Homeಮುಖಪುಟ"ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ": ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

- Advertisement -
- Advertisement -

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ ‘ಐತಿಹಾಸಿಕ ಅನ್ಯಾಯ’ ಎಂದು ಕರೆದಿದ್ದಾರೆ ಮತ್ತು ಗುರುವಾರ (ಏ16) ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ ನೀಡಿದ್ದಾರೆ.

“ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ದಕ್ಷಿಣ ರಾಜ್ಯಗಳನ್ನು ಶಿಕ್ಷಿಸಲಾಗುತ್ತಿದೆಯೇ” ಎಂದು ಸ್ಟಾಲಿನ್ ಪ್ರಶ್ನಿಸಿದ್ದು, ಈ ಕ್ರಮವು ದಕ್ಷಿಣದಾದ್ಯಂತ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ ಎಂದು ಎಚ್ಚರಿಸಿದ್ದಾರೆ.

ಪ್ರಸ್ತಾವಿತ ತಿದ್ದುಪಡಿಯನ್ನು ‘ಗಂಭೀರ ಅಪಾಯ’ ಎಂದು ಕರೆದಿರುವ ಸ್ಟಾಲಿನ್, ಕ್ಷೇತ್ರ ಮರುವಿಂಗಡನೆ ವಿರುದ್ಧ ಹೋರಾಟ ರೂಪಿಸಲು ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ನಡೆಸಿದರು.

“ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಮೇಲೆ ಇಳಿದಿದೆ… ಇದು ಬರೀ ಪಕ್ಷಗಳು ಅಥವಾ ವ್ಯಕ್ತಿಗಳಿಗೆ ಸಂಬಂಧಿಸಿದ ವಿಷಯವಲ್ಲ. ಇದು ನಮ್ಮ ಜನರ ಹಕ್ಕುಗಳನ್ನು ರಕ್ಷಿಸುವ ವಿಷಯ. ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡಲು ಭಾರತದಾದ್ಯಂತ ಎಲ್ಲಾ ಪಕ್ಷಗಳು ಮತ್ತು ಸಂಸದರು ಒಂದಾಗಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದು ಸ್ಟಾಲಿನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

2011ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಿದ ನಂತರ, ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಈ ಕ್ರಮವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು (ಮೂರನೇ ಒಂದು ಭಾಗದಷ್ಟು) ಮೀಸಲಾತಿಯನ್ನು ಜಾರಿಗೆ ತರುವುದರೊಂದಿಗೆ ಸಂಬಂಧ ಹೊಂದಿದೆ.

ಎಕ್ಸ್‌ನ ಮತ್ತೊಂದು ಪೋಸ್ಟ್‌ನಲ್ಲಿ ಸ್ಟಾಲಿನ್ ಅವರು, “ಕ್ಷೇತ್ರ ಮರುವಿಂಗಡನೆ ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ನಮಗೆ ವಿಧಿಸುತ್ತಿರುವ ಶಿಕ್ಷೆಯೇ” ಎಂದು ಪ್ರಶ್ನಿಸಿದ್ದಾರೆ. “ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳಿಗೆ ಮರುಪಾವತಿ ಮಾಡುವ ವಿಧಾನ ಇದುವೇ?” ಎಂದು ಕೇಳಿದ್ದಾರೆ.

“ಕೇಂದ್ರ ಬಿಜೆಪಿ ಸರ್ಕಾರ ನಾಳೆ ಸಂಸತ್ತಿನಲ್ಲಿ ಮಂಡಿಸಲು ಯೋಜಿಸಿರುವ ಕ್ಷೇತ್ರ ಮರುವಿಂಗಡನೆ ತಿದ್ದುಪಡಿಯು ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳ ವಿರುದ್ಧದ ಬೃಹತ್ ಐತಿಹಾಸಿಕ ಅನ್ಯಾಯವಾಗಿದೆ. ವಿಂಧ್ಯ ಪರ್ವತಗಳ ದಕ್ಷಿಣದಲ್ಲಿರುವ ಪ್ರತಿಯೊಬ್ಬ ದಕ್ಷಿಣ ಭಾರತೀಯರು ಕೋಪದಿಂದ ಕುದಿಯುತ್ತಿದ್ದಾರೆ” ಎಂದು ಸ್ಟಾಲಿನ್ ಬರೆದುಕೊಂಡಿದ್ದಾರೆ.

“ಬಿಜೆಪಿ ಬೆಂಕಿಯೊಂದಿಗೆ ಆಟವಾಡುತ್ತಿದೆ. ತಮಿಳುನಾಡಿನಾದ್ಯಂತ, ಕ್ಷೇತ್ರ ಮರುವಿಂಗಡನೆ ವಿರೋಧಿಸಿ ನಾಳೆ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಕಪ್ಪು ಬಾವುಟಗಳು ಮೇಲೇರಲಿವೆ… ಕೇಂದ್ರ ಸರ್ಕಾರ ತಮಿಳುನಾಡಿನ ಧ್ವನಿಯನ್ನು ಗೌರವಿಸಲು ಮತ್ತು ತನ್ನ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದರೆ, ನೀವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನೀವು ತೆರಬೇಕಾದ ಬೆಲೆ ಭಾರೀ ಪ್ರಮಾಣದಲ್ಲಿರುತ್ತದೆ. ಡಿಎಂಕೆ ಅಧ್ಯಕ್ಷನಾಗಿ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನಿ ತಮಿಳನಾಗಿ ಇದು ನನ್ನ ಕಠಿಣ ಎಚ್ಚರಿಕೆ” ಎಂದು ಸ್ಟಾಲಿನ್ ಖಾರವಾಗಿ ಹೇಳಿದ್ದಾರೆ.

ಈ ಪ್ರಕ್ರಿಯೆ ರಾಜ್ಯದ ಹಿತಾಸಕ್ತಿಗಳಿಗೆ ಹಾನಿ ಮಾಡಿದರೆ ಅಥವಾ ದಕ್ಷಿಣ ರಾಜ್ಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರಿದರೆ ತಮಿಳುನಾಡು ದೊಡ್ಡ ಪ್ರಮಾಣದ ಪ್ರತಿಭಟನೆಯನ್ನು ಪ್ರಾರಂಭಿಸುತ್ತದೆ ಎಂದು ಸ್ಟಾಲಿನ್ ಮಂಗಳವಾರ (ಏ.14) ಎಚ್ಚರಿಸಿದ್ದರು. ಏಪ್ರಿಲ್ 16 ರಂದು ನಡೆಯುವ ಸಂಸತ್ತಿನ ವಿಶೇಷ ಅಧಿವೇಶನವನ್ನು ಉಲ್ಲೇಖಿಸಿರುವ ಅವರು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳ ಮಧ್ಯೆ ಸಂಸತ್ತಿನ ವಿಶೇಷ ಅಧಿವೇಶನವನ್ನು ‘ಬಲವಂತವಾಗಿ ಕರೆಯಲಾಗಿದೆ’ ಎಂದು ಹೇಳಿದ್ದರು.

ವಿಶೇಷ ಅಧಿವೇಶನದಲ್ಲಿ, ಕೇಂದ್ರ ಸರ್ಕಾರವು ಕ್ಷೇತ್ರ ಮರುವಿಂಗಡನೆ ಕುರಿತು ಸಾಂವಿಧಾನಿಕ ತಿದ್ದುಪಡಿಯನ್ನು ಜಾರಿಗೆ ತರಲು ಉದ್ದೇಶಿಸಿದೆ. ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳ ಮೇಲೆ ಕೇಂದ್ರವು ತನ್ನ ನಿರ್ಧಾರವನ್ನು ಒತ್ತಾಯಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಸೀಮಿತ ವಿಂಗಡಣೆಯನ್ನು ಜಾರಿಗೆ ತರುವ ಈ ಆತುರದ ಪ್ರಯತ್ನವು ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಸ್ಪಷ್ಟ ದಾಳಿಯಾಗಿದೆ. ಅದಕ್ಕಿಂತ ಹೆಚ್ಚಾಗಿ, ಇದು ರಾಜ್ಯಗಳ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ನೀವು ಈ ಹಿಂದೆಂದೂ ನೋಡಿರದ ತಮಿಳುನಾಡನ್ನು ಇನ್ನು ಮುಂದೆ ನೋಡಲಿದ್ದೀರಿ. 1950 ಮತ್ತು 1960ರ ದಶಕದ ಡಿಎಂಕೆ ಪಕ್ಷದ ಆವೇಶ ಮತ್ತು ಸ್ಫೂರ್ತಿಯನ್ನು ಭಾರತವು ಮತ್ತೊಮ್ಮೆ ಸಾಕ್ಷೀಕರಿಸಲಿದೆ. ಇದನ್ನು ಬೆದರಿಕೆ ಎಂದು ತಪ್ಪಾಗಿ ಭಾವಿಸಬೇಡಿ; ಇದೊಂದು ಎಚ್ಚರಿಕೆ. ನೀವು ಇದನ್ನು ಬೆದರಿಕೆ ಎಂದೇ ವ್ಯಾಖ್ಯಾನಿಸಲು ಬಯಸಿದರೂ ನಮಗೇನೂ ತೊಂದರೆಯಿಲ್ಲ. ಹೌದು, ಇದು ತಮಿಳುನಾಡಿನಿಂದ ನೀಡುತ್ತಿರುವ ಎಚ್ಚರಿಕೆ” ಸ್ಟಾಲಿನ್ ಖಾರವಾಗಿ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...