Homeಕರ್ನಾಟಕಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ನಿನ್ನೆ ಮತ್ತು ಇಂದ ಕರ್ನಾಟಕಕ್ಕೆ ಬಂದ ಪ್ರಧಾನಿ ಮೋದಿಯವರು ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೋದಿಯವರು ಪ್ರವಾಹ ಪರಿಹಾರಕ್ಕೆ ಹಣ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅವರು ಅದರ ಬಗ್ಗೆ ಪರೀಶೀಲನೆ ಮಾಡುತ್ತೇನೆ ಎಂದೂ ಸಹ ಹೇಳಲಿಲ್ಲ. ಇದರಿಂದ ಕರ್ನಾಟಕದ ಬಗ್ಗೆ ಅವರಿಗಿರುವ ಅಸಡ್ಡೆ, ನಿರ್ಲಕ್ಷ್ಯ ಎಷ್ಟು ಎಂಬುದು ಅರಿವಾಗಲಿದೆ. ಅವರ ನಡವಳಿಕೆಯಿಂದ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಕಿಡಿಕಾರಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕೊಡಲು ನಮ್ಮ ಬಳಿ ಹಣವಿಲ್ಲ, ದಯವಿಟ್ಟು ಕೇಂದ್ರದಿಂದ ಹಣ ಕೊಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗೋಗೆರೆಯುತ್ತಿದ್ದಾರೆ. ಆದರೂ ಮೋದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಬಿಜೆಪಿಯ 28 ಬಿಜೆಪಿ ಅಭ್ಯರ್ಥಿಗಳು ನಮಗೆ ಓಟು ಕೊಡಬೇಡಿ, ನರೇಂದ್ರ ಮೋದಿಯವರಿಗೆ ಓಟು ಕೊಡಿ ಎಂದು ಕೇಳಿದ್ದರು. ರಾಜ್ಯದ ಜನ ನರೇಂದ್ರ ಮೋದಿಯವರ ಮುಖ ನೋಡಿ ಓಟು ಹಾಕಿಬಿಟ್ರು. ಆದರೆ ಇವತ್ತು ಮೋದಿ ಕರ್ನಾಟಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನು ಇದನ್ನು ಹೇಳಿದರೆ ಬಿಜೆಪಿಯವರಿಗೆ ಕೋಪ ಬರುತ್ತದೆ. ಆದರೆ ಮೋದಿಯವರು ಶಾಲಾಮಕ್ಕಳ ಜೊತೆಗೆ ಏನು ಮಾತಾಡಬೇಕು? ವಿದ್ಯಾಭ್ಯಾಸ, ಅವರ ಭವಿಷ್ಯದ ಬಗ್ಗೆ ಮಾತಾಡಬೇಕು. ಅಲ್ಲಿ ಹೋಗಿ ರಾಜಕೀಯ ಭಾಷಣ ಮಾಡಿದರೆ ಹೇಗೆ? ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡುವುದು ಎಷ್ಟು ಔಚಿತ್ಯ, ಸಮರ್ಪಕ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನವರು ಮತ್ತು ಮಿತ್ರಪಕ್ಷಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತಾಡಿ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನ ಒಂದು ದುಷ್ಟ ರಾಷ್ಟ್ರ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅಲ್ಲಿ ಅವರು ಅಲ್ಪಸಂಖ್ಯಾತರರಿಗೆ ತೊಂದರೆ ಕೊಡುತ್ತಿದ್ದಾರೆ ಸರಿ. ಆದರೆ ಭಾರತದಲ್ಲಿರುವ ಅಲ್ಪಸಂಖ್ಯಾತರರ ಮೇಲೆ ನೀವು ಏನು ಮಾಡುತ್ತಿದ್ದೀರಿ ನರೇಂದ್ರ ಮೋದಿಯವರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂವಿಧಾನದ ವಿರುದ್ಧವಾಗಿ ಸಿಎಎ ಕಾನೂನು ಮಾಡುವುದು ಸರಿಯೇ? ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡುವುದು ಸರಿಯೇ? ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಬಹುದೆ? ಎಂದ ಅವರು, ಒಬ್ಬ ಪ್ರಧಾನ ಮಂತ್ರಿಯಾಗಿ ಮೋದಿ ಭಾಷಣದಲ್ಲಿ ಶೂರರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವಿದ್ಯಾರ್ಥಿಗಳ ಮುಂದೆಯೂ, ಸಾರ್ವಜನಿಕರ ಮುಂದೆಯೂ, ರೈತರ ಬಗ್ಗೆಯೂ ಅದೇ ಭಾಷಣ ಮಾಡಿದರೆ ಅದು ಸಲ್ಲದು ಎಂದಿದ್ದಾರೆ.

ನೀವು ದೇಶದ ಸಮಸ್ಯೆಗಳ ಬಗ್ಗೆ ಮಾತಾಡಬೇಕು. ಆರ್ಥಿಕ ಪರಿಸ್ಥಿತಿ ಏನಾಗಿದೆ, ನೀವು ಕೊಟ್ಟ ಭರವಸೆಗಳು ಏನಾಗಿವೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿ ಏನಾಯಿತು, ರೈತರ ಆದಾಯ ದುಪ್ಪಟ್ಟು ಮಾಡುವುದು ಏನಾಯ್ತು? 2020ಕ್ಕೆ ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಇದಕ್ಕೆ ಉತ್ತರಕೊಡಿ. ರೈತರ ಸಂಕಷ್ಟ ದುಪ್ಪಟ್ಟು ಆಗಿದೆಯೇ ಹೊರತು ಆದಾಯವಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಮುಂದುವರೆದಿದೆ. ರೈತರ ಸಾಲಾಮನ್ನ ಆಗಿಲ್ಲ. ಮಹಾದಾಯಿ ವಿವಾದ ಬಗೆಹರಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಜಾವಡೇಕರ್‌ ಸಹ ಸುಳ್ಳು ಹೇಳುತ್ತಾರೆ. ಅವರು ಬಾಯಿ ಬಿಟ್ಟರೆ ಬರೀ ಸುಳ್ಳು.. ಮೋದಿಯವರು ಕೊಟ್ಟ 90% ಭರವಸೆಗಳನ್ನು ಈಡೇರಿಸಿಲ್ಲ. ಕರ್ನಾಟಕಕ್ಕೆ ಬಂದಾಗಲೆಲ್ಲ ಸುಳ್ಳು ಹೇಳುತ್ತಾರೆ. ಸುಳ್ಳುಗಳಿಂದ ಸ್ವರ್ಗ ಸೃಷ್ಟಿ ಮಾಡಿಬಿಡುತ್ತಾರೆ. ಆದರೆ ನರೇಂದ್ರ ಮೋದಿಯವರ ಇಂತಹ ಮಾತುಗಲಿಂದ ಜನರ ಹೊಟ್ಟೆತುಂಬುವುದಿಲ್ಲ.. ನಿರುದ್ಯೋಗ ಬಗೆಹರಿಯುವುದಿಲ್ಲ ಅಲ್ಲವೇ ಎಂದಿದ್ದಾರೆ.

ಇಂದು ಜಿಡಿಪಿ ಅತ್ಯಂತ ತಳಮಟ್ಟಕ್ಕೆ ಹೋಗಿಬಿಟ್ಟಿದೆ. ಅವರು 4.5 ಇದೆ ಅನ್ನುತ್ತಿದ್ದಾರೆ. ಆದರೆ ನನ್ನ ಪ್ರಕಾರ ಅದು 2.5 ಅಷ್ಟೇ ಇರುವುದು. ಮನಮೋಹನ್‌ ಸಿಂಗ್‌ ಕಾಲದಲ್ಲಿ ಜಿಡಿಪಿ 8-9 ಇತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಐದುವರೆ ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ತೆಗೆದುಕೊಂಡು ಹೋಗಿದ್ದಾರೆ. ಜಿಎಸ್‌ಟಿ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಹಣ ಬಂದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...