Homeಮುಖಪುಟಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ದಾಳಿ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.

ಪಂಜಾಬ್‌ನ ಜಲಂಧರ್, ಫಗ್ವಾರಾ ಮತ್ತು ಹರಿಯಾಣದ ಗುರುಗ್ರಾಮ್‌ನ ಸುಮಾರು 8 ರಿಂದ 10 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯ ನಡೆದಿದೆ.

ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕ್ಯಾಂಪಸ್ ಮಾತ್ರವಲ್ಲದೆ, ಈ ಸಮೂಹಕ್ಕೆ ಸೇರಿದ ಲವ್ಲಿ ಆಟೋಸ್, ಲವ್ಲಿ ಸ್ವೀಟ್ಸ್, ಮತ್ತು ಗುರುಗ್ರಾಮ್‌ನಲ್ಲಿರುವ ಟೆಟರ್ ಕಾಲೇಜ್ ಆಫ್ ಬಿಸಿನೆಸ್ ಹಾಗೂ ಮಾಸ್ಟರ್ಸ್ ಯೂನಿಯನ್ ಕಾಲೇಜ್ ಆಫ್ ಬಿಸಿನೆಸ್ ಸಂಸ್ಥೆಗಳ ಮೇಲೆಯೂ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸಂಸದ ಅಶೋಕ್ ಮಿತ್ತಲ್ ಅವರ ಮನೆ ಮತ್ತು ಅವರ ಸಹೋದರರಾದ ರಮೇಶ್ ಹಾಗೂ ನರೇಶ್ ಮಿತ್ತಲ್ ಅವರ ಮನೆಗಳ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ಪ್ರಸ್ತುತ ಹಣಕಾಸಿನ ದಾಖಲೆಗಳು ಮತ್ತು ವಿದೇಶಿ ವಹಿವಾಟುಗಳಿಗೆ ಸಂಬಂಧಿಸಿದ ಪುರಾವೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಗಳು ವಿವರಿಸಿವೆ.

ಈ ಬೆಳವಣಿಗೆಯು ಅಶೋಕ್ ಮಿತ್ತಲ್ ಅವರು ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರ ಬದಲಿಗೆ ಎಎಪಿ ಉಪನಾಯಕರಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ನಡೆದಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಈ ಕ್ರಮವನ್ನು ಖಂಡಿಸಿದ್ದು, ಇದು ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮಾಡುತ್ತಿರುವ ‘ರಾಜಕೀಯ ದ್ವೇಷದ ದಾಳಿ’ ಎಂದು ಟೀಕಿಸಿದ್ದಾರೆ. 

“ಮೋದಿ ಜಿ ಪಂಜಾಬ್‌ನಲ್ಲಿ ಚುನಾವಣೆಗೆ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಆದರೆ ಪಂಜಾಬ್‌ನ ಜನರು ಇದನ್ನು ಸಹಿಸುವುದಿಲ್ಲ. ಅವರು ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ” ಎಂದಿರುವ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು, ಇಡಿ ಕ್ರಮಕ್ಕೆ ಬಲವಾದ ಪ್ರತಿಕ್ರಿಯೆ ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...