Homeಕರ್ನಾಟಕತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; 'ರೋಹಿತ್ ವೇಮುಲ ಮಸೂದೆ'ಗೆ ಸಚಿವ ಸಂಪುಟ ಅನುಮೋದನೆ

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದ ರೋಹಿತ್ ವೇಮುಲ ಅವರ ಸಾವಿನ ನಂತರ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ, ಬುಡಕಟ್ಟು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ತಾರತಮ್ಯವನ್ನು ತಡೆಗಟ್ಟಲು ‘ರೋಹಿತ್ ಕಾಯ್ದೆ’ (Rohith Act) ಜಾರಿಗೆ ತರಬೇಕೆಂಬ ಬೇಡಿಕೆ ಬಲವಾಗಿ ಕೇಳಿಬಂತು. ಮುಖ್ಯವಾಗಿ, ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಹಲವು ಜನಪರ ಸಂಘಟನೆಗಳು ಈ ಕುರಿತು ಅಭಿಯಾನ ನಡೆಸಿದ್ದವು.

ರೋಹಿತ್ ಕಾಯ್ದೆ ಮೂಲಕ ‘ತಾರತಮ್ಯ ಮುಕ್ತ’ ಕ್ಯಾಂಪಸ್ ನಿರ್ಮಾಣ ಮಾಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು. ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ಕಿರುಕುಳ ಮತ್ತು ತಾರತಮ್ಯವನ್ನು ಕಾನೂನುಬದ್ಧವಾಗಿ ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಬೇಕು ಎಂದು ಹೋರಾಟಗಾರರು ಆಗ್ರಹಿಸುತ್ತಲೇ ಇದ್ದಾರೆ.

ಇದರಿಂದ, ಉನ್ನತ ಶಿಕ್ಷಣ ಪಡೆಯಬೇಕೆಂಬ ಅಂಚಿನಲ್ಲಿರುವ ಸಮುದಾಯಗಳ (ಎಸ್‌ಸಿ/ಎಸ್‌ಟಿ/ಒಬಿಸಿ) ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆವರಣದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಜೊತೆಗೆ, ವಿದ್ಯಾರ್ಥಿಗಳ ವಿರುದ್ಧ ಪೂರ್ವಾಗ್ರಹ ಪೀಡಿತ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಿಕ್ಷಕರು ಮತ್ತು ಆಡಳಿತ ಮಂಡಳಿಯನ್ನು ಹೊಣೆಗಾರರನ್ನಾಗಿ ಮಾಡಬೇಕೆಂಬ ಬೇಡಿಕೆಯು ರೋಹಿತ್ ಸಾವಿನ ಬಳಿಕ ಬಲವಾಗಿ ಕೇಳಿಬಂದಿತ್ತು.

ರೋಹಿತ್ ಕುರಿತು:

ರೋಹಿತ್ ಚಕ್ರವರ್ತಿ ವೇಮುಲ (1989-2016) ಅವರು ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದರು. ಅವರ ಸಾವು ಭಾರತದ ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ವಿರುದ್ಧ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ಮತ್ತು ಚರ್ಚೆಗಳನ್ನು ಹುಟ್ಟುಹಾಕಿತು.

ಜನವರಿ 30, 1989 ರಂದು ಆಂಧ್ರಪ್ರದೇಶದ ಗುಂಟೂರಿನಲ್ಲಿ ಜನಿಸಿದ ರೋಹಿತ್ ಅವರು ರಾಧಿಕಾ ವೇಮುಲ ಮತ್ತು ಮಣಿಕುಮಾರ್ ಅವರ ಪುತ್ರ. ಇವರ ತಾಯಿ ರಾಧಿಕಾ ಅವರು ದಲಿತ ಸಮುದಾಯದವರಾಗಿದ್ದು, ತೀವ್ರ ಬಡತನ ಮತ್ತು ಕಷ್ಟದ ನಡುವೆ ರೋಹಿತ್‌ನನ್ನು ಬೆಳೆಸಿದರು.

ಗುಂಟೂರಿನ ಹಿಂದೂ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಮುಗಿಸಿದ ಇವರು, ನಂತರ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ (ಪಿಎಚ್‌ಡಿ) ಸಂಶೋಧನೆ ಮಾಡುತ್ತಿದ್ದರು.

ವಿದ್ಯಾರ್ಥಿ ಚಳವಳಿ ಮತ್ತು ಹೋರಾಟ

ಪಿಚ್‌ಎಚ್‌ಡಿ ಮಾಡುತ್ತಲೇ ರೋಹಿತ್ ವಿಶ್ವವಿದ್ಯಾಲಯದಲ್ಲಿ ‘ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ’ (ASA)ಯ ಸಕ್ರಿಯ ಸದಸ್ಯರಾಗಿದ್ದರು. ಅಂಬೇಡ್ಕರ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದ ಇವರು, ಕ್ಯಾಂಪಸ್‌ನಲ್ಲಿ ನಡೆಯುತ್ತಿದ್ದ ಜಾತಿ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದರು.

ರೋಹಿತ್‌ಗೆ ವಿಜ್ಞಾನ ಮತ್ತು ನಕ್ಷತ್ರಗಳ ಬಗ್ಗೆ ಅಪಾರ ಆಸಕ್ತಿ ಇತ್ತು. ಕಾರ್ಲ್ ಸಗಾನ್ ಅವರಂತೆ ವಿಜ್ಞಾನ ಬರಹಗಾರರಾಗಬೇಕೆಂಬ ಹಂಬಲ ಹೊಂದಿದ್ದರು. ಈ ಬಗ್ಗೆ ಅವರು ಇಂಗ್ಷಿಷ್‌ನಲ್ಲಿ ಬರೆದಿದ್ದ ತಮ್ಮ ಮರಣ ಪತ್ರದಲ್ಲಿ ಉಲ್ಲೇಖಿಸಿದ್ದರು.

ವಿವಾದ ಮತ್ತು ಸಾವು

2015 ರಲ್ಲಿ ಇವರು ಮತ್ತು ಇತರ ನಾಲ್ವರು ದಲಿತ ವಿದ್ಯಾರ್ಥಿಗಳನ್ನು ರಾಜಕೀಯ ಕಾರಣಗಳಿಗಾಗಿ ವಿಶ್ವವಿದ್ಯಾಲಯದಿಂದ ಅಮಾನತುಗೊಳಿಸಿ ಹಾಸ್ಟೆಲ್‌ನಿಂದ ಹೊರಹಾಕಲಾಯಿತು. ದೀರ್ಘಕಾಲದ ಹೋರಾಟ ಮತ್ತು ಮಾನಸಿಕ ಒತ್ತಡದ ನಂತರ, ಜನವರಿ 17, 2016 ರಂದು ರೋಹಿತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರು.

ಅವರ ಆತ್ಮಹತ್ಯೆ ಪತ್ರದಲ್ಲಿ “ನನ್ನ ಹುಟ್ಟು ಒಂದು ಅಪಘಾತ” (My birth is a fatal accident) ಎಂದು ಬರೆದಿದ್ದು, ಸಮಾಜದಲ್ಲಿ ವ್ಯಕ್ತಿಯನ್ನು ಕೇವಲ ಒಂದು ಗುರುತಿಗೆ ಸೀಮಿತಗೊಳಿಸುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು.

ದೇಶದಾದ್ಯಂತ ರೋಹಿತ್ ಕಾಯ್ದೆಗೆ ಹೆಚ್ಚಿದ ಒತ್ತಡ

ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ವಿರುದ್ಧದ ತಾರತಮ್ಯ ತಡೆಯಲು ‘ರೋಹಿತ್ ಕಾಯ್ದೆ’ ಜಾರಿಗೆ ತರಬೇಕೆಂದು ದೊಡ್ಡ ಚಳವಳಿ ನಡೆಯುತ್ತಿದೆ. ಅವರ ಸಾವು ಭಾರತದ ಇತಿಹಾಸದಲ್ಲಿ ದಲಿತ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ನಡೆದ ಅತಿದೊಡ್ಡ ಹೋರಾಟಗಳಲ್ಲಿ ಒಂದಕ್ಕೆ ಕಾರಣವಾಯಿತು.

ಕರ್ನಾಟಕ ರೋಹಿತ್ ವೇಮುಲಾ ಮಸೂದೆ 2025

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯಬೇಕು ಎಂದು ‘ರೋಹಿತ್ ಕಾಯ್ದೆ’ಗಾಗಿ ಅಭಿಯಾನದ ಸದಸ್ಯರು ಕರ್ನಾಟಕ ಸರ್ಕಾರಕ್ಕೆ ‘ಕರ್ನಾಟಕ ರೋಹಿತ್ ವೇಮುಲಾ ಮಸೂದೆ 2025’ ಕರಡು ಸಲ್ಲಿಸಿದ್ದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು ರೋಹಿತ್ ಕಾಯ್ದೆ ಜಾರಿ ಮಾಡುವಂತೆ ಮನವಿ ಮಾಡಿದ್ದರು.

ಕರ್ನಾಟಕದ ರೋಹಿತ್ ವೇಮುಲ ಕಾಯ್ದೆ 2025: ಸಂಕ್ಷಿಪ್ತ ನೋಟ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ  ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ಮೇಲೆ ನಡೆಯುವ ಜಾತಿ ತಾರತಮ್ಯವನ್ನು ತಡೆಗಟ್ಟಲು ‘ಕರ್ನಾಟಕ ರೋಹಿತ್ ವೇಮುಲ ಕಾಯ್ದೆ-2025’ ಅನ್ನು ‘ರೋಹಿತ್ ಕಾಯ್ದೆಗಾಗಿ ಅಭಿಯಾನ’ ಗುಂಪಿನ ಸದಸ್ಯರು ರೂಪಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಕಾಯ್ದೆಯು ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಮತ್ತು ಘನತೆಯನ್ನು ಎತ್ತಿಹಿಡಿಯುವ ಉದ್ದೇಶವನ್ನು ಹೊಂದಿದೆ.

ಈ ಕಾನೂನು ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಇದರಲ್ಲಿ ವಿದ್ಯಾರ್ಥಿಗಳು ಮಾತ್ರವಲ್ಲದೆ, ಬೋಧಕರು ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗಳೂ ಸೇರಿದ್ದಾರೆ.

ನೇರ ಮತ್ತು ಪರೋಕ್ಷ ತಾರತಮ್ಯಗಳನ್ನು ಈ ಕಾಯ್ದೆ ಗುರುತಿಸುತ್ತದೆ. ಉದಾಹರಣೆಗೆ, ಹಾಸ್ಟೆಲ್‌ಗಳಲ್ಲಿ ಆಹಾರದ ಆಧಾರದ ಮೇಲೆ ಪ್ರತ್ಯೇಕಿಸುವುದು, ಉಪನಾಮ ಕೇಳಿ ತಾರತಮ್ಯ ಮಾಡುವುದು ಮತ್ತು ಮೀಸಲಾತಿ ಬಗ್ಗೆ ಅವಹೇಳನಕಾರಿ ಕಾಮೆಂಟ್‌ ಮಾಡುವುದನ್ನು ಇದು ಅಪರಾಧವೆಂದು ಪರಿಗಣಿಸುತ್ತದೆ.

ಪ್ರತಿ ಶಿಕ್ಷಣ ಸಂಸ್ಥೆಯು ತಾರತಮ್ಯದ ದೂರುಗಳನ್ನು ವಿಚಾರಿಸಲು ಆಂತರಿಕ ಸಮಿತಿಯನ್ನು ಹೊಂದಿರಬೇಕು.

ಸಾಂಸ್ಥಿಕ ಮಟ್ಟದಲ್ಲಿ ತಾರತಮ್ಯ ನಡೆದಾಗ ಸಂತ್ರಸ್ತರು ನೇರವಾಗಿ ಹೈಕೋರ್ಟ್ ಅಥವಾ ಜಿಲ್ಲಾ ನ್ಯಾಯಾಲಯಗಳನ್ನು ಸಂಪರ್ಕಿಸಬಹುದು.

ದಂಡ ಮತ್ತು ಶಿಕ್ಷೆ: ತಾರತಮ್ಯ ಎಸಗಿದ ವ್ಯಕ್ತಿಗಳಿಗೆ ಎಚ್ಚರಿಕೆ ನೀಡುವಿಕೆ, ದಂಡ ವಿಧಿಸುವುದು, ಅಮಾನತು ಅಥವಾ ವಜಾಗೊಳಿಸುವಂತಹ ಕ್ರಮಗಳನ್ನು ಕೈಗೊಳ್ಳಬಹುದು. ನಿಯಮ ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರವು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಬಹುದು ಅಥವಾ ಅನುದಾನವನ್ನು ತಡೆಹಿಡಿಯಬಹುದು.

ಕಾಯ್ದೆ ಪ್ರಕಾರ, ವಿದ್ಯಾರ್ಥಿಗಳು ಜಾತಿ ಆಧಾರಿತ ಪೂರ್ವಾಗ್ರಹಗಳನ್ನು ವಿರೋಧಿಸಲು ಸಂಘಟನೆಗಳನ್ನು ಮಾಡಿಕೊಳ್ಳುವ ಮತ್ತು ತಮ್ಮ ಗುರುತಿನ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ.

ಈ ಕಾಯ್ದೆಯು ಶಿಕ್ಷಣ ಸಂಸ್ಥೆಗಳನ್ನು ಕೇವಲ ಕಲಿಕೆಯ ಕೇಂದ್ರಗಳನ್ನಾಗಿ ಮಾತ್ರವಲ್ಲದೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಪೋಷಿಸುವ ಸ್ಥಳಗಳನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...