Homeರಾಷ್ಟ್ರೀಯಅಷ್ಟೊಂದು 'ಸೆಂಟಿಮೆಂಟ್' ಬೇಡ: 'ಕಾಕ್ರೋಚ್ ಅಭಿಯಾನ'ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

- Advertisement -
- Advertisement -

“ವ್ಯವಸ್ಥೆಯ ಮೇಲೆ ದಾಳಿ ಮಾಡುವವರ” ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು “ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ  ಸೂರ್ಯ ಕಾಂತ್ ಅವರು ವಕೀಲರೊಬ್ಬರಿಗೆ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದರೂ ಸಹ, ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆ ತರಲು ದುರುದ್ದೇಶಪೂರಿತ ಅಪಪ್ರಚಾರವನ್ನು ಮುಂದುವರಿಸಲಾಗಿದೆ ಎಂದು ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ  ಸಲ್ಲಿಸಿದ್ದರು. ಅಲ್ಲದೆ, ನ್ಯಾಯಾಲಯದ ಒಳಗೆ ನಡೆಯುವ ವಾದ-ಪ್ರತಿವಾದಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಿಕೊಳ್ಳಬಾರದು ಎಂದು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು. ಇದರೊಂದಿಗೆ, ‘ಕಾಕ್ರೋಚ್ ಜನತಾ ಪಾರ್ಟಿ’ಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಮತ್ತೊಂದು ಪ್ರತ್ಯೇಕ ಪಿಐಎಲ್ ಕೂಡ ಸಲ್ಲಿಕೆಯಾಗಿತ್ತು.

“ಗೌರವಾನ್ವಿತ ಸಿಜೆಐ ಅವರು ಸ್ಪಷ್ಟನೆ ನೀಡಿದ ನಂತರವೂ, ವಿಷಯವನ್ನು ತಿರುಚಿ ದುರುದ್ದೇಶಪೂರಿತವಾಗಿ ಹರಡಲಾಗುತ್ತಿದೆ” ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಾಗ, ಮುಖ್ಯ ನ್ಯಾಯಮೂರ್ತಿಗಳು, “ಇದನ್ನು ಅಷ್ಟೊಂದು ಸೆಂಟಿಮೆಂಟಲ್ ಆಗಿ ತಗೋಬೇಡಿ,” ಎಂದು ಪ್ರತಿಕ್ರಿಯಿಸಿದರು. ಅಷ್ಟೇ ಅಲ್ಲದೆ, ಈ ಅರ್ಜಿಗಳ ತುರ್ತು ವಿಚಾರಣೆಯ ಮನವಿಯನ್ನು ತಿರಸ್ಕರಿಸಿದ ಸಿಜೆಐ, ಸೂಕ್ತ ಸಮಯದಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ವಿವಾದಕ್ಕೆ ಕಾರಣವೇನು?

ಕಳೆದ ಮೇ 15 ರಂದು ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಆಡಿದ್ದ ಕೆಲವು ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಇದೇ ವಿಷಯವನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಹೆಸರಿನಲ್ಲಿ ಆನ್‌ಲೈನ್ ಅಭಿಯಾನವೊಂದು ಶುರುವಾಗಿತ್ತು.

ಹಿರಿಯ ವಕೀಲರ ಹುದ್ದೆಯ ಆಕಾಂಕ್ಷಿಯಾಗಿದ್ದ ವಕೀಲರೊಬ್ಬರು, ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಆ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದ ಸಿಜೆಐ, ಈ ಹುದ್ದೆಗಾಗಿ ಹೀಗೆ “ಬೆನ್ನುಬೀಳುವುದು” ಸರಿಯೇ ಎಂದು ಪ್ರಶ್ನಿಸಿದ್ದರು.

ಆ ಸಂದರ್ಭದಲ್ಲಿ ಅವರು, “ಸಮಾಜದಲ್ಲಿ ವ್ಯವಸ್ಥೆಯ ಮೇಲೆ ದಾಳಿ ಮಾಡುವ ಕೆಲವು ಪರಾವಲಂಬಿಗಳು  ಈಗಾಗಲೇ ಇದ್ದಾರೆ, ನೀವು ಅವರೊಂದಿಗೆ ಕೈಜೋಡಿಸಲು ಬಯಸುತ್ತೀರಾ? ಸಮಾಜದಲ್ಲಿ ಯಾವುದೇ ಉದ್ಯೋಗ ಅಥವಾ ವೃತ್ತಿ ಬದುಕಿಲ್ಲದ ಕೆಲವು ಯುವಕರು ಜಿರಳೆಗಳ  ತರಹ ಇದ್ದಾರೆ. ಅಂಥವರು ಮಾಧ್ಯಮ, ಸಾಮಾಜಿಕ ಜಾಲತಾಣ, ಆರ್‌ಟಿಐ  ಕಾರ್ಯಕರ್ತರು ಮತ್ತು ಇತರೆ ಹೋರಾಟಗಾರರ ಸೋಗಿನಲ್ಲಿ ಎಲ್ಲರ ಮೇಲೆಯೂ ದಾಳಿ ಮಾಡಲು ಆರಂಭಿಸುತ್ತಾರೆ,” ಎಂದು ಹೇಳಿದ್ದರು.

ಸಿಜೆಐ ನೀಡಿದ ಸ್ಪಷ್ಟನೆ

ಈ ಹೇಳಿಕೆ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ತಾವು ದೇಶದ ಯುವಕರನ್ನು ಟೀಕಿಸಿಲ್ಲ, ಅದು ಸಂಪೂರ್ಣ ಆಧಾರರಹಿತವಾದದ್ದು ಎಂದು ಅವರು ಸ್ಪಷ್ಟಪಡಿಸಿದ್ದರು.

“ನಕಲಿ ಮತ್ತು ಬೋಗಸ್ ಪದವಿಗಳನ್ನು ಇಟ್ಟುಕೊಂಡು ವಕೀಲಿಕೆ ಸೇರಿದಂತೆ ಇತರೆ ಉದಾತ್ತ ವೃತ್ತಿಗಳಿಗೆ ನುಗ್ಗಿರುವವರನ್ನು ಮಾತ್ರ ನಾನು ನಿರ್ದಿಷ್ಟವಾಗಿ ಟೀಕಿಸಿದ್ದೇನೆ. ಇಂತಹವರೇ ಮಾಧ್ಯಮ, ಸೋಶಿಯಲ್ ಮೀಡಿಯಾಗಳಲ್ಲೂ ನುಸುಳಿದ್ದಾರೆ. ಇವರು ಸಮಾಜದ ಪರಾವಲಂಬಿಗಳಿದ್ದಂತೆ. ನಾನು ದೇಶದ ಯುವ ಜನತೆಯನ್ನು ಟೀಕಿಸಿದ್ದೇನೆ ಎನ್ನುವುದು ತಪ್ಪು. ನಮ್ಮ ದೇಶದ ಯುವ ಸಂಪತ್ತಿನ ಬಗ್ಗೆ ನನಗೆ ಹೆಮ್ಮೆಯಿದೆ, ಭಾರತದ ಪ್ರತಿಯೊಬ್ಬ ಯುವಕನೂ ನನಗೆ ಸ್ಫೂರ್ತಿ,” ಎಂದು ಸಿಜೆಐ ಹೇಳಿದ್ದರು.

ಮಹಾರಾಷ್ಟ್ರ ಮೂಲದ, ಪ್ರಸ್ತುತ ಅಮೆರಿಕದಲ್ಲಿ ನೆಲೆಸಿರುವ 30 ವರ್ಷದ ಅಭಿಜೀತ್ ದಿಪ್ಕೆ ಎಂಬುವವರು ಸಿಜೆಐ ಅವರ “ಜಿರಳೆ” ಹೇಳಿಕೆಗೆ ಕೌಂಟರ್ ಆಗಿ ಯುವಕರಿಗಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಂಬ ವೇದಿಕೆಯನ್ನು ಘೋಷಿಸಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಆಗಿತ್ತು.

ಆದರೆ, “ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ” ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಮೇರೆಗೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ  ಆದೇಶದಂತೆ ಗುರುವಾರ ಈ ‘ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ . ಇದರ ಬೆನ್ನಲ್ಲೇ ಅಭಿಜೀತ್ ದಿಪ್ಕೆ ಅವರು ‘ಕಾಕ್ರಾಚ್ ಈಸ್ ಬ್ಯಾಕ್’  ಎಂಬ ಹೊಸ ಖಾತೆಯನ್ನು ತೆರೆದು, ಜನರನ್ನು ಅದಕ್ಕೆ ಸೇರುವಂತೆ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...