತರಿಗೆ ಅತ್ಯಂತ ನಿರ್ಣಾಯಕವಾಗಿದೆ ಎಂದು ವಾದಿಸಿದ ಅವರು, ರೈತರ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ಸಮರ್ಪಕ ಖರೀದಿ ವ್ಯವಸ್ಥೆ ಇಲ್ಲದಿರುವುದನ್ನು ಬೆಟ್ಟು ಮಾಡಿದರು. ಎಂಎಸ್‌ಪಿಯನ್ನು ಹೆಚ್ಚಾಗಿ ಕೃಷಿಯ ಒಟ್ಟು ವೆಚ್ಚಕ್ಕಿಂತಲೂ ಕಡಿಮೆ ನಿಗದಿಪಡಿಸಲಾಗುತ್ತಿದೆ ಮತ್ತು ಎಂಎಸ್‌ಪಿ ದರದಲ್ಲಿನ ಖರೀದಿ ಪ್ರಕ್ರಿಯೆಯು ಕೇವಲ ಗೋಧಿ ಮತ್ತು ಭತ್ತದಂತಹ ಬೆಳೆಗಳಿಗೆ ಮಾತ್ರ ಸೀಮಿತವಾಗಿದೆ, ಇದರಿಂದಾಗಿ ಇತರ ಬೆಳೆಗಳನ್ನು ಬೆಳೆಯುವ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಪ್ರತಿಪಾದಿಸಿದರು.

ಪರಿಹಾರವಾಗಿ ಬೆಳೆಯ ವೆಚ್ಚದ ಜೊತೆಗೆ ಶೇಕಡ 50ರಷ್ಟು ಲಾಭಾಂಶವನ್ನು ಅರ್ಜಿಯು ಕೋರುತ್ತಿಲ್ಲ, ಬದಲಿಗೆ ‘C2’ ಎಂದು ಕರೆಯಲಾಗುವ ಕೃಷಿಯ ನಿಖರವಾದ ವೆಚ್ಚವನ್ನು ಮಾತ್ರ ನೀಡುವಂತೆ ವಿನಂತಿಸುತ್ತಿದೆ ಎಂದು ಪ್ರಶಾಂತ್ ಭೂಷಣ್ ಸ್ಪಷ್ಟಪಡಿಸಿದರು. ಈ ಲೆಕ್ಕಾಚಾರಗಳನ್ನು ಈಗಾಗಲೇ ಸರ್ಕಾರವೇ ಮಾಡಿದೆ ಮತ್ತು ರೈತರಿಗೆ ಕನಿಷ್ಠ ಪಕ್ಷ ಅವರು ಮಾಡಿದ ಪೂರ್ಣ ವೆಚ್ಚದ ಮರುಪಾವತಿಯ ಭರವಸೆಯನ್ನಾದರೂ ನೀಡಬೇಕು ಎಂದು ಅವರು ಆಗ್ರಹಿಸಿದರು. ಮುಂದುವರಿದು, ಉಚಿತ ಪಡಿತರ ಯೋಜನೆಗಳಂತಹ ಕಲ್ಯಾಣ ಕ್ರಮಗಳು ರೈತರಿಗೆ ಅವರ ಉತ್ಪಾದನಾ ವೆಚ್ಚವನ್ನು ಭರಿಸುವಂತಹ ಸಂಭಾವನೆಯನ್ನು ನೀಡುವ ವೆಚ್ಚದಲ್ಲಿ ಬರಬಾರದು ಎಂದು ಅವರು ವಾದಿಸಿದರು.

ವಿಚಾರಣೆಯ ಸಂದರ್ಭದಲ್ಲಿ, ಭೂಮಿಯ ಬೆಲೆ ಮತ್ತು ಬಂಡವಾಳದಂತಹ ಅಂಶಗಳನ್ನು ಅಂದಾಜಿಸುವಲ್ಲಿ ತೊಂದರೆಗಳು ಎದುರಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು. ಏಕೆಂದರೆ, ಈ ವೆಚ್ಚಗಳು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಗಮನಾರ್ಹವಾಗಿ ಬದಲಾಗುತ್ತವೆ ಎಂದು ಅವರು ಹೇಳಿದರು.

ನ್ಯಾಯಮೂರ್ತಿ ಬಾಗ್ಚಿ ಅವರು, ಅರ್ಜಿದಾರರು ಕೋರುತ್ತಿರುವ ಪರಿಹಾರವು ನ್ಯಾಯಾಲಯವು ಆರ್ಥಿಕ ನೀತಿಯನ್ನು ಮರುಬರೆಯುವಂತೆ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಭೂಷಣ್ ಅವರು, “ಸರ್ಕಾರವು ಉಚಿತವಾಗಿ ಪಡಿತರ ನೀಡುವುದರಲ್ಲಿ ಅಭ್ಯಂತರವಿಲ್ಲ. ಆದರೆ, ಅದರ ಪರಿಣಾಮವಾಗಿ ರೈತರಿಗೆ ಕನಿಷ್ಠ ಬೆಳೆಯ ವೆಚ್ಚವೂ ಸಿಗದಂತಾಗಬಾರದು… ಇದರಿಂದಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಮೂರು ಜನ ಮಹಾರಾಷ್ಟ್ರ ಮೂಲದ ರೈತರು (ಪ್ರಕಾಶ್ ಗೋಪಾಲರಾವ್ ಪೋಹರೆ, ಪುರುಷೋತ್ತಮ್ ಗಾವಡೆ ಮತ್ತು ವಿಶಾಲ್ ಓಂಪ್ರಕಾಶ್ ರಾವತ್) ಸಂವಿಧಾನದ 32ನೇ ವಿಧಿಯಡಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕನಿಷ್ಠ ಸರಾಸರಿ ಉತ್ಪಾದನಾ ವೆಚ್ಚಕ್ಕೆ (C2) ಅನುಗುಣವಾಗಿ ನಿಗದಿಪಡಿಸುವಂತೆ ಮತ್ತು ಅದೇ ದರದಲ್ಲಿ ರೈತರಿಂದ ಬೆಳೆಗಳನ್ನು ಖರೀದಿಸುವುದನ್ನು ಖಚಿತಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಈ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರರ ಪ್ರಕಾರ, ಭಾರತೀಯ ರೈತರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಏಕೆಂದರೆ ಅವರು ತಮ್ಮ ಬೆಳೆಗಳನ್ನು ಕನಿಷ್ಠ ಉತ್ಪಾದನಾ ವೆಚ್ಚಕ್ಕೂ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ, ಇದು ವ್ಯಾಪಕ ಸಂಕಷ್ಟ ಮತ್ತು ಆತ್ಮಹತ್ಯೆಗಳಿಗೆ ಕಾರಣವಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಮಹಾರಾಷ್ಟ್ರವೊಂದರಲ್ಲೇ ಹದಿನೇಳು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಕಿ ಅಂಶಗಳನ್ನು ಈ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿಯ ಪ್ರಕಾರ, ಕೃಷಿಯ ಸಮಗ್ರ ವೆಚ್ಚ ಅಥವಾ ‘C2’ ಎನ್ನುವುದು ಕೃಷಿ ಪರಿಕರಗಳ ನಿಜವಾದ ವೆಚ್ಚ, ಕುಟುಂಬದ ಶ್ರಮದ ಅಂದಾಜು ಮೌಲ್ಯ, ಸ್ವಂತ ಭೂಮಿಯ ಬಾಡಿಗೆ ಮೌಲ್ಯ, ಗುತ್ತಿಗೆ ಭೂಮಿಗೆ ಪಾವತಿಸಿದ ಬಾಡಿಗೆ ಮತ್ತು ದುಡಿಯುವ ಬಂಡವಾಳದ ಮೇಲಿನ ಬಡ್ಡಿಯನ್ನು ಒಳಗೊಂಡಿರುತ್ತದೆ. ಪ್ರಸ್ತುತ ಎಂಎಸ್‌ಪಿ ನಿಗದಿಪಡಿಸುವ ವಿಧಾನವು ಹೆಚ್ಚಾಗಿ ‘A2+FL’ (ಪಾವತಿಸಿದ ವೆಚ್ಚಗಳು ಮತ್ತು ಕುಟುಂಬದ ಶ್ರಮ) ಅನ್ನು ಆಧರಿಸಿದ್ದು, ಅದಕ್ಕೆ 1.5 ಪಟ್ಟು ಗುಣಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ಇದು ಭೂಮಿ ಮತ್ತು ಬಂಡವಾಳದ ವೆಚ್ಚದಂತಹ ಪ್ರಮುಖ ಅಂಶಗಳನ್ನು ಹೊರಗಿಡುತ್ತದೆ ಮತ್ತು ರೈತರು ಭರಿಸುವ ನೈಜ ಆರ್ಥಿಕ ವೆಚ್ಚವನ್ನು ಕಡಿಮೆ ಅಂದಾಜು ಮಾಡುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಎಂಎಸ್‌ಪಿ ಬೆಳೆಗಳ ಖರೀದಿ ಪ್ರಕ್ರಿಯೆಯು ಪ್ರಮುಖವಾಗಿ ಗೋಧಿ ಮತ್ತು ಭತ್ತಕ್ಕೆ ಮಾತ್ರ ಸೀಮಿತವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಉಳಿದ ಹೆಚ್ಚಿನ ಬೆಳೆಗಳನ್ನು ಘೋಷಿತ ಎಂಎಸ್‌ಪಿ ದರದಲ್ಲೂ ಖರೀದಿಸುತ್ತಿಲ್ಲ, ಇದು ರೈತರ ಆರ್ಥಿಕ ಸಂಕಷ್ಟವನ್ನು ಮತ್ತಷ್ಟು ಉಲ್ಬಣಗೊಳಿಸುತ್ತಿದೆ. ಆಹಾರ ಭದ್ರತಾ ಯೋಜನೆಯಡಿ ಗೋಧಿ ಮತ್ತು ಭತ್ತವನ್ನು ರಿಯಾಯಿತಿ ದರದಲ್ಲಿ ವಿತರಿಸುತ್ತಿರುವುದು ಕೃಷಿ ಮಾರುಕಟ್ಟೆಯ ಸಮತೋಲನವನ್ನು ತಪ್ಪಿಸಿದೆ ಮತ್ತು ಸಿರಿಧಾನ್ಯಗಳಂತಹ ಇತರ ಬೆಳೆಗಳ ಬೇಡಿಕೆಯನ್ನು ಕುಗ್ಗಿಸಿದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ, ಸರ್ಕಾರವು ಈಗಾಗಲೇ ಲೆಕ್ಕ ಹಾಕಿರುವ ಸಮಗ್ರ ಉತ್ಪಾದನಾ ವೆಚ್ಚಕ್ಕೆ (C2) ಅನುಗುಣವಾಗಿ ಎಂಎಸ್‌ಪಿ ದರವನ್ನು ನಿಗದಿಪಡಿಸಲು ಮತ್ತು ಆ ದರದಲ್ಲಿ ಬೆಳೆಗಳ ಪರಿಣಾಮಕಾರಿ ಖರೀದಿಯನ್ನು ಖಚಿತಪಡಿಸಿಕೊಳ್ಳಲು ಸೂಕ್ತವಾದ ಖರೀದಿ ಮೂಲಸೌಕರ್ಯಗಳನ್ನು ಸ್ಥಾಪಿಸಲು ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.

Courtesy : livelaw.in



 






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...