Homeಕರ್ನಾಟಕ'ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ' : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

- Advertisement -
- Advertisement -

“ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ”. ಇದು ಸರ್ಕಾರ ಮನೆ ಧ್ವಂಸ ಮಾಡಿದ್ದರಿಂದ ನಿರಾಶ್ರಿತರಾದ ಕೋಗಿಲು ಲೇಔಟ್ ಸ್ಲಂ ನಿವಾಸಿಗಳ ಅಳಲು.

2025ರ ಡಿಸೆಂಬರ್ 20ರಂದು ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನಲ್ಲಿ ಇನ್ನೂರಕ್ಕೂ ಹೆಚ್ಚು ಬಡ ಕುಟುಂಬಗಳ ಮನೆಗಳನ್ನು ಅಕ್ರಮ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಧ್ವಂಸಗೊಳಿಸಿತ್ತು.

ಜನರು ನಿದ್ದೆಯಿಂದ ಎದ್ದೇಳುವ ಮೊದಲೇ ಮುಂಜಾನೆ ವೇಳೆಗೆ ಅಧಿಕಾರಿಗಳು ಕೈಗೊಂಡ ಕಾರ್ಯಾಚರಣೆಯಿಂದ ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ಅಸಂಘಟಿತ ಕಾರ್ಮಿಕರು ಮತ್ತು ಗೃಹ ಕಾರ್ಮಿಕರು ಸೇರಿದಂತೆ ವಿವಿಧ ತಳ ಸಮುದಾಯಗಳ ಬಡ ಜನರು ಬೀದಿಗೆ ಬಿದ್ದಿದ್ದಾರೆ.

“ಮನೆಗಳ ಧ್ವಂಸ ನಡೆದು 8 ದಿಗಳ ನಂತರ ಸರ್ಕಾರ ಪುನರ್ವಸತಿ ಒದಗಿಸುವುದಾಗಿ ಭರವಸೆ ನೀಡಿತು. ರಾಜೀವ್ ಗಾಂಧಿ ವಸತಿ ನಿಗಮವು ತುರ್ತಾಗಿ ಸಮೀಕ್ಷೆ ಪೂರ್ಣಗೊಳಿಸಿತು. ದಾಖಲೆ ಪರಿಶೀಲನೆ ಪ್ರಕ್ರಿಯೆಯೂ ಹಲವು ಸುತ್ತುಗಳಲ್ಲಿ ನಡೆಯಿತು. ಸಚಿವರು, ಶಾಸಕರು ಮತ್ತು ಮುಖ್ಯಮಂತ್ರಿಗಳು ಕೂಡ ಪುನರ್ವಸತಿ ಕುರಿತು ಸಾರ್ವಜನಿಕ ಭರವಸೆಗಳನ್ನು ನೀಡಿದರು. ಅದಾಗ್ಯೂ 148 ದಿನಗಳಿಂದ ಇನ್ನೂ ನಾವು ಬೀದಿಯಲ್ಲೇ ಬದುಕುತ್ತಿದ್ದೇವೆ. ತೀವ್ರ ಬಿಸಿಲು, ಮಳೆ ಮತ್ತು ಅನಾರೋಗ್ಯದ ನಡುವೆಯೂ ಮಕ್ಕಳು, ಮಹಿಳೆಯರು ಮತ್ತು ವೃದ್ದರನ್ನೊಳಗೊಂಡಂತೆ ಅತ್ಯಂತ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ” ಎಂದು ನಿರಾಶ್ರಿತರಾದ ಜನರು ನೋವು ತೋಡಿಕೊಂಡಿದ್ದಾರೆ.

“ಬಡವರ ಪರವೆಂದು ಕರೆಸಿಕೊಳ್ಳುವ ಕಾಂಗ್ರೆಸ್ ಸರ್ಕಾರ ನಮ್ಮ ಬದುಕನ್ನು ಮರು ಕಟ್ಟಿಕೊಳ್ಳಲು ನೆರವಾಗುವುದೆಂಬುವುದು ನಮ್ಮ ನಿರೀಕ್ಷೆಯಾಗಿತ್ತು. ಆದರೆ, ಅದು ಇಂದು ಹುಸಿಯಾಗಿದೆ. ಜನರಿಗೆ ಪುನರ್ವಸತಿ ಭರವಸೆ ನೀಡಿ 138 ದಿನಗಳು ಕಳೆದಿವೆ. ಹಲವಾರು ಸುತ್ತಿನ ದಾಖಲೆ ಪರಿಶೀಲನೆ ನಡೆದಿದ್ದರೂ, ಮನೆ ಕಳೆದುಕೊಂಡು ನಿರಾಶ್ರಿತರಾದ ನಮಗೆ ಮನೆ ಸಿಕ್ಕಿಲ್ಲ. ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ, ಹಿಂದುಳಿದ ಪಂಗಡ ಹಾಗೂ ಅಸಂಘಟಿತ ಕಾರ್ಮಿಕರಾದ ನಮಗೆ ಸರ್ಕಾರ ವಿಧಿಸಿರುವ ನಿಯಮಗಳ ಅನುಸಾರ ಅಗತ್ಯವಾದ ದಾಖಲೆಗಳನ್ನು ಪಡೆದುಕೊಳ್ಳುವಲ್ಲಿ ಇರುವ ತೊಡಕುಗಳು ಎಷ್ಟೆಂದು ಸರ್ಕಾರಕ್ಕೆ ತಿಳಿದಿದೆ” ಎಂದು ಹೇಳಿದ್ದಾರೆ.

ನಿರಾಶ್ರಿತ ಜನರ ಪ್ರಕಾರ, ಅವರು ಮನೆ ಪಡೆಯಬೇಕಾದರೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸ ದೃಢೀಕರಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್ ಅನ್ನು ಕಡ್ಡಾಯ ದಾಖಲೆಯಾಗಿ ಸರ್ಕಾರ ಕೇಳುತ್ತಿದೆಯಂತೆ.

“ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗಳು ಬಹುತೇಕರ ಬಳಿ ಇದೆ. ಆದರೆ, ಮನೆ ಕಳೆದುಕೊಂಡವರು ಅಂಚಿಗೆ ತಳ್ಳಲ್ಪಟ್ಟ ಜನರಾದ್ದರಿಂದ ಇತರೆ ಮೂರು ದಾಖಲೆಗಳು ಬಹುತೇಕ ಜನರ ಬಳಿ ಇಲ್ಲ. ಶೇಕಡ 10ಕ್ಕಿಂತ ಕಡಿಮೆ ಜನರ ಬಳಿ ಜಾತಿ ಮತು ಆದಾಯ ಪ್ರಮಾಣ ಪತ್ರವಿದೆ. ಈ ಪತ್ರವನ್ನು ಪಡೆದುಕೊಳ್ಳಲು ಟಿಸಿಯನ್ನು ಕಡ್ಡಾಯ ಮಾಡಿದ್ದಾರೆ. ನಮ್ಮ ಮಕ್ಕಳೇ ಶಿಕ್ಷಣ ಪಡೆಯುತ್ತಿರುವ ಮೊದಲ ತಲೆಮಾರಿನವರಾಗಿದ್ದಾರೆ. ನಮ್ಮ ಬಳಿ ಟಿಸಿ ಇಲ್ಲ. ಹಾಗಾಗಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ವಾಸ ದೃಢೀಕರಣ ಪತ್ರವನ್ನು ಮಾಡಿಸಿಕೊಳ್ಳಬೇಕೆಂಬ ಅರಿವು ಇಲ್ಲದ ಕಾರಣ ಬಹುತೇಕ ಜನರ ಬಳಿ ಈ ದಾಖಲೆಯೂ ಇಲ್ಲ. ಶೇಕಡ 36ರಕ್ಕೂ ಹೆಚ್ಚು ಜನರ ಬಳಿ ರೇಷನ್ ಕಾರ್ಡ್ ಇದೆ. ಪಡಿತರ ಚೀಟಿ ಪಡೆದುಕೊಳ್ಳುವಲ್ಲಿ ಹಲವಾರು ತಾಂತ್ರಿಕ ಅಡೆತಡೆಗಳು, ದಾಖಲಾತಿಯ ಕೊರತೆ ಮತ್ತು 2017ರಿಂದ ಈಚೆಗೆ ಹೊಸ ಕಾರ್ಡ್‌ಗಳನ್ನು ಪಡೆಯುವಲ್ಲಿ ಅರ್ಜಿ ಹಾಕಲು, ದಿನದಲ್ಲಿ ಕೆಲವು ಗಂಟೆಗಳ ಅವಕಾಶ ನೀಡಿದ್ದರಿಂದ ಪಡಿತರ ಚೀಟಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನಿರಾಶ್ರಿತರು ಹೇಳಿದ್ದಾರೆ.

ನಾವು ಮನೆ ಪಡೆದುಕೊಳ್ಳಲು ಅಡ್ಡ ಗೋಡೆಯಾಗಿರುವ ದಾಖಲಾತಿಗಳ ತೊಡಕನ್ನು ತಾವು ಬಗೆಹರಿಸದೇ ಇದ್ದರೆ, ನಾವು ಶಾಶ್ವತವಾಗಿ ಬೀದಿಯಲ್ಲೇ ಬುದುಕುವಂತಹ ಸ್ಥಿತಿಗೆ ‘ಸರ್ಕಾರವೇ ನಮ್ಮನ್ನು ತಳ್ಳಿದಂತಾಗುತ್ತದೆ” ಎಂದಿದ್ದಾರೆ.

ಸರ್ಕಾರ ನೀಡಿದ್ದ ಭರವಸೆಗಳು ಈಡೇರಿಸಿದ ಕಾರಣ ಮನೆ ಕಳೆದುಕೊಂಡವರು ಈ ಕೆಳಗಿನ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ಮೇ 18ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಹಗಲು-ರಾತ್ರಿ ಹೋರಾಟ ಆರಂಭಿಸಿದ್ದಾರೆ.

1. ಜಿಬಿಎ ನಡೆಸಿದ ಕಾರ್ಯಾಚರಣೆಯಿಂದ ಮನೆ ಕಳೆದುಕೊಂಡ ಎಲ್ಲಾ ಕುಟುಂಬಗಳಿಗೂ ತಕ್ಷಣ ಸಂಪೂರ್ಣ ಪುನರ್ವಸತಿ ಒದಗಿಸಲೇಬೇಕು.

2. ನಮಗೆ ಮನೆಯನ್ನು ನೀಡಲು ಇರುವ ದಾಖಲೆಗಳ ಕೊರತೆಯನ್ನು ನೀಗಿಸಲು ಸರ್ಕಾರ ವಿಶೇಷ ಕ್ಯಾಂಪ್‌ಗಳನ್ನು ಮಾಡಿ ಅಗತ್ಯವಾದ ದಾಖಲೆಗಳನ್ನು ಪಡೆದುಕೊಳ್ಳಲು ವಿಶೇಷ ಪ್ರಕ್ರಿಯೆ ನಡೆಸಲೇಬೇಕು. ಯಾವುದೇ ಕಾರಣಕ್ಕೂ ದಾಖಲೆಗಳ ಕೊರತೆ ನಮಗೆ ಮನೆ ನೀಡಲು ಅಡ್ಡಿಯಾಗದಂತೆ ಸರ್ಕಾರ ನಿಗಾವಹಿಸಬೇಕು.

3. ಶಾಶ್ವತ ಹಾಗೂ ಗೌರವಯುತ ಮನೆಗಳೊಂದಿಗೆ ಭೂ ಹಕ್ಕನ್ನು ಮತ್ತು ಎಲ್ಲಾ ಮೂಲಭೂತ ನಾಗರಿಕ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಬೇಕು.

“ಕಾದು ಕಾದು ಕಾದು ಕೊನೆಗೆ ನಾವು ಫ್ರೀಡಂ ಪಾರ್ಕಿಗೆ ಬಂದು ಬಿಡಾರ ಹೂಡುವ ತೀರ್ಮಾನ ಮಾಡಿದ್ದೇವೆ. ಜಿಬಿಎ ಅಧಿಕಾರಿಗಳು ನಮ್ಮ ಮನೆಗಳನ್ನು ಕೆಡವಿ (20 ಡಿಸೆಂಬರ್ 2025 ) ಐದು ತಿಂಗಳಾಗುತ್ತಿವೆ. ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ಸೇರಿದ, ಅಸಂಘಟಿತ ದಿನಗೂಲಿಗಳಾಗಿ ದುಡಿದು ಹೊಟ್ಟೆ ಹೊರೆಯುತ್ತಿರುವ ನಾವು ಕಳೆದ 148 ದಿನಗಳಿಂದ ಬೀದಿಯಲ್ಲೇ ಇದ್ದೇವೆ. ತೀವ್ರ ಚಳಿಯಲ್ಲಿ ಮಕ್ಕಳು, ಮರಿಗಳನ್ನು ಕಟ್ಟಿಕೊಂಡು ಬದುಕಿದೆವು, ಈಗ ಉರಿ ಬಿಸಿಲಿನಲ್ಲಿ ಬೆವರಿಳಿಸುತ್ತಾ ಬದುಕಿದ್ದೇವೆ. ಅಲ್ಲಿಲ್ಲಿ ಸಿಗುವ ಅಷ್ಟಿಷ್ಟು ಕೂಲಿ, ಅವರಿವರು ದಾನಿಗಳು ತಂದು ಹಂಚುವ ಅನ್ನ ನಂಬಿ ಬದುಕು ದೂಡಿದ್ದೇವೆ. ನಿತ್ಯದ ಶೌಚಾಲಯ, ಸ್ನಾನ ಒಂದು ಸವಾಲು. ಅವರಿವರ ಮನೆಗೆ ಹೋಗಿ ಅಂಗಲಾಚಬೇಕು.”

“ಕಾಯಿಲೆ ಬಿದ್ದರಂತೂ ನರಕ. ಎಷ್ಟು ದಿನ ನಾವು ಹೀಗೆ ಬದುಕಬೇಕು ನೀವೇ ಹೇಳಿ, ಸರ್ಕಾರ ಎಲ್ಲರಿಗೂ ಮನೆ ಗಿಫ್ಟ್ ಕೊಡುತ್ತೆ ಎಂಬ ಮಾತು ಕೇಳಿ ಅನಾಥರಾದವರಿಗೆ ಅಮೃತ ಸಿಕ್ಕಂತೆ ಆಗಿತ್ತು. ಆದರೆ ರಾಜಕೀಯ ದುರುದ್ದೇಶ ಹೊಂದಿದ ಕೆಲವರು ಇವರು ಹೊರಗಿನವರು, ಬಾಂಗ್ಲಾದೇಶಿಗಳಿದ್ದಾರೆ. ಇವರಿಗೇಕೆ ಕೊಡಬೇಕು ಎಂದು ಹಸಿ ಹಸಿ ಸುಳ್ಳು ತುಂಬಿದ ಅಪಪ್ರಚಾರ ಮಾಡತೊಡಗಿದರು. ಎಲ್ಲಾ ಗೊಂದಲದ ಗೂಡು. ಸರ್ಕಾರ ಹೆದರಿತೋ ಏನೋ ಗೊತ್ತಿಲ್ಲ ಹಿಂಜರಿದಿದ್ದಂತೂ ವಾಸ್ತವ, ಅಂದಿನಿಂದ ಬರಿ ಆಶ್ವಾಸನೆ ಮಾತ್ರ ನೆಲೆಯಂತೂ ನಮಗೆ ಸಿಗಲಿ ಸಿಗಲಿಲ್ಲ. ಕನಿಷ್ಠ ತಾತ್ಕಾಲಿಕ ನೆರವೂ ಸಹ ಕೊಡಲಿಲ್ಲ.”

“ಅಳದಿದ್ದರೆ ತಾಯಿ ಹಾಲೂ ಕೊಡಲ್ಲ” ಎಂಬ ಗಾದೆ ಇದೆ. ನಾವು ಇಲ್ಲೇ ಕೂತರೆ ನಮ್ಮನ್ನು ಸರ್ಕಾರ, ಸಮಾಜ, ಮಾಧ್ಯಮ ಎಲ್ಲರೂ ಮರೆತು ಬಿಡುತ್ತಾರೆ ಅನಿಸುತ್ತಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಈ ಅತಂತ್ರದ ಅನಾಥ ಬೀದಿ ಬದುಕು ಸಾಕಾಗಿದೆ. ಹಾಗಾಗಿ ಮಕ್ಕಳು, ಮರಿ ಸಮೇತ ಕಟ್ಟಿಕೊಂಡು ಟೆಂಟು, ಪಾತ್ರೆ ಪಗಡೆಗಳ ಸಮೇತ ಫ್ರೀಡಂ ಪಾರ್ಕಿಗೆ ಹೊರಟದ್ದೇವೆ. ನಮಗೊಂದು ಸೂರು ಕೊಟ್ಟರೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ” ಎಂದು ನಿರಾಶ್ರಿತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೃಷ್ಣಬೈರೇಗೌಡ ಮತ್ತು ಝಮೀರ್ ಅಹ್ಮದ್ ಅವರಲ್ಲಿ ಪತ್ರಿಕಾ ಹೇಳಿಕೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...