Homeಮುಖಪುಟಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು.

ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ರಾಜಸ್ಥಾನ, ಛತ್ತೀಸ್‌ಗಢ, ಗುಜರಾತ್, ಮಧ್ಯ ಪ್ರದೇಶ, ಉತ್ತರ ಪ್ರದೇಶ, ಗೋವಾ, ಪುದುಚೇರಿ, ಅಂಡಮಾನ್ ನಿಕೋಬಾರ್ ಮತ್ತು ಲಕ್ಷದ್ವೀಪ ಸೇರಿದಂತೆ ಒಟ್ಟು 10 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ಒಂದು ಮತ್ತು ಎರಡನೇ ಹಂತದ ಎಸ್‌ಐಆರ್‌ನಲ್ಲಿ ಬರೋಬ್ಬರಿ 5 ಕೋಟಿ 65 ಲಕ್ಷಕ್ಕಿಂತ ಅಧಿಕ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ವರದಿಗಳು ಹೇಳುತ್ತವೆ.

ಇತ್ತೀಚೆಗೆ (2025 ಮತ್ತು 2026) ಚುನಾವಣೆ ನಡೆದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಸ್ತುತ ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಚುನಾವಣೆಯ ಬಳಿಕ ಹೊಸ ಸರ್ಕಾರಗಳು ಅಸ್ತಿತ್ವಕ್ಕೆ ಬಂದಿವೆ. ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ತಮ್ಮ ಮತದಾನದ ಹಕ್ಕು ಕಳೆದುಕೊಂಡ ಜನರು ಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಅವರಿಗೆ ಮುಂದೇನು ಎಂಬ ಚಿಂತೆ ಶುರುವಾಗಿದೆ.

ಎಸ್‌ಐಆರ್ ನಡೆಸುವಾಗ ಕೇಂದ್ರ ಸರ್ಕಾರ ಇದು ನಾಗರಿಕತ್ವವನ್ನು ನಿರ್ಧರಿಸುವ ಅಥವಾ ಪರಿಶೀಲಿಸುವ ಪ್ರಕ್ರಿಯೆಯಲ್ಲ, ಬದಲಿಗೆ ಇದು ಕೇವಲ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಕಾರ್ಯಾಚರಣೆಯಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿತ್ತು.

ಕೆಲವು ವಿರೋಧ ಪಕ್ಷಗಳು ಮತ್ತು ಸಂಘಟನೆಗಳು ಎಸ್‌ಐಆರ್‌ ಪ್ರಕ್ರಿಯೆಯನ್ನು ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕ ನೋಂದಣಿ) ಮಾದರಿಯ ನಾಗರಿಕತ್ವ ತಪಾಸಣೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ಚುನಾವಣಾ ಆಯೋಗವು, ಮತದಾರರ ಪಟ್ಟಿಯಲ್ಲಿ ಯಾವುದೇ ವಿದೇಶಿ ಪ್ರಜೆಗಳು ಅಥವಾ ಅನರ್ಹರು ಇರಬಾರದು ಎಂಬುದು ಸಂವಿಧಾನದ ಆಶಯವಾಗಿದೆ. ಹೀಗಾಗಿ, ಎಸ್‌ಐಆರ್ ಅಡಿಯಲ್ಲಿ ನಡೆಯುವ ಪರಿಶೀಲನೆಯು ಕೇವಲ ಚುನಾವಣಾ ಅರ್ಹತೆಯನ್ನು ನಿರ್ಧರಿಸಲು ಮಾತ್ರ ಸೀಮಿತವಾಗಿದೆಯೇ ಹೊರತು, ಯಾವುದೇ ವ್ಯಕ್ತಿಯ ನಾಗರಿಕತ್ವವನ್ನು ಕಸಿದುಕೊಳ್ಳಲು ಅಥವಾ ದೇಶದಿಂದ ಹೊರಗಟ್ಟಲು (Deportation) ಅಲ್ಲ ಎಂದು ಹೇಳಿತ್ತು.

ಕೇಂದ್ರ ಸರ್ಕಾರ ಕೂಡ ಸಂಸತ್ತಿನಲ್ಲಿ (ರಾಜ್ಯಸಭೆ) ಮತ್ತು ಸುಪ್ರೀಂ ಕೋರ್ಟ್ ವಿಚಾರಣೆಗಳ ವೇಳೆ ತನ್ನ ನಿಲುವನ್ನು ಸ್ಪಷ್ಟಪಡಿಸಿತ್ತು. ಇಡೀ ಪ್ರಕ್ರಿಯೆಯು ಸಂಪೂರ್ಣವಾಗಿ ಸಂವಿಧಾನಬದ್ಧ ಚೌಕಟ್ಟಿಗೆ ಒಳಪಟ್ಟಿದೆ ಎಂದು ಪ್ರತಿಪಾದಿಸಿತ್ತು.

ಎಸ್‌ಐಆರ್‌ನ ಮೂಲ ತತ್ವವು ಸಂವಿಧಾನದ ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕನ್ನು ಆಧರಿಸಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿತ್ತು. ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬುದೇ ಇದರ ಉದ್ದೇಶವಾಗಿದೆ ಎಂದಿತ್ತು.

ಸಂವಿಧಾನದ ವಿಧಿ 324 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950 ರ ಸೆಕ್ಷನ್ 21 ರ ಅಡಿಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಮತ್ತು ಶುದ್ಧೀಕರಿಸುವ ಸಂಪೂರ್ಣ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ ಎಂದು ಕೇಂದ್ರ ಸರ್ಕಾರ ಬೆಂಬಲಿಸಿತ್ತು.

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಮೇಲಿನ ಹೇಳಿಕೆ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಪ್ರಕಾರ, ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲ್ಪಟ್ಟವರು ಈಗಲೂ ಭಾರತದ ನಾಗರಿಕರು.

ಇಲ್ಲಿ ಗಮನಾರ್ಹ ವಿಷಯವೆಂದರೆ, ಮೃತರದ್ದು, ಸ್ಥಳಾಂತರಗೊಂಡವರದ್ದು ಮತ್ತು ಒಂದಕ್ಕಿಂತ ಹೆಚ್ಚು ಬಾರಿ ಇರುವ ಹೆಸರುಗಳನ್ನು ಮಾತ್ರ ಎಸ್ಐಆರ್ ವೇಳೆ ತೆಗೆದು ಹಾಕಿದ್ದೇವೆ ಎಂದು ಚುನಾವಣಾ ಆಯೋಗ ಪದೇ ಪದೇ ಹೇಳಿಕೊಂಡು ಬಂದಿದೆ. ಆದರೆ, ಪ್ರಸ್ತುತ ಜೀವಂತ ಇರುವ, ಸ್ಥಳಾಂತರಗೊಳ್ಳದ ಮತ್ತು ಒಂದಕ್ಕಿಂತ ಹೆಚ್ಚು ಬಾರಿ ಹೆಸರು ನೋಂದಣಿಯಾಗಿರದ ಅನೇಕರು ಮತದಾರರ ಪಟ್ಟಿಯಿಂದ ಹೊರ ಬಿದ್ದಿದ್ದಾರೆ. ಇದರಿಂದ ಎಸ್‌ಐಆರ್ ಪ್ರಕ್ರಿಯೆಯೇ ಸರಿಯಾಗಿ ನಡೆದಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.

ಮತ ಹಕ್ಕು ಹೋಯ್ತು ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಎಸ್‌ಐಆರ್‌ನಿಂದ ವಿವಿಧ ರಾಜ್ಯಗಳ ಲಕ್ಷಾಂತರ ಜನರು ತಮ್ಮ ಮತದಾನದ ಹಕ್ಕನ್ನು ಈಗಾಗಲೇ ಕಳೆದುಕೊಂಡಿದ್ದಾರೆ. ಈಗ ಸರ್ಕಾರಿ ಸೌಲಭ್ಯಗಳನ್ನು ನೀಡುವುದಿಲ್ಲ ಎಂದು ಬಿಹಾರ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳು ಅಧಿಕೃತವಾಗಿ ಹೇಳಿವೆ. ಹಾಗಾಗಿ, ಮುಂದೆ ಭಾರತದ ನಾಗರಿಕತ್ವ ಕೂಡ ಕಳೆದುಕೊಳ್ಳುವ ಆತಂಕ ಜನ ಸಾಮಾನ್ಯರಿಗೆ ಎದುರಾಗಿದೆ.

ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲ್ಪಟ್ಟವರು ಪಡಿತರ ಮತ್ತು ಇತರ ಯಾವುದೇ ಸರ್ಕಾರಿ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ. ಮುಂದಿನ ಹಂತದಲ್ಲಿ ಇಂತಹ ವ್ಯಕ್ತಿಗಳ ಬ್ಯಾಂಕ್ ಪಾಸ್‌ಬುಕ್‌ಗಳನ್ನು ಸಹ ರದ್ದುಗೊಳಿಸಲಾಗುವುದು ಎಂದು ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿರುವುದಾಗಿ ವರದಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿಯೂ ಸಹ ಎಸ್‌ಐಆರ್‌ ಮೂಲಕ ಮತದಾರರ ಪಟ್ಟಿಯಿಂದ ಹೊರಬಿದ್ದ ಮಹಿಳೆಯರಿಗೆ ಅಲ್ಲಿನ ‘ಅನ್ನಪೂರ್ಣ ಭಂಡಾರ್’ ಯೋಜನೆಯ ಸೌಲಭ್ಯವನ್ನು ನಿಲ್ಲಿಸುವುದಾಗಿ ಅಲ್ಲಿನ ನೂತನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಸಾಮಾಜಿಕ ಕಲ್ಯಾಣ ಸಚಿವೆ ಅಗ್ನಿಮಿತ್ರ ಪಾಲ್ ಘೋಷಿಸಿದ್ದಾರೆ.

ಜೂನ್ 1 ರಿಂದ ಯೋಜನೆ ಜಾರಿಗೂ ಮುನ್ನ ಕಡ್ಡಾಯವಾಗಿ ಫಲಾನುಭವಿಗಳ ಪಟ್ಟಿಯ ವಿಶ್ಲೇಷಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಸಂಪೂರ್ಣವಾಗಿ ಡಿಲೀಟ್ ಆದವರಿಗೆ ಮತ್ತು ಪ್ರಸ್ತುತ ತಮ್ಮ ಹೆಸರು ಕೈಬಿಟ್ಟಿರುವ ಕುರಿತು ಟ್ರಿಬ್ಯುನಲ್‌ಗಳಲ್ಲಿ ಮೇಲ್ಮನವಿ ಸಲ್ಲಿಸಿ ವಿಚಾರಣೆ ಬಾಕಿ ಇರುವ ಮಹಿಳೆಯರಿಗೂ ಸದ್ಯದ ಮಟ್ಟಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಮುಂದೆ ಬಿಜೆಪಿ ಆಡಳಿತ ಇತರ ರಾಜ್ಯಗಳು ಕೂಡ ಈ ರೀತಿ ಘೋಷಿಸುವ ಸಾಧ್ಯತೆ ಇದೆ. ಇದರಿಂದ, ಈಗಾಗಲೇ ಮತದಾನದ ಹಕ್ಕು ಕಳೆದುಕೊಂಡವರು ಸರ್ಕಾರಿ ಸೌಲಭ್ಯದ ಅವಕಾಶವನ್ನೂ ಕಳೆದುಕೊಂಡಾಯಿತು. ಈ ಮೂಲಕ ಅವರು ದ್ವಿತೀಯ ದರ್ಜೆಯ ನಾಗರಿಕರಾಗಿ ಆಯಿತು. ಮುಂದೆ ಇದನ್ನೇ ಮುಂದಿಟ್ಟು ದೇಶದಿಂದ ಹೊರದಬ್ಬಿದರೂ ಅಚ್ಚರಿಯಿಲ್ಲ.

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೊರಗಿಟ್ಟಿರುವುದು ಅನರ್ಹರನ್ನಲ್ಲವೇ? ಹೀಗಿರುವಾಗ ಚಿಂತೆ ಏಕೆ ಎಂಬ ಪ್ರಶ್ನೆ ಕೆಲವರಿಗೆ ಮೂಡಬಹುದು. ಇದಕ್ಕೆ ಉತ್ತರ ಕಂಡುಕೊಳ್ಳಲು ಪಶ್ಚಿಮ ಬಂಗಾಳದ ಎಸ್‌ಐಆರ್‌ನ ಬಗ್ಗೆ ಒಂದು ಬಾರಿ ಪರಾಮರ್ಶೆ ಮಾಡಿಕೊಳ್ಳಬೇಕು. ತಾರ್ಕಿಕ ವೈರುಧ್ಯ (logical Discrepancy) ಎಂಬ ಹೊಸ ಪ್ರಕ್ರಿಯೆಯನ್ನು ಪರಿಚಯಿಸಿ, ಸಣ್ಣ ಪುಟ್ಟ ಅಕ್ಷರ ತಪ್ಪುಗಳ ಕಾರಣಕ್ಕೆ ಅರ್ಹ ಮತದಾರರನ್ನು ಹೇಗೆ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂಬುವುದು ಗೊತ್ತಾಗುತ್ತದೆ.

ದಾಖಲೆಯಲ್ಲಿ ಸಣ್ಣ ಅಕ್ಷರ ತಪ್ಪಿದೆ ಎಂಬ ಕಾರಣಕ್ಕೆ ಭಾರತೀಯ ನಾಗರಿಕರಾದವರ ಮತದಾನದ ಹಕ್ಕನ್ನು ಕಿತ್ತುಕೊಂಡು, ಈಗ ಅದನ್ನೇ ನೆಪವಾಗಿಸಿ ಸರ್ಕಾರಿ ಸೌಲಭ್ಯದಿಂದಲೂ ಹೊರಗಿಡುವುದನ್ನು ಒಪ್ಪಿಕೊಳ್ಳಲು ಸಾಧ್ಯವೇ?

ಭಾರತದ ನಾಗರಿಕರಾದ ಎಲ್ಲರಿಗೂ ಇಲ್ಲಿನ ಸರ್ಕಾರಗಳ ಸೌಲಭ್ಯಗಳು ತಲುಪಬೇಕು. ಅದು ನಿರಾಕರಿಸುವುದಾದರೆ ಸರ್ಕಾರ ಅವರನ್ನು ಭಾರತದ ನಾಗರಿಕರು ಎಂದು ಪರಿಗಣಿಸಿಲ್ಲ ಎಂದರ್ಥವಲ್ಲವೇ? ಹಾಗಿದ್ದರೆ, ಮತದಾರರ ಪಟ್ಟಿಯ ಶುದ್ದೀಕರಣ ಎಂದು ಎಸ್‌ಐಆರ್‌ ಹೆಸರಿನಲ್ಲಿ ಚುನಾವಣಾ ಆಯೋಗ ನಡೆಸಿರುವುದು ನಾಗರಿಕತ್ವ ಪರಿಶೀಲನೆಯೇ? ಅಂತಹ ಅಧಿಕಾರ ಆಯೋಗಕ್ಕೆ ಇದೆಯೇ? ನಾಗರಿಕತ್ವ ಪರಿಶೀಲನೆಯೇ ನಡೆಸಲಾಗಿದೆ ಅಂದುಕೊಂಡರೂ..ದಾಖಲೆಗಳಿರುವ ಜನರ ನಾಗರಿಕತ್ವ ಕಿತ್ತುಕೊಳ್ಳಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಇದು ಸಂವಿಧಾನದ ಆದೇಶಗಳಿಗೆ ವಿರುದ್ದವಲ್ಲವೇ? ಇಂತಹ ಅನ್ಯಾಯವನ್ನು ನಾಗರಿಕರು ಒಪ್ಪಿಕೊಳ್ಳಬೇಕಾ?

ಎಸ್‌ಐಆರ್ ಮೂಲಕ ಲಕ್ಷಾಂತರ ಅರ್ಹ ಮತದಾರರನ್ನು ಹೊರಗಿಟ್ಟು ಚುನಾವಣೆ ನಡೆಸಿರುವುದೇ ಸಂವಿಧಾನದ ಆಶಯಗಳಿಗೆ ವಿರುದ್ದ. ಕಾನೂನು ಹೋರಾಟದಲ್ಲೂ ಜನರಿಗೆ ಸರಿಯಾದ ನ್ಯಾಯ ಸಿಕ್ಕಿಲ್ಲ. ಹಾಗಾದರೆ, ಜನರು ಯಾರಲ್ಲಿ ನ್ಯಾಯ ಕೇಳಬೇಕು? ತಮ್ಮ ನಾಗರಿಕತ್ವನ್ನು ಕಳೆದುಕೊಂಡು ಈ ದೇಶದಲ್ಲಿ ದ್ವಿತೀಯ ದರ್ಜೆಯ ಪ್ರಜೆಗಳಾಗಿ ಇರಬೇಕಾ? ವಿದೇಶಿಗರು, ಅಕ್ರಮ ವಲಸಿಗರು ಎಂದು ಹೊರದಬ್ಬಿದರೆ ದೇಶ ಬಿಟ್ಟು ಹೋಗಲು ಸಿದ್ದರಾಗಿರಬೇಕಾ? ಈ ಪ್ರಶ್ನೆಗಳಿಗೆ ಉತ್ತರಿಸುವವರು ಯಾರು?

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಶುದ್ದೀಕರಣ ಎಂದು ಹೇಳುತ್ತಾ ಲಕ್ಷಾಂತರ ಜನರ ಮತದಾನದ ಹಕ್ಕು ಕಿತ್ತುಕೊಂಡ ಬಳಿಕ, ಈಗ ಸರ್ಕಾರಿ ಸೌಲಭ್ಯವನ್ನು ಕೊಡುವುದಿಲ್ಲ ಎಂದು ಘೋಷಣೆ ಮಾಡಿಯಾಗಿದೆ. ನಾಳೆ ಹಠಾತ್ ಆಗಿ ಎಸ್‌ಐಆರ್‌ನಲ್ಲಿ ಹೊರಬಿದ್ದವರು ಭಾರತದ ನಾಗರಿಕರಲ್ಲ ಎಂದರೆ ಏನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...