Homeಮುಖಪುಟಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

- Advertisement -
- Advertisement -

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು ಮಂಡಿಸಿದರು. ಈ ಪ್ರಸ್ತಾವಿತ ಶಾಸನಗಳು ‘ಸಂವಿಧಾನ ವಿರೋಧಿ ಮತ್ತು ‘ಭಾರತದ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ’ ಎಂದು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು.

ಈ ನಡುವೆ ಲೋಕಸಭೆಯ ಸದಸ್ಯ ಬಲವನ್ನು 543ರಿಂದ 850ಕ್ಕೆ ಹೆಚ್ಚಿಸುವ 131ನೇ ಸಂವಿಧಾನ ತಿದ್ದುಪಡಿ ವಿಧೇಯಕ ಮತ್ತು ಮಹಿಳಾ ಮೀಸಲಾತಿ ಜಾರಿಯನ್ನು ತ್ವರಿತಗೊಳಿಸುವ 106ನೇ ತಿದ್ದುಪಡಿ ಕಾಯ್ದೆಯ ತಿದ್ದುಪಡಿ ವಿಧೇಯಕಗಳ ಮಂಡನೆಗೆ ಲೋಕಸಭೆಯಲ್ಲಿ ಅನುಮೋದನೆ ದೊರೆಯಿತು.

ವಿಧೇಯಕಗಳ ಮಂಡನೆಯ ನಂತರ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಈ ಮೂರು ವಿಧೇಯಕಗಳ ಮೇಲೆ 15 ರಿಂದ 18 ಗಂಟೆಗಳ ಕಾಲ ಸುದೀರ್ಘ ಚರ್ಚೆಗೆ ಅನುಮತಿ ನೀಡಿದ್ದಾರೆ. ಈ ಚರ್ಚೆಯ ನಂತರ, ಶುಕ್ರವಾರ (ಏ.17) ಸಂಜೆ 4 ಗಂಟೆಗೆ ವಿಧೇಯಕಗಳ ಮೇಲೆ ಅಂತಿಮ ಮತದಾನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಮಹಿಳಾ ಮೀಸಲಾತಿ ವಿಧೇಯಕಗಳ ಕುರಿತು ಮಾತನಾಡಿ, “ಸರ್ಕಾರ ಈ ತಿದ್ದುಪಡಿಗಳನ್ನು 2023ರಲ್ಲಿಯೇ ವಿಧೇಯಕ ಅಂಗೀಕಾರವಾಗುವಾಗ ಏಕೆ ಸೇರಿಸಲಿಲ್ಲ?” ಎಂದು ಪ್ರಶ್ನಿಸಿದರು. ಪ್ರಸ್ತುತ ತರಲಾಗಿರುವ ಬದಲಾವಣೆಗಳು ‘ಸಂವಿಧಾನ ವಿರೋಧಿ’ ಮತ್ತು “ದೇಶದ ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡುವ ಪ್ರಯತ್ನ” ಎಂದು ಅವರು ಕಟುವಾಗಿ ಟೀಕಿಸಿದರು.

“ಈ ವಿಧೇಯಕವು ಭಾರತದ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಈ ವಿಧೇಯಕದ ಹಿಂದಿರುವ ನಿಖರವಾದ ಉದ್ದೇಶವೇನು? ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಗಳು ಈಗಾಗಲೇ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಖಾತರಿಪಡಿಸುವ ವಿಧೇಯಕವನ್ನು ಅಂಗೀಕರಿಸಿವೆ” ಎಂದು ವೇಣುಗೋಪಾಲ್ ಅವರು ಸರ್ಕಾರದ ಕ್ರಮವನ್ನು ಪ್ರಶ್ನಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆ.ಸಿ. ವೇಣುಗೋಪಾಲ್ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿ, “ವಿಧೇಯಕಗಳನ್ನು ಮಂಡಿಸುವ ಹಂತದಲ್ಲಿ ಅವುಗಳ ಗುಣದೋಷಗಳನ್ನು ಪ್ರಶ್ನಿಸಲು ವೇಣುಗೋಪಾಲ್ ಅವರಿಗೆ ಅಧಿಕಾರವಿಲ್ಲ. ಅವರು ಕೇವಲ ತಾಂತ್ರಿಕ ಆಕ್ಷೇಪಣೆಗಳನ್ನು ಎತ್ತುವುದಕ್ಕೆ ಮಾತ್ರ ಸೀಮಿತರಾಗಿರಬೇಕು. ಮುಂಬರುವ ಚರ್ಚೆಯ ಸಮಯದಲ್ಲಿ ವಿರೋಧ ಪಕ್ಷಗಳ ಎಲ್ಲಾ ಪ್ರಶ್ನೆಗಳಿಗೆ ಸರ್ಕಾರವು ‘ಬಲವಾದ ಉತ್ತರ’ ನೀಡಲಿದೆ ಎಂದು ತಿಳಿಸಿದರು.

ವಿಧೇಯಕಗಳನ್ನು ಮಂಡಿಸುವಲ್ಲಿ ಸರ್ಕಾರ ತೋರುತ್ತಿರುವ ಅವಸರವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರಶ್ನಿಸಿದರು. “ನಾವು ಮೀಸಲಾತಿಯ ಪರವಾಗಿದ್ದೇವೆ… ಆದರೆ ನೀವು ಜನಗಣತಿ ನಡೆಸಲು ಏಕೆ ಬಯಸುತ್ತಿಲ್ಲ?” ಎಂದು ಅವರು ಕೇಳಿದರು. ಇದೇ ವೇಳೆ, ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್ ಅವರು ಕ್ಷೇತ್ರ ಮರುವಿಂಗಡಣೆಯನ್ನು ಜನಗಣತಿಯಿಂದ ಬೇರ್ಪಡಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದರು. ಅಲ್ಲದೆ, ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಹಿಂದುಳಿದ ವರ್ಗಗಳ ಮಹಿಳೆಯರಿಗೂ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದರು.

ಅಖಿಲೇಶ್ ಯಾದವ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅಮಿತ್ ಶಾ, 2027ರ ಜನಗಣತಿ ಪ್ರಕ್ರಿಯೆಯು ಈಗಾಗಲೇ ನಡೆಯುತ್ತಿದೆ ಮತ್ತು ಈ ಬಾರಿ ಜಾತಿ ಆಧಾರಿತ ಜನಗಣತಿಯನ್ನು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ ಎಂದರು.

ಕೇಂದ್ರ ಸರ್ಕಾರ ಮಂಡಿಸಿದ ವಿಧೇಯಕಗಳನ್ನು ವಿರೋಧಿಸಿ ಮಾತನಾಡಿದ ಡಿಎಂಕೆ ನಾಯಕ ಟಿ.ಆರ್. ಬಾಲು, “ನಾವು 2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಬೆಂಬಲಿಸುತ್ತೇವೆ, ಆದರೆ ಪ್ರಸ್ತುತ ಮಂಡಿಸಲಾಗಿರುವ ವಿಧೇಯಕವು ಕೇವಲ ಕ್ಷೇತ್ರ ಮರುವಿಂಗಡಣೆಯನ್ನು ಗುರಿಯಾಗಿಸಿಕೊಂಡಿದೆ” ಎಂದು ಕಿಡಿಕಾರಿದರು. ಮಹಿಳಾ ಮೀಸಲಾತಿ ಕಾನೂನಿನ ತಿದ್ದುಪಡಿಗಳನ್ನು ವಿರೋಧಿಸಲು ಡಿಎಂಕೆ ಸದಸ್ಯರು ಲೋಕಸಭೆಗೆ ಕಪ್ಪು ಬಣ್ಣದ ಉಡುಪು ಧರಿಸಿ ಬರುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣಾ ವಿಧೇಯಕವನ್ನು ಮಂಡಿಸುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಗುರುವಾರ ಬೆಳಗ್ಗೆ ಕಪ್ಪು ಬಾವುಟ ಹಾರಿಸಿ, ಪ್ರಸ್ತಾವಿತ ವಿಧೇಯಕದ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದ್ದಾರೆ.

ಪ್ರಸ್ತಾವಿತ ಸಂವಿಧಾನ ತಿದ್ದುಪಡಿ ವಿಧೇಯಕದ ಕರಡಿನ ಪ್ರಕಾರ, 2029ರ ಸಂಸತ್ ಚುನಾವಣೆಗಿಂತ ಮುಂಚಿತವಾಗಿ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರುವ ಉದ್ದೇಶದಿಂದ ಲೋಕಸಭೆಯ ಒಟ್ಟು ಸ್ಥಾನಗಳನ್ನು ಪ್ರಸ್ತುತ ಇರುವ 543ರಿಂದ ಗರಿಷ್ಠ 850ಕ್ಕೆ ಹೆಚ್ಚಿಸಲಾಗುತ್ತದೆ. ಈ ಪ್ರಕ್ರಿಯೆಯು 2011ರ ಜನಗಣತಿಯ ಆಧಾರದ ಮೇಲೆ ನಡೆಯಲಿರುವ ಕ್ಷೇತ್ರ ಮರುವಿಂಗಡಣೆಯ ನಂತರ ಕಾರ್ಯರೂಪಕ್ಕೆ ಬರಲಿದೆ.

ಲೋಕಸಭೆಯಂತೆಯೇ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಲ್ಲಿಯೂ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಕಲ್ಪಿಸಲು ಅನುಕೂಲವಾಗುವಂತೆ ಅಲ್ಲಿನ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ.

ಸಂಸತ್ತಿನ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ವಿರೋಧ ಪಕ್ಷಗಳು, ಸಂವಿಧಾನ ತಿದ್ದುಪಡಿ ವಿಧೇಯಕದಲ್ಲಿರುವ ಕ್ಷೇತ್ರ ಮರುವಿಂಗಡಣಾ ನಿಬಂಧನೆಗಳ ವಿರುದ್ಧ ಮಾತ್ರ ಒಗ್ಗಟ್ಟಾಗಿ ಮತ ಚಲಾಯಿಸಲು ನಿರ್ಧರಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...