HomeUncategorizedFACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಚೊಚ್ಚಲ ಭಾಷಣದಲ್ಲಿ, ‘ನಿಜವಾದ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯ’ಕ್ಕೆ ಬದ್ಧವಾಗಿರುವ ಹೊಸ ಯುಗ ಪ್ರಾರಂಭವಾಗಿದೆ ಎಂದು ವಿಜಯ್ ಹೇಳಿದ ಬೆನ್ನಲ್ಲೆ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ದ ಪ್ರತಿಭಟನೆಗಳು ದಾಖಲಾಗಿವೆ ಎಂಬ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.

ಈ ಹಿನ್ನೆಲೆಯಲ್ಲಿ, ಹಿಂದಿ ವಿರುದ್ಧದ ಪ್ರತಿಭಟನೆಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವಿಜಯ್ ಮುಖ್ಯಮಂತ್ರಿಯಾದ ತಕ್ಷಣ ಹಿಂದಿ ವಿರೋಧಿ ಚಳುವಳಿಯ ಆರಂಭವಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ.

ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಪ್ರತಿಭಟನಾಕಾರರು ಬೀದಿಗಳಲ್ಲಿ ಹಿಂದಿ ಹೇರಿಕೆಯ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬರುತ್ತದೆ. ಅಲ್ಲದೆ ಚೆನ್ನೈನ ರೈಲು ನಿಲ್ದಾಣದ ಸೈನ್‌ಬೋರ್ಡ್‌ಗಳಿಗೆ ಕಪ್ಪು ಬಣ್ಣವನ್ನು ಬಳಿದು ಹಿಂದಿ ಅಕ್ಷರಗಳನ್ನು ಅಳಿಸುತ್ತಿರುವುದನ್ನು ಕಾಣಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ತಮಿಳುನಾಡಲ್ಲಿ ಮತ್ತೆ ಶುರುವಾಯಿತು ಹಿಂದಿ ಹೇರಿಕೆ ವಿರೋಧಿ ಹೋರಾಟ’’ ಎಂದು ಬರೆದುಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವಿಡಿಯೋದ ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ ಮಾರ್ಚ್ 12 ರಂದು ಸನ್ ನ್ಯೂಸ್ ಪೋಸ್ಟ್ ಮಾಡಿದ ಇನ್‌ಸ್ಟಾಗ್ರಾಮ್ ರೀಲ್ ಲಭ್ಯವಾಗಿದೆ. ಮೇ 17 ರಂದು ಪ್ರತಿಭಟನಾಕಾರರು ಚೆನ್ನೈನ ರೈಲು ನಿಲ್ದಾಣಗಳಲ್ಲಿ ಹಿಂದಿ ಅಕ್ಷರಗಳಿ ಕಪ್ಪು ಮಸಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿದರು ಎಂದು ಶೀರ್ಷಿಕೆಯಲ್ಲಿ ಹೇಳಲಾಗಿದೆ.

 
 
 
 
 
View this post on Instagram
 
 
 
 
 
 
 
 
 
 
 

 

A post shared by Sun News Tamil (@sunnews)

ಸನ್ ನ್ಯೂಸ್ ರೀಲ್‌ನಲ್ಲಿರುವ ದೃಶ್ಯಗಳು ವೈರಲ್ ವೀಡಿಯೊಗೆ ಹೊಂದಿಕೆಯಾಗುತ್ತವೆ. ಮಾರ್ಚ್ 12 ರಂದು ದಿ ವೈರ್ ಪ್ರಕಟಿಸಿದ ‘ಚಿನ್ನಸಾಮಿಯಿಂದ ಚೆನ್ನೈ ಪಾರ್ಕ್‌ವರೆಗೆ, ತಮಿಳುನಾಡು ಹಿಂದಿ ಹೇರಿಕೆಯನ್ನು ವಿರೋಧಿಸುತ್ತದೆ’ ಎಂಬ ಶೀರ್ಷಿಕೆಯ ವರದಿಯಲ್ಲಿ ಇದನ್ನೆ ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, ಮಾರ್ಚ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿ ವಿರೋಧಿ ಪ್ರತಿಭಟನೆಗಳು ನಡೆದಿತ್ತು. ಆಯೋಜಕ ತಿರುಮುರುಗನ್ ಗಾಂಧಿ ನೇತೃತ್ವದ ಮೇ 17 ಹೋರಾಟದಲ್ಲಿ, ಚೆನ್ನೈ ಪಾರ್ಕ್ ರೈಲ್ವೆ ನಿಲ್ದಾಣಕ್ಕೆ ಪ್ರವೇಶಿಸಿ ಇತ್ತೀಚೆಗೆ ನಿರ್ಮಾಣವಾದ ನಿಲ್ದಾಣದ ಸೈನ್‌ಬೋರ್ಡ್‌ಗಳಿಗೆ ಕಪ್ಪು ಬಣ್ಣ ಬಳಿದಿದ್ದಾರೆ, ಮಧ್ಯದಲ್ಲಿ ಹಿಂದಿ, ಮೇಲೆ ತಮಿಳು ಮತ್ತು ಕೆಳಗೆ ಇಂಗ್ಲಿಷ್ ಅನ್ನು ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.

ವರದಿಯಲ್ಲಿ ಶಿವ ದಿಲೀಪನ್ ಎಂಬ ಕಾರ್ಯಕರ್ತ ತಮಿಳು ಭಾಷೆಯನ್ನು ಬೆಂಬಲಿಸಿ ಮತ್ತು ಹಿಂದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಿಲ್ದಾಣಕ್ಕೆ ಪ್ರವೇಶಿಸುತ್ತಿದ್ದ. ಇದೇ ಸಂದರ್ಭದಲ್ಲಿ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

ಹಾಗಾಗಿ ಈ ಘಟನೆ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗುವ ಮೊದಲೇ ಈ ಪ್ರತಿಭಟನೆ ದಾಖಲಾಗಿದ್ದು ಇದರ ವಿಡಿಯೋ ಕೂಡ ಲಭ್ಯವಿದೆ. ಇದು ಮಾರ್ಚ್ ತಿಂಗಳಿನಲ್ಲಿ ನಡೆದ ಪ್ರತಿಭಟನೆಯ ದೃಶ್ಯಗಳು ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿನಲ್ಲಿ ಮಾರ್ಚ್‌ನಲ್ಲಿ ನಡೆದ ಹಿಂದಿ ವಿರೋಧಿ ಪ್ರತಿಭಟನೆಯ ಹಳೆಯ ವಿಡಿಯೋವನ್ನು ಟಿವಿಕೆ ಪಕ್ಷದ ನಾಯಕ ವಿಜಯ್ ತಮಿಳುನಾಡಿನಲ್ಲಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಪ್ರತಿಭಟನೆಯ ವಿಡಿಯೋ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...