Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ..

ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು - ಚಂಪಾ.

- Advertisement -
- Advertisement -

ಜನವರಿ 10-11ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಕಲ್ಕುಳಿ ವಿಠಲ ಹೆಗ್ಗಡೆಯವರನ್ನು ಬದಲಿಸಿದರೆ ಬೆಂಗಳೂರಿನ ಕ.ಸಾ.ಪ ಕಚೇರಿ ಎದುರು ಧರಣಿ ನಡೆಸುತ್ತೇನೆ ಎಂದು ಹಿರಿಯ ಸಾಹಿತಿಗಳಾದ ಜಗದೀಶ್‌ ಕೊಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರವನ್ನು ಬರೆದಿರುವ ಅವರು ಇದಕ್ಕೆ ಆಸ್ಪದ ಕೊಡುವುದಿಲ್ಲ ಎಂದು ನಂಬಿದ್ದೇನೆ. ಆದರೆ ಒಂದು ವೇಳೆ ಹಾಗೇನಾದರೂ ಆದರೆ ಧರಣಿ ನಿಶ್ಚಿತ. ನನ್ನೊಡನೆ ಸಮಾನ ಮನಸ್ಕರು ಜೊತೆಗೂಡಿ ಎಂದು ಮನವಿ ಮಾಡಿದ್ದಾರೆ. ಅವರು ಬರೆದ ಪತ್ರ ಕೆಳಗಿನಂತಿದೆ.

ಕನ್ನಡದ ಬಂಧು ಬಾಂಧವರಲ್ಲಿ ವಿನಂತಿ.

ಆತ್ಮೀಯರೇ, ಇದೇ ಜನವರಿ ೧೦ ಮತ್ತು ೧೧ ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನನ್ನ ಮೂರು ದಶಕಗಳ ಮಿತ್ರ ಹಾಗೂ ಸಾಮಾಜಿಕ ಚಳುವಳಿಯ ಹೋರಾಟಗಾರ ಕಲ್ಕುಳಿ ಹೆಗ್ಗಡೆ ಆಯ್ಕೆಯಾಗಿದ್ದಾರೆ. ಆದರೆ, ಅಲ್ಲಿನ ಸಂಘ ಪರಿವಾರದ ವಿ.ಹೆಚ್.ಪಿ ಮತ್ತು ಶ್ರೀ ರಾಮಸೇನೆಯ ಕಪಿ ಪುಂಗವರು ತಮ್ಮ ಬುಡಕ್ಕೆ ಮೆಣಸಿನಕಾಯಿ ಇಟ್ಟುಕೊಂಡು ಅಧ್ಯಕ್ಷರನ್ನು ಬದಲಿಸುವಂತೆ ಹೋರಾಟ ನಡೆಸುತ್ತಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಈವರೆಗೆ ಮೌನವಾಗಿದೆ. ಸಮ್ಮೇಳನದ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಜಿಲ್ಲಾಧ್ಯಕ್ಷ ಮತ್ತು ಶೃಂಗೇರಿ ತಾಲೂಕಿನ ಅಧ್ಯಕ್ಷ ಇಬ್ಬರೂ ಸರ್ಕಾರಿ ನೌಕರರಾಗಿರುವ ಕಾರಣ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆ. ಅದರ ಮೇಲೆ ಕನ್ನಡಿಗರಿಗೆ ಮಾತ್ರ ಹಕ್ಕಿದೆಯೇ ಹೊರತು, ಎದೆ ಸೀಳಿದರೆ ಮೂರಕ್ಷರವೂ ಇಲ್ಲದ ದೊಣ್ಣೆ ನಾಯಕರಿಗೆ ಯಾವ ಹಕ್ಕಿಲ್ಲ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಅವಿರೋಧವಾಗಿ ಆಯ್ಕೆಯಾದ ಸಮ್ಮೇಳನದ ಅಧ್ಯಕ್ಷರನ್ನು ಬದಲಾಯಿಸಿದ ಘಟನೆಗಳು ಜರುಗಿಲ್ಲ. ಒಂದು ವೇಳೆ ಅಂತಹ ಬದಲಾವಣೆಯಾದರೆ, ನಾವೆಲ್ಲಾ ಸಾಮೂಹಿಕವಾಗಿ ಪ್ರತಿಭಟಿಸುವುದು ನಮ್ಮ ಕರ್ತವ್ಯವಾಗಿದೆ. ಏಕೆಂದರೆ, ಮತೀಯ ಶಕ್ತಿಗಳಿಗೆ ನಾವು ಮಣಿದರೆ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಘ ಪರಿವಾರದ ಶಾಖಾ ಮಠವಾಗುವುದರಲ್ಲಿ ಸಂಶಯವಿಲ್ಲ.

ಕನ್ನಡವನ್ನು ಮಾಧ್ಯಮ ಭಾಷೆಯಾಗಿ ಉಳಿಸುವ ಕೆಲಸವನ್ನು ಹೊರತು ಪಡಿಸಿ, ಈವೆಂಟ್ ಮೇನೇಜ್ ಮೆಂಟ್ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಯ ಸ್ವರೂಪವನ್ನು ಬದಲಾಯಿಸಿಕೊಳ್ಳಲು ಒತ್ತಾಯ ಮಾಡುವುದರ ಜೊತೆಗೆ ನಾವೆಲ್ಲಾ ಕಲ್ಕುಳಿ ವಿಠಲ ಹೆಗ್ಗಡೆಯವರ ಪರ ನಿಲ್ಲೋಣ.

ನನಗೆ ಕಳೆದ ಹದಿನೈದು ವರ್ಷಗಳಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಸಂಪರ್ಕವಿಲ್ಲ. ಈಗಿನ ಅಧ್ಯಕ್ಷ ಮನು ಬಳಿಗಾರ್ ಜೊತೆ ಸಂಪರ್ಕ ಇರುವ ನನ್ನ ಅನೇಕ ಮಿತ್ರರಿದ್ದಾರೆ. ಅವರೆಲ್ಲರೂ ಈ ವಿಷಯ ಕುರಿತಾಗಿ ಅವರ ಜೊತೆ ಮಾತನಾಡಬೇಕಾಗಿ ನನ್ನ ವಿನಂತಿ.

ಸರ್ಕಾರ ಅಥವಾ ಇತರೆ ಬಾಹ್ಯ ಒತ್ತಡಕ್ಕೆ ಮಣಿದು ಹೆಗ್ಗಡೆಯವರನ್ನು ಬದಲಿಸಿದರೆ, ನಾನು ಸಮಾನ ಮನಸ್ಕ ಮಿತ್ರರ ಜೊತೆಗೂಡಿ ಕೇಂದ್ರ ಸಾಹಿತ್ಯ ಪರಿಷತ್ತಿನ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾನೆ. ನಿಮ್ಮೆಲ್ಲರ ಬೆಂಬಲವನ್ನು ಕೋರುತ್ತೇನೆ.
– ಜಗದೀಶ್ ಕೊಪ್ಪ

ಜಗದೀಶ್ ಕೊಪ್ಪ

ಈ ಪತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲದ ಮಹಾಪೂರವೇ ಹರಿದುಬಂದಿದೆ. ದೆಹಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಹೋರಾಟಗಾರರಾದ ಡಾ.ವಾಸು ಎಚ್‌.ವಿ, ಚಿತ್ರನಿರ್ದೇಶಕರಾದ ಕೇಸರಿ ಹರವೂ ಸೇರಿದಂತೆ ಹಲವಾರು ಹೋರಾಟಕ್ಕೆ ಜೊತೆಗೂಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಸಾಪದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಹಿರಿಯ ಸಾಹಿತಿ, ಹೋರಾಟಗಾರರಾದ ಚಂಪಾರವರನ್ನು ಮಾತಾಡಿಸಿತು. ಅವರು “ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಅದು ಕೇಂದ್ರ ಘಟಕದ ಅಡಿಯಲ್ಲಿ ಕೆಲಸ ಮಾಡುತ್ತದೆ. ಅದು ತಮ್ಮ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಕ್ರಮಬದ್ಧವಾದ ನಡವಳಿಕೆಯಾಗಿದೆ. ಆದ್ದರಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನವರು ಹಣ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಲು ಒಬ್ಬ ಮಾಜಿ ಅಧ್ಯಕ್ಷನಾಗಿ ಆಗ್ರಹಿಸುತ್ತೇನೆ. ಈ ರೀತಿಯ ರಾಜಕೀಯ ಹಸ್ತಕ್ಷೇಪ ಯಾರಿಗೂ ಸಲ್ಲದು” ಎಂದು ತಿಳಿಸಿದ್ದಾರೆ.

ಚಂಪಾ

ಇನ್ನು ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಮನು ಬಳಿಗಾರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ..

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ – ಸಿರಿಮನೆ ನಾಗರಾಜ್‌

ಕಲ್ಕುಳಿ ವಿಠಲ ಹೆಗ್ಡೆ ಅವರ ಮಂಗನ ಬ್ಯಾಟೆ ಕನ್ನಡದ ವಿಶಿಷ್ಟ ಕೃತಿ. ದಶಕಕ್ಕೆ ಮುಂಚೆಯೇ ಶಿವಮೊಗ್ಗದಲ್ಲಿ ಜರುಗಿದ ಅಖಿಲಭಾರತ ಸಮ್ಮೇಳನದಲ್ಲಿ‌ ಮಾತನಾಡಿದ್ದಾರೆ ಹೆಗ್ಡೆ. ಅವರ ಮೇಲೆ ಪೂರ್ವಾಗ್ರಹಪೀಡಿತ ಪ್ರಕರಣಗಳು ಹೂಡಲ್ಪಟ್ಟಿವೆ ಎಂಬುದು ಎಲ್ಲರೂ ಅರಿತ ಸಂಗತಿಯೇ. ಕೆಲ ಪಟ್ಟಭದ್ರರಿಗೆ ಮೆಚ್ಚಾಗಲಿಲ್ಲವೆಂದು ಅವರ ನಿಯೋಜನೆಯನ್ನು ತಪ್ಪಿಸುವ ಯತ್ನ ಮಾಡಿದರೆ ಅದೊಂದು ಕೆಟ್ಟ ಪರಂಪರೆಯಾಗುವ ಸಂಭವವಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಿದೆ ಎಂದು ರೋಹಿತ್‌ ಅಗಸರಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...