Homeಕರ್ನಾಟಕ'ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ' : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

- Advertisement -
- Advertisement -

“ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ”. ಇದು ಸರ್ಕಾರ ಮನೆ ಧ್ವಂಸ ಮಾಡಿದ್ದರಿಂದ ನಿರಾಶ್ರಿತರಾದ ಕೋಗಿಲು ಲೇಔಟ್ ಸ್ಲಂ ನಿವಾಸಿಗಳ ಅಳಲು.

2025ರ ಡಿಸೆಂಬರ್ 20ರಂದು ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನಲ್ಲಿ ಇನ್ನೂರಕ್ಕೂ ಹೆಚ್ಚು ಬಡ ಕುಟುಂಬಗಳ ಮನೆಗಳನ್ನು ಅಕ್ರಮ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಧ್ವಂಸಗೊಳಿಸಿತ್ತು.

ಜನರು ನಿದ್ದೆಯಿಂದ ಎದ್ದೇಳುವ ಮೊದಲೇ ಮುಂಜಾನೆ ವೇಳೆಗೆ ಅಧಿಕಾರಿಗಳು ಕೈಗೊಂಡ ಕಾರ್ಯಾಚರಣೆಯಿಂದ ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ಅಸಂಘಟಿತ ಕಾರ್ಮಿಕರು ಮತ್ತು ಗೃಹ ಕಾರ್ಮಿಕರು ಸೇರಿದಂತೆ ವಿವಿಧ ತಳ ಸಮುದಾಯಗಳ ಬಡ ಜನರು ಬೀದಿಗೆ ಬಿದ್ದಿದ್ದಾರೆ.

“ಮನೆಗಳ ಧ್ವಂಸ ನಡೆದು 8 ದಿಗಳ ನಂತರ ಸರ್ಕಾರ ಪುನರ್ವಸತಿ ಒದಗಿಸುವುದಾಗಿ ಭರವಸೆ ನೀಡಿತು. ರಾಜೀವ್ ಗಾಂಧಿ ವಸತಿ ನಿಗಮವು ತುರ್ತಾಗಿ ಸಮೀಕ್ಷೆ ಪೂರ್ಣಗೊಳಿಸಿತು. ದಾಖಲೆ ಪರಿಶೀಲನೆ ಪ್ರಕ್ರಿಯೆಯೂ ಹಲವು ಸುತ್ತುಗಳಲ್ಲಿ ನಡೆಯಿತು. ಸಚಿವರು, ಶಾಸಕರು ಮತ್ತು ಮುಖ್ಯಮಂತ್ರಿಗಳು ಕೂಡ ಪುನರ್ವಸತಿ ಕುರಿತು ಸಾರ್ವಜನಿಕ ಭರವಸೆಗಳನ್ನು ನೀಡಿದರು. ಅದಾಗ್ಯೂ 148 ದಿನಗಳಿಂದ ಇನ್ನೂ ನಾವು ಬೀದಿಯಲ್ಲೇ ಬದುಕುತ್ತಿದ್ದೇವೆ. ತೀವ್ರ ಬಿಸಿಲು, ಮಳೆ ಮತ್ತು ಅನಾರೋಗ್ಯದ ನಡುವೆಯೂ ಮಕ್ಕಳು, ಮಹಿಳೆಯರು ಮತ್ತು ವೃದ್ದರನ್ನೊಳಗೊಂಡಂತೆ ಅತ್ಯಂತ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ” ಎಂದು ನಿರಾಶ್ರಿತರಾದ ಜನರು ನೋವು ತೋಡಿಕೊಂಡಿದ್ದಾರೆ.

“ಬಡವರ ಪರವೆಂದು ಕರೆಸಿಕೊಳ್ಳುವ ಕಾಂಗ್ರೆಸ್ ಸರ್ಕಾರ ನಮ್ಮ ಬದುಕನ್ನು ಮರು ಕಟ್ಟಿಕೊಳ್ಳಲು ನೆರವಾಗುವುದೆಂಬುವುದು ನಮ್ಮ ನಿರೀಕ್ಷೆಯಾಗಿತ್ತು. ಆದರೆ, ಅದು ಇಂದು ಹುಸಿಯಾಗಿದೆ. ಜನರಿಗೆ ಪುನರ್ವಸತಿ ಭರವಸೆ ನೀಡಿ 138 ದಿನಗಳು ಕಳೆದಿವೆ. ಹಲವಾರು ಸುತ್ತಿನ ದಾಖಲೆ ಪರಿಶೀಲನೆ ನಡೆದಿದ್ದರೂ, ಮನೆ ಕಳೆದುಕೊಂಡು ನಿರಾಶ್ರಿತರಾದ ನಮಗೆ ಮನೆ ಸಿಕ್ಕಿಲ್ಲ. ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ, ಹಿಂದುಳಿದ ಪಂಗಡ ಹಾಗೂ ಅಸಂಘಟಿತ ಕಾರ್ಮಿಕರಾದ ನಮಗೆ ಸರ್ಕಾರ ವಿಧಿಸಿರುವ ನಿಯಮಗಳ ಅನುಸಾರ ಅಗತ್ಯವಾದ ದಾಖಲೆಗಳನ್ನು ಪಡೆದುಕೊಳ್ಳುವಲ್ಲಿ ಇರುವ ತೊಡಕುಗಳು ಎಷ್ಟೆಂದು ಸರ್ಕಾರಕ್ಕೆ ತಿಳಿದಿದೆ” ಎಂದು ಹೇಳಿದ್ದಾರೆ.

ನಿರಾಶ್ರಿತ ಜನರ ಪ್ರಕಾರ, ಅವರು ಮನೆ ಪಡೆಯಬೇಕಾದರೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸ ದೃಢೀಕರಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್ ಅನ್ನು ಕಡ್ಡಾಯ ದಾಖಲೆಯಾಗಿ ಸರ್ಕಾರ ಕೇಳುತ್ತಿದೆಯಂತೆ.

“ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗಳು ಬಹುತೇಕರ ಬಳಿ ಇದೆ. ಆದರೆ, ಮನೆ ಕಳೆದುಕೊಂಡವರು ಅಂಚಿಗೆ ತಳ್ಳಲ್ಪಟ್ಟ ಜನರಾದ್ದರಿಂದ ಇತರೆ ಮೂರು ದಾಖಲೆಗಳು ಬಹುತೇಕ ಜನರ ಬಳಿ ಇಲ್ಲ. ಶೇಕಡ 10ಕ್ಕಿಂತ ಕಡಿಮೆ ಜನರ ಬಳಿ ಜಾತಿ ಮತು ಆದಾಯ ಪ್ರಮಾಣ ಪತ್ರವಿದೆ. ಈ ಪತ್ರವನ್ನು ಪಡೆದುಕೊಳ್ಳಲು ಟಿಸಿಯನ್ನು ಕಡ್ಡಾಯ ಮಾಡಿದ್ದಾರೆ. ನಮ್ಮ ಮಕ್ಕಳೇ ಶಿಕ್ಷಣ ಪಡೆಯುತ್ತಿರುವ ಮೊದಲ ತಲೆಮಾರಿನವರಾಗಿದ್ದಾರೆ. ನಮ್ಮ ಬಳಿ ಟಿಸಿ ಇಲ್ಲ. ಹಾಗಾಗಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ವಾಸ ದೃಢೀಕರಣ ಪತ್ರವನ್ನು ಮಾಡಿಸಿಕೊಳ್ಳಬೇಕೆಂಬ ಅರಿವು ಇಲ್ಲದ ಕಾರಣ ಬಹುತೇಕ ಜನರ ಬಳಿ ಈ ದಾಖಲೆಯೂ ಇಲ್ಲ. ಶೇಕಡ 36ರಕ್ಕೂ ಹೆಚ್ಚು ಜನರ ಬಳಿ ರೇಷನ್ ಕಾರ್ಡ್ ಇದೆ. ಪಡಿತರ ಚೀಟಿ ಪಡೆದುಕೊಳ್ಳುವಲ್ಲಿ ಹಲವಾರು ತಾಂತ್ರಿಕ ಅಡೆತಡೆಗಳು, ದಾಖಲಾತಿಯ ಕೊರತೆ ಮತ್ತು 2017ರಿಂದ ಈಚೆಗೆ ಹೊಸ ಕಾರ್ಡ್‌ಗಳನ್ನು ಪಡೆಯುವಲ್ಲಿ ಅರ್ಜಿ ಹಾಕಲು, ದಿನದಲ್ಲಿ ಕೆಲವು ಗಂಟೆಗಳ ಅವಕಾಶ ನೀಡಿದ್ದರಿಂದ ಪಡಿತರ ಚೀಟಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನಿರಾಶ್ರಿತರು ಹೇಳಿದ್ದಾರೆ.

ನಾವು ಮನೆ ಪಡೆದುಕೊಳ್ಳಲು ಅಡ್ಡ ಗೋಡೆಯಾಗಿರುವ ದಾಖಲಾತಿಗಳ ತೊಡಕನ್ನು ತಾವು ಬಗೆಹರಿಸದೇ ಇದ್ದರೆ, ನಾವು ಶಾಶ್ವತವಾಗಿ ಬೀದಿಯಲ್ಲೇ ಬುದುಕುವಂತಹ ಸ್ಥಿತಿಗೆ ‘ಸರ್ಕಾರವೇ ನಮ್ಮನ್ನು ತಳ್ಳಿದಂತಾಗುತ್ತದೆ” ಎಂದಿದ್ದಾರೆ.

ಸರ್ಕಾರ ನೀಡಿದ್ದ ಭರವಸೆಗಳು ಈಡೇರಿಸಿದ ಕಾರಣ ಮನೆ ಕಳೆದುಕೊಂಡವರು ಈ ಕೆಳಗಿನ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ಮೇ 18ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಹಗಲು-ರಾತ್ರಿ ಹೋರಾಟ ಆರಂಭಿಸಿದ್ದಾರೆ.

1. ಜಿಬಿಎ ನಡೆಸಿದ ಕಾರ್ಯಾಚರಣೆಯಿಂದ ಮನೆ ಕಳೆದುಕೊಂಡ ಎಲ್ಲಾ ಕುಟುಂಬಗಳಿಗೂ ತಕ್ಷಣ ಸಂಪೂರ್ಣ ಪುನರ್ವಸತಿ ಒದಗಿಸಲೇಬೇಕು.

2. ನಮಗೆ ಮನೆಯನ್ನು ನೀಡಲು ಇರುವ ದಾಖಲೆಗಳ ಕೊರತೆಯನ್ನು ನೀಗಿಸಲು ಸರ್ಕಾರ ವಿಶೇಷ ಕ್ಯಾಂಪ್‌ಗಳನ್ನು ಮಾಡಿ ಅಗತ್ಯವಾದ ದಾಖಲೆಗಳನ್ನು ಪಡೆದುಕೊಳ್ಳಲು ವಿಶೇಷ ಪ್ರಕ್ರಿಯೆ ನಡೆಸಲೇಬೇಕು. ಯಾವುದೇ ಕಾರಣಕ್ಕೂ ದಾಖಲೆಗಳ ಕೊರತೆ ನಮಗೆ ಮನೆ ನೀಡಲು ಅಡ್ಡಿಯಾಗದಂತೆ ಸರ್ಕಾರ ನಿಗಾವಹಿಸಬೇಕು.

3. ಶಾಶ್ವತ ಹಾಗೂ ಗೌರವಯುತ ಮನೆಗಳೊಂದಿಗೆ ಭೂ ಹಕ್ಕನ್ನು ಮತ್ತು ಎಲ್ಲಾ ಮೂಲಭೂತ ನಾಗರಿಕ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಬೇಕು.

“ಕಾದು ಕಾದು ಕಾದು ಕೊನೆಗೆ ನಾವು ಫ್ರೀಡಂ ಪಾರ್ಕಿಗೆ ಬಂದು ಬಿಡಾರ ಹೂಡುವ ತೀರ್ಮಾನ ಮಾಡಿದ್ದೇವೆ. ಜಿಬಿಎ ಅಧಿಕಾರಿಗಳು ನಮ್ಮ ಮನೆಗಳನ್ನು ಕೆಡವಿ (20 ಡಿಸೆಂಬರ್ 2025 ) ಐದು ತಿಂಗಳಾಗುತ್ತಿವೆ. ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ಸೇರಿದ, ಅಸಂಘಟಿತ ದಿನಗೂಲಿಗಳಾಗಿ ದುಡಿದು ಹೊಟ್ಟೆ ಹೊರೆಯುತ್ತಿರುವ ನಾವು ಕಳೆದ 148 ದಿನಗಳಿಂದ ಬೀದಿಯಲ್ಲೇ ಇದ್ದೇವೆ. ತೀವ್ರ ಚಳಿಯಲ್ಲಿ ಮಕ್ಕಳು, ಮರಿಗಳನ್ನು ಕಟ್ಟಿಕೊಂಡು ಬದುಕಿದೆವು, ಈಗ ಉರಿ ಬಿಸಿಲಿನಲ್ಲಿ ಬೆವರಿಳಿಸುತ್ತಾ ಬದುಕಿದ್ದೇವೆ. ಅಲ್ಲಿಲ್ಲಿ ಸಿಗುವ ಅಷ್ಟಿಷ್ಟು ಕೂಲಿ, ಅವರಿವರು ದಾನಿಗಳು ತಂದು ಹಂಚುವ ಅನ್ನ ನಂಬಿ ಬದುಕು ದೂಡಿದ್ದೇವೆ. ನಿತ್ಯದ ಶೌಚಾಲಯ, ಸ್ನಾನ ಒಂದು ಸವಾಲು. ಅವರಿವರ ಮನೆಗೆ ಹೋಗಿ ಅಂಗಲಾಚಬೇಕು.”

“ಕಾಯಿಲೆ ಬಿದ್ದರಂತೂ ನರಕ. ಎಷ್ಟು ದಿನ ನಾವು ಹೀಗೆ ಬದುಕಬೇಕು ನೀವೇ ಹೇಳಿ, ಸರ್ಕಾರ ಎಲ್ಲರಿಗೂ ಮನೆ ಗಿಫ್ಟ್ ಕೊಡುತ್ತೆ ಎಂಬ ಮಾತು ಕೇಳಿ ಅನಾಥರಾದವರಿಗೆ ಅಮೃತ ಸಿಕ್ಕಂತೆ ಆಗಿತ್ತು. ಆದರೆ ರಾಜಕೀಯ ದುರುದ್ದೇಶ ಹೊಂದಿದ ಕೆಲವರು ಇವರು ಹೊರಗಿನವರು, ಬಾಂಗ್ಲಾದೇಶಿಗಳಿದ್ದಾರೆ. ಇವರಿಗೇಕೆ ಕೊಡಬೇಕು ಎಂದು ಹಸಿ ಹಸಿ ಸುಳ್ಳು ತುಂಬಿದ ಅಪಪ್ರಚಾರ ಮಾಡತೊಡಗಿದರು. ಎಲ್ಲಾ ಗೊಂದಲದ ಗೂಡು. ಸರ್ಕಾರ ಹೆದರಿತೋ ಏನೋ ಗೊತ್ತಿಲ್ಲ ಹಿಂಜರಿದಿದ್ದಂತೂ ವಾಸ್ತವ, ಅಂದಿನಿಂದ ಬರಿ ಆಶ್ವಾಸನೆ ಮಾತ್ರ ನೆಲೆಯಂತೂ ನಮಗೆ ಸಿಗಲಿ ಸಿಗಲಿಲ್ಲ. ಕನಿಷ್ಠ ತಾತ್ಕಾಲಿಕ ನೆರವೂ ಸಹ ಕೊಡಲಿಲ್ಲ.”

“ಅಳದಿದ್ದರೆ ತಾಯಿ ಹಾಲೂ ಕೊಡಲ್ಲ” ಎಂಬ ಗಾದೆ ಇದೆ. ನಾವು ಇಲ್ಲೇ ಕೂತರೆ ನಮ್ಮನ್ನು ಸರ್ಕಾರ, ಸಮಾಜ, ಮಾಧ್ಯಮ ಎಲ್ಲರೂ ಮರೆತು ಬಿಡುತ್ತಾರೆ ಅನಿಸುತ್ತಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಈ ಅತಂತ್ರದ ಅನಾಥ ಬೀದಿ ಬದುಕು ಸಾಕಾಗಿದೆ. ಹಾಗಾಗಿ ಮಕ್ಕಳು, ಮರಿ ಸಮೇತ ಕಟ್ಟಿಕೊಂಡು ಟೆಂಟು, ಪಾತ್ರೆ ಪಗಡೆಗಳ ಸಮೇತ ಫ್ರೀಡಂ ಪಾರ್ಕಿಗೆ ಹೊರಟದ್ದೇವೆ. ನಮಗೊಂದು ಸೂರು ಕೊಟ್ಟರೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ” ಎಂದು ನಿರಾಶ್ರಿತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೃಷ್ಣಬೈರೇಗೌಡ ಮತ್ತು ಝಮೀರ್ ಅಹ್ಮದ್ ಅವರಲ್ಲಿ ಪತ್ರಿಕಾ ಹೇಳಿಕೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...