Homeಕರ್ನಾಟಕಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

- Advertisement -
- Advertisement -

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಜಿಸಿಬಿ ಯಂತ್ರಗಳನ್ನು ಬಳಸಿ, ಜಿಬಿಎ ಅಧಿಕಾರಿಗಳು ಮತ್ತು ಪೊಲೀಸರ ಸಮ್ಮುಖದಲ್ಲಿ, ಯಾವುದೇ ಪೂರ್ವ ಸೂಚನೆ ಅಥವಾ ಕಾನೂನುಬದ್ಧ ಮಾಹಿತಿ ನೀಡದೇನೆಲಸಮಗೊಳಿಸಿ128 ದಿನಗಳು ಕಳೆದಿವೆ. ಸರ್ಕಾರವು ಪುನರ್ವಸತಿಯ ಭರವಸೆ ನೀಡಿತ್ತು. ಆದರೆ ಇಂದಿಗೂ ಆ ಭರವಸೆ ಈಡೇರಿಲ್ಲ. ಜನರು ತೀವ್ರ ಚಳಿ ಮತ್ತು ಉರಿಯುವ ಬಿಸಿಲನ್ನುಸಹಿಸಿಕೊಂಡು ಇನ್ನೂ ಬೀದಿಯಲ್ಲೇ ಬದುಕುತ್ತಿದ್ದಾರೆ ಎಂದು ಕೋಗಿಲು ಲೇಔಟ್‌ ಸ್ಲಂ ನಿವಾಸಿಗಳ ಹೋರಾಟ ಸಮಿತಿ ತಿಳಿಸಿದೆ. 

2026 ಏಪ್ರಿಲ್ 29ರ, ಮಧ್ಯಾಹ್ನ 12:30 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಮಿತಿ ಸರ್ಕಾರವು ಮುಂದಿನ 15ದಿನಗಳೊಳಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದೆ. ಪುನರ್ವಸತಿ ಕಲ್ಪಿಸುವಲ್ಲಿ ಸರ್ಕಾರ ವಿಫಲವಾದಲ್ಲಿ, ಸಮಿತಿಯು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಅವರು, ‘ಸರ್ಕಾರವು ಬಡವರ ಮನೆಗಳನ್ನು ನೆಲಸಮಗೊಳಿಸಿ ಅವರನ್ನು ಬೀದಿಗೆ ತಳ್ಳಿದೆ’ ಎಂದು ಹೇಳಿದ್ದಾರೆ. ಜನಪರ ಸರ್ಕಾರವೆಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರವು ಹೊಸ ವರ್ಷದ ಮೊದಲು ಒಳ್ಳೆಯ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ರಾಜಕೀಯ ಒತ್ತಡದ ಕಾರಣದಿಂದ ಆ ಭರವಸೆಯನ್ನು ಈಡೇರಿಸಲು ವಿಫಲವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ನ್ಯಾಯ ಸಿಗುವವರೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯು ಸಮುದಾಯದೊಂದಿಗೆ ನಿಲ್ಲುತ್ತದೆ ಎಂದು ಅವರು ತಿಳಿಸಿದ್ದಾರೆ ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟವನ್ನು ಆರಂಭಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

ಪ್ರಜಾ ವಿಮೋಚನಾ ಚಳುವಳಿಯ ಮುನಿ ಅಂಜಿನಪ್ಪ ಅವರು ಮಾತನಾಡಿ, ‘ಕೋಗಿಲು ಲೇಔಟ್‌ನ ಸ್ಥಳಾಂತರಗೊಂಡ ನಿವಾಸಿಗಳಿಗೆ ಕಂದಾಯ ಸಚಿವರು, ವಸತಿ ಸಚಿವರು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಪುನರ್ವಸತಿ ಕಲ್ಪಿಸುವ ಭರವಸೆ ನೀಡಿದ್ದರು, ಇಷ್ಟು ದಿನ ನಾವು ತಾಳ್ಮೆಯಿಂದ ಕಾಯುತ್ತಿದ್ದೇವೆ. ಆದರೆ ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ಹಗಲು-ರಾತ್ರಿ ನಿರಂತರ ಧರಣಿ ಆರಂಭಿಸಲಾಗುವುದು’ ಎಂದು ಹೇಳಿದ್ದಾರೆ. 

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಮರಿಯಪ್ಪ ಅವರು ಮಾತನಾಡಿ, ‘ಜಿಬಿಎ ನಡೆಸಿದ ನೆಲಸಮ ಕಾರ್ಯಾಚರಣೆಯಿಂದ ಸಮುದಾಯವು ಕಳೆದ ನಾಲ್ಕು ತಿಂಗಳುಗಳಿಂದ ಬೀದಿಯಲ್ಲೇ ಬದುಕುವಂತಾಗಿದೆ’ ಎಂದು ಹೇಳಿದ್ದು, ಅತ್ಯಂತ ಅಂಚಿನ ಸಮುದಾಯಗಳು ಮೂಲಭೂತ ಸೌಲಭ್ಯಗಳಿಲ್ಲದೆ ತೀವ್ರ ಹವಾಮಾನ ಪರಿಸ್ಥಿತಿಯಲ್ಲಿ ಬದುಕುತ್ತಾ, ಇನ್ನೂ ಭರವಸೆ ನೀಡಿದ ಪುನರ್ವಸತಿಗಾಗಿಕಾಯುತ್ತಿವೆ, ಇನ್ನೂ ಹೆಚ್ಚು ಕಾಲ ಕಾಯಲು ಸಾಧ್ಯವಿಲ್ಲ. ಕರ್ನಾಟಕದಾದ್ಯಂತ ಎಲ್ಲಾ ಜನಪರ ಸಂಘಟನೆಗಳು ಕೋಗಿಲು ಲೇಔಟ್ ನಿವಾಸಿಗಳ ಹೋರಾಟಕ್ಕೆ ಬೆಂಬಲ ನೀಡಲಿವೆ ಎಂದು ಕರೆನೀಡಿದ್ದಾರೆ. ಅಲ್ಲದೇ ಮೇ 12ರಿಂದ ನಿರಂತರ ಹೋರಾಟ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

ಸಮುದಾಯದ ಪ್ರತಿನಿಧಿಗಳಾದ ಶಬಾನಾ, ಹಸೀನಾ ಮತ್ತು ನಾರಾಯಣಮ್ಮ ಅವರು ಕಳೆದ 128 ದಿನಗಳಿಂದ ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡರು, ಚುನಾವಣೆಯ ಸಮಯದಲ್ಲಿ ನಾಯಕರು ಮತ ಕೇಳಲು ನಮ್ಮ ಮನೆಗಳಿಗೆ ಬಂದಿದ್ದರು. ಈಗ ಅವರು ನಮಗೆ ಮನೆಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದು, ಅದು ಸಾಧ್ಯವಾಗದಿದ್ದರೆ, ನಾವು ಈಗಿರುವ ಸ್ಥಳದಲ್ಲಿಯೇ ಭೂಮಿ ಹಕ್ಕು ನೀಡಬೇಕು, ಆಗ ನಾವು ಮನೆಗಳನ್ನು ಪುನರ್‌ನಿರ್ಮಿಸಿ ಅಲ್ಲಿಯೇ ಬದುಕಬಹುದು ಎಂದು ಹೇಳಿದ್ದಾರೆ. ಇಲ್ಲವಾದಲ್ಲಿ, ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ದುಡಿಯುವ ಜನರ ವೇದಿಕೆಯ ಪರವಾಗಿ ಮಾತನಾಡಿದ ನಂದಿನಿ ಅವರು, ‘ನಗರಗಳಿಗೆ ವಲಸೆ ಬಂದು ನಗರ ನಿರ್ಮಾಣಕ್ಕೆ ಕೊಡುಗೆ ನೀಡುವ ಸಮುದಾಯಗಳಿಗೆ ಗೌರವಯುತ ವಸತಿ ಕಲ್ಪಿಸುವುದು ಸರ್ಕಾರದ ಸಂವಿಧಾನಬದ್ಧ ಜವಾಬ್ದಾರಿ’ ಎಂದು ಹೇಳಿದರು. ಆದರೆ ಸರ್ಕಾರವು ಅವರ ಮನೆಗಳನ್ನು ನೆಲಸಮಗೊಳಿಸಿ ಅವರನ್ನು ಬೀದಿಗೆ ತಳ್ಳಿರುವುದು ಅನ್ಯಾಯವಾಗಿದೆ ಎಂದಿದ್ದಾರೆ. ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದೇ ಏಕೈಕ ಮಾರ್ಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...