Homeದಲಿತ್ ಫೈಲ್ಸ್ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

- Advertisement -
- Advertisement -

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ ಮೇಲೆ ದಾಂಧಲೆ-ದೌರ್ಜನ್ಯ ನಡೆಸಿದ್ದಾರೆ.

ಗಂಗಸಂದ್ರ ಗ್ರಾಮದ ಬಿ.ಎಂ ಕಾವಲ್ ಸರ್ವೇ ನಂ.24ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮಾದಿಗ ಸಮುದಾಯದ ಹಲವು ಕುಟುಂಬಗಳ ಭೂಮಿ ಇದೆ. ಸುಮಾರು 60-70 ವರ್ಷಗಳ ಹಿಂದೆಯೇ ಸರ್ಕಾರ ಈ ಭೂಮಿಯನ್ನು ದಲಿತ ಕುಟುಂಬಗಳ ಹೆಸರಿಗೆ ನೋಂದಣಿ ಮಾಡಿಕೊಟ್ಟಿದೆ. ಗ್ರಾಮದ ದಲಿತ ಕುಟುಂಬಗಳು ಮೂರು ತಲೆ ಮಾರುಗಳಿಂದ ಆ ಭೂಮಿಯನ್ನು ಉಳಿಸಿಕೊಂಡು ಬಂದಿದ್ದಾರೆ. ಆದರೆ, ಈಗ ಏಕಾಏಕಿ ಆ ಭೂಮಿಗೆ ಕಗ್ಗಲೀಪುರ ವಲಯ ಅರಣ್ಯಾಧಿಕಾರಿ ಮತ್ತು ಅವರ ಮೇಲಧಿಕಾರಿ ಎಸಿಎಫ್‌ ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಭೂಮಿ ಅರಣ್ಯ ಇಲಾಖೆಗೆ ಸೇರಿದ್ದೆಂದು ಭೂಮಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. 

ಮಾತ್ರವಲ್ಲದೆ, ಸುಮಾರು 50 ಮಂದಿ ಗೂಂಡಾಗಳಿಗೆ ಅರಣ್ಯ ಗಾರ್ಡ್‌ಗಳ ವೇಷ ತೊಡಿಸಿ, ಅರಣ್ಯ ಸಿಬ್ಬಂದಿಗಳೆಂದು ಬಿಂಬಿಸಿ, ದಲಿತ ನಿವಾಸಿಗಳ ಮೇಲೆ ದರ್ಪ ಮೆರೆದಿದ್ದಾರೆ ಎಂದು ಭೂ-ಒಡೆತನ ಹೊಂದಿರುವ ದಲಿತರು ಆರೋಪಿಸಿದ್ದಾರೆ. 

ದಲಿತ ಕುಟುಂಬಗಳ ಬಳಿ ಆ ಭೂಮಿಗೆ ಸಂಬಂಧಿಸಿದ ಆರ್‌ಟಿಸಿ, ಎಂಆರ್‌ ಕಾಪಿಗಳಿವೆ. ಆದರೆ, ದುರಸ್ತಿಯಾಗಿಲ್ಲ ಎಂಬ ಏಕೈಕ ನೆಪ ಇಟ್ಟುಕೊಂಡು ಈ ಭೂಮಿ ಮೀಸಲು ಅರಣ್ಯದ ಬಫರ್ ವಲಯವೆಂದು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ದಾಖಲಾತಿಗಳನ್ನು ಅಧಿಕಾರಿಗಳಿಗೆ ತೋರಿಸಿದರೆ, ಇವು ಸ್ವಾತಂತ್ರ್ಯ ನಂತರ ಕೊಟ್ಟಿರುವ ದಾಖಲೆಗಳು. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಕಾಲದಲ್ಲೇ ಇದು ಅರಣ್ಯ ಭೂಮಿ ಅಂತ ಆಗಿದೆ. ಇದು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಮೊಂಡುತನದ ವಾದ ಮಾಡುತ್ತಿರುವ ಅಧಿಕಾರಿಗಳು, ದಲಿತ ಕುಟುಂಬಗಳ ಮೇಲೆ ಗೂಂಡಾವರ್ತನೆ ತೋರಿದ್ದಾರೆ.

ಅಲ್ಲಿನ ನಿವಾಸಿಗಳು ತಮ್ಮ ಭೂಮಿಯ ರಕ್ಷಣೆಗಾಗಿ ಹಾಕಿದ್ದ ಡಾ. ಬಿ.ಆರ್‌ ಅಂಬೇಡ್ಕರ್ ರವರ ಭಾವಚಿತ್ರವಿದ್ದ ಬೋರ್ಡ್ ಕಿತ್ತು ಎಸೆದಿರುವ ಅಧಿಕಾರಿಗಳು, ದಲಿತರ ಭೂಮಿಗೆ ಕಾಂಪೌಂಡ್‌ ನಿರ್ಮಿಸಲು ಮುಂದಾಗಿದ್ದಾರೆ.

“ಭೂಮಿ ನಮ್ಮದು ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಸರ್ಕಾರವೇ ನಮ್ಮ ಪೂರ್ವಜರ ಹೆಸರಿಗೆ ಭೂಮಿಯನ್ನು ವರ್ಗಾಯಿಸಿ, ಕಂದಾಯ ಇಲಾಖೆಯಡಿ ದಾಖಲೆಗಳನ್ನು ಮಾಡಿ ಕೊಟ್ಟಿದೆ. ನಮ್ಮ ಜೀವನಕ್ಕೆ ಈ ಭೂಮಿಯೇ ಆಧಾರವಾಗಿದೆ. ಹಲವು ವರ್ಷಗಳಿಂದ ಈ ಭೂಮಿಯನ್ನು ಉಳಿಸಿಕೊಂಡು ಬಂದಿದ್ದೇವೆ. ಆದರೆ, ಅರಣ್ಯ ಅಧಿಕಾರಿಗಳು ನಮ್ಮ ಭೂಮಿಯನ್ನು ಕಸಿಕೊಳ್ಳುತ್ತಿದ್ದಾರೆ” ಎಂದು ದಲಿತ ಕುಟುಂಬಗಳು ನೋವು ತೋಡಿಕೊಳ್ಳುತ್ತಿದ್ದಾರೆ. 

ಅಧಿಕಾರಿಗಳ ದೌರ್ಜನ್ಯದ ಮಾಹಿತಿ ತಿಳಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ ಅವರು ಸ್ಥಳಕ್ಕೆ ಧಾವಿಸಿದ್ದು, ಅಧಿಕಾರಿಗಳ ಕಿರುಕುಳವನ್ನು ಖಂಡಿಸಿದ್ದಾರೆ. ನಿವಾಸಿಗಳೊಂದಿಗೆ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

“ಸೋಮವಾರವಷ್ಟೇ ಇದೇ ಭೂಮಿ ವಿಚಾರವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರನ್ನು ಭೇಟಿ ಮಾಡಿದ್ದೆವು. ಕಂದಾಯ ದಾಖಲಾತಿ ಸ್ಪಷ್ಟವಾಗಿದ್ದರೂ, ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮಂಜೂರಾಗಿರುವ ಭೂಮಿಯನ್ನ ಅರಣ್ಯ ಇಲಾಖೆಯವರು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ. ಕುಟುಂಬಗಳಿಗೆ ತೊಂದರೆ, ಕಿರುಕುಳ ನೀಡುತ್ತಿದ್ದಾರೆ ಎಂಬ ವಿಚಾರವನ್ನು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ” ಎಂದು ಯಶವಂತ್‌ ತಿಳಿಸಿದ್ದಾರೆ.

“ನಮ್ಮ ಮನವಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ‘ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವೆ ದಾಖಲಾತಿ ಮತ್ತು ಗಡಿ ವಿಚಾರದಲ್ಲಿ ಗೊಂದಲವಿದ್ದರೆ, ಅವುಗಳನ್ನ ನಿವಾರಿಸಲು ಎಸ್‌ಐಟಿ ರಚನೆ ಮಾಡಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಆ ಎಸ್‌ಐಟಿಗೆ ಅಧ್ಯಕ್ಷ ನಾನೇ ಆಗಿದ್ದೇನೆ. ಬೆಂಗಳೂರು ಎಸ್‌ಐಟಿ ಅಥವಾ ರಾಜ್ಯ ಎಸ್‌ಐಟಿಯಲ್ಲಿ ಗಂಗಸಂದ್ರದ ಭೂಮಿ ವಿಚಾರ ಚರ್ಚೆಗೆ ಬಂದಿಲ್ಲ. ನಿಮ್ಮ  ಕಂದಾಯ ದಾಖಲಾತಿಗಳು ಸ್ಪಷ್ಟವಾಗಿರುವ ಕಡೆಗೆ ಅರಣ್ಯ ಅಧಿಕಾರಿಗಳು ಹೋರಬಾರದೆಂದು ಡಿಸಿಎಫ್‌ ರವೀಂದ್ರ ಮೂಲಕ ಸ್ಪಷ್ಟ ಸೂಚನೆ ಕೊಡುತ್ತೇನೆ’ ಎಂಬುದಾಗಿ ಭರವಸೆ ನೀಡಿದ್ದರು. ಆದರೂ, ಇಂದು ಅರಣ್ಯ ಅಧಿಕಾರಿಗಳು ಏಕಾಏಕಿ ದಲಿತರ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ” ಎಂದು ಯಶವಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅಧಿಕಾರಿಗಳು ಕಾನೂನುಬಾಹಿರವಾಗಿ ದಲಿತರ ಭೂಮಿಯನ್ನು ಕಬ್ಜ ಮಾಡಲು ಬಂದಿದ್ದಾರೆ. 60/70 ವರ್ಷಗಳಿಂದ ಈ ಭೂಮಿಯನ್ನ ಉಳಿಸಿಕೊಂಡಿರುವ ಬಡವರನ್ನೇ ಅಪರಾಧಿಗಳನ್ನಾಗಿ ಮಾಡಲು ಮುಂದಾಗಿದ್ದಾರೆ. ವಿಧಾನಸಭೆಯಲ್ಲಿ ಭೂವಿವಾದದ ವಿಚಾರಗಳು ಚರ್ಚೆಗೆ ಬಂದಾಗ, ಅರಣ್ಯ ಇಲಾಖೆಯ ಸಚಿವರು, ‘ಯಾವುದೇ ಭೂಮಿಯಾಗಿದ್ದರೂ, 2-3 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು’ ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಆದರೂ, ಇಲ್ಲಿ ಎಲ್ಲ ದಾಖಲೆಗಳು ಸ್ಪಷ್ಟವಾಗಿದ್ದರೂ, ಅಧಿಕಾರಿಗಳು ಭೂಮಿಯನ್ನು ಕಿತ್ತುಕೊಳ್ಳಲು ಹವಣಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯ ಪ್ರವೇಶ ಮಾಡಬೇಕು. ಇಲ್ಲಿ ಅಕ್ರಮವಾಗಿ ಕಾಂಪೌಂಡ್ ಹಾಕಿ ದಲಿತರ ಭೂಮಿಯನ್ನು ಕಬ್ಜ ಮಾಡಿ, ತೊಂದರೆ ಕೊಡುತ್ತಿರುವ ಅಧಿಕಾರಿಗಳನ್ನು ತಡೆಯಬೇಕು. ಮತ್ತೆ ಈ ಭೂಮಿಯನ್ನು ವಿವಾದಕ್ಕೆ ಸಿಲುಕಿಸಿ, ದಲಿತ ಕುಟುಂಬಗಳಿಗೆ ತೊಂದರೆ ಕೊಡದಂತೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಯಶವಂತ್ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...