Homeಮುಖಪುಟನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

- Advertisement -
- Advertisement -

ಹೊಸ ವರ್ಷದ ದಿನದಂದು ಭಾರತದಲ್ಲಿ 67,385 ಶಿಶುಗಳು ಜನಿಸಿದ್ದು, ವಿಶ್ವದಲ್ಲೇ ಇದು ಅಧಿಕ. ಆದರೆ, ಇದೇ ಹೊತ್ತಿನಲ್ಲಿ ರಾಜಸ್ತಾನದ ಕೋಟಾದ ಜೆಕೆ ಲೊನ್ ಸರ್ಕಾರಿ ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳೊಂದರಲ್ಲೇ 100ಕ್ಕೂ ಹೆಚ್ಚು ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಅದಕ್ಕಿಂತ ಆಘಾತಕಾರಿಯಾದದ್ದು, ಈ ವಿಷಯ ಎತ್ತಿಕೊಂಡು ರಾಜಕೀಯ ಮಾಡುತ್ತಿರುವುದು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣ ಇನ್ನೂ ಹೆಚ್ಚಿತ್ತು ಎಂದು ಹೇಳಿದ್ದಾರೆ. ಇಲ್ಲಿ ಆಸ್ಪತ್ರೆಗಳ ಸುಧಾರಣೆಗೆ ತುರ್ತು ಯೋಜನೆ ರೂಪಿಸುವ ಬದಲು ರಾಜಕೀಯ ಮೇಲುಗೈ ಪಡೆಯುವ ಕೀಳು ಪೈಪೋಟಿ ಶುರುವಾದಂತಿದೆ.

ಬಿಜೆಪಿ ಆಡಳಿತದ ಅವಧಿಯಲ್ಲೂ ಅಲ್ಲಿ ನವಜಾತ ಶಿಶುಗಳ ಪ್ರಮಾಣ ಜಾಸ್ತಿಯೇ ಇತ್ತು ಎಂಬುದೂ ಸತ್ಯ. ಆದರೆ ಈಗ ಪರಸ್ಪರ ದೋಷಾರೂಪಣೆ ಮಾಡುತ್ತ ಕೂಡುವ ಬದಲು ಕೇಂದ್ರದ ನೆರವಿನೊಂದಿಗೆ ನವಜಾತ ಶಿಶುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಅಲ್ಲಿ ಇನ್‌ಕ್ಯುಬೇಟರ್ ಮತ್ತು ಐಸಿಯು ಘಟಕಗಳ ಕೊರತೆಯಿದೆ, ಇರುವ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಉತ್ತರಪ್ರದೇಶದಲ್ಲಿ ಒಂದೇ ಆಸ್ಪತ್ರೆಯಲ್ಲಿ ವಾರದೊಪ್ಪತ್ತಿನಲ್ಲಿ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದವು ಎಂಬುದನ್ನು ಇಲ್ಲಿ ನೆನೆಯಬಹುದು. ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಉತ್ತರದ ರಾಜ್ಯಗಳಲ್ಲಿ ಅದರಲ್ಲೂ ಭಿಮಾರು ರಾಜ್ಯಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ ಎಂಬುದೂ ಇಲ್ಲಿ ಉಲ್ಲೇಖಾರ್ಹ.

ನವಜಾತ ಶಿಶುಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿದೆ, ಧನ ಸಹಾಯವನ್ನೂ ನೀಡುತ್ತಿದೆ. ಆದರೆ, ವಿಶ್ವದಾದ್ಯಂತ ನಿರೀಕ್ಷಿತ ಗುರಿ ಮುಟ್ಟುವುದಕ್ಕೆ ಸ್ಥಳೀಯ ಆಡಳಿತಗಳಿಂದ ಸಾಧ್ಯವಾಗಿಲ್ಲ.
ಕಡಿಮೆ ತೂಕ, ಅವಧಿಪೂರ್ವ ಜನನ, ಸುಸೂತ್ರವಾಗದ ಹೆರಿಗೆಗಳು ಮತ್ತು ಸಿಫ್ರಸ್‌ನಂತಹ ಕಾಯಿಲೆಗಳು ನವಜಾತ ಶಿಶುಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಶುದ್ಧ ನೀರು, ಸ್ವಚ್ಛತೆ ಮತ್ತು ಪೌಷ್ಟಿಕಾಂಶಗಳ ಕೊರತೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಅಲಭ್ಯತೆ ಅಥವಾ ಕೊರತೆಯೇ ಇದಕ್ಕೆಲ್ಲ ಮೂಲ ಕಾರಣ. ಈ ಸೌಲಭ್ಯಗಳನ್ನು ಒದಗಿಸುವತ್ತ ನಮ್ಮ ಸರ್ಕಾರಗಳು ತುರ್ತ ಗಮನ ನೀಡಬೇಕಾಗಿದೆ.

ಇಡೀ ವಿಶ್ವದಲ್ಲೇ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬುದು ನಾಚಿಕೆಯ ಮತ್ತು ಕಳವಳದ ಸಂಗತಿ.

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...