Homeಅಂತರಾಷ್ಟ್ರೀಯಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

- Advertisement -
- Advertisement -

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ ದ್ವೇಷ ಅಪರಾಧ ಎಂದು ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ.

ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ಅವರು ತಿಳಿಸುವ ಪ್ರಕಾರ, ದಾಳಿ ಮಸೀದಿ ಹಾಗೂ ಶಾಲೆ ಸೇರಿದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋದಲ್ಲಿ ನಡೆದಿದೆ. ಇಬ್ಬರು ಶಂಕಿತ ಶೂಟರ್‌ಗಳು ದಾಳಿ ನಂತರ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್, “ಇಸ್ಲಾಮಿಕ್ ಕೇಂದ್ರದ ಸ್ಥಳವನ್ನು ಗಮನಿಸಿ, ಇದನ್ನು ದ್ವೇಷ ಅಪರಾಧವೆಂದು ಪರಿಗಣಿಸಿ ತನಿಖೆ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ. 

ಶಂಕಿತರು 17 ವರ್ಷದ ಕೇನ್ ಲೀ ಕ್ಲಾರ್ಕ್ ಮತ್ತು 18 ವರ್ಷದ ಕ್ಯಾಲೆಬ್ ಲಿಯಾಮ್ ವಾಸ್ಕ್ವೆಜ್ ಎಂದು ಗುರುತಿಸಲಾಗಿದೆ. ಇಬ್ಬರೂ ಸ್ಯಾನ್ ಡಿಯಾಗೋ ಪ್ರದೇಶದವರು. ಅವರು ಆನ್‌ಲೈನ್‌ನಲ್ಲಿ ಭೇಟಿಯಾಗಿ ರ್ಯಾಡಿಕಲೈಸ್ ಆಗಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ. 

ದಾಳಿಕೋರರು ಬಿಟ್ಟು ಹೋದ ಸುಮಾರು 75 ಪುಟಗಳ ಮ್ಯಾನಿಫೆಸ್ಟೊ ಮತ್ತು ಆನ್‌ಲೈನ್ ಬರಹಗಳಲ್ಲಿ ವೈಟ್ ಸುಪ್ರಿಮಸಿಸ್ಟ್ ಸಂಕೇತಗಳು, ನಿಯೋ-ನಾಜಿ ಚಿಹ್ನೆಗಳು, ಇಸ್ಲಾಂ ವಿರೋಧಿ, ಯಹೂದಿ ವಿರೋಧಿ ಹಾಗೂ ವಿವಿಧ ಧರ್ಮ ಮತ್ತು ಜನಾಂಗಗಳ ವಿರುದ್ಧ ತೀವ್ರ ದ್ವೇಷ ವ್ಯಕ್ತವಾಗಿದೆ. ಕ್ರೈಸ್ಟ್‌ಚರ್ಚ್ ಮಸೀದಿ ದಾಳಿಕೋರನನ್ನು ಅವರು ಪ್ರಶಂಸಿಸಿದ್ದರು ಎಂದು ವರದಿಯಾಗಿದೆ. ದಾಳಿಯನ್ನು ಲೈವ್‌ಸ್ಟ್ರೀಮ್ ಮಾಡುವ ಪ್ರಯತ್ನವೂ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ಸಾವನ್ನಪ್ಪಿದ ಮೂವರು ಬಲಿಪಶುಗಳು ವಯಸ್ಕರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯಲ್ಲಿ ಯಾವುದೇ ಮಕ್ಕಳಿಗೆ ದೈಹಿಕ ಹಾನಿಯಾಗಿಲ್ಲ ಎಂದು ದೃಢಪಡಿಸಲಾಗಿದೆ. ಹತ್ಯೆಗೀಡಾದವರಲ್ಲಿ ಒಬ್ಬರು ಸ್ಯಾನ್ ಡಿಯಾಗೋ ಇಸ್ಲಾಮಿಕ್ ಸೆಂಟರ್‌ನ ಭದ್ರತಾ ಸಿಬ್ಬಂದಿ ಅಮೀನ್ ಅಬ್ದುಲ್ಲಾ ಎಂದು ತಿಳಿದುಬಂದಿದೆ. ಅವರು ದಾಳಿಯನ್ನು ಇನ್ನಷ್ಟು ಮಾರಕವಾಗುವುದನ್ನು ತಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಅಮೀನ್ ಅಬ್ದುಲ್ಲಾ ಅವರು ಎಂಟು ಮಕ್ಕಳ ತಂದೆ, ಇಸ್ಲಾಂಗೆ ಮತಾಂತರಗೊಂಡವರು ಹಾಗೂ ಸಮುದಾಯದಲ್ಲಿ ದಯೆ ಮತ್ತು ಸ್ವಾಗತಾರ್ಹ ವ್ಯಕ್ತಿಯಾಗಿ ಪರಿಚಿತರಾಗಿದ್ದರು. ಉಳಿದ ಬಲಿಪಶುಗಳು ಮನ್ಸೂರ್ ಕಜೀಹಾ ಮತ್ತು ನಾದಿರ್/ನೇಡರ್ ಅವಾದ್ ಎಂದು ಗುರುತಿಸಲಾಗಿದೆ. ಈ ಮೂವರೂ ದಾಳಿಕೋರರನ್ನು ಮಸೀದಿ ಒಳಗೆ ಪ್ರವೇಶಿಸದಂತೆ ತಡೆಯುವಲ್ಲಿ ತಮ್ಮ ಪ್ರಾಣವನ್ನೇ ಹರಾಜು ಹಾಕಿದ ಹೀರೋಗಳಾಗಿ ಸಮುದಾಯದಲ್ಲಿ ಸ್ಮರಣೆಗೊಳ್ಳುತ್ತಿದ್ದಾರೆ.

ಶಂಕಿತರಲ್ಲಿ ಒಬ್ಬನ ತಾಯಿ ದಾಳಿಗೆ ಸುಮಾರು ಎರಡು ಗಂಟೆಗಳ ಮುಂಚೆ ಪೊಲೀಸರಿಗೆ ಮಗ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾನೆ ಎಂದು ಮತ್ತು ಹಲವು ಬಂದೂಕುಗಳೊಂದಿಗೆ ನಾಪತ್ತೆಯಾಗಿದ್ದಾನೆ ಎಂದು ವರದಿ ಮಾಡಿದ್ದರು ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ದಾಳಿಕೋರರ ಮನೆಗಳಲ್ಲಿ 30ಕ್ಕೂ ಹೆಚ್ಚು ಬಂದೂಕುಗಳು ಪತ್ತೆಯಾಗಿವೆ. ಸ್ಯಾನ್ ಡಿಯಾಗೋ ಪೊಲೀಸ್ ಇಲಾಖೆ ಆರಂಭದಲ್ಲಿ ಐಸಿಎಸ್‌ಡಿಯಲ್ಲಿ ಸಕ್ರಿಯ ಶೂಟರ್ ಘಟನೆ ಎಂದು ವರದಿ ಮಾಡಿತ್ತು. ನಂತರ ಬೆದರಿಕೆಯನ್ನು ತಟಸ್ಥಗೊಳಿಸಲಾಗಿದೆ ಎಂದು ಘೋಷಿಸಿತು. 

ಮಸೀದಿಯ ಇಮಾಮ್ ತಹಾ ಹಸಾನ್ ಅವರು, ದಾಳಿಯ ನಂತರ ಮುಸ್ಲಿಂ ಸಮುದಾಯ ತೀವ್ರ ದುಃಖದಲ್ಲಿದೆ ಎಂದು ತಿಳಿಸಿದ್ದಾರೆ. “ಇಂತಹ ಘಟನೆ ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಅವರು ಬಣ್ಣಿಸಿದ್ದಾರೆ. ಅಮೆರಿಕದಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆ ಮತ್ತು ದ್ವೇಷದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಪೋಷಕರು, ಮಾಧ್ಯಮಗಳು, ಚುನಾಯಿತ ಪ್ರತಿನಿಧಿಗಳು, ಕಾನೂನು ಜಾರಿ ಸಂಸ್ಥೆಗಳು ಮತ್ತು ಧಾರ್ಮಿಕ ಮುಖಂಡರು ಒಟ್ಟಾಗಿ ಸಹಿಷ್ಣುತೆಯನ್ನು ಉತ್ತೇಜಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಸಂತ್ರಸ್ತರ ಕುಟುಂಬಗಳ ಗೌಪ್ಯತೆಯನ್ನು ಗೌರವಿಸುವಂತೆ ಮತ್ತು ಘಟನಾ ಸ್ಥಳದ ಗ್ರಾಫಿಕ್ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ಇಸ್ಲಾಮಿಕ್ ಸೆಂಟರ್ ಸ್ಯಾನ್ ಡಿಯಾಗೋ ನಗರದ ಮಧ್ಯಭಾಗದ ಉತ್ತರಕ್ಕೆ ಕ್ಲೇರ್‌ಮಾಂಟ್ ನೆರೆಹೊರೆಯಲ್ಲಿದೆ. ಈ ದಾಳಿ ಅಮೆರಿಕದಲ್ಲಿ ಇಸ್ಲಾಮೋಫೋಬಿಯಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆದಿದೆ. ರಾಜಕೀಯ ವ್ಯಕ್ತಿಗಳು ಮತ್ತು ವಿಮರ್ಶಕರು ಮುಸ್ಲಿಂ ವಿರೋಧಿ ವಾಕ್ಚಾತುರ್ಯವನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಘಟನೆಯನ್ನು “ಭಯಾನಕ” ಎಂದು ಬಣ್ಣಿಸಿದ್ದಾರೆ ಮತ್ತು ಪರಿಸ್ಥಿತಿಯ ಬಗ್ಗೆ ತಮಗೆ ವಿವರಿಸಲಾಗಿದೆ ಎಂದು ಹೇಳಿದ್ದಾರೆ. 

ಅಮೆರಿಕದಾದ್ಯಂತ ಹಲವು ಅಧಿಕಾರಿಗಳು ದಾಳಿಯನ್ನು ಖಂಡಿಸಿದ್ದಾರೆ. ಸ್ಯಾನ್ ಡಿಯಾಗೋದ ಸಾರಾ ಜೇಕಬ್ಸ್ ಅವರು, “ಆರಾಧಕರು, ವಿದ್ಯಾರ್ಥಿಗಳು ಮತ್ತು ಕ್ಲೇರ್‌ಮಾಂಟ್ ಸಮುದಾಯಕ್ಕಾಗಿ ನಾನು ದುಃಖಿಸುತ್ತೇನೆ. ಪ್ರತಿಯೊಬ್ಬರೂ ಪ್ರಾರ್ಥನೆ, ಪೂಜೆ ಮತ್ತು ಶಾಂತಿಯಿಂದ ಕಲಿಯುವ ಸ್ಥಳವಾಗಿರಬೇಕು” ಎಂದು ಹೇಳಿದ್ದಾರೆ. ಕ್ಯಾಲಿಫೋರ್ನಿಯಾ ರಾಜ್ಯಪಾಲ ಗ್ಯಾವಿನ್ ನ್ಯೂಸಮ್ ಅವರ ಕಚೇರಿ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ತಿಳಿಸಿದೆ. 

ಎಫ್‌ಬಿಐ ಸ್ಥಳೀಯ ಅಧಿಕಾರಿಗಳಿಗೆ ಸಹಾಯ ನೀಡುತ್ತಿದೆ ಮತ್ತು ತನಿಖೆಗೆ ಅಗತ್ಯವಾದ ಎಲ್ಲಾ ಸಂಪನ್ಮೂಲಗಳನ್ನು ನಿಯೋಜಿಸುತ್ತಿದೆ ಎಂದು ಕಾಶ್ ಪಟೇಲ್ ದೃಢಪಡಿಸಿದ್ದಾರೆ. ದಾಳಿಯ ನಂತರ ನ್ಯೂಯಾರ್ಕ್ ಪೊಲೀಸ್ ಇಲಾಖೆ ನಗರದಾದ್ಯಂತ ಮಸೀದಿಗಳ ಸುತ್ತಲೂ ಭದ್ರತೆ ಹೆಚ್ಚಿಸಿದೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರು ದಾಳಿಯನ್ನು ಖಂಡಿಸಿ, “ಇದು ಮುಸ್ಲಿಂ ವಿರೋಧಿ ಹಿಂಸಾಚಾರದ ಸ್ಪಷ್ಟ ಕೃತ್ಯ” ಎಂದು ಬಣ್ಣಿಸಿದ್ದಾರೆ. ಭಯ ಮತ್ತು ವಿಭಜನೆಯ ರಾಜಕೀಯದ ವಿರುದ್ಧ ಸಾಮೂಹಿಕ ಕ್ರಮಕ್ಕೆ ಕರೆ ನೀಡಿದ್ದಾರೆ. ಕೌನ್ಸಿಲ್ ಆನ್ ಅಮೇರಿಕನ್-ಇಸ್ಲಾಮಿಕ್ ರಿಲೇಶನ್ಸ್ (CAIR) ಸಂಸ್ಥೆ ದಾಳಿಯನ್ನು ಖಂಡಿಸಿ, “ಯಾರೂ ಪೂಜಾ ಸ್ಥಳದಲ್ಲಿ ಪ್ರಾರ್ಥನೆ ಮಾಡುವಾಗ ಅಥವಾ ಪ್ರಾಥಮಿಕ ಶಾಲೆಯಲ್ಲಿ ಓದುವಾಗ ತಮ್ಮ ಸುರಕ್ಷತೆಯ ಬಗ್ಗೆ ಭಯಪಡಬಾರದು” ಎಂದು ಹೇಳಿದೆ.

2025ರಲ್ಲಿ CAIR 8, 683 ನಾಗರಿಕ ಹಕ್ಕುಗಳ ದೂರುಗಳನ್ನು ದಾಖಲಿಸಿದೆ ಎಂದು ವರದಿಯಾಗಿದೆ. ಮುಸ್ಲಿಮರು ಮತ್ತು ವಲಸಿಗರ ವಿರುದ್ಧ ಹೆಚ್ಚುತ್ತಿರುವ ವಿರೋಧಿ ವಾಕ್ಚಾತುರ್ಯದ ನಡುವೆ ಇದು ಅತ್ಯಧಿಕ ಸಂಖ್ಯೆಯಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಮರ್ಶಕರು, ಹಲವು ರಿಪಬ್ಲಿಕನ್ ರಾಜಕಾರಣಿಗಳು ಮತ್ತು ಬಲಪಂಥೀಯ ವ್ಯಾಖ್ಯಾನಕಾರರ ಹೇಳಿಕೆಗಳು ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ. 

ರಾಂಡಿ ಫೈನ್, ಆಂಡಿ ಓಗಲ್ಸ್, ಟಾಮಿ ಟ್ಯೂಬರ್ವಿಲ್ಲೆ ಮತ್ತು ಚಿಪ್ ರಾಯ್ ಅವರಂತಹ ನಾಯಕರ ಹೇಳಿಕೆಗಳು ಈ ಸಂದರ್ಭದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ. ಘಟನೆಯ ಕುರಿತು ತನಿಖೆ ಇನ್ನೂ ಮುಂದುವರಿದಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...