Homeದಲಿತ್ ಫೈಲ್ಸ್ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

- Advertisement -
- Advertisement -

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೇ 10 ರಂದು ಗ್ರಾಮದ ಡೈರಿಯ ಬಳಿ ನಡೆದ ಈ ಘಟನೆಯು, ಸಮಾಜದಲ್ಲಿ ದಲಿತರ ಒಳಗೊಳ್ಳುವಿಕೆ ಮತ್ತು ಸಮಾನತೆಗೆ ಪ್ರತಿರೋಧದ ಮತ್ತೊಂದು ನಿದರ್ಶನವಾಗಿದೆ. ಹೆಚ್ಚಿನ ಭಾರತೀಯ ವಿವಾಹದ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದು ವಾಡಿಕೆಯಾಗಿದೆ. ಆದರೆ, ಈ ಸಂಪ್ರದಾಯ ಪಾಲಿಸುವ ದಲಿತ ಕುಟುಂಬಗಳನ್ನು ಪದೇ ಪದೇ ಗುರಿಯಾಗಿಸಿಕೊಳ್ಳಲಾಗುತ್ತಿದೆ.

ದಲಿತ ಸಮುದಾಯಕ್ಕೆ ಸೇರಿದ ವರ ಮಾಯಾಂಕ್ ರಾವತ್ ಅವರ ಸಹೋದರ ಭಾವಿಕ್ ರಾವತ್ ಮಾತನಾಡಿ, “ದರ್ಬಾರ್ ಸಮುದಾಯದ ತುವ್ರಾಜ್‌ಸಿನ್ಹ್ ಚೌಹಾಣ್ ಮತ್ತು ನಿಕುಲ್ಸಿನ್ಹ್ ಚೌಹಾಣ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. “ಆರೋಪಿಗಳು ಜಾತಿ ನಿಂದನೆ ಮಾಡಿ ವರನಿಗೆ ಹಲ್ಲೆ ಮಾಡಿ ನಿಂದಿಸಿದ್ದಾರೆ, ಮೆರವಣಿಗೆಗಾಗಿ ಕುದುರೆ ಹತ್ತುವುದು ದರ್ಬಾರ್‌ನ ಹಕ್ಕು ಮಾತ್ರ ಎಂದು ಹೇಳಿರುವುದಾಗಿ” ವರದಿಯಾಗಿದೆ.

ಆರೋಪಿಗಳು ಕುಟುಂಬಕ್ಕೆ ಬರಾತ್ ಮುಂದುವರಿಸದಂತೆ ಬೆದರಿಕೆ ಹಾಕಿದರು. ಇದರಿಂದಾಗಿ ಆತನ ಸಂಬಂಧಿಕರು ಮದುವೆ ಸಮಾರಂಭಕ್ಕೆ ಅಹಮದಾಬಾದ್‌ಗೆ ಹೋಗುವುದನ್ನು ತಪ್ಪಿಸಬೇಕಾಯಿತು.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಗಳಾದ ತುವ್ರಜ್‌ಸಿನ್ಹ್ ಮತ್ತು ನಿಕುಲ್ಸಿನ್ಹ್ ವಿರುದ್ಧ ಲಾಡೋಲ್ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಕೌಶಿಕ್ ಅವರ ಪ್ರಕಾರ, ಸಾಂವಿಧಾನಿಕ ರಕ್ಷಣೆಗಳ ಹೊರತಾಗಿಯೂ ದಲಿತರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂಬುದನ್ನು ಈ ದಾಳಿ ಸಾಬೀತುಪಡಿಸುತ್ತದೆ ಎಂದಿದ್ದಾರೆ.

ದಲಿತರ ಮದುವೆ ಮೆರವಣಿಗೆಗಳ ಮೇಲೆ ನಿರಂತರ ದಾಳಿ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ದಲಿತ ವರರು ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದನ್ನು ವಿರೋಧಿಸಿ ಪ್ರಬಲ ಜಾತಿ ಜನರು ಹಲ್ಲೆ, ನಿಂದನೆ ಅಥವಾ ಸಾಮಾಜಿಕ ಬಹಿಷ್ಕಾರ ಹಾಕುವ ಘಟನೆಗಳು ಇತ್ತೀಚಿನ ವರ್ಷಗಳಲ್ಲಿ ವರದಿಯಾಗುತ್ತಲೇ ಇವೆ. ಇದು ಸಮಾಜದಲ್ಲಿ ಇಂದಿಗೂ ಬೇರೂರಿರುವ ಜಾತೀಯತೆ ಮತ್ತು ತಾರತಮ್ಯವನ್ನು ಎತ್ತಿ ತೋರಿಸುತ್ತದೆ.

ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮೆಹ್ಸಾನಾ ಜಿಲ್ಲೆಯ ಘಟನೆಯಲ್ಲದೆ, ಇತ್ತೀಚೆಗೆ ಇತರ ಭಾಗಗಳಲ್ಲೂ ಇಂತಹ ಘಟನೆಗಳು ನಡೆದಿವೆ. ಗಾಂಧಿನಗರ ಜಿಲ್ಲೆಯಲ್ಲಿ ನಡೆದ ಮದುವೆ ಮೆರವಣಿಗೆಯೊಂದರಲ್ಲಿ ದಲಿತ ವರನೊಬ್ಬ ಕುದುರೆ ಏರಿದ್ದಕ್ಕಾಗಿ ಪ್ರಬಲಜಾತಿ ಯುವಕರ ಗುಂಪೊಂದು ಆತನನ್ನು ಕೆಳಗಿಳಿಸಿ, ಹಲ್ಲೆ ನಡೆಸಿತ್ತು. ವರನಿಗೆ ರಕ್ಷಣೆ ನೀಡಲು ಪೊಲೀಸರು ಹರಸಾಹಸ ಪಡಬೇಕಾಯಿತು.

    ಬನಸ್ಕಾಂತ ಜಿಲ್ಲೆಯಲ್ಲಿ ಸಹ ದಲಿತ ವರ ಕುದುರೆ ಸವಾರಿ ಮಾಡಬಾರದು ಎಂದು ಗ್ರಾಮದ ಮೇಲ್ಜಾತಿಯ ಮುಖಂಡರು ಫತ್ವಾ ಹೊರಡಿಸಿದ್ದರು. ಇದನ್ನು ಮೀರಿ ಮೆರವಣಿಗೆ ನಡೆಸಿದಾಗ ಕಲ್ಲು ತೂರಾಟ ನಡೆಸಲಾಗಿತ್ತು. ನಂತರ ಇಡೀ ಗ್ರಾಮಕ್ಕೆ ಪೊಲೀಸ್ ಬಂದೋಬಸ್ತ್ ಒದಗಿಸಬೇಕಾಯಿತು.

    ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಸಹ ಇಂತಹ ಪ್ರಕರಣಗಳು ನಡೆದಿವೆ. ಛತ್ತರ್‌ಪುರ್ ಜಿಲ್ಲೆಯ ದಲಿತ ಯುವಕನೊಬ್ಬ ಮದುವೆ ದಿನ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿ ಪುರುಷರ ಗುಂಪೊಂದು ಆತನ ಮನೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿತ್ತು.

      ಬುಂದೇಲ್‌ಖಂಡ್ ಪ್ರದೇಶದ ಒಂದು ಹಳ್ಳಿಯಲ್ಲಿ ದಲಿತ ವರನ ಮೆರವಣಿಗೆಗೆ ಕಲ್ಲು ತೂರಾಟ ನಡೆಸಿದ ನಂತರ, ವರನಿಗೆ ಹೆಲ್ಮೆಟ್ ಹಾಕಿಸಿ ಸುಮಾರು 100 ಕ್ಕೂ ಹೆಚ್ಚು ಪೊಲೀಸರ ಕಾವಲಿನಲ್ಲಿ ಮದುವೆ ಮೆರವಣಿಗೆಯನ್ನು ಪೂರ್ಣಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

      ರಾಜಸ್ಥಾನದ ಭಿಲ್ವಾರಾ ಮತ್ತು ಜಲೋರ್ ಜಿಲ್ಲೆಗಳಲ್ಲಿ ಸಹ ಇಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜಸ್ಥಾನದ ಗ್ರಾಮೀಣ ಭಾಗಗಳಲ್ಲಿ ಮದುವೆ ಮೆರವಣಿಗೆ ವೇಳೆ ಇಂತಹ ಸಂಘರ್ಷಗಳು ಹೆಚ್ಚಾಗಿ ನಡೆಯುತ್ತವೆ.

        ಭಿಲ್ವಾರಾ ಜಿಲ್ಲೆಯಲ್ಲಿ ದಲಿತ ವರ ಕುದುರೆ ಏರಿದ್ದನ್ನು ವಿರೋಧಿಸಿ ಮದುವೆ ಮೆರವಣಿಗೆಯನ್ನು ತಡೆದು ನಿಲ್ಲಿಸಲಾಯಿತು. ವರನ ಕಡೆಯವರ ಮೇಲೆ ಲಾಠಿ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಲಾಯಿತು. ಈ ಘಟನೆಯ ನಂತರ ಗ್ರಾಮದ ಹಲವರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

        ಜಲೋರ್ ಜಿಲ್ಲೆಯ ಪ್ರಬ ಜಾತಿ ಧಾರ್ಮಿಕ ಸ್ಥಳದ ಮುಂದೆ ದಲಿತ ವರ ಕುದುರೆ ಸವಾರಿ ಮಾಡಿಕೊಂಡು ಹೋಗಬಾರದು ಎಂದು ಮೆರವಣಿಗೆಯನ್ನು ತಡೆದ ಘಟನೆ ನಡೆದಿತ್ತು.

        ಉತ್ತರ ಪ್ರದೇಶದ ಕಸ್ಗಂಜ್ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಸಹ ಇದೇ ಮಾದರಿಯ ಪ್ರಕರಣಗಳು ನಡೆದಿವೆ. ಕಸ್ಗಂಜ್ ಜಿಲ್ಲೆಯ ದಲಿತ ವರನೊಬ್ಬ ತಾನು ಮದುವೆಯಲ್ಲಿ ಕುದುರೆ ಸವಾರಿ ಮಾಡಬೇಕು, ಮೆರವಣಿಗೆಯು ಮೇಲ್ಜಾತಿಯವರು ವಾಸಿಸುವ ರಸ್ತೆಯ ಮೂಲಕ ಸಾಗಬೇಕು ಎಂದು ಅಲಹಾಬಾದ್ ಹೈಕೋರ್ಟ್ ಮತ್ತು ಜಿಲ್ಲಾಡಳಿತದ ಮೊರೆ ಹೋಗಬೇಕಾಯಿತು. ತೀವ್ರ ಪ್ರತಿರೋಧದ ನಡುವೆಯೂ, ಭಾರಿ ಪೊಲೀಸ್ ಭದ್ರತೆಯೊಂದಿಗೆ ಆ ಮೆರವಣಿಗೆ ನಡೆದಿತ್ತು.

          ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

          LEAVE A REPLY

          Please enter your comment!
          Please enter your name here

          - Advertisment -

          ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

          ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

          47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

          1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

          ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

          ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

          ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

          ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

          ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

          ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

          E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

          ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

          ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

          ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

          IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

          ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

          ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

          ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

          ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

          ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...