Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು - ಚಂಪಾ.

- Advertisement -
- Advertisement -

ಜನವರಿ 10-11ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಕಲ್ಕುಳಿ ವಿಠಲ ಹೆಗ್ಗಡೆಯವರನ್ನು ಬದಲಿಸಿದರೆ ಬೆಂಗಳೂರಿನ ಕ.ಸಾ.ಪ ಕಚೇರಿ ಎದುರು ಧರಣಿ ನಡೆಸುತ್ತೇನೆ ಎಂದು ಹಿರಿಯ ಸಾಹಿತಿಗಳಾದ ಜಗದೀಶ್‌ ಕೊಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವನ್ನು ಬರೆದಿರುವ ಅವರು ಇದಕ್ಕೆ ಆಸ್ಪದ ಕೊಡುವುದಿಲ್ಲ ಎಂದು ನಂಬಿದ್ದೇನೆ. ಆದರೆ ಒಂದು ವೇಳೆ ಹಾಗೇನಾದರೂ ಆದರೆ ಧರಣಿ ನಿಶ್ಚಿತ. ನನ್ನೊಡನೆ ಸಮಾನ ಮನಸ್ಕರು ಜೊತೆಗೂಡಿ ಎಂದು ಮನವಿ ಮಾಡಿದ್ದಾರೆ. ಅವರು ಬರೆದ ಪತ್ರ ಕೆಳಗಿನಂತಿದೆ.

ಕನ್ನಡದ ಬಂಧು ಬಾಂಧವರಲ್ಲಿ ವಿನಂತಿ.

ಆತ್ಮೀಯರೇ, ಇದೇ ಜನವರಿ ೧೦ ಮತ್ತು ೧೧ ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನನ್ನ ಮೂರು ದಶಕಗಳ ಮಿತ್ರ ಹಾಗೂ ಸಾಮಾಜಿಕ ಚಳುವಳಿಯ ಹೋರಾಟಗಾರ ಕಲ್ಕುಳಿ ಹೆಗ್ಗಡೆ ಆಯ್ಕೆಯಾಗಿದ್ದಾರೆ. ಆದರೆ, ಅಲ್ಲಿನ ಸಂಘ ಪರಿವಾರದ ವಿ.ಹೆಚ್.ಪಿ ಮತ್ತು ಶ್ರೀ ರಾಮಸೇನೆಯ ಕಪಿ ಪುಂಗವರು ತಮ್ಮ ಬುಡಕ್ಕೆ ಮೆಣಸಿನಕಾಯಿ ಇಟ್ಟುಕೊಂಡು ಅಧ್ಯಕ್ಷರನ್ನು ಬದಲಿಸುವಂತೆ ಹೋರಾಟ ನಡೆಸುತ್ತಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಈವರೆಗೆ ಮೌನವಾಗಿದೆ. ಸಮ್ಮೇಳನದ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಜಿಲ್ಲಾಧ್ಯಕ್ಷ ಮತ್ತು ಶೃಂಗೇರಿ ತಾಲೂಕಿನ ಅಧ್ಯಕ್ಷ ಇಬ್ಬರೂ ಸರ್ಕಾರಿ ನೌಕರರಾಗಿರುವ ಕಾರಣ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆ. ಅದರ ಮೇಲೆ ಕನ್ನಡಿಗರಿಗೆ ಮಾತ್ರ ಹಕ್ಕಿದೆಯೇ ಹೊರತು, ಎದೆ ಸೀಳಿದರೆ ಮೂರಕ್ಷರವೂ ಇಲ್ಲದ ದೊಣ್ಣೆ ನಾಯಕರಿಗೆ ಯಾವ ಹಕ್ಕಿಲ್ಲ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಅವಿರೋಧವಾಗಿ ಆಯ್ಕೆಯಾದ ಸಮ್ಮೇಳನದ ಅಧ್ಯಕ್ಷರನ್ನು ಬದಲಾಯಿಸಿದ ಘಟನೆಗಳು ಜರುಗಿಲ್ಲ. ಒಂದು ವೇಳೆ ಅಂತಹ ಬದಲಾವಣೆಯಾದರೆ, ನಾವೆಲ್ಲಾ ಸಾಮೂಹಿಕವಾಗಿ ಪ್ರತಿಭಟಿಸುವುದು ನಮ್ಮ ಕರ್ತವ್ಯವಾಗಿದೆ. ಏಕೆಂದರೆ, ಮತೀಯ ಶಕ್ತಿಗಳಿಗೆ ನಾವು ಮಣಿದರೆ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಘ ಪರಿವಾರದ ಶಾಖಾ ಮಠವಾಗುವುದರಲ್ಲಿ ಸಂಶಯವಿಲ್ಲ.

ಕನ್ನಡವನ್ನು ಮಾಧ್ಯಮ ಭಾಷೆಯಾಗಿ ಉಳಿಸುವ ಕೆಲಸವನ್ನು ಹೊರತು ಪಡಿಸಿ, ಈವೆಂಟ್ ಮೇನೇಜ್ ಮೆಂಟ್ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಯ ಸ್ವರೂಪವನ್ನು ಬದಲಾಯಿಸಿಕೊಳ್ಳಲು ಒತ್ತಾಯ ಮಾಡುವುದರ ಜೊತೆಗೆ ನಾವೆಲ್ಲಾ ಕಲ್ಕುಳಿ ವಿಠಲ ಹೆಗ್ಗಡೆಯವರ ಪರ ನಿಲ್ಲೋಣ.

ನನಗೆ ಕಳೆದ ಹದಿನೈದು ವರ್ಷಗಳಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಸಂಪರ್ಕವಿಲ್ಲ. ಈಗಿನ ಅಧ್ಯಕ್ಷ ಮನು ಬಳಿಗಾರ್ ಜೊತೆ ಸಂಪರ್ಕ ಇರುವ ನನ್ನ ಅನೇಕ ಮಿತ್ರರಿದ್ದಾರೆ. ಅವರೆಲ್ಲರೂ ಈ ವಿಷಯ ಕುರಿತಾಗಿ ಅವರ ಜೊತೆ ಮಾತನಾಡಬೇಕಾಗಿ ನನ್ನ ವಿನಂತಿ.

ಸರ್ಕಾರ ಅಥವಾ ಇತರೆ ಬಾಹ್ಯ ಒತ್ತಡಕ್ಕೆ ಮಣಿದು ಹೆಗ್ಗಡೆಯವರನ್ನು ಬದಲಿಸಿದರೆ, ನಾನು ಸಮಾನ ಮನಸ್ಕ ಮಿತ್ರರ ಜೊತೆಗೂಡಿ ಕೇಂದ್ರ ಸಾಹಿತ್ಯ ಪರಿಷತ್ತಿನ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾನೆ. ನಿಮ್ಮೆಲ್ಲರ ಬೆಂಬಲವನ್ನು ಕೋರುತ್ತೇನೆ.
– ಜಗದೀಶ್ ಕೊಪ್ಪ

ಜಗದೀಶ್ ಕೊಪ್ಪ

ಈ ಪತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲದ ಮಹಾಪೂರವೇ ಹರಿದುಬಂದಿದೆ. ದೆಹಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಹೋರಾಟಗಾರರಾದ ಡಾ.ವಾಸು ಎಚ್‌.ವಿ, ಚಿತ್ರನಿರ್ದೇಶಕರಾದ ಕೇಸರಿ ಹರವೂ ಸೇರಿದಂತೆ ಹಲವಾರು ಹೋರಾಟಕ್ಕೆ ಜೊತೆಗೂಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಸಾಪದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಹಿರಿಯ ಸಾಹಿತಿ, ಹೋರಾಟಗಾರರಾದ ಚಂಪಾರವರನ್ನು ಮಾತಾಡಿಸಿತು. ಅವರು “ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಅದು ಕೇಂದ್ರ ಘಟಕದ ಅಡಿಯಲ್ಲಿ ಕೆಲಸ ಮಾಡುತ್ತದೆ. ಅದು ತಮ್ಮ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಕ್ರಮಬದ್ಧವಾದ ನಡವಳಿಕೆಯಾಗಿದೆ. ಆದ್ದರಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನವರು ಹಣ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು” ಎಂದು ತಿಳಿಸಿದ್ದಾರೆ.

ಚಂಪಾ

ಇನ್ನು ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಮನು ಬಳಿಗಾರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ..

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ – ಸಿರಿಮನೆ ನಾಗರಾಜ್‌

ಕಲ್ಕುಳಿ ವಿಠಲ ಹೆಗ್ಡೆ ಅವರ ಮಂಗನ ಬ್ಯಾಟೆ ಕನ್ನಡದ ವಿಶಿಷ್ಟ ಕೃತಿ. ದಶಕಕ್ಕೆ ಮುಂಚೆಯೇ ಶಿವಮೊಗ್ಗದಲ್ಲಿ ಜರುಗಿದ ಅಖಿಲಭಾರತ ಸಮ್ಮೇಳನದಲ್ಲಿ‌ ಮಾತನಾಡಿದ್ದಾರೆ ಹೆಗ್ಡೆ. ಅವರ ಮೇಲೆ ಪೂರ್ವಾಗ್ರಹಪೀಡಿತ ಪ್ರಕರಣಗಳು ಹೂಡಲ್ಪಟ್ಟಿವೆ ಎಂಬುದು ಎಲ್ಲರೂ ಅರಿತ ಸಂಗತಿಯೇ. ಕೆಲ ಪಟ್ಟಭದ್ರರಿಗೆ ಮೆಚ್ಚಾಗಲಿಲ್ಲವೆಂದು ಅವರ ನಿಯೋಜನೆಯನ್ನು ತಪ್ಪಿಸುವ ಯತ್ನ ಮಾಡಿದರೆ ಅದೊಂದು ಕೆಟ್ಟ ಪರಂಪರೆಯಾಗುವ ಸಂಭವವಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಿದೆ ಎಂದು ರೋಹಿತ್‌ ಅಗಸರಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...