Homeಕರ್ನಾಟಕಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ...

ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ

- Advertisement -
- Advertisement -

ಬಳ್ಳಾರಿಯಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ BJP ಶಾಸಕ ಸೋಮಶೇಖರ್‌ರೆಡ್ಡಿ ಭಾರತದ ಮುಸ್ಲಿಮರ ವಿರುದ್ಧ ಎಗ್ಗಿಲ್ಲದೇ ನಾಲಿಗೆ ಹರಿಯಬಿಟ್ಟಿದ್ದು ಮನಬಂದಂತೆ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ನೇರವಾಗಿ ನೀವು ಇರೋದೋ 17% ಹಾಗಾಗಿ ನಾವು ಹೇಳಿದಂತೆ ಕೇಳಿಕೊಂಡಿರಿ. ಇಲ್ಲಿದಿದ್ದರೆ ನಿಮ್ಮನ್ನು ಉಳಿಸೊಲ್ಲ ಅಂತ ಅವಾಜ್‌ ಹಾಕಿದ್ದಾರೆ.

ಮಚ್ಚು ಖಡ್ಗ ಹಿಡಿದು ರಣರಂಗ ಮಾಡ್ತೀವಿ ಅಂತ ಹೇಳಿರುವ ಅವರ ಭಾಷಣದ ಪೂರ್ಣ ವಿವರ ಈ ಕೆಳಗಿನಂತಿದೆ ಓದಿ.

ಹೋರಾಟ ಮಾಡುತ್ತಿರುವವರಿಗೆ ಒಂದು ಎಚ್ಚರಿಕೆ ಎಂದರೆ, ಫೈವ್‌ ಪರ್ಸೆಂಟ್‌ ಮಾತ್ರ. ಜಾಸ್ತಿ ನಖರಾ ಮಾಡಿದರೆ, 100% ಜನ ಬಂದ್ರೆ ನಿಮ್ಮ ಪರಿಸ್ಥಿತಿ ಎನಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿ

ಕಾಂಗ್ರೆಸ್‌ ಬೆವುಕೂಫ್‌ಗಳನ್ನು ನಂಬಿಕೊಂಡು ಬೀದಿಗೆ ಬರ್ತಿರಾ ನೀವು? ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ…

ಇದು ನನ್ ದೇಶ. ನಮ್ಮೆಲ್ಲರ ದೇಶ. ನೀವು ನಮ್ಮ ದೇಶದಲ್ಲಿರಬೇಕಾದರೆ ಆಸ್ಟ್ರೇಲಿಯಾ ಪ್ರಧಾನಿ ಹೇಳಿದಂತೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ಹೆಚ್ಚಿಗೆ ನಖರಾ ಮಾಡಿದರೆ ನಿಮ್ ದೇಶಕ್ಕೆ ಕಳಿಸಿಕೊಡಬೇಕಾಗುತ್ತದೆ. ಆ ಪರಿಸ್ಥಿತಿ ಬರದಂತೆ ನೋಡಿಕೊಳ್ಳಿ

ನಾವು ಹಿಂದೂಗಳು ಶಾಂತಿಯಿಂದ ಇದ್ದೀವಿ. ನಮ್ಮ ಶಾಂತಿನ ನೀವು ಪರೀಕ್ಷೆ ಮಾಡೋದಾದರೆ ಒಂದು ಸಲ, ಎರಡು ಸಾರಿ. ನಾವು ತಿರುಗಿಬಿದ್ದರೆ ಮೂರನೇ ಸಾರಿ ಉಳಿಯೊಲ್ಲ ನೀವು.

ನಮ್ಮ ದೇಶದ, ಸರ್ಕಾರದ ವಾಹನಗಳು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಪಂಕ್ಚರ್‌ ಹಾಕುವವರು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನಮ್ಮ ಸೌತ್‌ ಎಂಪಿ ತೇಜಸ್ವಿ ಸೂರ್ಯ ಹೇಳಿದ್ದರು. ಅದು ನಿಜ. ಏಕೆಂದರೆ ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ..

ಅಣ್ಣ ತಮ್ಮಂದಿರು ಅಣ್ಣತಮ್ಮಂದಿರ ಥರ ಇರಬೇಕು. ನೀವು ಶತ್ರುಗಳ ಥರ ಆಡಿದರೆ ನಾವು ಶತ್ರುಗಳಾಗುತ್ತವೆ. ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ.

ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ.

ಇದಿಷ್ಟು ಒರ್ವ ಜನಪ್ರತಿನಿಧಿ ಮಾಡಿರುವ ಭಾಷಣವಾಗಿದೆ. ಈ ವಿಷಯಕ್ಕೆ ಇವರ ಮೇಲೆ ದೂರು ದಾಖಲಿಸುವ ಸಾಧ್ಯತೆಯೂ ಸಹ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯುದ್ದ ಪ್ರಾರಂಭವಾಗುವುದಾದರೆ ಎದುರಲ್ಲಿ ಇವನೇ ನಿಲ್ಲಲಿ.
    ಮುಗ್ದ ಬಡವರ ಮನೆಯ ಮಕ್ಕಳನ್ನು ನಿಲ್ಲಿಸಿ ಇವನು ಅಧಿಕಾರ ಪಡೆಯುವುದು ಬೇಡ.
    ಬಳ್ಳಾರಿಯನ್ನು ಲೂಟಿಮಾಡಿದ ಇವನ ಪರಂಪರೆ ಎಷ್ಟು ಚೆನ್ನಾಗಿರಬಹುದು

  2. ಹಿಂದೂ 19% ಮುಲನಿವಾಸಿಗಲು, 8% ………. ಆದಿವಾಸಿಗಲು ಮತ್ತು ದ್ರಾವಿಡ ರು ……. ನೆನಪಿಡಿ ……….. ಯಾವಾಗ ಸತ್ಯ …….. …. (ಇತಿಹಾಸ) ಹೋರಾಗ್ ….. ಬರುತೆ ……….. ಅಗಾ ??????????????????????????????????????????

  3. ಪ್ರಜಾಪ್ರಭುತ್ವ ಅಂದ್ರೆ ಏನು ಅಂತ ಗೊತ್ತಿದಿಯಾ ಮಿಸ್ಟರ್ ಸೋಮಶೇಖರ ರೆಡ್ಡಿ…
    ಬಿಜೆಪಿ ಶಾಸಕರು ಎಂಥ ವಿಕೃತಿ ಮನೋಸ್ಥಿತಿಯವರು ಅನ್ನೋದಕ್ಕೆ ಇದೊಂದು ನಿದರ್ಶನ…. ಯಾರು ದೇಶದ ಭ್ರಾತೃತ್ವಕ್ಕೆ , ಪ್ರಜಾಪ್ರಭುತ್ವಕ್ಕೆ, ಗೌರವಿಸಲ್ವೋ ಅವರನ್ನು ದೇಶ ದ್ರೋಹಿ ಅಂತ ತೀರ್ಮಾನಿಸಬೇಕು… ಆದರೆ ಭಾಜಪಾ ಶಾಸಕರೇ ಇಂಥ ಅಸಭ್ಯ, ಹೇಳಿಕೆಗಳ್ನ ಕೊಟ್ಕೂಂಡು ನಿರ್ಭಯವಾಗಿ ಸಮರ್ಥಿಸಿಕೊಳ್ಳುತ್ತಿರುವುದು ಇದನ್ನು ಪಕ್ಷ ಗಣನೆಗೆ ತೆಗೆದುಕೊಳ್ಳದಿರುವುದನ್ನ ನೋಡಿದರೆ ಪಕ್ಷದ ಹಿನ್ನೋಟ, ಅಜೆಂಡಾ, ಧ್ಯೇಯ ಒಂದೇ ಎಂದೆನಿಸುತ್ತಿದೆ ಸಹಜವಾಗಿ..

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...