Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...