Homeಮುಖಪುಟತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

- Advertisement -
- Advertisement -

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ “ಅನರ್ಹ” ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಮುಂಬರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಕಣಕ್ಕಿಳಿಯಲು ಅನುಕೂಲವಾಗುವಂತೆ, ಅವರ ಫಿಟ್‌ನೆಸ್ ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ಪೀಠವು, “ತಾಯ್ತನದ ರಜೆಯ (Maternity Break) ನಂತರ ಕಣಕ್ಕೆ ಮರಳುತ್ತಿರುವ ಫೋಗಟ್ ಅವರನ್ನು ಸ್ಪರ್ಧಿಸದಂತೆ ತಡೆಯುತ್ತಿರುವುದು ಎಷ್ಟು ಸರಿ?” ಎಂದು ಒಕ್ಕೂಟವನ್ನು ಪ್ರಶ್ನಿಸಿದೆ. “ನಮ್ಮ ದೇಶದಲ್ಲಿ ತಾಯ್ತನವನ್ನು ಸಂಭ್ರಮಿಸಲಾಗುತ್ತದೆ, ಹಾಗಿರುವಾಗ ಅದು ಒಬ್ಬ ಕ್ರೀಡಾಪಟುವಿನ ವೃತ್ತಿಜೀವನಕ್ಕೆ ಮಾರಕವಾಗಬೇಕೇ?” ಎಂದು ಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಏಕಸದಸ್ಯ ಪೀಠದ ಆದೇಶದ ವಿರುದ್ಧ ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸುವಾಗ ಹೈಕೋರ್ಟ್ ಈ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೆ ಪ್ರಸಿದ್ಧ ಅಥ್ಲೀಟ್‌ಗಳಿಗೆ ನಿಯಮಗಳಲ್ಲಿ ವಿನಾಯಿತಿ ನೀಡುತ್ತಿದ್ದ ಕುಸ್ತಿ ಒಕ್ಕೂಟ, ಈಗ ವಿನೇಶ್ ಅವರ ವಿಷಯದಲ್ಲಿ ದಿಢೀರನೆ ನಿಯಮ ಬದಲಿಸಿರುವುದಕ್ಕೆ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಹಳೆಯ ನಿಯಮಗಳನ್ನು ಗಾಳಿಗೆ ತೂರಿ ಈ ರೀತಿ ನಡೆದುಕೊಳ್ಳುತ್ತಿರುವುದು ನಿಮ್ಮ ಉದ್ದೇಶವನ್ನು ಎದ್ದು ತೋರಿಸುತ್ತದೆ. ಕ್ರೀಡಾ ಸಂಸ್ಥೆಯಾಗಿ ಈ ರೀತಿ ವರ್ತಿಸಬೇಡಿ, ಇದು ಕ್ರೀಡಾ ಜಗತ್ತಿಗೆ ಒಳ್ಳೆಯದಲ್ಲ. ಒಕ್ಕೂಟವು ಯಾವುದೇ ಕ್ರೀಡಾಪಟುವಿನ ವಿರುದ್ಧ ‘ಸೇಡಿನ ರಾಜಕಾರಣ’ ಮಾಡಬಾರದು” ಎಂದು ನ್ಯಾಯಾಲಯ ಎಚ್ಚರಿಸಿದೆ.

ಮೇ 30 ಮತ್ತು 31 ರಂದು ನಡೆಯಲಿರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಿನೇಶ್ ಫೋಗಟ್ ಭಾಗವಹಿಸಲು ಅವಕಾಶ ಸಿಗುವಂತೆ ನೋಡಿಕೊಳ್ಳಿ ಎಂದು ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ, ಅವರ ದೈಹಿಕ ಸಾಮರ್ಥ್ಯ ಮತ್ತು ಸಿದ್ಧತೆಯನ್ನು ಅಳೆಯಲು ತಜ್ಞರ ಸಮಿತಿಯನ್ನು ರಚಿಸಲು ತಿಳಿಸಿದೆ. “ತಜ್ಞರ ಮೂಲಕ ಅವರ ಅವಕಾಶಗಳನ್ನು ಮರುಪರಿಶೀಲಿಸಿ… ಅವರು ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಿ” ಎಂದು ಪೀಠವು ಸರ್ಕಾರದ ಪರ ವಕೀಲರಿಗೆ ಸೂಚಿಸಿತು.

ವಿಶೇಷ ಸಂದರ್ಭಗಳಲ್ಲಿ ಅರ್ಹತಾ ನಿಯಮಗಳನ್ನು ಸಡಿಲಿಸಲು ‘ಭಾರತೀಯ ಕ್ರೀಡಾ ಪ್ರಾಧಿಕಾರ’ದ (SAI) ನಿಯಮಾವಳಿಗಳಲ್ಲಿ ಅವಕಾಶವಿದೆ ಎಂದು ಇದೇ ವೇಳೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತು.

ಕಣದಿಂದ ಹೊರದೂಡಲು ಸಂಚು?

ಜೂನ್ 26, 2026 ರವರೆಗೆ ತಮ್ಮನ್ನು ದೇಶೀಯ ಕೂಟಗಳಿಂದ ಅನರ್ಹಗೊಳಿಸಿರುವ ಕುಸ್ತಿ ಒಕ್ಕೂಟದ ನಿರ್ಧಾರವನ್ನು ವಿನೇಶ್ ಫೋಗಟ್ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ನಿವೃತ್ತಿ ಪಡೆದು ಮತ್ತೆ ಕಣಕ್ಕೆ ಮರಳುವ ಅಥ್ಲೀಟ್‌ಗಳು ಕಡ್ಡಾಯವಾಗಿ ಆರು ತಿಂಗಳ ಮುಂಚಿತವಾಗಿ ನೋಟಿಸ್ ನೀಡಬೇಕು” ಎಂಬ ಉದ್ದೀಪನ ಮದ್ದು ತಡೆ (Anti-doping) ನಿಯಮವನ್ನು ಒಕ್ಕೂಟ ನೆಪವಾಗಿ ಮುಂದಿಟ್ಟಿತ್ತು.

ಆದರೆ ವಿನೇಶ್ ಪರ ವಕೀಲರು, “ಇದು ವಿನೇಶ್ ಅವರು ಮತ್ತೆ ಕುಸ್ತಿ ಅಖಾಡಕ್ಕೆ ಇಳಿಯಬಾರದು ಎಂಬ ಏಕೈಕ ಉದ್ದೇಶದಿಂದ ಮಾಡಿರುವ ಸಂಚು” ಎಂದು ವಾದಿಸಿದರು. ಮೇ 10 ರಂದು ಗೊಂಡಾದಲ್ಲಿ ನಡೆದ ದೇಶೀಯ ಪಂದ್ಯಾವಳಿಯಲ್ಲಿ ವಿನೇಶ್ ಭಾಗವಹಿಸುವ ಕೇವಲ ಒಂದು ದಿನ ಮುಂಚೆ, ಅಂದರೆ ಮೇ 9 ರಂದು ಅವರಿಗೆ ಒಕ್ಕೂಟವು ಕಾರಣ ಕೇಳಿ ನೋಟಿಸ್ ನೀಡಿತ್ತು. ಇದನ್ನು ಉಲ್ಲೇಖಿಸಿದ ವಕೀಲರು, “ಅವರನ್ನು ಹೇಗಾದರೂ ಮಾಡಿ ಹೊರದಬ್ಬಲು ಯಾರೋ ಇಲ್ಲದ ಕಾರಣಗಳನ್ನು ಹುಡುಕುತ್ತಿದ್ದಾರೆ” ಎಂದು ವಾದ ಮಂಡಿಸಿದರು.

ಇನ್ನು, ಕುಸ್ತಿ ಒಕ್ಕೂಟ ನೀಡಿದ್ದ ನೋಟಿಸ್‌ನಲ್ಲಿ ಬಳಸಲಾಗಿದ್ದ ಪದಗಳ ಬಗ್ಗೆಯೂ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿನೇಶ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದನ್ನು ಒಕ್ಕೂಟವು ತನ್ನ ನೋಟಿಸ್‌ನಲ್ಲಿ “ರಾಷ್ಟ್ರೀಯ ಅವಮಾನ” ಎಂದು ಕರೆದಿತ್ತು. “ವಿನೇಶ್ ಅವರನ್ನೇ ಗುರಿಯಾಗಿಸಿಕೊಂಡು ನೀವು ನಿಯಮಗಳನ್ನು ಬದಲಾಯಿಸಿದ್ದೀರಿ ಎಂದು ನಾವು ಯಾಕೆ ಭಾವಿಸಬಾರದು?” ಎಂದು ಪೀಠವು ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡಿತು.

ಹೋರಾಟದ ಹಿನ್ನೆಲೆ

ಜುಲೈ 2025 ರಲ್ಲಿ ಮಗುವಿಗೆ ಜನ್ಮ ನೀಡಿದ್ದ ವಿನೇಶ್ ಫೋಗಟ್, ಇತ್ತೀಚೆಗಷ್ಟೇ ಮತ್ತೆ ತರಬೇತಿ ಆರಂಭಿಸಿದ್ದರು. ಒಕ್ಕೂಟದ ನಿಷೇಧದ ಆದೇಶದ ನಡುವೆಯೂ ಅವರು ಗೊಂಡಾದಲ್ಲಿ ನಡೆದ ನ್ಯಾಷನಲ್ ಓಪನ್ ರ‍್ಯಾಂಕಿಂಗ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಿದ್ದರು.

ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿನೇಶ್ ಫೋಗಟ್ ಅತ್ಯಂತ ಪ್ರಭಾವಶಾಲಿ ಹೆಸರುಗಳಲ್ಲಿ ಒಂದು. 2023 ರಲ್ಲಿ ಭಾರತೀಯ ಕುಸ್ತಿ ಒಕ್ಕೂಟದ ಅಂದಿನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ, ಮಹಿಳಾ ಕುಸ್ತಿಪಟುಗಳ ಪರವಾಗಿ ದೆಹಲಿಯ ರಸ್ತೆಯಲ್ಲಿ ಹೋರಾಟದ ಮುಂಚೂಣಿಯಲ್ಲಿದ್ದ ಧೀಮಂತ ಮಹಿಳೆ ಈ ವಿನೇಶ್.

ಕಳೆದ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ವಿಭಾಗದ ಫೈನಲ್ ತಲುಪಿದ್ದ ವಿನೇಶ್, ಅಂತಿಮ ಪಂದ್ಯದ ದಿನ ಬೆಳಗ್ಗೆ ಕೇವಲ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣಕ್ಕೆ ದುರದೃಷ್ಟವಶಾತ್ ಅನರ್ಹಗೊಂಡಿದ್ದರು. ಇದು ಇಡೀ ದೇಶದ ಕ್ರೀಡಾಭಿಮಾನಿಗಳಿಗೆ ಭಾರಿ ಆಘಾತ ನೀಡಿತ್ತು. ಆದರೆ ಈಗ ಕೋರ್ಟ್ ನೀಡಿರುವ ಈ ಆದೇಶ ಅವರ ಮುಂದಿನ ಒಲಿಂಪಿಕ್ಸ್ ಮತ್ತು ಏಷ್ಯನ್ ಗೇಮ್ಸ್ ಕನಸಿಗೆ ಮತ್ತೆ ಮರುಜೀವ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...