Homeಮುಖಪುಟಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ ‘C2’ ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಂಬಂಧ ಸುಪ್ರೀಂ ಕೋರ್ಟ್ ಸೋಮವಾರ (ಏ.13) ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಕೀಲ ಪ್ರಶಾಂತ್ ಭೂಷಣ್ ಅವರ ವಾದಗಳನ್ನು ಆಲಿಸಿತು. ಈ ವಿಷಯವು ದೇಶದಾದ್ಯಂತ ರೈತರಿಗೆ ಅತ್ಯಂತ ನಿರ್ಣಾಯಕವಾಗಿದೆ ಎಂದು ವಾದಿಸಿದ ಅವರು, ರೈತರ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ಸಮರ್ಪಕ ಖರೀದಿ ವ್ಯವಸ್ಥೆ ಇಲ್ಲದಿರುವುದನ್ನು ಬೆಟ್ಟು ಮಾಡಿದರು. ಎಂಎಸ್‌ಪಿಯನ್ನು ಹೆಚ್ಚಾಗಿ ಕೃಷಿಯ ಒಟ್ಟು ವೆಚ್ಚಕ್ಕಿಂತಲೂ ಕಡಿಮೆ ನಿಗದಿಪಡಿಸಲಾಗುತ್ತಿದೆ ಮತ್ತು ಎಂಎಸ್‌ಪಿ ದರದಲ್ಲಿನ ಖರೀದಿ ಪ್ರಕ್ರಿಯೆಯು ಕೇವಲ ಗೋಧಿ ಮತ್ತು ಭತ್ತದಂತಹ ಬೆಳೆಗಳಿಗೆ ಮಾತ್ರ ಸೀಮಿತವಾಗಿದೆ, ಇದರಿಂದಾಗಿ ಇತರ ಬೆಳೆಗಳನ್ನು ಬೆಳೆಯುವ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಪ್ರತಿಪಾದಿಸಿದರು.

ಪರಿಹಾರವಾಗಿ ಬೆಳೆಯ ವೆಚ್ಚದ ಜೊತೆಗೆ ಶೇಕಡ 50ರಷ್ಟು ಲಾಭಾಂಶವನ್ನು ಅರ್ಜಿಯು ಕೋರುತ್ತಿಲ್ಲ, ಬದಲಿಗೆ ‘C2’ ಎಂದು ಕರೆಯಲಾಗುವ ಕೃಷಿಯ ನಿಖರವಾದ ವೆಚ್ಚವನ್ನು ಮಾತ್ರ ನೀಡುವಂತೆ ವಿನಂತಿಸುತ್ತಿದೆ ಎಂದು ಪ್ರಶಾಂತ್ ಭೂಷಣ್ ಸ್ಪಷ್ಟಪಡಿಸಿದರು. ಈ ಲೆಕ್ಕಾಚಾರಗಳನ್ನು ಈಗಾಗಲೇ ಸರ್ಕಾರವೇ ಮಾಡಿದೆ ಮತ್ತು ರೈತರಿಗೆ ಕನಿಷ್ಠ ಪಕ್ಷ ಅವರು ಮಾಡಿದ ಪೂರ್ಣ ವೆಚ್ಚದ ಮರುಪಾವತಿಯ ಭರವಸೆಯನ್ನಾದರೂ ನೀಡಬೇಕು ಎಂದು ಅವರು ಆಗ್ರಹಿಸಿದರು. ಮುಂದುವರಿದು, ಉಚಿತ ಪಡಿತರ ಯೋಜನೆಗಳಂತಹ ಕಲ್ಯಾಣ ಕ್ರಮಗಳು ರೈತರಿಗೆ ಅವರ ಉತ್ಪಾದನಾ ವೆಚ್ಚವನ್ನು ಭರಿಸುವಂತಹ ಸಂಭಾವನೆಯನ್ನು ನೀಡುವ ವೆಚ್ಚದಲ್ಲಿ ಬರಬಾರದು ಎಂದು ಅವರು ವಾದಿಸಿದರು.

ವಿಚಾರಣೆಯ ಸಂದರ್ಭದಲ್ಲಿ, ಭೂಮಿಯ ಬೆಲೆ ಮತ್ತು ಬಂಡವಾಳದಂತಹ ಅಂಶಗಳನ್ನು ಅಂದಾಜಿಸುವಲ್ಲಿ ತೊಂದರೆಗಳು ಎದುರಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು. ಏಕೆಂದರೆ, ಈ ವೆಚ್ಚಗಳು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಗಮನಾರ್ಹವಾಗಿ ಬದಲಾಗುತ್ತವೆ ಎಂದು ಅವರು ಹೇಳಿದರು.

ನ್ಯಾಯಮೂರ್ತಿ ಬಾಗ್ಚಿ ಅವರು, ಅರ್ಜಿದಾರರು ಕೋರುತ್ತಿರುವ ಪರಿಹಾರವು ನ್ಯಾಯಾಲಯವು ಆರ್ಥಿಕ ನೀತಿಯನ್ನು ಮರುಬರೆಯುವಂತೆ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಭೂಷಣ್ ಅವರು, “ಸರ್ಕಾರವು ಉಚಿತವಾಗಿ ಪಡಿತರ ನೀಡುವುದರಲ್ಲಿ ಅಭ್ಯಂತರವಿಲ್ಲ. ಆದರೆ, ಅದರ ಪರಿಣಾಮವಾಗಿ ರೈತರಿಗೆ ಕನಿಷ್ಠ ಬೆಳೆಯ ವೆಚ್ಚವೂ ಸಿಗದಂತಾಗಬಾರದು… ಇದರಿಂದಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಮೂರು ಜನ ಮಹಾರಾಷ್ಟ್ರ ಮೂಲದ ರೈತರು (ಪ್ರಕಾಶ್ ಗೋಪಾಲರಾವ್ ಪೋಹರೆ, ಪುರುಷೋತ್ತಮ್ ಗಾವಡೆ ಮತ್ತು ವಿಶಾಲ್ ಓಂಪ್ರಕಾಶ್ ರಾವತ್) ಸಂವಿಧಾನದ 32ನೇ ವಿಧಿಯಡಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕನಿಷ್ಠ ಸರಾಸರಿ ಉತ್ಪಾದನಾ ವೆಚ್ಚಕ್ಕೆ (C2) ಅನುಗುಣವಾಗಿ ನಿಗದಿಪಡಿಸುವಂತೆ ಮತ್ತು ಅದೇ ದರದಲ್ಲಿ ರೈತರಿಂದ ಬೆಳೆಗಳನ್ನು ಖರೀದಿಸುವುದನ್ನು ಖಚಿತಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಈ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರರ ಪ್ರಕಾರ, ಭಾರತೀಯ ರೈತರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಏಕೆಂದರೆ ಅವರು ತಮ್ಮ ಬೆಳೆಗಳನ್ನು ಕನಿಷ್ಠ ಉತ್ಪಾದನಾ ವೆಚ್ಚಕ್ಕೂ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ, ಇದು ವ್ಯಾಪಕ ಸಂಕಷ್ಟ ಮತ್ತು ಆತ್ಮಹತ್ಯೆಗಳಿಗೆ ಕಾರಣವಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಮಹಾರಾಷ್ಟ್ರವೊಂದರಲ್ಲೇ ಹದಿನೇಳು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಕಿ ಅಂಶಗಳನ್ನು ಈ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿಯ ಪ್ರಕಾರ, ಕೃಷಿಯ ಸಮಗ್ರ ವೆಚ್ಚ ಅಥವಾ ‘C2’ ಎನ್ನುವುದು ಕೃಷಿ ಪರಿಕರಗಳ ನಿಜವಾದ ವೆಚ್ಚ, ಕುಟುಂಬದ ಶ್ರಮದ ಅಂದಾಜು ಮೌಲ್ಯ, ಸ್ವಂತ ಭೂಮಿಯ ಬಾಡಿಗೆ ಮೌಲ್ಯ, ಗುತ್ತಿಗೆ ಭೂಮಿಗೆ ಪಾವತಿಸಿದ ಬಾಡಿಗೆ ಮತ್ತು ದುಡಿಯುವ ಬಂಡವಾಳದ ಮೇಲಿನ ಬಡ್ಡಿಯನ್ನು ಒಳಗೊಂಡಿರುತ್ತದೆ. ಪ್ರಸ್ತುತ ಎಂಎಸ್‌ಪಿ ನಿಗದಿಪಡಿಸುವ ವಿಧಾನವು ಹೆಚ್ಚಾಗಿ ‘A2+FL’ (ಪಾವತಿಸಿದ ವೆಚ್ಚಗಳು ಮತ್ತು ಕುಟುಂಬದ ಶ್ರಮ) ಅನ್ನು ಆಧರಿಸಿದ್ದು, ಅದಕ್ಕೆ 1.5 ಪಟ್ಟು ಗುಣಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ಇದು ಭೂಮಿ ಮತ್ತು ಬಂಡವಾಳದ ವೆಚ್ಚದಂತಹ ಪ್ರಮುಖ ಅಂಶಗಳನ್ನು ಹೊರಗಿಡುತ್ತದೆ ಮತ್ತು ರೈತರು ಭರಿಸುವ ನೈಜ ಆರ್ಥಿಕ ವೆಚ್ಚವನ್ನು ಕಡಿಮೆ ಅಂದಾಜು ಮಾಡುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಎಂಎಸ್‌ಪಿ ಬೆಳೆಗಳ ಖರೀದಿ ಪ್ರಕ್ರಿಯೆಯು ಪ್ರಮುಖವಾಗಿ ಗೋಧಿ ಮತ್ತು ಭತ್ತಕ್ಕೆ ಮಾತ್ರ ಸೀಮಿತವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಉಳಿದ ಹೆಚ್ಚಿನ ಬೆಳೆಗಳನ್ನು ಘೋಷಿತ ಎಂಎಸ್‌ಪಿ ದರದಲ್ಲೂ ಖರೀದಿಸುತ್ತಿಲ್ಲ, ಇದು ರೈತರ ಆರ್ಥಿಕ ಸಂಕಷ್ಟವನ್ನು ಮತ್ತಷ್ಟು ಉಲ್ಬಣಗೊಳಿಸುತ್ತಿದೆ. ಆಹಾರ ಭದ್ರತಾ ಯೋಜನೆಯಡಿ ಗೋಧಿ ಮತ್ತು ಭತ್ತವನ್ನು ರಿಯಾಯಿತಿ ದರದಲ್ಲಿ ವಿತರಿಸುತ್ತಿರುವುದು ಕೃಷಿ ಮಾರುಕಟ್ಟೆಯ ಸಮತೋಲನವನ್ನು ತಪ್ಪಿಸಿದೆ ಮತ್ತು ಸಿರಿಧಾನ್ಯಗಳಂತಹ ಇತರ ಬೆಳೆಗಳ ಬೇಡಿಕೆಯನ್ನು ಕುಗ್ಗಿಸಿದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ, ಸರ್ಕಾರವು ಈಗಾಗಲೇ ಲೆಕ್ಕ ಹಾಕಿರುವ ಸಮಗ್ರ ಉತ್ಪಾದನಾ ವೆಚ್ಚಕ್ಕೆ (C2) ಅನುಗುಣವಾಗಿ ಎಂಎಸ್‌ಪಿ ದರವನ್ನು ನಿಗದಿಪಡಿಸಲು ಮತ್ತು ಆ ದರದಲ್ಲಿ ಬೆಳೆಗಳ ಪರಿಣಾಮಕಾರಿ ಖರೀದಿಯನ್ನು ಖಚಿತಪಡಿಸಿಕೊಳ್ಳಲು ಸೂಕ್ತವಾದ ಖರೀದಿ ಮೂಲಸೌಕರ್ಯಗಳನ್ನು ಸ್ಥಾಪಿಸಲು ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.

Courtesy : livelaw.in



 






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...