HomeUncategorizedಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

- Advertisement -
- Advertisement -

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ ವ್ಯಾಪಾರಿಯೊಬ್ಬರು ವೈದ್ಯರ ಬೇಜವಾಬ್ದಾರಿತನದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನ್ಯಾಯ ಕೋರಿ ಕುಟುಂಬದವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೇ 14 ರಂದು ರಾತ್ರಿ ಮನೆಯಲ್ಲಿ ಶರೀಫ್ ರ ಮೇಲೆ ಹೋರಿ ಹಾಯ್ದಿದೆ. ಇದರಿಂದ ಗಾಯಗೊಂಡಿದ್ದ ಅವರನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಶರೀಫ್ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು, ಬಳಿಕ ಅವರನ್ನು ಮೇ 16ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಮೇ 20 ರಂದು ಶರೀಫ್ ಮೃತಪಟ್ಟಿದ್ದಾರೆ.

ಸೂರ್ಯ ಆಸ್ಪತ್ರೆಯ ವೈದ್ಯರು ಹೇಳಿದ್ದು:

ಈ ಸಂಬಂಧ ಪ್ರತಿಕ್ರಿಯೆಗಾಗಿ ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ಕರೆ ಮಾಡಿದಾಗ ನಾನು ಗೌರಿ.ಕಾಂನೊಂದಿಗೆ ಮಾತನಾಡಿದ ಡಾ. ರಾಜೇಶ್, ಅವರು (ಮೊಹಮ್ಮದ್ ಶರೀಫ್) ಹೊಟ್ಟೆನೋವು ಎಂದು ಬಂದಾಗ ನಾವು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಲು ತಿಳಿಸಿದೆವು. ಆದರೆ ರಾತ್ರಿ ನಮ್ಮಲ್ಲಿ ಸ್ಕ್ಯಾನಿಂಗ್ ಸೌಲಭ್ಯವಿಲ್ಲದ ಕಾರಣ ಅವರು ಮಂಗಳೂರಿಗೆ ಹೋಗಿ ಸ್ಕ್ಯಾನಿಂಗ್ ಮಾಡಿಸಿಕೊಂಡು ಬಂದರು. 

ಮಂಗಳೂರಿಂದ ತಂದಿದ್ದ ಅಲ್ಟ್ರಾಸೌಂಡ್ ವರದಿಯಲ್ಲಿ ‘ಕಿಡ್ನಿ ಸ್ಟೋನ್’ (ರೀನಲ್ ಸ್ಟೋನ್) ಇರುವುದು ಕಂಡುಬಂದಿತ್ತು. ಜೊತೆಗೆ ಮೂರು ದಿನಗಳಿಂದ ಮೋಷನ್ ಆಗಿಲ್ಲ ಎಂದಿದ್ದಕ್ಕೆ ನಾವು ಗ್ಲುಕೋಸ್ ನೀಡಿ, ಎನಿಮಾ ಕೊಟ್ಟೆವು. ಅದರಿಂದ ನೋವು ಕಡಿಮೆಯಾಗಿ ಅವರು ಮನೆಗೆ ಹೋಗುತ್ತೇನೆ ಎಂದರು. ಆದರೆ ಅಷ್ಟರಲ್ಲೇ ಬಂದ ಅವರ ರಕ್ತದ ವರದಿಯಲ್ಲಿ ಸೋಂಕು ಇರುವುದು ಪತ್ತೆಯಾಯಿತು. ಅದು ಕಿಡ್ನಿಯದ್ದೋ ಅಥವಾ ಕರುಳಿನದ್ದೋ ಎಂದು ನಿಖರವಾಗಿ ತಿಳಿಯಲು ‘ಸಿಟಿ ಸ್ಕ್ಯಾನ್’ ಮಾಡಿಸಬೇಕು ಎಂದು ತಿಳಿಸಿದೆವು ಆದರೆ ಅಷ್ಟರಲ್ಲಿ ಹೊಟ್ಟೆಯೊಳಗೆ ಪರ್ಫೊರೇಷನ್ (ರಂಧ್ರ) ಆಗಿದ್ದ ಕಾರಣ ಇದ್ದಕ್ಕಿದ್ದಂತೆ ಹೊಟ್ಟೆನೋವು ತೀವ್ರಗೊಂಡು, ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಹಾಗಾಗಿ ತಕ್ಷಣವೇ ಅವರನ್ನು ಮಂಗಳೂರಿಗೆ ಕಳುಹಿಸಿಕೊಟ್ಟೆವು ಎಂದಿದ್ದಾರೆ.

ಪ್ರಕರಣ ದಾಖಲು:

ಕುಟುಂಬಸ್ಥರ ದೂರಿನನ್ವಯ ಬೆಳ್ತಂಗಡಿ ಠಾಣೆಯಲ್ಲಿ ಯು.ಡಿ.ಆರ್ : 28/2026, ಕಲಂ: 194(3) (iv) ಬಿ.ಎನ್.ಎಸ್.ಎಸ್. 2023ರಂತೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷದ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಕೇಳಿಕೊಳ್ಳಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಆರೋಪ ಪ್ರತ್ಯಾರೋಪಗಳೇನೇ ಇದ್ದರು, 35 ವರ್ಷದ ಯುವಕನೊಬ್ಬ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಸಾವನಪ್ಪಿರುವುದು ಇಂದಿನ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿಗೆ ಹಿಡಿದ ಕನ್ನಡಿಯಂತಿದ್ದು ಒಂದು ಅಮೂಲ್ಯ ಜೀವ ಇನ್ನಿಲ್ಲವಾಗಿದೆ. ತನ್ನ ಕುಟುಂಬಕ್ಕೆ ಆಸರೆಯಾಗಿದ್ದ ಜೀವವೊಂದು ಉಸಿರು ಚೆಲ್ಲಿದೆ. ಆರೋಗ್ಯ ಇಲಾಖೆ ಈಗಲಾದರೂ ಎಚ್ಚೆತ್ತು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮವಹಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುತ್ತದೆಯೇ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...