Homeಮುಖಪುಟಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು.

ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ರಾಜಸ್ಥಾನ, ಛತ್ತೀಸ್‌ಗಢ, ಗುಜರಾತ್, ಮಧ್ಯ ಪ್ರದೇಶ, ಉತ್ತರ ಪ್ರದೇಶ, ಗೋವಾ, ಪುದುಚೇರಿ, ಅಂಡಮಾನ್ ನಿಕೋಬಾರ್ ಮತ್ತು ಲಕ್ಷದ್ವೀಪ ಸೇರಿದಂತೆ ಒಟ್ಟು 10 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ಒಂದು ಮತ್ತು ಎರಡನೇ ಹಂತದ ಎಸ್‌ಐಆರ್‌ನಲ್ಲಿ ಬರೋಬ್ಬರಿ 5 ಕೋಟಿ 65 ಲಕ್ಷಕ್ಕಿಂತ ಅಧಿಕ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ವರದಿಗಳು ಹೇಳುತ್ತವೆ.

ಇತ್ತೀಚೆಗೆ (2025 ಮತ್ತು 2026) ಚುನಾವಣೆ ನಡೆದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಸ್ತುತ ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಚುನಾವಣೆಯ ಬಳಿಕ ಹೊಸ ಸರ್ಕಾರಗಳು ಅಸ್ತಿತ್ವಕ್ಕೆ ಬಂದಿವೆ. ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ತಮ್ಮ ಮತದಾನದ ಹಕ್ಕು ಕಳೆದುಕೊಂಡ ಜನರು ಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಅವರಿಗೆ ಮುಂದೇನು ಎಂಬ ಚಿಂತೆ ಶುರುವಾಗಿದೆ.

ಎಸ್‌ಐಆರ್ ನಡೆಸುವಾಗ ಕೇಂದ್ರ ಸರ್ಕಾರ ಇದು ನಾಗರಿಕತ್ವವನ್ನು ನಿರ್ಧರಿಸುವ ಅಥವಾ ಪರಿಶೀಲಿಸುವ ಪ್ರಕ್ರಿಯೆಯಲ್ಲ, ಬದಲಿಗೆ ಇದು ಕೇವಲ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಕಾರ್ಯಾಚರಣೆಯಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿತ್ತು.

ಕೆಲವು ವಿರೋಧ ಪಕ್ಷಗಳು ಮತ್ತು ಸಂಘಟನೆಗಳು ಎಸ್‌ಐಆರ್‌ ಪ್ರಕ್ರಿಯೆಯನ್ನು ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕ ನೋಂದಣಿ) ಮಾದರಿಯ ನಾಗರಿಕತ್ವ ತಪಾಸಣೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ಚುನಾವಣಾ ಆಯೋಗವು, ಮತದಾರರ ಪಟ್ಟಿಯಲ್ಲಿ ಯಾವುದೇ ವಿದೇಶಿ ಪ್ರಜೆಗಳು ಅಥವಾ ಅನರ್ಹರು ಇರಬಾರದು ಎಂಬುದು ಸಂವಿಧಾನದ ಆಶಯವಾಗಿದೆ. ಹೀಗಾಗಿ, ಎಸ್‌ಐಆರ್ ಅಡಿಯಲ್ಲಿ ನಡೆಯುವ ಪರಿಶೀಲನೆಯು ಕೇವಲ ಚುನಾವಣಾ ಅರ್ಹತೆಯನ್ನು ನಿರ್ಧರಿಸಲು ಮಾತ್ರ ಸೀಮಿತವಾಗಿದೆಯೇ ಹೊರತು, ಯಾವುದೇ ವ್ಯಕ್ತಿಯ ನಾಗರಿಕತ್ವವನ್ನು ಕಸಿದುಕೊಳ್ಳಲು ಅಥವಾ ದೇಶದಿಂದ ಹೊರಗಟ್ಟಲು (Deportation) ಅಲ್ಲ ಎಂದು ಹೇಳಿತ್ತು.

ಕೇಂದ್ರ ಸರ್ಕಾರ ಕೂಡ ಸಂಸತ್ತಿನಲ್ಲಿ (ರಾಜ್ಯಸಭೆ) ಮತ್ತು ಸುಪ್ರೀಂ ಕೋರ್ಟ್ ವಿಚಾರಣೆಗಳ ವೇಳೆ ತನ್ನ ನಿಲುವನ್ನು ಸ್ಪಷ್ಟಪಡಿಸಿತ್ತು. ಇಡೀ ಪ್ರಕ್ರಿಯೆಯು ಸಂಪೂರ್ಣವಾಗಿ ಸಂವಿಧಾನಬದ್ಧ ಚೌಕಟ್ಟಿಗೆ ಒಳಪಟ್ಟಿದೆ ಎಂದು ಪ್ರತಿಪಾದಿಸಿತ್ತು.

ಎಸ್‌ಐಆರ್‌ನ ಮೂಲ ತತ್ವವು ಸಂವಿಧಾನದ ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕನ್ನು ಆಧರಿಸಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿತ್ತು. ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬುದೇ ಇದರ ಉದ್ದೇಶವಾಗಿದೆ ಎಂದಿತ್ತು.

ಸಂವಿಧಾನದ ವಿಧಿ 324 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950 ರ ಸೆಕ್ಷನ್ 21 ರ ಅಡಿಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಮತ್ತು ಶುದ್ಧೀಕರಿಸುವ ಸಂಪೂರ್ಣ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ ಎಂದು ಕೇಂದ್ರ ಸರ್ಕಾರ ಬೆಂಬಲಿಸಿತ್ತು.

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಮೇಲಿನ ಹೇಳಿಕೆ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಪ್ರಕಾರ, ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲ್ಪಟ್ಟವರು ಈಗಲೂ ಭಾರತದ ನಾಗರಿಕರು.

ಇಲ್ಲಿ ಗಮನಾರ್ಹ ವಿಷಯವೆಂದರೆ, ಮೃತರದ್ದು, ಸ್ಥಳಾಂತರಗೊಂಡವರದ್ದು ಮತ್ತು ಒಂದಕ್ಕಿಂತ ಹೆಚ್ಚು ಬಾರಿ ಇರುವ ಹೆಸರುಗಳನ್ನು ಮಾತ್ರ ಎಸ್ಐಆರ್ ವೇಳೆ ತೆಗೆದು ಹಾಕಿದ್ದೇವೆ ಎಂದು ಚುನಾವಣಾ ಆಯೋಗ ಪದೇ ಪದೇ ಹೇಳಿಕೊಂಡು ಬಂದಿದೆ. ಆದರೆ, ಪ್ರಸ್ತುತ ಜೀವಂತ ಇರುವ, ಸ್ಥಳಾಂತರಗೊಳ್ಳದ ಮತ್ತು ಒಂದಕ್ಕಿಂತ ಹೆಚ್ಚು ಬಾರಿ ಹೆಸರು ನೋಂದಣಿಯಾಗಿರದ ಅನೇಕರು ಮತದಾರರ ಪಟ್ಟಿಯಿಂದ ಹೊರ ಬಿದ್ದಿದ್ದಾರೆ. ಇದರಿಂದ ಎಸ್‌ಐಆರ್ ಪ್ರಕ್ರಿಯೆಯೇ ಸರಿಯಾಗಿ ನಡೆದಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.

ಮತ ಹಕ್ಕು ಹೋಯ್ತು ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಎಸ್‌ಐಆರ್‌ನಿಂದ ವಿವಿಧ ರಾಜ್ಯಗಳ ಲಕ್ಷಾಂತರ ಜನರು ತಮ್ಮ ಮತದಾನದ ಹಕ್ಕನ್ನು ಈಗಾಗಲೇ ಕಳೆದುಕೊಂಡಿದ್ದಾರೆ. ಈಗ ಸರ್ಕಾರಿ ಸೌಲಭ್ಯಗಳನ್ನು ನೀಡುವುದಿಲ್ಲ ಎಂದು ಬಿಹಾರ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳು ಅಧಿಕೃತವಾಗಿ ಹೇಳಿವೆ. ಹಾಗಾಗಿ, ಮುಂದೆ ಭಾರತದ ನಾಗರಿಕತ್ವ ಕೂಡ ಕಳೆದುಕೊಳ್ಳುವ ಆತಂಕ ಜನ ಸಾಮಾನ್ಯರಿಗೆ ಎದುರಾಗಿದೆ.

ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲ್ಪಟ್ಟವರು ಪಡಿತರ ಮತ್ತು ಇತರ ಯಾವುದೇ ಸರ್ಕಾರಿ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ. ಮುಂದಿನ ಹಂತದಲ್ಲಿ ಇಂತಹ ವ್ಯಕ್ತಿಗಳ ಬ್ಯಾಂಕ್ ಪಾಸ್‌ಬುಕ್‌ಗಳನ್ನು ಸಹ ರದ್ದುಗೊಳಿಸಲಾಗುವುದು ಎಂದು ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿರುವುದಾಗಿ ವರದಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿಯೂ ಸಹ ಎಸ್‌ಐಆರ್‌ ಮೂಲಕ ಮತದಾರರ ಪಟ್ಟಿಯಿಂದ ಹೊರಬಿದ್ದ ಮಹಿಳೆಯರಿಗೆ ಅಲ್ಲಿನ ‘ಅನ್ನಪೂರ್ಣ ಭಂಡಾರ್’ ಯೋಜನೆಯ ಸೌಲಭ್ಯವನ್ನು ನಿಲ್ಲಿಸುವುದಾಗಿ ಅಲ್ಲಿನ ನೂತನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಸಾಮಾಜಿಕ ಕಲ್ಯಾಣ ಸಚಿವೆ ಅಗ್ನಿಮಿತ್ರ ಪಾಲ್ ಘೋಷಿಸಿದ್ದಾರೆ.

ಜೂನ್ 1 ರಿಂದ ಯೋಜನೆ ಜಾರಿಗೂ ಮುನ್ನ ಕಡ್ಡಾಯವಾಗಿ ಫಲಾನುಭವಿಗಳ ಪಟ್ಟಿಯ ವಿಶ್ಲೇಷಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಸಂಪೂರ್ಣವಾಗಿ ಡಿಲೀಟ್ ಆದವರಿಗೆ ಮತ್ತು ಪ್ರಸ್ತುತ ತಮ್ಮ ಹೆಸರು ಕೈಬಿಟ್ಟಿರುವ ಕುರಿತು ಟ್ರಿಬ್ಯುನಲ್‌ಗಳಲ್ಲಿ ಮೇಲ್ಮನವಿ ಸಲ್ಲಿಸಿ ವಿಚಾರಣೆ ಬಾಕಿ ಇರುವ ಮಹಿಳೆಯರಿಗೂ ಸದ್ಯದ ಮಟ್ಟಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಮುಂದೆ ಬಿಜೆಪಿ ಆಡಳಿತ ಇತರ ರಾಜ್ಯಗಳು ಕೂಡ ಈ ರೀತಿ ಘೋಷಿಸುವ ಸಾಧ್ಯತೆ ಇದೆ. ಇದರಿಂದ, ಈಗಾಗಲೇ ಮತದಾನದ ಹಕ್ಕು ಕಳೆದುಕೊಂಡವರು ಸರ್ಕಾರಿ ಸೌಲಭ್ಯದ ಅವಕಾಶವನ್ನೂ ಕಳೆದುಕೊಂಡಾಯಿತು. ಈ ಮೂಲಕ ಅವರು ದ್ವಿತೀಯ ದರ್ಜೆಯ ನಾಗರಿಕರಾಗಿ ಆಯಿತು. ಮುಂದೆ ಇದನ್ನೇ ಮುಂದಿಟ್ಟು ದೇಶದಿಂದ ಹೊರದಬ್ಬಿದರೂ ಅಚ್ಚರಿಯಿಲ್ಲ.

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೊರಗಿಟ್ಟಿರುವುದು ಅನರ್ಹರನ್ನಲ್ಲವೇ? ಹೀಗಿರುವಾಗ ಚಿಂತೆ ಏಕೆ ಎಂಬ ಪ್ರಶ್ನೆ ಕೆಲವರಿಗೆ ಮೂಡಬಹುದು. ಇದಕ್ಕೆ ಉತ್ತರ ಕಂಡುಕೊಳ್ಳಲು ಪಶ್ಚಿಮ ಬಂಗಾಳದ ಎಸ್‌ಐಆರ್‌ನ ಬಗ್ಗೆ ಒಂದು ಬಾರಿ ಪರಾಮರ್ಶೆ ಮಾಡಿಕೊಳ್ಳಬೇಕು. ತಾರ್ಕಿಕ ವೈರುಧ್ಯ (logical Discrepancy) ಎಂಬ ಹೊಸ ಪ್ರಕ್ರಿಯೆಯನ್ನು ಪರಿಚಯಿಸಿ, ಸಣ್ಣ ಪುಟ್ಟ ಅಕ್ಷರ ತಪ್ಪುಗಳ ಕಾರಣಕ್ಕೆ ಅರ್ಹ ಮತದಾರರನ್ನು ಹೇಗೆ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂಬುವುದು ಗೊತ್ತಾಗುತ್ತದೆ.

ದಾಖಲೆಯಲ್ಲಿ ಸಣ್ಣ ಅಕ್ಷರ ತಪ್ಪಿದೆ ಎಂಬ ಕಾರಣಕ್ಕೆ ಭಾರತೀಯ ನಾಗರಿಕರಾದವರ ಮತದಾನದ ಹಕ್ಕನ್ನು ಕಿತ್ತುಕೊಂಡು, ಈಗ ಅದನ್ನೇ ನೆಪವಾಗಿಸಿ ಸರ್ಕಾರಿ ಸೌಲಭ್ಯದಿಂದಲೂ ಹೊರಗಿಡುವುದನ್ನು ಒಪ್ಪಿಕೊಳ್ಳಲು ಸಾಧ್ಯವೇ?

ಭಾರತದ ನಾಗರಿಕರಾದ ಎಲ್ಲರಿಗೂ ಇಲ್ಲಿನ ಸರ್ಕಾರಗಳ ಸೌಲಭ್ಯಗಳು ತಲುಪಬೇಕು. ಅದು ನಿರಾಕರಿಸುವುದಾದರೆ ಸರ್ಕಾರ ಅವರನ್ನು ಭಾರತದ ನಾಗರಿಕರು ಎಂದು ಪರಿಗಣಿಸಿಲ್ಲ ಎಂದರ್ಥವಲ್ಲವೇ? ಹಾಗಿದ್ದರೆ, ಮತದಾರರ ಪಟ್ಟಿಯ ಶುದ್ದೀಕರಣ ಎಂದು ಎಸ್‌ಐಆರ್‌ ಹೆಸರಿನಲ್ಲಿ ಚುನಾವಣಾ ಆಯೋಗ ನಡೆಸಿರುವುದು ನಾಗರಿಕತ್ವ ಪರಿಶೀಲನೆಯೇ? ಅಂತಹ ಅಧಿಕಾರ ಆಯೋಗಕ್ಕೆ ಇದೆಯೇ? ನಾಗರಿಕತ್ವ ಪರಿಶೀಲನೆಯೇ ನಡೆಸಲಾಗಿದೆ ಅಂದುಕೊಂಡರೂ..ದಾಖಲೆಗಳಿರುವ ಜನರ ನಾಗರಿಕತ್ವ ಕಿತ್ತುಕೊಳ್ಳಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಇದು ಸಂವಿಧಾನದ ಆದೇಶಗಳಿಗೆ ವಿರುದ್ದವಲ್ಲವೇ? ಇಂತಹ ಅನ್ಯಾಯವನ್ನು ನಾಗರಿಕರು ಒಪ್ಪಿಕೊಳ್ಳಬೇಕಾ?

ಎಸ್‌ಐಆರ್ ಮೂಲಕ ಲಕ್ಷಾಂತರ ಅರ್ಹ ಮತದಾರರನ್ನು ಹೊರಗಿಟ್ಟು ಚುನಾವಣೆ ನಡೆಸಿರುವುದೇ ಸಂವಿಧಾನದ ಆಶಯಗಳಿಗೆ ವಿರುದ್ದ. ಕಾನೂನು ಹೋರಾಟದಲ್ಲೂ ಜನರಿಗೆ ಸರಿಯಾದ ನ್ಯಾಯ ಸಿಕ್ಕಿಲ್ಲ. ಹಾಗಾದರೆ, ಜನರು ಯಾರಲ್ಲಿ ನ್ಯಾಯ ಕೇಳಬೇಕು? ತಮ್ಮ ನಾಗರಿಕತ್ವನ್ನು ಕಳೆದುಕೊಂಡು ಈ ದೇಶದಲ್ಲಿ ದ್ವಿತೀಯ ದರ್ಜೆಯ ಪ್ರಜೆಗಳಾಗಿ ಇರಬೇಕಾ? ವಿದೇಶಿಗರು, ಅಕ್ರಮ ವಲಸಿಗರು ಎಂದು ಹೊರದಬ್ಬಿದರೆ ದೇಶ ಬಿಟ್ಟು ಹೋಗಲು ಸಿದ್ದರಾಗಿರಬೇಕಾ? ಈ ಪ್ರಶ್ನೆಗಳಿಗೆ ಉತ್ತರಿಸುವವರು ಯಾರು?

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಶುದ್ದೀಕರಣ ಎಂದು ಹೇಳುತ್ತಾ ಲಕ್ಷಾಂತರ ಜನರ ಮತದಾನದ ಹಕ್ಕು ಕಿತ್ತುಕೊಂಡ ಬಳಿಕ, ಈಗ ಸರ್ಕಾರಿ ಸೌಲಭ್ಯವನ್ನು ಕೊಡುವುದಿಲ್ಲ ಎಂದು ಘೋಷಣೆ ಮಾಡಿಯಾಗಿದೆ. ನಾಳೆ ಹಠಾತ್ ಆಗಿ ಎಸ್‌ಐಆರ್‌ನಲ್ಲಿ ಹೊರಬಿದ್ದವರು ಭಾರತದ ನಾಗರಿಕರಲ್ಲ ಎಂದರೆ ಏನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...