Homeಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

- Advertisement -
- Advertisement -

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ ಪಕ್ಷವು ಗೆಲುವಿಗೆ ದಾಪುಗಾಲಿಡುತ್ತಿದೆ.

ಬಿಜೆಪಿಯ ರಾಜಕೀಯ ಕುತಂತ್ರದ ಬಗ್ಗೆ ಮಮತಾ ಬ್ಯಾನರ್ಜಿ ಎಷ್ಟೆಲ್ಲಾ ಎಚ್ಚರಿಕೆಯನ್ನು ವಹಿಸಿದ್ದರು, ಅದನ್ನು ಭೇದಿಸುವಲ್ಲಿ ವಿಫಲವಾಗಿದ್ದಾರೆ. ಅದರ ಪರಿಣಾಮ ಬಂಗಾಳದಲ್ಲಿ ಕಮಲ ಅರಳಿದೆ. ಕಮಲ ಅರಳಲು ಮತ್ತೊಂದು ಮುಖ್ಯ ಕಾರಣ ಭಾರತೀಯ ಚುನಾವನಾ ಆಯೋಗ ಜಾರಿ ಮಾಡಿದ ವಿಶೇಷ ತೀವ್ರ ಪರಿಷ್ಕರಣೆ (SIR) ಎಂಬ ಮಾತುಗಳು ಕೇಳಿಬರುತ್ತಿವೆ.

ಹೌದು ಪಶ್ಚಿಮ ಬಂಗಾಳದ ಈ ಚುನಾವಣಾ ಫಲಿತಾಂಶ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆಯ (SIR) ಕುರಿತಾದ ದತ್ತಾಂಶಗಳು ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಯೋಚಿಸುವಂತೆ ಮಾಡುತ್ತವೆ. ವಿಶೇಷವಾಗಿ 90 ಲಕ್ಷ ಮತದಾರರ ಹೆಸರುಗಳನ್ನು ಅಳಿಸಿಹಾಕಿರುವುದು ಮತ್ತು ಆ ಮೂಲಕ ಚುನಾವಣಾ ಅಖಾಡವನ್ನೇ ಬದಲಿಸಿರುವುದು ಅತ್ಯಂತ ಕಳವಳಕಾರಿ ವಿಷಯ.

ಚುನಾವಣಾ ಆಯೋಗವು ನಡೆಸಿದ SIR ಪ್ರಕ್ರಿಯೆಯು ಬಂಗಾಳದ ಮತದಾರರ ಪಟ್ಟಿಯಲ್ಲಿ ಭಾರಿ ಬದಲಾವಣೆಗಳನ್ನು ತಂದಿತು. ಇದು ಚುನಾವಣಾ ಫಲಿತಾಂಶದ ಮೇಲೆ ಬೀರಿದ ಪ್ರಭಾವವನ್ನು ಈ ಕೆಳಗಿನ ಅಂಶಗಳ ಮೂಲಕ ವಿಶ್ಲೇಷಿಸಬಹುದು.

ಮತದಾನದಿಂದ ವಂಚಿತರಾದ ಶೇ.12 ಮತದಾರರು 

SIR ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಸುಮಾರು 90 ಲಕ್ಷ ಹೆಸರುಗಳನ್ನು ಅಳಿಸಿಹಾಕಲಾಯಿತು. ಇದು ಒಟ್ಟು ಮತದಾರರ ಸಂಖ್ಯೆಯಲ್ಲಿ ಶೇ. 12ರಷ್ಟು ದೊಡ್ಡ ಕುಸಿತವಾಗಿದೆ. ಈ ಹೆಸರುಗಳ ಅಳಿಸುವಿಕೆಯು ಅನೇಕ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿನ ಅಂತರದ ಮೇಲೆ ನೇರ ಪರಿಣಾಮ ಬೀರಿದೆ.

ಪಶ್ಚಿಮ ಬಂಗಾಳದ ಮತದಾರರ ಸಂಖ್ಯೆಯು SIR ಪ್ರಕ್ರಿಯೆಯ ಮೊದಲು 7.66 ಕೋಟಿ ಇತ್ತು. ಅಂತಿಮ ಪಟ್ಟಿ ಮತ್ತು ನ್ಯಾಯಾಂಗ ಪರಿಶೀಲನೆಯ (Under adjudication) ನಂತರ ಈ ಸಂಖ್ಯೆಯು 6.75 ಕೋಟಿಗೆ ಕುಸಿದಿತ್ತು. ಒಟ್ಟಾರೆಯಾಗಿ ಮತದಾರರ ಪಟ್ಟಿಯಲ್ಲಿ ಶೇ. 12 ರಷ್ಟು ಇಳಿಕೆಯಾಗಿತ್ತು.ಇದುವರೆಗೆ ಒಟ್ಟು 90,62,188 (ಸುಮಾರು 90 ಲಕ್ಷ) ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಳಿಸಿಹಾಕಲಾದವರಲ್ಲಿ ಶೇ. 63.42 ರಷ್ಟು ಜನರು ಹಿಂದೂ ಸಮುದಾಯಕ್ಕೆ ಸೇರಿದವರಾಗಿದ್ದರೆ, ಶೇ. 34.32 ರಷ್ಟು ಜನರು ಮುಸ್ಲಿಂ ಸಮುದಾಯದವರಾಗಿದ್ದಾರೆ.

ಬಾಂಗ್ಲಾದೇಶದಿಂದ ಬಂದಿರುವ ಹಿಂದೂ ಮತುವಾ ಪ್ರಾಬಲ್ಯದ ಜಿಲ್ಲೆಗಳಿಂದ (ಉತ್ತರ 24 ಪರಗಣ ಮತ್ತು ನಾದಿಯಾ) ಒಟ್ಟು 2,42,721 ಹೆಸರುಗಳನ್ನು ಅಳಿಸಲಾಗಿದೆ. ಸುಮಾರು 58 ಲಕ್ಷ ಹೆಸರುಗಳು ಈ ವರ್ಗದಲ್ಲಿ ಅಳಿಸಲ್ಪಟ್ಟಿವೆ. ಸುಮಾರು 27 ಲಕ್ಷ ಹೆಸರುಗಳನ್ನು ಈ ಹಂತದಲ್ಲಿ ತೆಗೆಯಲಾಗಿದ್ದು, ಇದರಲ್ಲಿ ಮುಸ್ಲಿಂ ಮತದಾರರ ಸಂಖ್ಯೆ (ಸುಮಾರು 17 ಲಕ್ಷ) ಅತಿ ಹೆಚ್ಚಾಗಿದೆ.

ಕ್ಷೇತ್ರವಾರು ಸಂಶೋಧನಾ ಮಾಹಿತಿ (ಸಬರ್ ಇನ್‌ಸ್ಟಿಟ್ಯೂಟ್):

  • ನಂದಿಗ್ರಾಮ: ಇಲ್ಲಿ ಅಳಿಸಲಾದ ಒಟ್ಟು 3,461 ಮತದಾರರಲ್ಲಿ ಶೇ. 94.5 ರಷ್ಟು (3,270) ಜನರು ಮುಸ್ಲಿಂ ಸಮುದಾಯದವರಾಗಿದ್ದಾರೆ.
  • ಭವಾನಿಪುರ: ಇಲ್ಲಿ ಅಳಿಸಲಾದ 3,875 ಮತದಾರರಲ್ಲಿ ಶೇ. 40.1 ರಷ್ಟು ಜನರು ಮುಸ್ಲಿಮರಾಗಿದ್ದು, ಶೇ. 59.9 ರಷ್ಟು ಜನರು ಮುಸ್ಲಿಮೇತರರಾಗಿದ್ದಾರೆ.

ಮುಸ್ಲಿಂ ಸಮುದಾಯದವರ ಬಳಿ ಸರಿಯಾದ ದಾಖಲೆಗಳಿದ್ದರೂ ಸಹ, ‘ಲಾಜಿಕಲ್ ಡಿಸ್ಕ್ರಿಪನ್ಸಿ’ (LD) ಹೆಸರಿನಲ್ಲಿ ಅವರ ಹೆಸರುಗಳನ್ನು ಅಸಮರ್ಪಕವಾಗಿ ಗುರಿಯಾಗಿಸಿ ಅಳಿಸಲಾಗಿದೆ ಎಂಬ ಆರೋಪವು ಇದೆ. ಚುನಾವಣಾ ಆಯೋಗವು ಮುಸ್ಲಿಂ ಹೆಸರುಗಳನ್ನು ಗುರುತಿಸಲು ಕೃತಕ ಬುದ್ಧಿಮತ್ತೆಯನ್ನು (AI) ಬಳಸಿರುವ ಬಗ್ಗೆಯು ಕಳವಳ ವ್ಯಕ್ತವಾಗಿದೆ.

ಹೆಸರು ಅಳಿಸಲ್ಪಟ್ಟ ಮತದಾರರು ಮುಂದಿನ ದಿನಗಳಲ್ಲಿ ಪಟ್ಟಿಗೆ ಸೇರ್ಪಡೆಗೊಳ್ಳಲು ನ್ಯಾಯಮಂಡಳಿಯನ್ನು (Tribunal) ಸಂಪರ್ಕಿಸುತ್ತಿದ್ದಾರೆ. ಆದಾಗ್ಯೂ, ಏಪ್ರಿಲ್ 23 ಮತ್ತು 29 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಮತ ಚಲಾಯಿಸಲು ಅವಕಾಶ ನೀಡಲಾಗಿಲ್ಲ.

ಬಂಗಾಳದ ಫಲಿತಾಂಶದ ಮೇಲೆ SIR ಪ್ರಭಾವ

‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುನ್ನಡೆಗೆ ದಾರಿ ತೋರಿದೆ ಫಲಿತಾಂಶದ ಮೇಲೆ ಹೇಗೆ ನೇರ ಪ್ರಭಾವ ಬೀರಿದೆ ಎಂಬುದನ್ನು ಲಭ್ಯವಿರುವ ಅಂಕಿಅಂಶಗಳು ಸಾಬೀತುಪಡಿಸುತ್ತಿವೆ.

5000 ಕ್ಕಿಂತ ಕಡಿಮೆ ಮತದಾರರನ್ನು ಅಳಿಸಿಹಾಕಿದ ಕ್ಷೇತ್ರಗಳು (<5K):

ಯಾವ ಕ್ಷೇತ್ರಗಳಲ್ಲಿ 5000ಕ್ಕಿಂತ ಕಡಿಮೆ ಹೆಸರುಗಳನ್ನು ಅಳಿಸಲಾಗಿದೆಯೋ ಅಂತಹ 13 ಕ್ಷೇತ್ರಗಳ ಪೈಕಿ ಬಿಜೆಪಿ 12 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಟಿಎಂಸಿ ಕೇವಲ 1 ಸ್ಥಾನದಲ್ಲಿ ಗೆದ್ದಿದೆ.

5,000 ದಿಂದ 15,000 ಮತದಾರರನ್ನು ಅಳಿಸಿಹಾಕಿದ ಕ್ಷೇತ್ರಗಳು (5K-15K):

ಸರಾಸರಿ 5 ರಿಂದ 15 ಸಾವಿರ ಮತದಾರರ ಹೆಸರನ್ನು ಅಳಿಸಿಹಾಕಲಾದ 64 ಕ್ಷೇತ್ರಗಳಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದರೆ, ಟಿಎಂಸಿ 17 ಸ್ಥಾನಗಳನ್ನು ಗೆದ್ದಿದೆ.

15,000 ದಿಂದ 25,000 ಮತದಾರರನ್ನು ಅಳಿಸಿಹಾಕಿದ ಕ್ಷೇತ್ರಗಳು (15K-25K):

ಭಾರಿ ಪ್ರಮಾಣದಲ್ಲಿ ಅಂದರೆ ೧೫ ರಿಂದ ೨೫ ಸಾವಿರದಷ್ಟು ಹೆಸರುಗಳನ್ನು ಅಳಿಸಿಹಾಕಲಾದ 69 ಕ್ಷೇತ್ರಗಳ ಪೈಕಿ ಬಿಜೆಪಿ 44 ಸ್ಥಾನಗಳಲ್ಲಿ ಜಯಗಳಿಸಿದೆ ಮತ್ತು ಟಿಎಂಸಿ 23 ಸ್ಥಾನಗಳನ್ನು ಪಡೆದಿದೆ.

25,000 ಕ್ಕಿಂತ ಹೆಚ್ಚು ಮತದಾರರನ್ನು ಅಳಿಸಿಹಾಕಿದ ಕ್ಷೇತ್ರಗಳು (>25K):

ಅತಿ ಹೆಚ್ಚು ಅಂದರೆ 25 ಸಾವಿರಕ್ಕೂ ಅಧಿಕ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿರುವ 147 ಕ್ಷೇತ್ರಗಳ ಪೈಕಿ ಬಿಜೆಪಿ 87 ಸ್ಥಾನಗಳನ್ನು ಗೆದ್ದು  ಮುನ್ನಡೆ ಸಾಧಿಸಿದೆ, ಇಲ್ಲಿ ಟಿಎಂಸಿ 60 ಸ್ಥಾನಗಳನ್ನು ಗೆದ್ದಿದೆ.

ಹೆಚ್ಚಿನ ಅಳಿಸುವಿಕೆ = ಬಿಜೆಪಿಗೆ ದೊಡ್ಡ ಲಾಭ:

ಅತಿ ಹೆಚ್ಚು ಅಂದರೆ 25,000ಕ್ಕೂ ಅಧಿಕ ಮತದಾರರನ್ನು ಅಳಿಸಿಹಾಕಲಾದ 147 ಕ್ಷೇತ್ರಗಳ ಪೈಕಿ ಬಿಜೆಪಿ 87 ಸ್ಥಾನಗಳನ್ನು ಗೆದ್ದುಕೊಂಡಿದೆ. ಇದು ಆಯಕಟ್ಟಿನ ಜಾಗಗಳಲ್ಲಿ ದೊಡ್ಡ ಮಟ್ಟದ ಮತದಾರರನ್ನು ಗುರಿಯಾಗಿಸಿ ಪಟ್ಟಿಯಿಂದ ಹೊರಹಾಕಿರುವುದನ್ನು ತೋರಿಸುತ್ತದೆ.

ಮಧ್ಯಮ ಮಟ್ಟದ ಅಳಿಸುವಿಕೆಯಲ್ಲೂ ಕುತಂತ್ರ: 5,000 ದಿಂದ 25,000ದವರೆಗೆ ಮತದಾರರನ್ನು ಅಳಿಸಿದ ಒಟ್ಟು 133 ಕ್ಷೇತ್ರಗಳಲ್ಲಿ , ಬಿಜೆಪಿ 90 ಸ್ಥಾನಗಳನ್ನು ಕಿತ್ತುಕೊಂಡಿದೆ. ಅಂದರೆ, ಡಿಲೀಶನ್ ಪ್ರಮಾಣ ಹೆಚ್ಚಾದಷ್ಟೂ ಬಿಜೆಪಿಯ ಗೆಲುವಿನ ಸಾಧ್ಯತೆಯೂ ಹೆಚ್ಚಾಗಿರುವುದು ಇಲ್ಲಿ ಸ್ಪಷ್ಟ.

ಅಲ್ಪ ಅಳಿಸುವಿಕೆ ನಡೆದ ಕಡೆಯೂ ಬಿಡದ ಹಿಡಿತ: ಕೇವಲ 5,000ಕ್ಕಿಂತ ಕಡಿಮೆ ಅಳಿಸುವಿಕೆ ನಡೆದ 13 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಜಯ ಸಾಧಿಸಿದೆ. ಇದು ಕಡಿಮೆ ಅಳಿಸುವಿಕೆ ನಡೆದ ಕಡೆಯೂ ಸಹ ಬಿಜೆಪಿ ತನ್ನ ಕುತಂತ್ರದ ಮೂಲಕ ಸಮೀಕರಣಗಳನ್ನು ತನಗೆ ಪೂರಕವಾಗಿ ಬದಲಿಸಿಕೊಂಡಿರುವುದನ್ನು ಎತ್ತಿ ತೋರಿಸುತ್ತದೆ.

ಬಿಜೆಪಿಯ ಗೆಲುವು ಕೇವಲ ರಾಜಕೀಯ ಪ್ರಚಾರದಿಂದ ಬಂದಿದ್ದಲ್ಲ. ಇದು 90 ಲಕ್ಷ ಮತದಾರರನ್ನು (ಶೇ. 12) ವ್ಯವಸ್ಥಿತವಾಗಿ ಪಟ್ಟಿಯಿಂದ ಹೊರಹಾಕಿದ ‘SIR’ ಎಂಬ ಕುತಂತ್ರದ ಫಲ. ವಿಶೇಷವಾಗಿ ಅಲ್ಪಸಂಖ್ಯಾತ ಮತ್ತು ಟಿಎಂಸಿ ಪರ ಒಲವಿರುವ ಮತದಾರರನ್ನು ಗುರಿಯಾಗಿಸಿಕೊಂಡು ಈ ಡಿಲೀಶನ್ ಮಾಡಲಾಗಿದೆ ಎಂಬ ಸಂಶೋಧನಾ ವರದಿಗಳು ಈ ಗೆಲುವಿನ ಹಿಂದಿನ ಕರಾಳ ಮುಖವನ್ನು ಬಯಲು ಮಾಡುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...