Homeಕರ್ನಾಟಕಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

- Advertisement -
- Advertisement -

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಜಿಸಿಬಿ ಯಂತ್ರಗಳನ್ನು ಬಳಸಿ, ಜಿಬಿಎ ಅಧಿಕಾರಿಗಳು ಮತ್ತು ಪೊಲೀಸರ ಸಮ್ಮುಖದಲ್ಲಿ, ಯಾವುದೇ ಪೂರ್ವ ಸೂಚನೆ ಅಥವಾ ಕಾನೂನುಬದ್ಧ ಮಾಹಿತಿ ನೀಡದೇನೆಲಸಮಗೊಳಿಸಿ128 ದಿನಗಳು ಕಳೆದಿವೆ. ಸರ್ಕಾರವು ಪುನರ್ವಸತಿಯ ಭರವಸೆ ನೀಡಿತ್ತು. ಆದರೆ ಇಂದಿಗೂ ಆ ಭರವಸೆ ಈಡೇರಿಲ್ಲ. ಜನರು ತೀವ್ರ ಚಳಿ ಮತ್ತು ಉರಿಯುವ ಬಿಸಿಲನ್ನುಸಹಿಸಿಕೊಂಡು ಇನ್ನೂ ಬೀದಿಯಲ್ಲೇ ಬದುಕುತ್ತಿದ್ದಾರೆ ಎಂದು ಕೋಗಿಲು ಲೇಔಟ್‌ ಸ್ಲಂ ನಿವಾಸಿಗಳ ಹೋರಾಟ ಸಮಿತಿ ತಿಳಿಸಿದೆ. 

2026 ಏಪ್ರಿಲ್ 29ರ, ಮಧ್ಯಾಹ್ನ 12:30 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಮಿತಿ ಸರ್ಕಾರವು ಮುಂದಿನ 15ದಿನಗಳೊಳಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದೆ. ಪುನರ್ವಸತಿ ಕಲ್ಪಿಸುವಲ್ಲಿ ಸರ್ಕಾರ ವಿಫಲವಾದಲ್ಲಿ, ಸಮಿತಿಯು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಅವರು, ‘ಸರ್ಕಾರವು ಬಡವರ ಮನೆಗಳನ್ನು ನೆಲಸಮಗೊಳಿಸಿ ಅವರನ್ನು ಬೀದಿಗೆ ತಳ್ಳಿದೆ’ ಎಂದು ಹೇಳಿದ್ದಾರೆ. ಜನಪರ ಸರ್ಕಾರವೆಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರವು ಹೊಸ ವರ್ಷದ ಮೊದಲು ಒಳ್ಳೆಯ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ರಾಜಕೀಯ ಒತ್ತಡದ ಕಾರಣದಿಂದ ಆ ಭರವಸೆಯನ್ನು ಈಡೇರಿಸಲು ವಿಫಲವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ನ್ಯಾಯ ಸಿಗುವವರೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯು ಸಮುದಾಯದೊಂದಿಗೆ ನಿಲ್ಲುತ್ತದೆ ಎಂದು ಅವರು ತಿಳಿಸಿದ್ದಾರೆ ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟವನ್ನು ಆರಂಭಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

ಪ್ರಜಾ ವಿಮೋಚನಾ ಚಳುವಳಿಯ ಮುನಿ ಅಂಜಿನಪ್ಪ ಅವರು ಮಾತನಾಡಿ, ‘ಕೋಗಿಲು ಲೇಔಟ್‌ನ ಸ್ಥಳಾಂತರಗೊಂಡ ನಿವಾಸಿಗಳಿಗೆ ಕಂದಾಯ ಸಚಿವರು, ವಸತಿ ಸಚಿವರು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಪುನರ್ವಸತಿ ಕಲ್ಪಿಸುವ ಭರವಸೆ ನೀಡಿದ್ದರು, ಇಷ್ಟು ದಿನ ನಾವು ತಾಳ್ಮೆಯಿಂದ ಕಾಯುತ್ತಿದ್ದೇವೆ. ಆದರೆ ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ಹಗಲು-ರಾತ್ರಿ ನಿರಂತರ ಧರಣಿ ಆರಂಭಿಸಲಾಗುವುದು’ ಎಂದು ಹೇಳಿದ್ದಾರೆ. 

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಮರಿಯಪ್ಪ ಅವರು ಮಾತನಾಡಿ, ‘ಜಿಬಿಎ ನಡೆಸಿದ ನೆಲಸಮ ಕಾರ್ಯಾಚರಣೆಯಿಂದ ಸಮುದಾಯವು ಕಳೆದ ನಾಲ್ಕು ತಿಂಗಳುಗಳಿಂದ ಬೀದಿಯಲ್ಲೇ ಬದುಕುವಂತಾಗಿದೆ’ ಎಂದು ಹೇಳಿದ್ದು, ಅತ್ಯಂತ ಅಂಚಿನ ಸಮುದಾಯಗಳು ಮೂಲಭೂತ ಸೌಲಭ್ಯಗಳಿಲ್ಲದೆ ತೀವ್ರ ಹವಾಮಾನ ಪರಿಸ್ಥಿತಿಯಲ್ಲಿ ಬದುಕುತ್ತಾ, ಇನ್ನೂ ಭರವಸೆ ನೀಡಿದ ಪುನರ್ವಸತಿಗಾಗಿಕಾಯುತ್ತಿವೆ, ಇನ್ನೂ ಹೆಚ್ಚು ಕಾಲ ಕಾಯಲು ಸಾಧ್ಯವಿಲ್ಲ. ಕರ್ನಾಟಕದಾದ್ಯಂತ ಎಲ್ಲಾ ಜನಪರ ಸಂಘಟನೆಗಳು ಕೋಗಿಲು ಲೇಔಟ್ ನಿವಾಸಿಗಳ ಹೋರಾಟಕ್ಕೆ ಬೆಂಬಲ ನೀಡಲಿವೆ ಎಂದು ಕರೆನೀಡಿದ್ದಾರೆ. ಅಲ್ಲದೇ ಮೇ 12ರಿಂದ ನಿರಂತರ ಹೋರಾಟ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

ಸಮುದಾಯದ ಪ್ರತಿನಿಧಿಗಳಾದ ಶಬಾನಾ, ಹಸೀನಾ ಮತ್ತು ನಾರಾಯಣಮ್ಮ ಅವರು ಕಳೆದ 128 ದಿನಗಳಿಂದ ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡರು, ಚುನಾವಣೆಯ ಸಮಯದಲ್ಲಿ ನಾಯಕರು ಮತ ಕೇಳಲು ನಮ್ಮ ಮನೆಗಳಿಗೆ ಬಂದಿದ್ದರು. ಈಗ ಅವರು ನಮಗೆ ಮನೆಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದು, ಅದು ಸಾಧ್ಯವಾಗದಿದ್ದರೆ, ನಾವು ಈಗಿರುವ ಸ್ಥಳದಲ್ಲಿಯೇ ಭೂಮಿ ಹಕ್ಕು ನೀಡಬೇಕು, ಆಗ ನಾವು ಮನೆಗಳನ್ನು ಪುನರ್‌ನಿರ್ಮಿಸಿ ಅಲ್ಲಿಯೇ ಬದುಕಬಹುದು ಎಂದು ಹೇಳಿದ್ದಾರೆ. ಇಲ್ಲವಾದಲ್ಲಿ, ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ದುಡಿಯುವ ಜನರ ವೇದಿಕೆಯ ಪರವಾಗಿ ಮಾತನಾಡಿದ ನಂದಿನಿ ಅವರು, ‘ನಗರಗಳಿಗೆ ವಲಸೆ ಬಂದು ನಗರ ನಿರ್ಮಾಣಕ್ಕೆ ಕೊಡುಗೆ ನೀಡುವ ಸಮುದಾಯಗಳಿಗೆ ಗೌರವಯುತ ವಸತಿ ಕಲ್ಪಿಸುವುದು ಸರ್ಕಾರದ ಸಂವಿಧಾನಬದ್ಧ ಜವಾಬ್ದಾರಿ’ ಎಂದು ಹೇಳಿದರು. ಆದರೆ ಸರ್ಕಾರವು ಅವರ ಮನೆಗಳನ್ನು ನೆಲಸಮಗೊಳಿಸಿ ಅವರನ್ನು ಬೀದಿಗೆ ತಳ್ಳಿರುವುದು ಅನ್ಯಾಯವಾಗಿದೆ ಎಂದಿದ್ದಾರೆ. ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದೇ ಏಕೈಕ ಮಾರ್ಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...