Homeಮುಖಪುಟನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ಕೋಚಿಂಗ್ ರಾಜಧಾನಿ ಕೋಟಾದಲ್ಲಿ 'ವಿದ್ಯಾರ್ಥಿಗಳ ಮಾರಣಹೋಮ'

- Advertisement -
- Advertisement -

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ.

ಜಾರ್ಖಂಡ್‌ನ ಹಜಾರಿಬಾಗ್ ಮತ್ತು ಬಿಹಾರದ ಪಾಟ್ನಾವನ್ನು ಗಮನದಲ್ಲಿಟ್ಟುಕೊಂಡು ಸಿಬಿಐ ತನಿಖೆಯನ್ನು ತೀವ್ರಗೊಳಿಸಿದೆ. ಹಜಾರಿಬಾಗ್‌ನ ಓಯಸಿಸ್ ಶಾಲೆಯಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಬಲವಾದ ಶಂಕೆಯ ಮೇಲೆ ಅಲ್ಲಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ.

ಈ ಪ್ರಕರಣದಲ್ಲಿ ಸಿಬಿಐ ಈವರೆಗೆ ಹಲವಾರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ರಾಕಿ ಅಲಿಯಾಸ್ ರಾಕೇಶ್ ರಂಜನ್ ಪ್ರಮುಖ ಆರೋಪಿಯಾಗಿದ್ದಾನೆ. ಈತ ಈ ಹಗರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಬಿಹಾರ ಮತ್ತು ಜಾರ್ಖಂಡ್‌ನ ಜಾಲವನ್ನು ನಿರ್ವಹಿಸುತ್ತಿದ್ದ ಎಂಬ ಆರೋಪವಿದೆ.

    ಮತ್ತೋರ್ವ ಆರೋಪಿ ಸಂಜೀವ್ ಮುಖಿಯಾ, ಈತನ ಗ್ಯಾಂಗ್ ಪೇಪರ್ ಸೋರಿಕೆ ಮಾಡುವಲ್ಲಿ ಕುಖ್ಯಾತಿ ಪಡೆದಿದ್ದು, ಈತನ ಹಲವು ಸಹಚರರನ್ನು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಪರೀಕ್ಷಾ ಕೇಂದ್ರಗಳೊಂದಿಗೆ ಶಾಮೀಲಾಗಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಏಜೆಂಟರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಸಿಬಿಐ ಅಧಿಕಾರಿಗಳು ಆರೋಪಿಗಳ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಹಂಚಿಕೊಳ್ಳಲಾಗಿತ್ತು ಎಂಬ ಅಂಶವನ್ನು ಡಿಜಿಟಲ್ ಫೋರೆನ್ಸಿಕ್ ಮೂಲಕ ದೃಢಪಡಿಸಿಕೊಳ್ಳುತ್ತಿದ್ದಾರೆ.

    ರಾಜಸ್ಥಾನದಲ್ಲಿ ತೀವ್ರಗೊಂಡ ತನಿಖೆ

    ರಾಜಸ್ಥಾನದ ಜೈಪುರ, ಜೋಧ್‌ಪುರ ಮತ್ತು ಭರತ್‌ಪುರ ಭಾಗಗಳಲ್ಲಿ ಸಿಬಿಐ ದಾಳಿಗಳನ್ನು ತೀವ್ರಗೊಳಿಸಿದೆ. ಕೆಲವು ಖಾಸಗಿ ಕೋಚಿಂಗ್ ಸೆಂಟರ್‌ಗಳಿಗೂ ಈ ಹಗರಣದಲ್ಲಿ ಭಾಗಿಯಾಗಿರುವ ಸಂಶಯವಿದ್ದು, ಅವುಗಳ ಹಣಕಾಸು ವಹಿವಾಟನ್ನು ಪರಿಶೀಲಿಸಲಾಗುತ್ತಿದೆ.

    ಆರೋಪಿಗಳಿಗೆ ಬಿಜೆಪಿ ಲಿಂಕ್?

    ನೀಟ್ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ಮತ್ತು ಇತರ ತನಿಖಾ ಸಂಸ್ಥೆಗಳು ಬಂಧಿಸಿರುವ ಆರೋಪಿಗಳ ರಾಜಕೀಯ ನಂಟುಗಳ ಕುರಿತು ಗಂಭೀರ ಆರೋಪ-ಪ್ರತ್ಯಾರೋಪಗಳು ಕೇಳಿಬರುತ್ತಿವೆ. ದಿನೇಶ್ ಬಿವಾಲ್ ಮತ್ತು ಮಂಗಿಲಾಲ್ ಬಿವಾಲ್ ಇಬ್ಬರೂ ಬಿಜೆಪಿ ನಾಯಕರಾಗಿದ್ದಾರೆ ಎಂಬ ಆರೋಪವಿದೆ. ಜೈಪುರದಲ್ಲಿ ಬಂಧಿತರಾದ ದಿನೇಶ್ ಬಿವಾಲ್ ಅವರು ಬಿಜೆಪಿ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ದಿನೇಶ್ ಅವರು ಪ್ರಭಾವಿ ಬಿಜೆಪಿ ಮುಖಂಡರು ಮತ್ತು ಸಚಿವರೊಂದಿಗೆ ಇರುವ ಫೋಟೋಗಳು ಹರಿದಾಡುತ್ತಿವೆ.

      ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ಪ್ರಕರಣದಲ್ಲಿ ಬಿಜೆಪಿಗೆ ನೇರ ನಂಟು ಇದೆ ಎಂದು ನೇರ ದಾಳಿ ನಡೆಸಿವೆ. ಆದರೆ, ಬಿಜೆಪಿ ಈ ಆರೋಪಗಳನ್ನು ನಿರಾಕರಿಸಿದ್ದು, ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ಹೇಳಿದೆ.

      ಆರ್‌ಜೆಡಿ ಮತ್ತು ಎಲ್‌ಜೆಪಿ ಮುಕಂಡರ ಹೆಸರು

      ಬಿಹಾರದ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದ ಪ್ರಮುಖ ಆರೋಪಿ ಎನ್ನಲಾದ ಸಂಜೀವ್ ಮುಖಿಯಾ ಅವರ ಪತ್ನಿ ಮಮತಾ ದೇವಿ ಅವರು 2020ರ ವಿಧಾನಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

        ಬಿಹಾರದಲ್ಲಿ ಬಂಧಿತನಾಗಿದ್ದ ಸಿಕಂದರ್ ಯಾದವೇಂದು ಎಂಬ ಆರೋಪಿ ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ನಾಯಕರಿಗೆ ಅಥವಾ ಅವರ ಆಪ್ತರಿಗೆ ಸಂಬಂಧಿಸಿದ್ದಾನೆ ಎಂಬ ಆರೋಪವನ್ನು ಎನ್‌ಡಿಎ ನಾಯಕರು ಮಾಡಿದ್ದರು.

        ಜಾರ್ಖಂಡ್, ಮಹಾರಾಷ್ಟ್ರ ಮತ್ತು ಗುಜರಾತ್‌ಗಳಲ್ಲೂ ಬಂಧನಗಳಾಗಿದ್ದು, ಅಲ್ಲಿನ ಸ್ಥಳೀಯ ರಾಜಕೀಯದೊಂದಿಗೆ ಆರೋಪಿಗಳಿಗೆ ನಂಟಿದೆ ಎಂಬ ವದಂತಿಗಳಿವೆ.

        ಕೋಟಾದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

        ಒಂದು ಕಡೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ರಾಜಸ್ಥಾನ ಸುದ್ದಿಯಾಗುತ್ತಿದ್ದರೆ, ಮತ್ತೊಂದೆಡೆ ನೀಟ್ ಒತ್ತಡ ತಾಳಲಾರದೆ ವಿದ್ಯಾರ್ಥಿಳು ಸಹ ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಗಂಭೀರ ಕಳವಳಕ್ಕೆ ಕಾರಣವಾಗಿವೆ.

        2026 (ಮೇ ವರೆಗೆ) ಈಗಾಗಲೇ ಸುಮಾರು 8 ರಿಂದ 10 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳು ವರದಿಯಾಗಿವೆ. ನೀಟ್ ಪರೀಕ್ಷೆಯ ಹಿಂದಿನ ದಿನವೂ ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

        2024ರಲ್ಲಿ 17 ಪ್ರಕರಣಗಳು ವರದಿಯಾಗಿದ್ದರೆ, 2023 ರಲ್ಲಿ 26 ರಿಂದ 29 ಪ್ರಕರಣಗಳು ವರದಿಯಾಗಿವೆ. ಇದು ಕೋಟಾದ ಇತಿಹಾಸದಲ್ಲೇ ಅತ್ಯಧಿಕ ಸಂಖ್ಯೆಯ ಮಕ್ಕಳ ಆತ್ಮಹತ್ಯೆಯಾಗಿದೆ. 2022 ರಲ್ಲಿ 15 ಪ್ರಕರಣಗಳು, 2019 ರಲ್ಲಿ 18 ಪ್ರಕರಣಗಳು ಮತ್ತು 2018 ರಲ್ಲಿ 20 ಪ್ರಕರಣಗಳಿ ವರದಿಯಾಗಿವೆ.

        ಮಕ್ಕಳ ಮೇಲೆ ಹೆಚ್ಚುತ್ತಿರುವ ಒತ್ತಡ:

        ಪ್ರತಿವರ್ಷ ಸುಮಾರು 2 ರಿಂದ 2.5 ಲಕ್ಷ ವಿದ್ಯಾರ್ಥಿಗಳು ಕೋಟಾಕ್ಕೆ ಕೋಚಿಂಗ್ ಪಡೆಯಲು ಬರುತ್ತಾರೆ. ಕಠಿಣ ಸ್ಪರ್ಧೆ, ಪೋಷಕರ ನಿರೀಕ್ಷೆ ಮತ್ತು ಏಕಾಂಗಿತನ ವಿದ್ಯಾರ್ಥಿಗಳ ಮೇಲೆ ತೀವ್ರ ಮಾನಸಿಕ ಒತ್ತಡ ಹೇರುತ್ತಿದೆ. 2026ರ ಮೇ ತಿಂಗಳಲ್ಲಿ ನಡೆದ ನೀಟ್ ಪರೀಕ್ಷೆಗಿಂತ ಕೇವಲ ಒಂದು ದಿನ ಮೊದಲು ಉತ್ತರಾಖಂಡದ 20 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಇದು ಪರೀಕ್ಷಾ ಭಯದ ತೀವ್ರತೆ ಮಕ್ಕಳ ಮೇಲೆ ಎಷ್ಟಿದೆ ಎಂಬುದನ್ನು ತೋರಿಸುತ್ತದೆ.

        ಹೆಚ್ಚುತ್ತಿರುವ ಸಾವುಗಳನ್ನು ತಡೆಯಲು ರಾಜಸ್ಥಾನ ಸರ್ಕಾರವು ಹಾಸ್ಟೆಲ್‌ಗಳಲ್ಲಿ ‘ಆಂಟಿ-ಹ್ಯಾಂಗಿಂಗ್ ಡಿವೈಸ್’ (ಫ್ಯಾನ್‌ಗೆ ಸ್ಪ್ರಿಂಗ್ ಅಳವಡಿಸುವುದು), ಸಮಾಲೋಚನಾ ಕೇಂದ್ರಗಳು ಮತ್ತು ವಾರಾಂತ್ಯದ ರಜೆಗಳನ್ನು ಕಡ್ಡಾಯಗೊಳಿಸಿದೆ. 2023ಕ್ಕೆ ಹೋಲಿಸಿದರೆ 2024ರಲ್ಲಿ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ, ಆದರೂ ಪ್ರತಿ ಸಾವೂ ಪೋಷಕರಿಗೆ ದೊಡ್ಡ ದುರಂತವೇ ಆಗಿದೆ.

        ಕೋಚಿಂಗ್ ರಾಜಧಾನಿ ಕೋಟಾ

        ಕೋಟಾವನ್ನು ಭಾರತದ “ಕೋಚಿಂಗ್ ರಾಜಧಾನಿ” ಎಂದು ಕರೆಯಲಾಗುತ್ತದೆ. ಅಲ್ಲಿ ಅತಿ ಹೆಚ್ಚು ಕೋಚಿಂಗ್ ಸೆಂಟರ್‌ಗಳು ಇರಲು ಹಲವು ಐತಿಹಾಸಿಕ ಮತ್ತು ವ್ಯವಸ್ಥಿತ ಕಾರಣಗಳಿವೆ. 1980ರ ದಶಕದ ಕೊನೆಯಲ್ಲಿ ವಿ.ಕೆ. ಬನ್ಸಲ್ ಎಂಬುವವರು ಜೆ.ಕೆ. ಸಿಂಥೆಟಿಕ್ಸ್ ಕಾರ್ಖಾನೆಯಲ್ಲಿ ಇಂಜಿನಿಯರ್ ಆಗಿದ್ದರು. ಅವರು ಮಕ್ಕಳಿಗೆ ಟ್ಯೂಷನ್ ನೀಡಲು ಪ್ರಾರಂಭಿಸಿದರು. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಲು ಶುರುಮಾಡಿದರು. ಇದು ಕೋಟಾದಲ್ಲಿ ಕೋಚಿಂಗ್ ಸಂಸ್ಕೃತಿಗೆ ಭದ್ರ ಬುನಾದಿ ಹಾಕಿತು.

        ದೇಶದಾದ್ಯಂತ ಇರುವ ಟಾಪ್ ರ್ಯಾಂಕ್‌ಗಳಲ್ಲಿ ಕೋಟಾದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುತ್ತದೆ. ಈ ‘ಟ್ರಾಕ್ ರೆಕಾರ್ಡ್’ ನೋಡಿ ಪೋಷಕರು ಮತ್ತು ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ಆಕರ್ಷಿತರಾಗುತ್ತಾರೆ. ಕೋಟಾ ನಗರವು ಸಂಪೂರ್ಣವಾಗಿ ವಿದ್ಯಾರ್ಥಿಗಳ ಸುತ್ತಲೇ ನಿರ್ಮಾಣವಾಗಿದೆ. ಸಾವಿರಾರು ಹಾಸ್ಟೆಲ್‌ಗಳು, ಮೆಸ್‌ಗಳು, ಲೈಬ್ರರಿಗಳು ಮತ್ತು ಬುಕ್ ಸ್ಟಾಲ್‌ಗಳು ಇಲ್ಲಿವೆ. ಓದಿಗೆ ಬೇಕಾದ ಎಲ್ಲಾ ಸೌಲಭ್ಯಗಳು ಒಂದೇ ಕಡೆ ಸಿಗುತ್ತವೆ.

        ಒಂದೇ ಕಡೆ ಲಕ್ಷಾಂತರ ವಿದ್ಯಾರ್ಥಿಗಳು ಓದುತ್ತಿರುವುದರಿಂದ, ವಿದ್ಯಾರ್ಥಿಗಳಲ್ಲಿ ಸಹಜವಾಗಿಯೇ ಆರೋಗ್ಯಕರ (ಮತ್ತು ಕೆಲವೊಮ್ಮೆ ತೀವ್ರವಾದ) ಸ್ಪರ್ಧೆ ಏರ್ಪಡುತ್ತದೆ. ದೇಶದ ಪ್ರಸಿದ್ಧ ಮತ್ತು ಅನುಭವಿ ಶಿಕ್ಷಕರು ಹೆಚ್ಚಿನ ಸಂಬಳ ಮತ್ತು ಸೌಲಭ್ಯಗಳಿಗಾಗಿ ಕೋಟಾಕ್ಕೆ ವಲಸೆ ಹೋಗುತ್ತಾರೆ.

        ಎಷ್ಟು ಕೋಚಿಂಗ್ ಸೆಂಟರ್‌ಗಳಿವೆ?

        ಕೋಟಾದಲ್ಲಿ ಸಣ್ಣ ಮತ್ತು ದೊಡ್ಡ ಮಟ್ಟದ ಕೋಚಿಂಗ್ ಸೆಂಟರ್‌ಗಳ ಸಂಖ್ಯೆ ಬಹಳಷ್ಟಿದೆ: ಆಲನ್ , ಆಕಾಶ್, ಫಿಜಿ ಮತ್ತು ರೆಸೋನೆನ್ಸ್ ನಂತಹ ಸುಮಾರು 10 ರಿಂದ 12 ದೊಡ್ಡ ಬ್ರಾಂಡ್‌ಗಳು ಅಲ್ಲಿವೆ. ಈ ಪ್ರತಿಯೊಂದು ಸಂಸ್ಥೆಗಳು ನಗರದಾದ್ಯಂತ ಹತ್ತಾರು ಶಾಖೆಗಳನ್ನು ಹೊಂದಿವೆ. ಜಿಲ್ಲಾಡಳಿತದ ಅಂಕಿಅಂಶಗಳ ಪ್ರಕಾರ, ನೋಂದಾಯಿತ ಮತ್ತು ಅನೋಂದಾಯಿತ ಸಣ್ಣ ಪುಟ್ಟ ಕೋಚಿಂಗ್ ಸೆಂಟರ್‌ಗಳ ಒಟ್ಟು ಸಂಖ್ಯೆ 300 ಕ್ಕೂ ಹೆಚ್ಚು ಇದೆ ಎಂದು ಅಂದಾಜಿಸಲಾಗಿದೆ.

        ಪ್ರತಿ ವರ್ಷ ಸುಮಾರು 2 ಲಕ್ಷದಿಂದ 2.5 ಲಕ್ಷದಷ್ಟು ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳಿಗಾಗಿ, ಮುಖ್ಯವಾಗಿ ನೀಟ್ ಮತ್ತು ಜೆಇಇ ತರಬೇತಿಗಾಗಿ ಕೋಟಾಕ್ಕೆ ಬರುತ್ತಾರೆ.

        ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

        LEAVE A REPLY

        Please enter your comment!
        Please enter your name here

        - Advertisment -

        ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

        ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

        ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

        ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

        ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

        ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

        ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

        ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

        FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

        ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

        ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

        ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

        ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

        ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

        ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

        ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

        FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

        ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

        ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

        ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...