Homeಮುಖಪುಟತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

- Advertisement -
- Advertisement -

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ “ಅನರ್ಹ” ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಮುಂಬರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಕಣಕ್ಕಿಳಿಯಲು ಅನುಕೂಲವಾಗುವಂತೆ, ಅವರ ಫಿಟ್‌ನೆಸ್ ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ಪೀಠವು, “ತಾಯ್ತನದ ರಜೆಯ (Maternity Break) ನಂತರ ಕಣಕ್ಕೆ ಮರಳುತ್ತಿರುವ ಫೋಗಟ್ ಅವರನ್ನು ಸ್ಪರ್ಧಿಸದಂತೆ ತಡೆಯುತ್ತಿರುವುದು ಎಷ್ಟು ಸರಿ?” ಎಂದು ಒಕ್ಕೂಟವನ್ನು ಪ್ರಶ್ನಿಸಿದೆ. “ನಮ್ಮ ದೇಶದಲ್ಲಿ ತಾಯ್ತನವನ್ನು ಸಂಭ್ರಮಿಸಲಾಗುತ್ತದೆ, ಹಾಗಿರುವಾಗ ಅದು ಒಬ್ಬ ಕ್ರೀಡಾಪಟುವಿನ ವೃತ್ತಿಜೀವನಕ್ಕೆ ಮಾರಕವಾಗಬೇಕೇ?” ಎಂದು ಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಏಕಸದಸ್ಯ ಪೀಠದ ಆದೇಶದ ವಿರುದ್ಧ ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸುವಾಗ ಹೈಕೋರ್ಟ್ ಈ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೆ ಪ್ರಸಿದ್ಧ ಅಥ್ಲೀಟ್‌ಗಳಿಗೆ ನಿಯಮಗಳಲ್ಲಿ ವಿನಾಯಿತಿ ನೀಡುತ್ತಿದ್ದ ಕುಸ್ತಿ ಒಕ್ಕೂಟ, ಈಗ ವಿನೇಶ್ ಅವರ ವಿಷಯದಲ್ಲಿ ದಿಢೀರನೆ ನಿಯಮ ಬದಲಿಸಿರುವುದಕ್ಕೆ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಹಳೆಯ ನಿಯಮಗಳನ್ನು ಗಾಳಿಗೆ ತೂರಿ ಈ ರೀತಿ ನಡೆದುಕೊಳ್ಳುತ್ತಿರುವುದು ನಿಮ್ಮ ಉದ್ದೇಶವನ್ನು ಎದ್ದು ತೋರಿಸುತ್ತದೆ. ಕ್ರೀಡಾ ಸಂಸ್ಥೆಯಾಗಿ ಈ ರೀತಿ ವರ್ತಿಸಬೇಡಿ, ಇದು ಕ್ರೀಡಾ ಜಗತ್ತಿಗೆ ಒಳ್ಳೆಯದಲ್ಲ. ಒಕ್ಕೂಟವು ಯಾವುದೇ ಕ್ರೀಡಾಪಟುವಿನ ವಿರುದ್ಧ ‘ಸೇಡಿನ ರಾಜಕಾರಣ’ ಮಾಡಬಾರದು” ಎಂದು ನ್ಯಾಯಾಲಯ ಎಚ್ಚರಿಸಿದೆ.

ಮೇ 30 ಮತ್ತು 31 ರಂದು ನಡೆಯಲಿರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಿನೇಶ್ ಫೋಗಟ್ ಭಾಗವಹಿಸಲು ಅವಕಾಶ ಸಿಗುವಂತೆ ನೋಡಿಕೊಳ್ಳಿ ಎಂದು ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ, ಅವರ ದೈಹಿಕ ಸಾಮರ್ಥ್ಯ ಮತ್ತು ಸಿದ್ಧತೆಯನ್ನು ಅಳೆಯಲು ತಜ್ಞರ ಸಮಿತಿಯನ್ನು ರಚಿಸಲು ತಿಳಿಸಿದೆ. “ತಜ್ಞರ ಮೂಲಕ ಅವರ ಅವಕಾಶಗಳನ್ನು ಮರುಪರಿಶೀಲಿಸಿ… ಅವರು ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಿ” ಎಂದು ಪೀಠವು ಸರ್ಕಾರದ ಪರ ವಕೀಲರಿಗೆ ಸೂಚಿಸಿತು.

ವಿಶೇಷ ಸಂದರ್ಭಗಳಲ್ಲಿ ಅರ್ಹತಾ ನಿಯಮಗಳನ್ನು ಸಡಿಲಿಸಲು ‘ಭಾರತೀಯ ಕ್ರೀಡಾ ಪ್ರಾಧಿಕಾರ’ದ (SAI) ನಿಯಮಾವಳಿಗಳಲ್ಲಿ ಅವಕಾಶವಿದೆ ಎಂದು ಇದೇ ವೇಳೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತು.

ಕಣದಿಂದ ಹೊರದೂಡಲು ಸಂಚು?

ಜೂನ್ 26, 2026 ರವರೆಗೆ ತಮ್ಮನ್ನು ದೇಶೀಯ ಕೂಟಗಳಿಂದ ಅನರ್ಹಗೊಳಿಸಿರುವ ಕುಸ್ತಿ ಒಕ್ಕೂಟದ ನಿರ್ಧಾರವನ್ನು ವಿನೇಶ್ ಫೋಗಟ್ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ನಿವೃತ್ತಿ ಪಡೆದು ಮತ್ತೆ ಕಣಕ್ಕೆ ಮರಳುವ ಅಥ್ಲೀಟ್‌ಗಳು ಕಡ್ಡಾಯವಾಗಿ ಆರು ತಿಂಗಳ ಮುಂಚಿತವಾಗಿ ನೋಟಿಸ್ ನೀಡಬೇಕು” ಎಂಬ ಉದ್ದೀಪನ ಮದ್ದು ತಡೆ (Anti-doping) ನಿಯಮವನ್ನು ಒಕ್ಕೂಟ ನೆಪವಾಗಿ ಮುಂದಿಟ್ಟಿತ್ತು.

ಆದರೆ ವಿನೇಶ್ ಪರ ವಕೀಲರು, “ಇದು ವಿನೇಶ್ ಅವರು ಮತ್ತೆ ಕುಸ್ತಿ ಅಖಾಡಕ್ಕೆ ಇಳಿಯಬಾರದು ಎಂಬ ಏಕೈಕ ಉದ್ದೇಶದಿಂದ ಮಾಡಿರುವ ಸಂಚು” ಎಂದು ವಾದಿಸಿದರು. ಮೇ 10 ರಂದು ಗೊಂಡಾದಲ್ಲಿ ನಡೆದ ದೇಶೀಯ ಪಂದ್ಯಾವಳಿಯಲ್ಲಿ ವಿನೇಶ್ ಭಾಗವಹಿಸುವ ಕೇವಲ ಒಂದು ದಿನ ಮುಂಚೆ, ಅಂದರೆ ಮೇ 9 ರಂದು ಅವರಿಗೆ ಒಕ್ಕೂಟವು ಕಾರಣ ಕೇಳಿ ನೋಟಿಸ್ ನೀಡಿತ್ತು. ಇದನ್ನು ಉಲ್ಲೇಖಿಸಿದ ವಕೀಲರು, “ಅವರನ್ನು ಹೇಗಾದರೂ ಮಾಡಿ ಹೊರದಬ್ಬಲು ಯಾರೋ ಇಲ್ಲದ ಕಾರಣಗಳನ್ನು ಹುಡುಕುತ್ತಿದ್ದಾರೆ” ಎಂದು ವಾದ ಮಂಡಿಸಿದರು.

ಇನ್ನು, ಕುಸ್ತಿ ಒಕ್ಕೂಟ ನೀಡಿದ್ದ ನೋಟಿಸ್‌ನಲ್ಲಿ ಬಳಸಲಾಗಿದ್ದ ಪದಗಳ ಬಗ್ಗೆಯೂ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿನೇಶ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದನ್ನು ಒಕ್ಕೂಟವು ತನ್ನ ನೋಟಿಸ್‌ನಲ್ಲಿ “ರಾಷ್ಟ್ರೀಯ ಅವಮಾನ” ಎಂದು ಕರೆದಿತ್ತು. “ವಿನೇಶ್ ಅವರನ್ನೇ ಗುರಿಯಾಗಿಸಿಕೊಂಡು ನೀವು ನಿಯಮಗಳನ್ನು ಬದಲಾಯಿಸಿದ್ದೀರಿ ಎಂದು ನಾವು ಯಾಕೆ ಭಾವಿಸಬಾರದು?” ಎಂದು ಪೀಠವು ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡಿತು.

ಹೋರಾಟದ ಹಿನ್ನೆಲೆ

ಜುಲೈ 2025 ರಲ್ಲಿ ಮಗುವಿಗೆ ಜನ್ಮ ನೀಡಿದ್ದ ವಿನೇಶ್ ಫೋಗಟ್, ಇತ್ತೀಚೆಗಷ್ಟೇ ಮತ್ತೆ ತರಬೇತಿ ಆರಂಭಿಸಿದ್ದರು. ಒಕ್ಕೂಟದ ನಿಷೇಧದ ಆದೇಶದ ನಡುವೆಯೂ ಅವರು ಗೊಂಡಾದಲ್ಲಿ ನಡೆದ ನ್ಯಾಷನಲ್ ಓಪನ್ ರ‍್ಯಾಂಕಿಂಗ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಿದ್ದರು.

ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿನೇಶ್ ಫೋಗಟ್ ಅತ್ಯಂತ ಪ್ರಭಾವಶಾಲಿ ಹೆಸರುಗಳಲ್ಲಿ ಒಂದು. 2023 ರಲ್ಲಿ ಭಾರತೀಯ ಕುಸ್ತಿ ಒಕ್ಕೂಟದ ಅಂದಿನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ, ಮಹಿಳಾ ಕುಸ್ತಿಪಟುಗಳ ಪರವಾಗಿ ದೆಹಲಿಯ ರಸ್ತೆಯಲ್ಲಿ ಹೋರಾಟದ ಮುಂಚೂಣಿಯಲ್ಲಿದ್ದ ಧೀಮಂತ ಮಹಿಳೆ ಈ ವಿನೇಶ್.

ಕಳೆದ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ವಿಭಾಗದ ಫೈನಲ್ ತಲುಪಿದ್ದ ವಿನೇಶ್, ಅಂತಿಮ ಪಂದ್ಯದ ದಿನ ಬೆಳಗ್ಗೆ ಕೇವಲ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣಕ್ಕೆ ದುರದೃಷ್ಟವಶಾತ್ ಅನರ್ಹಗೊಂಡಿದ್ದರು. ಇದು ಇಡೀ ದೇಶದ ಕ್ರೀಡಾಭಿಮಾನಿಗಳಿಗೆ ಭಾರಿ ಆಘಾತ ನೀಡಿತ್ತು. ಆದರೆ ಈಗ ಕೋರ್ಟ್ ನೀಡಿರುವ ಈ ಆದೇಶ ಅವರ ಮುಂದಿನ ಒಲಿಂಪಿಕ್ಸ್ ಮತ್ತು ಏಷ್ಯನ್ ಗೇಮ್ಸ್ ಕನಸಿಗೆ ಮತ್ತೆ ಮರುಜೀವ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...