Homeಕರ್ನಾಟಕರಾಜ್ಯದ ಬೇಡಿಕೆಗಳಿಗೆ ಪ್ರಧಾನಿಗಳು ಸ್ಪಂದಿಸಿದ್ದಾರೆ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದ ಬೇಡಿಕೆಗಳಿಗೆ ಪ್ರಧಾನಿಗಳು ಸ್ಪಂದಿಸಿದ್ದಾರೆ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಿಗೆ ಸತ್ಯಕ್ಕೆ ದೂರವಾಗಿವೆ ಎಂದಿರುವ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಹೊಸವರ್ಷದ ಪ್ರಾರಂಭದಲ್ಲಿಯೇ ರಾಜ್ಯದ ಪ್ರಸಿದ್ದ ಕ್ಷೇತ್ರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಘನ ಉಪಸ್ಥಿತಿಯಲ್ಲಿ ನಡೆದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ನಮ್ಮ ಅಹವಾಲನ್ನು ದೇಶದ ಪ್ರಧಾನಮಂತ್ರಿಗಳಲ್ಲಿ ಪ್ರಾಮಾಣಿಕವಾಗಿ ಸಲ್ಲಿಸಿದ್ದೇನೆ. ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಸಹಜವಾಗಿ ನಡೆಯುವಂತಹ ವಿದ್ಯಮಾನವಾಗಿದೆ. ಆದರೆ ಕೆಲವು ಮಾಧ್ಯಮಗಳಲ್ಲಿ ವಿಷಯವನ್ನು ತಿರುಚಿ ಸನ್ಮಾನ್ಯ ಪ್ರಧಾನಮಂತ್ರಿಗಳು ನಮ್ಮ ಬೇಡಿಕೆಗೆ ಮೌನ ವಹಿಸಿದ್ದರು, ಅವರು ಮುನಿಸಿಕೊಂಡಿದ್ದಾರೆ, ಅವರಿಗೆ ಅಸಮಾಧಾನವಾಗಿದೆ ಎಂದು ವಾಸ್ತವ ಸಂಗತಿಗಳನ್ನು ತಿಳಿಯುವ ಗೋಜಿಗೂ ಹೋಗದೆ, ತಮ್ಮ ಕಪೋಲಕಲ್ಪಿತ ವ್ಯಾಖ್ಯಾನಗಳನ್ನು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಸತ್ಯಕ್ಕೆ ದೂರವಾದವುಗಳು ಎನ್ನುವುದನ್ನು ನಾನು ಅತ್ಯಂತ ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳು ನಮ್ಮ ರಾಜ್ಯದ ಬೇಡಿಕೆಗಳನ್ನು ಸ್ವೀಕರಿಸಿದ್ದಾರೆ. ನಮ್ಮ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು, ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ನೆರವು – ಇವೆಲ್ಲವುಗಳಿಗೆ 50 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಮಾನ್ಯ ಪ್ರಧಾನಮಂತ್ರಿಗಳಲ್ಲಿ ನಮ್ಮ ಮನವಿಯನ್ನು ರೈತ ಸಮಾವೇಶದ ವೇದಿಕೆಯಿಂದ ಮತ್ತೊಮ್ಮೆ ಅರಿಕೆ ಮಾಡಿಕೊಳ್ಳುವುದು ಸಮಂಜಸ ಎನ್ನುವ ಕಾರಣಕ್ಕೆ ಅಲ್ಲಿ ಅದನ್ನು ಉಲ್ಲೇಖಿಸಿದ್ದೇನೆ ಎಂದಿದ್ದಾರೆ.

ಪ್ರಧಾನಮಂತ್ರಿಗಳ ದಕ್ಷ, ಪಾರದರ್ಶಕ, ಪ್ರಾಮಾಣಿಕ ಆಡಳಿತ ವೈಖರಿ ಇಡೀ ಜಗತ್ತಿಗೆ ಗೊತ್ತಿದೆ. ಇಡೀ ದೇಶಕ್ಕೆ ತಿಳಿದಿರುವಂತೆ, ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಸರ್ಕಾರ ರೈತರಿಗೆ ಅಭೂತಪೂರ್ವ ನೆರವು ನೀಡಿದೆ, ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿ ಹೆಜ್ಜೆಗಳನ್ನು ಇಡುತ್ತಿದೆ. ನಮ್ಮ ರಾಜ್ಯದ ಕೃಷಿಕರ, ನೀರಾವರಿ ಯೋಜನೆಗಳ ವಾಸ್ತವತೆಗಳೂ ಪ್ರಧಾನಿಗಳಿಗೆ ತಿಳಿದಿದೆ. ಅವರು ನಮ್ಮ ಅತ್ಯುನ್ನತ ನಾಯಕರು. ಕರ್ನಾಟಕಕ್ಕೆ ಅತಿ ಹೆಚ್ಚಿನ ನೆರವು, ಅನುದಾನ ನೀಡಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಎನ್ನುವುದೂ ಕೂಡ ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ.

ನಮ್ಮ ಎಲ್ಲ ಮನವಿಗೆ ಸನ್ಮಾನ್ಯ ಪ್ರಧಾನಮಂತ್ರಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಈ ಬಗ್ಗೆ ದೆಹಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ ಸಲ್ಲಿಸಲು ಮಾನ್ಯ ಪ್ರಧಾನಮಂತ್ರಿಗಳು ಸೂಚಿಸಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿಗಳು ಈ ವಿಷಯದ ಬಗ್ಗೆ ಖುದ್ದಾಗಿ ನನ್ನೊಂದಿಗೆ ಮಾತನಾಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ವಾಸ್ತವ ಸಂಗತಿಗಳನ್ನು ಮರೆಮಾಚಿ, ಜನರಿಗೆ ತಪ್ಪು ಸಂದೇಶ ನೀಡುವ ಕೆಲವು ಮಾಧ್ಯಮಗಳ ಧೋರಣೆ ಸರಿಯಲ್ಲ ಎನ್ನುವುದನ್ನು ಮತ್ತೊಮ್ಮೆ ಇಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ. ರಾಜ್ಯದ ಹಿತದೃಷ್ಟಿಯಿಂದ ನಮ್ಮ ಪ್ರಯತ್ನಗಳನ್ನು ಬೆಂಬಲಿಸಿ ಮತ್ತು ವಿಷಯಗಳಿಗೆ ತಪ್ಪು ವಾಖ್ಯಾನ ಮಾಡದಿರಿ ಎಂದು ಎಲ್ಲ ವಿದ್ಯುನ್ಮಾನ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾನು ಕೋರಿಕೊಳ್ಳುತ್ತಿದ್ದೇನೆ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...