Homeಕರ್ನಾಟಕತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; 'ರೋಹಿತ್ ವೇಮುಲ ಮಸೂದೆ'ಗೆ ಸಚಿವ ಸಂಪುಟ ಅನುಮೋದನೆ

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದ ರೋಹಿತ್ ವೇಮುಲ ಅವರ ಸಾವಿನ ನಂತರ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ, ಬುಡಕಟ್ಟು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ತಾರತಮ್ಯವನ್ನು ತಡೆಗಟ್ಟಲು ‘ರೋಹಿತ್ ಕಾಯ್ದೆ’ (Rohith Act) ಜಾರಿಗೆ ತರಬೇಕೆಂಬ ಬೇಡಿಕೆ ಬಲವಾಗಿ ಕೇಳಿಬಂತು. ಮುಖ್ಯವಾಗಿ, ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಹಲವು ಜನಪರ ಸಂಘಟನೆಗಳು ಈ ಕುರಿತು ಅಭಿಯಾನ ನಡೆಸಿದ್ದವು.

ರೋಹಿತ್ ಕಾಯ್ದೆ ಮೂಲಕ ‘ತಾರತಮ್ಯ ಮುಕ್ತ’ ಕ್ಯಾಂಪಸ್ ನಿರ್ಮಾಣ ಮಾಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು. ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ಕಿರುಕುಳ ಮತ್ತು ತಾರತಮ್ಯವನ್ನು ಕಾನೂನುಬದ್ಧವಾಗಿ ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಬೇಕು ಎಂದು ಹೋರಾಟಗಾರರು ಆಗ್ರಹಿಸುತ್ತಲೇ ಇದ್ದಾರೆ.

ಇದರಿಂದ, ಉನ್ನತ ಶಿಕ್ಷಣ ಪಡೆಯಬೇಕೆಂಬ ಅಂಚಿನಲ್ಲಿರುವ ಸಮುದಾಯಗಳ (ಎಸ್‌ಸಿ/ಎಸ್‌ಟಿ/ಒಬಿಸಿ) ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆವರಣದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಜೊತೆಗೆ, ವಿದ್ಯಾರ್ಥಿಗಳ ವಿರುದ್ಧ ಪೂರ್ವಾಗ್ರಹ ಪೀಡಿತ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಿಕ್ಷಕರು ಮತ್ತು ಆಡಳಿತ ಮಂಡಳಿಯನ್ನು ಹೊಣೆಗಾರರನ್ನಾಗಿ ಮಾಡಬೇಕೆಂಬ ಬೇಡಿಕೆಯು ರೋಹಿತ್ ಸಾವಿನ ಬಳಿಕ ಬಲವಾಗಿ ಕೇಳಿಬಂದಿತ್ತು.

ರೋಹಿತ್ ಕುರಿತು:

ರೋಹಿತ್ ಚಕ್ರವರ್ತಿ ವೇಮುಲ (1989-2016) ಅವರು ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದರು. ಅವರ ಸಾವು ಭಾರತದ ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ವಿರುದ್ಧ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ಮತ್ತು ಚರ್ಚೆಗಳನ್ನು ಹುಟ್ಟುಹಾಕಿತು.

ಜನವರಿ 30, 1989 ರಂದು ಆಂಧ್ರಪ್ರದೇಶದ ಗುಂಟೂರಿನಲ್ಲಿ ಜನಿಸಿದ ರೋಹಿತ್ ಅವರು ರಾಧಿಕಾ ವೇಮುಲ ಮತ್ತು ಮಣಿಕುಮಾರ್ ಅವರ ಪುತ್ರ. ಇವರ ತಾಯಿ ರಾಧಿಕಾ ಅವರು ದಲಿತ ಸಮುದಾಯದವರಾಗಿದ್ದು, ತೀವ್ರ ಬಡತನ ಮತ್ತು ಕಷ್ಟದ ನಡುವೆ ರೋಹಿತ್‌ನನ್ನು ಬೆಳೆಸಿದರು.

ಗುಂಟೂರಿನ ಹಿಂದೂ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಮುಗಿಸಿದ ಇವರು, ನಂತರ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ (ಪಿಎಚ್‌ಡಿ) ಸಂಶೋಧನೆ ಮಾಡುತ್ತಿದ್ದರು.

ವಿದ್ಯಾರ್ಥಿ ಚಳವಳಿ ಮತ್ತು ಹೋರಾಟ

ಪಿಚ್‌ಎಚ್‌ಡಿ ಮಾಡುತ್ತಲೇ ರೋಹಿತ್ ವಿಶ್ವವಿದ್ಯಾಲಯದಲ್ಲಿ ‘ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ’ (ASA)ಯ ಸಕ್ರಿಯ ಸದಸ್ಯರಾಗಿದ್ದರು. ಅಂಬೇಡ್ಕರ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದ ಇವರು, ಕ್ಯಾಂಪಸ್‌ನಲ್ಲಿ ನಡೆಯುತ್ತಿದ್ದ ಜಾತಿ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದರು.

ರೋಹಿತ್‌ಗೆ ವಿಜ್ಞಾನ ಮತ್ತು ನಕ್ಷತ್ರಗಳ ಬಗ್ಗೆ ಅಪಾರ ಆಸಕ್ತಿ ಇತ್ತು. ಕಾರ್ಲ್ ಸಗಾನ್ ಅವರಂತೆ ವಿಜ್ಞಾನ ಬರಹಗಾರರಾಗಬೇಕೆಂಬ ಹಂಬಲ ಹೊಂದಿದ್ದರು. ಈ ಬಗ್ಗೆ ಅವರು ಇಂಗ್ಷಿಷ್‌ನಲ್ಲಿ ಬರೆದಿದ್ದ ತಮ್ಮ ಮರಣ ಪತ್ರದಲ್ಲಿ ಉಲ್ಲೇಖಿಸಿದ್ದರು.

ವಿವಾದ ಮತ್ತು ಸಾವು

2015 ರಲ್ಲಿ ಇವರು ಮತ್ತು ಇತರ ನಾಲ್ವರು ದಲಿತ ವಿದ್ಯಾರ್ಥಿಗಳನ್ನು ರಾಜಕೀಯ ಕಾರಣಗಳಿಗಾಗಿ ವಿಶ್ವವಿದ್ಯಾಲಯದಿಂದ ಅಮಾನತುಗೊಳಿಸಿ ಹಾಸ್ಟೆಲ್‌ನಿಂದ ಹೊರಹಾಕಲಾಯಿತು. ದೀರ್ಘಕಾಲದ ಹೋರಾಟ ಮತ್ತು ಮಾನಸಿಕ ಒತ್ತಡದ ನಂತರ, ಜನವರಿ 17, 2016 ರಂದು ರೋಹಿತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರು.

ಅವರ ಆತ್ಮಹತ್ಯೆ ಪತ್ರದಲ್ಲಿ “ನನ್ನ ಹುಟ್ಟು ಒಂದು ಅಪಘಾತ” (My birth is a fatal accident) ಎಂದು ಬರೆದಿದ್ದು, ಸಮಾಜದಲ್ಲಿ ವ್ಯಕ್ತಿಯನ್ನು ಕೇವಲ ಒಂದು ಗುರುತಿಗೆ ಸೀಮಿತಗೊಳಿಸುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು.

ದೇಶದಾದ್ಯಂತ ರೋಹಿತ್ ಕಾಯ್ದೆಗೆ ಹೆಚ್ಚಿದ ಒತ್ತಡ

ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ವಿರುದ್ಧದ ತಾರತಮ್ಯ ತಡೆಯಲು ‘ರೋಹಿತ್ ಕಾಯ್ದೆ’ ಜಾರಿಗೆ ತರಬೇಕೆಂದು ದೊಡ್ಡ ಚಳವಳಿ ನಡೆಯುತ್ತಿದೆ. ಅವರ ಸಾವು ಭಾರತದ ಇತಿಹಾಸದಲ್ಲಿ ದಲಿತ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ನಡೆದ ಅತಿದೊಡ್ಡ ಹೋರಾಟಗಳಲ್ಲಿ ಒಂದಕ್ಕೆ ಕಾರಣವಾಯಿತು.

ಕರ್ನಾಟಕ ರೋಹಿತ್ ವೇಮುಲಾ ಮಸೂದೆ 2025

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯಬೇಕು ಎಂದು ‘ರೋಹಿತ್ ಕಾಯ್ದೆ’ಗಾಗಿ ಅಭಿಯಾನದ ಸದಸ್ಯರು ಕರ್ನಾಟಕ ಸರ್ಕಾರಕ್ಕೆ ‘ಕರ್ನಾಟಕ ರೋಹಿತ್ ವೇಮುಲಾ ಮಸೂದೆ 2025’ ಕರಡು ಸಲ್ಲಿಸಿದ್ದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು ರೋಹಿತ್ ಕಾಯ್ದೆ ಜಾರಿ ಮಾಡುವಂತೆ ಮನವಿ ಮಾಡಿದ್ದರು.

ಕರ್ನಾಟಕದ ರೋಹಿತ್ ವೇಮುಲ ಕಾಯ್ದೆ 2025: ಸಂಕ್ಷಿಪ್ತ ನೋಟ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ  ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ಮೇಲೆ ನಡೆಯುವ ಜಾತಿ ತಾರತಮ್ಯವನ್ನು ತಡೆಗಟ್ಟಲು ‘ಕರ್ನಾಟಕ ರೋಹಿತ್ ವೇಮುಲ ಕಾಯ್ದೆ-2025’ ಅನ್ನು ‘ರೋಹಿತ್ ಕಾಯ್ದೆಗಾಗಿ ಅಭಿಯಾನ’ ಗುಂಪಿನ ಸದಸ್ಯರು ರೂಪಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಕಾಯ್ದೆಯು ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಮತ್ತು ಘನತೆಯನ್ನು ಎತ್ತಿಹಿಡಿಯುವ ಉದ್ದೇಶವನ್ನು ಹೊಂದಿದೆ.

ಈ ಕಾನೂನು ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಇದರಲ್ಲಿ ವಿದ್ಯಾರ್ಥಿಗಳು ಮಾತ್ರವಲ್ಲದೆ, ಬೋಧಕರು ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗಳೂ ಸೇರಿದ್ದಾರೆ.

ನೇರ ಮತ್ತು ಪರೋಕ್ಷ ತಾರತಮ್ಯಗಳನ್ನು ಈ ಕಾಯ್ದೆ ಗುರುತಿಸುತ್ತದೆ. ಉದಾಹರಣೆಗೆ, ಹಾಸ್ಟೆಲ್‌ಗಳಲ್ಲಿ ಆಹಾರದ ಆಧಾರದ ಮೇಲೆ ಪ್ರತ್ಯೇಕಿಸುವುದು, ಉಪನಾಮ ಕೇಳಿ ತಾರತಮ್ಯ ಮಾಡುವುದು ಮತ್ತು ಮೀಸಲಾತಿ ಬಗ್ಗೆ ಅವಹೇಳನಕಾರಿ ಕಾಮೆಂಟ್‌ ಮಾಡುವುದನ್ನು ಇದು ಅಪರಾಧವೆಂದು ಪರಿಗಣಿಸುತ್ತದೆ.

ಪ್ರತಿ ಶಿಕ್ಷಣ ಸಂಸ್ಥೆಯು ತಾರತಮ್ಯದ ದೂರುಗಳನ್ನು ವಿಚಾರಿಸಲು ಆಂತರಿಕ ಸಮಿತಿಯನ್ನು ಹೊಂದಿರಬೇಕು.

ಸಾಂಸ್ಥಿಕ ಮಟ್ಟದಲ್ಲಿ ತಾರತಮ್ಯ ನಡೆದಾಗ ಸಂತ್ರಸ್ತರು ನೇರವಾಗಿ ಹೈಕೋರ್ಟ್ ಅಥವಾ ಜಿಲ್ಲಾ ನ್ಯಾಯಾಲಯಗಳನ್ನು ಸಂಪರ್ಕಿಸಬಹುದು.

ದಂಡ ಮತ್ತು ಶಿಕ್ಷೆ: ತಾರತಮ್ಯ ಎಸಗಿದ ವ್ಯಕ್ತಿಗಳಿಗೆ ಎಚ್ಚರಿಕೆ ನೀಡುವಿಕೆ, ದಂಡ ವಿಧಿಸುವುದು, ಅಮಾನತು ಅಥವಾ ವಜಾಗೊಳಿಸುವಂತಹ ಕ್ರಮಗಳನ್ನು ಕೈಗೊಳ್ಳಬಹುದು. ನಿಯಮ ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರವು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಬಹುದು ಅಥವಾ ಅನುದಾನವನ್ನು ತಡೆಹಿಡಿಯಬಹುದು.

ಕಾಯ್ದೆ ಪ್ರಕಾರ, ವಿದ್ಯಾರ್ಥಿಗಳು ಜಾತಿ ಆಧಾರಿತ ಪೂರ್ವಾಗ್ರಹಗಳನ್ನು ವಿರೋಧಿಸಲು ಸಂಘಟನೆಗಳನ್ನು ಮಾಡಿಕೊಳ್ಳುವ ಮತ್ತು ತಮ್ಮ ಗುರುತಿನ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ.

ಈ ಕಾಯ್ದೆಯು ಶಿಕ್ಷಣ ಸಂಸ್ಥೆಗಳನ್ನು ಕೇವಲ ಕಲಿಕೆಯ ಕೇಂದ್ರಗಳನ್ನಾಗಿ ಮಾತ್ರವಲ್ಲದೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಪೋಷಿಸುವ ಸ್ಥಳಗಳನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...