Homeಕರ್ನಾಟಕಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರುವವರೆಗೂ ಕೆಲಸಕ್ಕೆ ಗೈರಾಗಲು ನಿರ್ಧಾರ..

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರುವವರೆಗೂ ಕೆಲಸಕ್ಕೆ ಗೈರಾಗಲು ನಿರ್ಧಾರ..

- Advertisement -
- Advertisement -

12000 ಸಂಬಳ, ಕೆಲಸದ ಭದ್ರತೆ, 15 ತಿಂಗಳಿನಿಂದ ಬರಬೇಕಾದ ಬಾಕಿ ಹಣ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ 30ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಡೆಸಿದ ಬೃಹತ್‌ ಪ್ರತಿಭಟನೆ ಕಡೆಗೂ ಅಂತ್ಯಕಂಡಿದೆ.

ಬೆಳಿಗ್ಗೆಯೇ ರೈಲುನಿಲ್ದಾಣದಿಂದ ಬೃಹತ್‌ ಮೆರವಣಿಗೆಯ ಮೂಲಕ ಫ್ರೀಡಂಪಾರ್ಕ್‌‌ನಲ್ಲಿ ಜಮಾಯಿಸಿದ ಮಹಿಳೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಆರೋಗ್ಯ ಮಂತ್ರಿಗಳು ಸ್ಥಳಕ್ಕೆ ಆಗಮಿಸಿ ಬೇಡಿಕೆಗಳನ್ನು ಸ್ಥಳದಲ್ಲಿಯೇ ಈಡೇರಿಸಬೇಕೆಂದು ಪಟ್ಟು ಹಿಡಿದಿದ್ದರು.

ಆದರೆ ಕೆಲಸದ ನಿಮಿತ್ತ ದೆಹಲಿಗೆ ತೆರಳಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳನ್ನು ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ತೆರಲಿ ಸಂಧಾನ ಸಭೆ ನಡೆಸುವಂತೆ ಆದೇಸಿಸಿದ್ದರು. ಆಶಾ ಕಾರ್ಯಕರ್ತೆಯರ ಏಳು ಬೇಡಿಕೆಗಳಿಗೂ ಒಪ್ಪಿಕೊಂಡು ಸಮಯಾವಕಾಶ ನೀಡುವಂತೆ ಸೂಚಿಸಿದ್ದರು.

ಅದರಂತೆ ಸ್ಥಳಕ್ಕೆ ಬಂದ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದರು. AIUTUC ವತಿಯಿಂದ ನಡೆದ ಹೋರಾಟವನ್ನು ಆಶಾ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿಯವರು ಮತ್ತು ಅಧ್ಯಕ್ಷರಾದ ಸೋಮಶೇಖರ್‌ ಯಾದಗಿರಿಯವರು ಮುನ್ನಡೆಸಿದ್ದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನವನ್ನು ಒಟ್ಟಿಗೆ ಸೇರಿಸಿ 12000 ಕೊಡಬೇಕು ಎಂದು ಹಕ್ಕೊತ್ತಾಯ ಮಾಡಲಾಗಿತ್ತು. ಇದಕ್ಕೆ ಒಪ್ಪಿದ ಸರ್ಕಾರ ಪ್ರತಿತಿಂಗಳು 10 ರಿಂದ 15ನೇ ತಾರೀಖಿನ ಒಳಗೆ ನೀಡುತ್ತೇವೆ ಎಂದು ಹೇಳಿದೆ. ಈಗ ರಾಜ್ಯ ಸರ್ಕಾರ ನಿಡುತ್ತಿರುವ ನಿಶ್ಚಿತ ಗೌರವಧನ 4ಸಾವಿರದಿಂದ 5 ಸಾವಿರಕ್ಕೆ ಹೆಚ್ಚಿಸಲು ಬಜೆಟ್‌ನಲ್ಲಿ ಮನವಿ ಮಾಡಲಾಗುವುದು ಎಂದು ಅಧಿಕಾರಗಳು ಹೇಳಿದ್ದಾರೆ.

ಆಶಾ ನಿಧಿ ತಂತ್ರಾಂಶಗಳನ್ನು ಮಾರ್ಚ್‌ ಒಳಗೆ ಸರಿಪಡಿಸಲಾಗುವುದು. ಅದರಲ್ಲಿ ಆಶಾ ಕಾರ್ಯಕರ್ತೆಯರ ವಿವರಗಳನ್ನು ಲಿಂಕ್‌ ಮಾಡುವುದನ್ನು ತೆಗೆಯಲು ಸರ್ಕಾರ ಒಪ್ಪಿದೆ.

ಪ್ರತಿತಿಂಗಳು ಸಚಿವರೊಂದಿಗೆ ಪ್ರತಿ ತಿಂಗಳು ಒಂದು ದಿನ ಆಶಾ ಕಾರ್ಯಕರ್ತೆಯರ ಸಂಘಟಕರೊಂದಿಗೆ ಸಭೆ ನಡೆಸಲಾಗುವುದು. ವಾಟ್ಸಾಪ್‌ ಗುಂಪು ಮಾಡಿ ಸಂವಾದ ನಡೆಸುವುದು.

15 ತಿಂಗಳಿಂದ ಬಾಕಿ ಇರುವ ವೇತನ ಪಾವತಿಗೆ ಸಂಬಂಧಿಸಿದಂತೆ ಸರಾಸರಿ ಮೊತ್ತ ಕೊಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದರಲ್ಲಿ ಭಾಗಶಃ ನಮ್ಮ ಹಕ್ಕೊತ್ತಾಯಗಳು ಈಡೇರಿವೆ. ಇನ್ನು ಕೆಲವು ಭರವಸೆಯ ರೂಪದಲ್ಲಿಯೇ ಇವೆ. ಹಾಗಾಗಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆಯನ್ನು ನಿಲ್ಲಿಸುತ್ತಿದ್ದೇವೆ. ಆದರೆ ಭರವಸೆ ಈಡೇರುವವರೆಗೂ ಕೆಲಸಕ್ಕೆ ತೆರಳುವುದಿಲ್ಲ. ಸರ್ಕಾರಕ್ಕೆ ಮಾರ್ಚ್‌‌ವರೆಗೆ ಗಡುವು ನೀಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...