Homeಮುಖಪುಟಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

- Advertisement -
- Advertisement -

ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಬಹುಸಂಖ್ಯಾತ ಪ್ರದೇಶವೊಂದರಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಬೀದಿ ವ್ಯಾಪಾರಿಗೆ ಬಜರಂಗದಳ ಸದಸ್ಯರು ಬೆದರಿಕೆ ಹಾಕಿ ಅಲ್ಲಿಂದ ಅಂಗಡಿ ತೆರವುಗೊಳಿಸಿದ್ದಾರೆ.

ಮುಸ್ಲಿಂ ವ್ಯಾಪಾರಿಯ ಗುರುತನ್ನು ಕೇಳಿದ ಹಿಂದುತ್ವ ಗೂಂಡಾಗಳು, ನಂತರ ಅವರನ್ನು ಅಲ್ಲಿಂದ ಹೊರಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನರೋಡಾ ಪ್ರದೇಶದಲ್ಲಿ ನಡೆದ ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಶಹಜಹಾನ್ ಎಂದು ಗುರುತಿಸಲಾದ ಮಾರಾಟಗಾರನನ್ನು, ತಲೆಗೆ ಕೇಸರಿ ವಸ್ತ್ರ ಧರಿಸಿದ ಪುಂಡರ ಗುಂಪೊಂದು ಎದುರಾಗಿದೆ. ವ್ಯಾಪಾರಿಯ ಗುರುತಿನ ದಾಖಲೆಗಳನ್ನು ಕೇಳಿದ್ದು, ಹಿಂದು ಬಹುಸಂಖ್ಯಾತ ಪ್ರದೇಶದಲ್ಲಿ ಅಂಗಡಿ ಏಕೆ ಇಟ್ಟಿದ್ದೀರಿ ಎಂದು ಪ್ರಶ್ನಿಸುತ್ತಿರುವುದು ವೀಡಿಯೊದಲ್ಲಿ ಕಾಣಬಹುದು. ಅವರ ಆಧಾರ್ ಕಾರ್ಡ್ ಪರಿಶೀಲಿಸಿ ಅವರ ಹೆಸರನ್ನು ತಿಳಿದುಕೊಂಡ ನಂತರ, ‘ಹಿಂದೂಗಳಿಗೆ ಮಾತ್ರ ಆ ಪ್ರದೇಶದಲ್ಲಿ ಕೆಲಸ ಮಾಡಲು ಅವಕಾಶವಿದೆ’ ಎಂದು ಹೇಳಿ ಅವರನ್ನು ಹೊರಹೋಗುವಂತೆ ಒತ್ತಾಯಿಸಿದ್ದಾರೆ.

ವ್ಯಕ್ತಿಯೊಬ್ಬರ ಧಾರ್ಮಿಕ ಗುರುತಿನ ಆಧಾರದ ಮೇಲೆ ಅವರಿಗೆ ವ್ಯಾಪಾರಕ್ಕೆ ಅವಕಾಶ ನೀಡದೇ ಇರುವುದರ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ. “ಹಿಂದೂ ಪ್ರದೇಶ” ಎಂದು ವಿವರಿಸಿದ ಸ್ಥಳದಲ್ಲಿ ಹಿಂದೂಯೇತರರಿಗೆ ಸೇರಿದ ಅಂಗಡಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಗುಂಪಿನ ಸದಸ್ಯರು ಇತರ ಮಾರಾಟಗಾರರಿಗೆ ಎಚ್ಚರಿಕೆ ನೀಡುವುದು ಸಹ ವಿಡಿಯೊದಲ್ಲಿ ಸೆರೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...