Homeಫ್ಯಾಕ್ಟ್‌ಚೆಕ್FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

- Advertisement -
- Advertisement -

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌ ಮೂಲಕ ವಿಡಂಬನಾತ್ಮಕ ಅಭಿಯಾನವಾಗಿ ಪ್ರಾರಂಭವಾದದ್ದು ಆನ್‌ಲೈನ್ ಆಂದೋಲನವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವಂತೆ ಕಾಣುತ್ತಿದೆ.

ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಈ ಸಿಜೆಪಿಯ ಸ್ಥಾಪಕರ ಅಭಿಜೀತ್ ದಿಪ್ಕೆ ಎಂಬಾತ ಎನ್ನಲಾಗ್ತಿದೆ. 30 ವರ್ಷ ವಯಸ್ಸಿನ ಅಭಿಜೀತ್ ದಿಪ್ಕೆ ಪುಣೆಯಲ್ಲಿ ಪತ್ರಿಕೋದ್ಯಮ ಅಧ್ಯಯನ ಮಾಡಿದ್ದು, ಪ್ರಸ್ತುತ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ ಎಂದು ಮೇ 22ರಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿಜೆಪಿಗೆ ಇಂಟರ್‌ನೆಟ್‌ನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿ, ಅದು ಆಡಳಿತವನ್ನು ಮುಖ್ಯವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಶುರು ಮಾಡುತ್ತಿದ್ದಂತೆ, ಬೆಜೆಪಿ ಬೆಂಬಲಿಗರು ಅಲರ್ಟ್ ಆಗಿದ್ದು, ಸಿಜೆಪಿ ಪಾಕಿಸ್ತಾನ ಮೂಲದ್ದು, ದೇಶದ ಯುವಜನರನ್ನು ಪ್ರಚೋದಿಸಿ ಆಂತರಿಕವಾಗಿ ದಂಗೆಯೆಬ್ಬಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಬಿಜೆಪಿ, ಸಂಘಪರಿವಾರವನ್ನು ವಿರೋಧಿಸುವವರು ದೇಶದ್ರೋಹಿಗಳು ಎಂಬ ತಮ್ಮ ಎಂದಿನ ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಬೆಂಬಲಿಗರು, ಸಿಜೆಪಿ ಪಾಕಿಸ್ತಾನ ಮೂಲದ್ದು, ಅದನ್ನು ಬೆಂಬಲಿಸುವವರು ದೇಶದ್ರೋಹಿಗಳು ಎಂಬಂತಹ ಒಂದು ಪ್ರಚಾರವನ್ನು ಇಂಟರ್‌ನೆಟ್‌ನಲ್ಲಿ ಬಹಳ ವ್ಯವಸ್ಥಿತವಾಗಿ ಕೈಗೊಂಡಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರು ಸಿಜೆಪಿಯ ಫಾಲೋವರ್ಸ್‌ಗಳ ಪೈ ಚಾರ್ಟ್ ಹೊಂದಿರುವ ಗ್ರಾಫಿಕ್ ಅನ್ನು 2026ರ ಮೇ 21ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಸಿಜೆಪಿ ಫಾಲೋವರ್ಸ್‌ಗಳ ಪೈಕಿ 49% ಮಂದಿ ಪಾಕಿಸ್ತಾನದವರು, 14% ಅಮೆರಿಕದವರು, 14% ಬಾಂಗ್ಲಾದೇಶದವರು ಮತ್ತು ಕೇವಲ 9% ಮಾತ್ರ ಭಾರತದವರು, ಉಳಿದವರು ಯುನೈಟೆಡ್ ಕಿಂಗ್‌ಡಂ (ಯುಕೆ) ಆಸ್ಟ್ರೇಲಿಯಾ, ಸೌದಿ ಅರೇಬಿಯಾ ಮತ್ತು ಯುಎಇಯವರು ಎಂದು ಹೇಳಿಕೊಂಡಿದ್ದಾರೆ. ಬಗ್ಗಾ ಸಿಜೆಪಿಯನ್ನು ‘ಪಾಕಿಸ್ತಾನ ಜನತಾ ಪಕ್ಷ’ ಎಂದು ತಮ್ಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ರಿಷಿ ಬಾಗ್ರಿ ಕೂಡ 2026ರ ಮೇ 21ರಂದು ಅದೇ ಗ್ರಾಫಿಕ್ ಅನ್ನು ಪೋಸ್ಟ್ ಮಾಡಿ “ಜಿರಳೆ ಜನತಾ ಪಕ್ಷದ ಸತ್ಯ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಮೆರಿಕದ ನಾಗರಿಕರು ಇದರ ಇನ್‌ಸ್ಟಾ ಫಾಲೋವರ್ಸ್‌ಗಳಲ್ಲಿ 77% ರಷ್ಟಿದ್ದಾರೆ. ಭಾರತದವರು ಕೇವಲ 9% ರಷ್ಟನ್ನು ಮಾತ್ರ” ಎಂದು ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್ ಪತ್ರಕರ್ತೆ ಚಿತ್ರಾ ತ್ರಿಪಾಠಿ ಕೂಡ ಫೇಸ್‌ಬುಕ್‌ನಲ್ಲಿ ವೈರಲ್ ಆದ ಹೇಳಿಕೆಯನ್ನು ಪುಷ್ಟೀಕರಿಸಿದ್ದರು. ಬಗ್ಗಾ ಅವರ ಮಾತುಗಳನ್ನು ಉಲ್ಲೇಖಿಸಿ, “ಕಾಕ್ರೋಚ್ ಜನತಾ ಪಕ್ಷದ ಅರ್ಧದಷ್ಟು ಫಾಲೋವರ್ಸ್ ಪಾಕಿಸ್ತಾನಿಗಳು” ಎಂದು ಬರೆದುಕೊಂಡಿದ್ದರು.

ಝೀ-ಮಾಲೀಕತ್ವದ ಸುದ್ದಿ ಸಂಸ್ಥೆ WION ಕೂಡ ಸಿಜೆಪಿಯ ಇನ್‌ಸ್ಟಾಗ್ರಾಮ್ ಪೇಜ್‌ನ “ವಿದೇಶಿ ಅನುಯಾಯಿಗಳ” ಬಗ್ಗೆ ವರದಿಯನ್ನು ಪ್ರಕಟಿಸಿತ್ತು. “ಪಾಕಿಸ್ತಾನ ‘ಜಿರಳೆ ಜನತಾ ಪಕ್ಷ’ದತ್ತ ದೃಷ್ಟಿ ಹಾಯಿಸಿದೆಯೇ? ನೆಟಿಜನ್‌ಗಳು ಹೆಚ್ಚಿನ ಸಂಖ್ಯೆಯ ಪಾಕ್, ಬಾಂಗ್ಲಾದೇಶ ಮತ್ತು ಟರ್ಕಿ ಮೂಲದ ಫಾಲೋವರ್ಸ್‌ಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿತ್ತು.

ಇದೇ ರೀತಿಯ ಪೋಸ್ಟ್‌ಗಳನ್ನು ಹಲವು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ನಿಜವೇ ಎಂಬ ಕುತೂಹಲದಿಂದ ನಾವು ಈ ಬಗ್ಗೆ ಮಾಹಿತಿಯನ್ನು ಹುಡುಕಿದ್ದೆವು. ಈ ವೇಳೆ ದೇಶದ ಪ್ರಸಿದ್ದ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆ altnews.in ಈ ಬಗ್ಗೆ ಸತ್ಯಾಸತ್ಯತೆಯ ವರದಿ ಪ್ರಕಟಿಸಿರುವುದು ಗಮನಿಸಿದ್ದೇವೆ.

altnews.in ತನ್ನ ವರದಿಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ನಾವು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಸಂಪರ್ಕಿಸಿದ್ದೇವೆ. ಈ ವೇಳೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನ ಫಾಲೋವರ್ಸ್‌ಗಳ ಮಾಹಿತಿಯನ್ನು ಸ್ಕ್ರೀನ್‌ ರೆಕಾರ್ಡ್ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಅದರ ಪ್ರಕಾರ, ಸಿಜೆಪಿ ಇನ್‌ಸ್ಟಾಗ್ರಾಮ್‌ ಪೇಜ್‌ನ ಫಾಲೋವರ್ಸ್‌ಗಳ ಪೈಕಿ ಶೇಕಡ 94.7ರಷ್ಟು ಜನರು ಭಾರತೀಯರು, 1% ಯುಎಸ್‌ದವರು, 0.7% ಯುಕೆ ಮತ್ತು ತಲಾ 0.6% ಜನರು ಕೆನಡಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನವರು ಎಂದು ಹೇಳಿದೆ.

altnews.in ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋ ಕೆಳಗೆ ನೋಡಬಹುದು

ಗಮನಾರ್ಹವಾಗಿ, ಅಭೀಜಿತ್ ದೀಪ್ಕೆ ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋದಲ್ಲಿ ಸಿಜೆಪಿಯ ಹೆಚ್ಚಿನ ಫಾಲೋವರ್ಸ್‌ಗಳನ್ನು ದೇಶಗಳಾಗಿ ವಿಂಗಡಿಸಿ ನೋಡಿದಾಗ ಅದರಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಎರಡೂ ಕಾಣಿಸುವುದಿಲ್ಲ. ವೈರಲ್ ಹೇಳಿಕೆಗಳನ್ನು ನಿರಾಕರಿಸಲು ದೀಪ್ಕೆ ಸ್ವತಃ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಮೇ 21 ರಂದು ಸಂಜೆ 5:17ಕ್ಕೆ ಅವರು ಅಪ್ಲೋಡ್ ಮಾಡಿದ ಸ್ಕ್ರೀನ್‌ಶಾಟ್‌ನಲ್ಲಿ, ಇದೇ ರೀತಿಯ ಅಂಕಿ ಅಂಶಗಳನ್ನು ಕಾಣಬಹುದು.

ಮೇ 23ರಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸುವ ವೇಳೆಯೂ ಅಭೀಜಿತ್ ಮೇಲಿನ ಸ್ಕ್ರೀನ್ ರೆಕಾರ್ಡ್ ಹಂಚಿಕೊಂಡಿದ್ದರು. “ನಮ್ಮ ಖಾತೆ ಹ್ಯಾಕ್ ಆಗುವ ಮೊದಲು ನಾವು ಮಾಧ್ಯಮಗಳೊಂದಿಗೆ ಹಂಚಿಕೊಂಡ ನಮ್ಮ ಪ್ರೇಕ್ಷಕರ ಜನಸಂಖ್ಯಾಶಾಸ್ತ್ರದ ಸ್ಕ್ರೀನ್ ರೆಕಾರ್ಡಿಂಗ್ ಇದು. ಶೇ. 94ಕ್ಕಿಂತ ಹೆಚ್ಚು ಪ್ರೇಕ್ಷಕರು ಭಾರತದವರು. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಯುವಕರನ್ನು ಪಾಕಿಸ್ತಾನಿ ಎಂದು ಏಕೆ ಹಣೆಪಟ್ಟಿ ಕಟ್ಟುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದರು.

ಕಿರಣ್ ರಿಜಿಜು ಅವರು, “ಪಾಕಿಸ್ತಾನ ಮತ್ತು ಜಾರ್ಜ್ ಸೊರೊಸ್ ಗ್ಯಾಂಗ್‌ನಿಂದ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅನುಯಾಯಿಗಳನ್ನು ಹುಡುಕುತ್ತಿರುವವರ ಬಗ್ಗೆ ನನಗೆ ವಿಷಾದವಿದೆ” ಎಂದು ಯಾರನ್ನೂ ಉಲ್ಲೇಖಿಸದೆ ಮೇ 23ರಂದು ಪೋಸ್ಟ್ ಹಾಕಿದ್ದರು.

ಒಟ್ಟಿನಲ್ಲಿ, ಸಿಜೆಪಿಯ ಫಾಲೋವರ್ಸ್‌ಗಳಲ್ಲಿ ಹೆಚ್ಚಿನವರು ಪಾಕಿಸ್ತಾನಿಗಳು ಎಂಬ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರ ಹೇಳಿಕೆಯನ್ನು ಇತರ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಬಲವಾಗಿ ಪ್ರತಿಪಾದಿಸಿದ್ದಾರೆ. ಆದರೆ, ಅದು ಸುಳ್ಳು. ಸಿಜೆಪಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಂಚಿಕೊಂಡ ಅಂಕಿ ಅಂಶಗಳ ಪ್ರಕಾರ, ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳಲ್ಲಿ ಶೇಕಡ 90ರಷ್ಟು ಮಂದಿ ಭಾರತೀಯರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...