Homeದಲಿತ್ ಫೈಲ್ಸ್ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

- Advertisement -
- Advertisement -

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ ಮೇಲೆ ದಾಂಧಲೆ-ದೌರ್ಜನ್ಯ ನಡೆಸಿದ್ದಾರೆ.

ಗಂಗಸಂದ್ರ ಗ್ರಾಮದ ಬಿ.ಎಂ ಕಾವಲ್ ಸರ್ವೇ ನಂ.24ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮಾದಿಗ ಸಮುದಾಯದ ಹಲವು ಕುಟುಂಬಗಳ ಭೂಮಿ ಇದೆ. ಸುಮಾರು 60-70 ವರ್ಷಗಳ ಹಿಂದೆಯೇ ಸರ್ಕಾರ ಈ ಭೂಮಿಯನ್ನು ದಲಿತ ಕುಟುಂಬಗಳ ಹೆಸರಿಗೆ ನೋಂದಣಿ ಮಾಡಿಕೊಟ್ಟಿದೆ. ಗ್ರಾಮದ ದಲಿತ ಕುಟುಂಬಗಳು ಮೂರು ತಲೆ ಮಾರುಗಳಿಂದ ಆ ಭೂಮಿಯನ್ನು ಉಳಿಸಿಕೊಂಡು ಬಂದಿದ್ದಾರೆ. ಆದರೆ, ಈಗ ಏಕಾಏಕಿ ಆ ಭೂಮಿಗೆ ಕಗ್ಗಲೀಪುರ ವಲಯ ಅರಣ್ಯಾಧಿಕಾರಿ ಮತ್ತು ಅವರ ಮೇಲಧಿಕಾರಿ ಎಸಿಎಫ್‌ ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಭೂಮಿ ಅರಣ್ಯ ಇಲಾಖೆಗೆ ಸೇರಿದ್ದೆಂದು ಭೂಮಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. 

ಮಾತ್ರವಲ್ಲದೆ, ಸುಮಾರು 50 ಮಂದಿ ಗೂಂಡಾಗಳಿಗೆ ಅರಣ್ಯ ಗಾರ್ಡ್‌ಗಳ ವೇಷ ತೊಡಿಸಿ, ಅರಣ್ಯ ಸಿಬ್ಬಂದಿಗಳೆಂದು ಬಿಂಬಿಸಿ, ದಲಿತ ನಿವಾಸಿಗಳ ಮೇಲೆ ದರ್ಪ ಮೆರೆದಿದ್ದಾರೆ ಎಂದು ಭೂ-ಒಡೆತನ ಹೊಂದಿರುವ ದಲಿತರು ಆರೋಪಿಸಿದ್ದಾರೆ. 

ದಲಿತ ಕುಟುಂಬಗಳ ಬಳಿ ಆ ಭೂಮಿಗೆ ಸಂಬಂಧಿಸಿದ ಆರ್‌ಟಿಸಿ, ಎಂಆರ್‌ ಕಾಪಿಗಳಿವೆ. ಆದರೆ, ದುರಸ್ತಿಯಾಗಿಲ್ಲ ಎಂಬ ಏಕೈಕ ನೆಪ ಇಟ್ಟುಕೊಂಡು ಈ ಭೂಮಿ ಮೀಸಲು ಅರಣ್ಯದ ಬಫರ್ ವಲಯವೆಂದು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ದಾಖಲಾತಿಗಳನ್ನು ಅಧಿಕಾರಿಗಳಿಗೆ ತೋರಿಸಿದರೆ, ಇವು ಸ್ವಾತಂತ್ರ್ಯ ನಂತರ ಕೊಟ್ಟಿರುವ ದಾಖಲೆಗಳು. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಕಾಲದಲ್ಲೇ ಇದು ಅರಣ್ಯ ಭೂಮಿ ಅಂತ ಆಗಿದೆ. ಇದು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಮೊಂಡುತನದ ವಾದ ಮಾಡುತ್ತಿರುವ ಅಧಿಕಾರಿಗಳು, ದಲಿತ ಕುಟುಂಬಗಳ ಮೇಲೆ ಗೂಂಡಾವರ್ತನೆ ತೋರಿದ್ದಾರೆ.

ಅಲ್ಲಿನ ನಿವಾಸಿಗಳು ತಮ್ಮ ಭೂಮಿಯ ರಕ್ಷಣೆಗಾಗಿ ಹಾಕಿದ್ದ ಡಾ. ಬಿ.ಆರ್‌ ಅಂಬೇಡ್ಕರ್ ರವರ ಭಾವಚಿತ್ರವಿದ್ದ ಬೋರ್ಡ್ ಕಿತ್ತು ಎಸೆದಿರುವ ಅಧಿಕಾರಿಗಳು, ದಲಿತರ ಭೂಮಿಗೆ ಕಾಂಪೌಂಡ್‌ ನಿರ್ಮಿಸಲು ಮುಂದಾಗಿದ್ದಾರೆ.

“ಭೂಮಿ ನಮ್ಮದು ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಸರ್ಕಾರವೇ ನಮ್ಮ ಪೂರ್ವಜರ ಹೆಸರಿಗೆ ಭೂಮಿಯನ್ನು ವರ್ಗಾಯಿಸಿ, ಕಂದಾಯ ಇಲಾಖೆಯಡಿ ದಾಖಲೆಗಳನ್ನು ಮಾಡಿ ಕೊಟ್ಟಿದೆ. ನಮ್ಮ ಜೀವನಕ್ಕೆ ಈ ಭೂಮಿಯೇ ಆಧಾರವಾಗಿದೆ. ಹಲವು ವರ್ಷಗಳಿಂದ ಈ ಭೂಮಿಯನ್ನು ಉಳಿಸಿಕೊಂಡು ಬಂದಿದ್ದೇವೆ. ಆದರೆ, ಅರಣ್ಯ ಅಧಿಕಾರಿಗಳು ನಮ್ಮ ಭೂಮಿಯನ್ನು ಕಸಿಕೊಳ್ಳುತ್ತಿದ್ದಾರೆ” ಎಂದು ದಲಿತ ಕುಟುಂಬಗಳು ನೋವು ತೋಡಿಕೊಳ್ಳುತ್ತಿದ್ದಾರೆ. 

ಅಧಿಕಾರಿಗಳ ದೌರ್ಜನ್ಯದ ಮಾಹಿತಿ ತಿಳಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ ಅವರು ಸ್ಥಳಕ್ಕೆ ಧಾವಿಸಿದ್ದು, ಅಧಿಕಾರಿಗಳ ಕಿರುಕುಳವನ್ನು ಖಂಡಿಸಿದ್ದಾರೆ. ನಿವಾಸಿಗಳೊಂದಿಗೆ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

“ಸೋಮವಾರವಷ್ಟೇ ಇದೇ ಭೂಮಿ ವಿಚಾರವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರನ್ನು ಭೇಟಿ ಮಾಡಿದ್ದೆವು. ಕಂದಾಯ ದಾಖಲಾತಿ ಸ್ಪಷ್ಟವಾಗಿದ್ದರೂ, ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮಂಜೂರಾಗಿರುವ ಭೂಮಿಯನ್ನ ಅರಣ್ಯ ಇಲಾಖೆಯವರು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ. ಕುಟುಂಬಗಳಿಗೆ ತೊಂದರೆ, ಕಿರುಕುಳ ನೀಡುತ್ತಿದ್ದಾರೆ ಎಂಬ ವಿಚಾರವನ್ನು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ” ಎಂದು ಯಶವಂತ್‌ ತಿಳಿಸಿದ್ದಾರೆ.

“ನಮ್ಮ ಮನವಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ‘ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವೆ ದಾಖಲಾತಿ ಮತ್ತು ಗಡಿ ವಿಚಾರದಲ್ಲಿ ಗೊಂದಲವಿದ್ದರೆ, ಅವುಗಳನ್ನ ನಿವಾರಿಸಲು ಎಸ್‌ಐಟಿ ರಚನೆ ಮಾಡಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಆ ಎಸ್‌ಐಟಿಗೆ ಅಧ್ಯಕ್ಷ ನಾನೇ ಆಗಿದ್ದೇನೆ. ಬೆಂಗಳೂರು ಎಸ್‌ಐಟಿ ಅಥವಾ ರಾಜ್ಯ ಎಸ್‌ಐಟಿಯಲ್ಲಿ ಗಂಗಸಂದ್ರದ ಭೂಮಿ ವಿಚಾರ ಚರ್ಚೆಗೆ ಬಂದಿಲ್ಲ. ನಿಮ್ಮ  ಕಂದಾಯ ದಾಖಲಾತಿಗಳು ಸ್ಪಷ್ಟವಾಗಿರುವ ಕಡೆಗೆ ಅರಣ್ಯ ಅಧಿಕಾರಿಗಳು ಹೋರಬಾರದೆಂದು ಡಿಸಿಎಫ್‌ ರವೀಂದ್ರ ಮೂಲಕ ಸ್ಪಷ್ಟ ಸೂಚನೆ ಕೊಡುತ್ತೇನೆ’ ಎಂಬುದಾಗಿ ಭರವಸೆ ನೀಡಿದ್ದರು. ಆದರೂ, ಇಂದು ಅರಣ್ಯ ಅಧಿಕಾರಿಗಳು ಏಕಾಏಕಿ ದಲಿತರ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ” ಎಂದು ಯಶವಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅಧಿಕಾರಿಗಳು ಕಾನೂನುಬಾಹಿರವಾಗಿ ದಲಿತರ ಭೂಮಿಯನ್ನು ಕಬ್ಜ ಮಾಡಲು ಬಂದಿದ್ದಾರೆ. 60/70 ವರ್ಷಗಳಿಂದ ಈ ಭೂಮಿಯನ್ನ ಉಳಿಸಿಕೊಂಡಿರುವ ಬಡವರನ್ನೇ ಅಪರಾಧಿಗಳನ್ನಾಗಿ ಮಾಡಲು ಮುಂದಾಗಿದ್ದಾರೆ. ವಿಧಾನಸಭೆಯಲ್ಲಿ ಭೂವಿವಾದದ ವಿಚಾರಗಳು ಚರ್ಚೆಗೆ ಬಂದಾಗ, ಅರಣ್ಯ ಇಲಾಖೆಯ ಸಚಿವರು, ‘ಯಾವುದೇ ಭೂಮಿಯಾಗಿದ್ದರೂ, 2-3 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು’ ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಆದರೂ, ಇಲ್ಲಿ ಎಲ್ಲ ದಾಖಲೆಗಳು ಸ್ಪಷ್ಟವಾಗಿದ್ದರೂ, ಅಧಿಕಾರಿಗಳು ಭೂಮಿಯನ್ನು ಕಿತ್ತುಕೊಳ್ಳಲು ಹವಣಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯ ಪ್ರವೇಶ ಮಾಡಬೇಕು. ಇಲ್ಲಿ ಅಕ್ರಮವಾಗಿ ಕಾಂಪೌಂಡ್ ಹಾಕಿ ದಲಿತರ ಭೂಮಿಯನ್ನು ಕಬ್ಜ ಮಾಡಿ, ತೊಂದರೆ ಕೊಡುತ್ತಿರುವ ಅಧಿಕಾರಿಗಳನ್ನು ತಡೆಯಬೇಕು. ಮತ್ತೆ ಈ ಭೂಮಿಯನ್ನು ವಿವಾದಕ್ಕೆ ಸಿಲುಕಿಸಿ, ದಲಿತ ಕುಟುಂಬಗಳಿಗೆ ತೊಂದರೆ ಕೊಡದಂತೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಯಶವಂತ್ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...