Homeರಾಜಕೀಯಮೋದಿ ಸರ್ಕಾರದ ಮತ್ತೊಂದು ವಿದ್ರೋಹ

ಮೋದಿ ಸರ್ಕಾರದ ಮತ್ತೊಂದು ವಿದ್ರೋಹ

- Advertisement -
- Advertisement -

2014ರ ಚುನಾವಣೆಯಲ್ಲಿ ಯುಪಿಎ ಸರ್ಕಾರ ಮಕಾಡೆ ಮಲಗಿದ್ದು ತಾನು ಮಾಡಿಕೊಂಡಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳಿಂದ. ಆ ಭ್ರಷ್ಟಾಚಾರಗಳು ಹೊರಬಂದದ್ದು, ಅದೇ ಯುಪಿಎ ತಂದಿದ್ದ ಆರ್‍ಟಿಐ ಕಾಯ್ದೆಯಿಂದ! ಯುಪಿಎದ ಲಫಡಾಗಳು ಅದೇನೆ ಇರಲಿ, ಆರ್‍ಟಿಐನಂತಹ ಕಾಯ್ದೆಯನ್ನು ಜಾರಿಗೆ ತಂದು ಭ್ರಷ್ಟಾಚಾರವನ್ನು ವಿರೋಧಿಸುವ ಭಾರತೀಯರ ಕೈಗೆ ಒಂದು ಮಹಾ ಅಸ್ತ್ರವನ್ನು ಕೊಟ್ಟುಹೋಗಿದೆ. ಸರ್ಕಾರಗಳನ್ನೆ ಬುಡಮೇಲು ಆಗಿಸುವಷ್ಟರ ಮಟ್ಟಿಗೆ ಪ್ರಬಲವಾದ ಕಾಯ್ದೆ ಆರ್‍ಟಿಐ. ಆದರೀಗ ಮೋದಿ ಸರ್ಕಾರ ಅಂತಹ ಜನಪರ ಕಾಯ್ದೆಯನ್ನೇ ರದ್ದು ಮಾಡುವ ಹುನ್ನಾರ ನಡೆಸುತ್ತಿದೆ. ದುರಂತವೆಂದರೆ, ಆರ್‍ಟಿಐ ಕಾಯ್ದೆ ರದ್ದು ಮಾಡಲು ಹೊರಟಿರುವ ಮೋದಿ ಅಧಿಕಾರಕ್ಕೇರಿದ್ದು, ತಾನು ಪ್ರಧಾನಿಯಾದರೆ ಭ್ರಷ್ಟಾಚಾರ ಮಟ್ಟ ಹಾಕುತ್ತೇನೆ, ಬ್ಲ್ಯಾಕ್ ಮನಿ ವಾಪಾಸ್ ತರುತ್ತೇನೆ, ಲಂಚಕೋರರ ಜನ್ಮ ಜಾಲಾಡುತ್ತೇನೆ ಎಂದೆಲ್ಲ ಬಲೂನು ಹಾರಿಸಿಯೇ!
ಆರ್‍ಟಿಐ, ನಿಜಕ್ಕೂ ಭ್ರಷ್ಟಾಚಾರಿಗಳನ್ನು ಕಾಡಿದ ಕಾಯ್ದೆ. ಆದರೆ ಭ್ರಷ್ಟಾಚಾರವನ್ನು ನಿಯಂತ್ರಿಸಲು ಕೇವಲ ಆರ್‍ಟಿಐ ಮಾತ್ರವೇ ಸಾಲದು, ಅದರ ಜೊತೆಗೆ ಲೋಕಪಾಲ್ ಬಿಲ್, ಪಿ ನೋಟ್ (ಪಾರ್ಟಿಸಿಪೇಟರಿ ನೋಟ್) ಪಾರದರ್ಶಕೀಕರಣದಂತಹ ಜಬರ್‍ದಸ್ತ್ ಕಾನೂನುಗಳೂ ಜಾರಿಯಾಗಬೇಕು ಅನ್ನೋದು ಭ್ರಷ್ಟಾಚಾರದ ವಿರುದ್ಧದ ಹೋರಾಡುತ್ತಿದ್ದವರ ಅಳಲಾಗಿತ್ತು. ಮೋದಿಯ ಆಶ್ವಾಸನೆಗಳನ್ನು ಕೇಳಿದ ಜನ, ಬಿಜೆಪಿ ಅಧಿಕಾರಕ್ಕೇರಿದರೆ ಇಂತಹ ಇನ್ನಷ್ಟು ಟಫ್ ಕಾನೂನುಗಳು ಜಾರಿಗೆ ಬಂದು ಭ್ರಷ್ಟರ ಹೆಡೆಮುರಿ ಕಟ್ಟಲಿವೆ ಎಂದು ನಂಬಿದ್ದರೇ ವಿನಾಃ ಇರೋ ಆರ್‍ಟಿಐ ಅಸ್ತ್ರವನ್ನೇ ಕಿತ್ತುಕೊಳ್ಳಲಿದ್ದಾರೆ ಅಂತ ಎಣಿಸಿರಲಿಲ್ಲ.
ವಾಸ್ತವದಲ್ಲಿ ಆರ್‍ಟಿಐ ಎಷ್ಟು ಪರಿಣಾಮಕಾರಿ ಅಸ್ತ್ರವಾಗಿತ್ತೆಂದರೆ, ಹಲವು ಆರ್‍ಟಿಐ ಕಾರ್ಯಕರ್ತರನ್ನು ಭ್ರಷ್ಟರು ಕೊಲೆಯನ್ನೇ ಮಾಡಿಸಿದ್ದಾರೆ. ಹೀಗಾಗಿ ‘ಭ್ರಷ್ಟಾಚಾರ ವಿರೋಧಿ ಹೋರಾಟಗಾರರನ್ನು ರಕ್ಷಿಸುವ ಕಾಯ್ದೆ (Whisಣಟebಟoತಿeಡಿ ಚಿಛಿಣ)’ ತರಬೇಕೆಂಬ ಒತ್ತಾಯ ಕೇಳಿಬಂದಿತು. ಆದರೆ, ಈಗ ಎಲ್ಲವೂ ಉಲ್ಟಾ ಹೊಡೆಯಲು ಶುರುವಾಗಿದೆ. ಆರ್‍ಟಿಐ ಅರ್ಜಿ ಹಾಕಿದ ವ್ಯಕ್ತಿ ಸತ್ತರೆ, ಆ ಅರ್ಜಿಯನ್ನೂ ಕೈ ಬಿಡಬೇಕೆಂಬ ತಿದ್ದುಪಡಿ ತರಲಾಗುತ್ತಿದೆಯೆಂಬ ಸುದ್ದಿ ಇದೆ. ಅಂದರೆ, ನಿಮ್ಮ ಭ್ರಷ್ಟಾಚಾರವನ್ನು ಬಯಲುಗೊಳಿಸಬಹುದಾದ ಅರ್ಜಿ ಬಂದರೆ, ಅರ್ಜಿದಾರನನ್ನೇ ಮುಗಿಸಿ ಎಂಬ ಸಂದೇಶ ಅದರಿಂದ ಹೊರಡುತ್ತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಪ್ರಧಾನ ಆಪಾದಿತನಾಗಿರುವ ಕೇಸ್ ವಿಚಾರಣೆ ನಡೆಸುತ್ತಿದ್ದ ಸಿಬಿಐ ಜಡ್ಜ್ ಜಸ್ಟೀಸ್ ಲೋಯಾ ನಿಗೂಢವಾಗಿ ಸಾವನ್ನಪ್ಪಿದ್ದು, ಅದೇ ಪ್ರಕರಣದ ಮತ್ತೊಬ್ಬ ಇತ್ತೀಚೆಗೆ ಸಂಶಯಾಸ್ಪದವಾಗಿ ಸತ್ತದ್ದು, ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ನೂರಕ್ಕು ಹೆಚ್ಚು ಜನ ಸತ್ತು ಹೋದದ್ದನ್ನೆಲ್ಲ ಮೋದಿ ಸರ್ಕಾರ ನಗಣ್ಯವೆಂದು ಪರಿಗಣಿಸುತ್ತಿರೋದು ನೋಡಿದರೆ, ಇಂದು ಆರ್‍ಟಿಐ ಕಾಯ್ದೆಯೇ ಇಲ್ಲವಾಗುವಂತೆ ಅಥವಾ ದುರ್ಬಲವಾಗುವಂತೆ ಮಾಡಲು ಹೊರಟಿದ್ದಾರೆಂಬ ಆರೋಪವು ಗಂಭೀರವಾಗಿ ಕಾಡುತ್ತೆ. ಈ ಆರೋಪ ಮತ್ತು ಹೋರಾಟದ ಕುರಿತ ಕೆಲವು ವಿವರಗಳನ್ನು ನಮ್ಮ ಪತ್ರಿಕೆಯ ಓದುಗರಿಗೆ ತಲುಪಿಸಬೇಕಿದೆ.
ಜುಲೈ 18ರಿಂದ ಆರಂಭವಾಗಿರುವ ಲೋಕಸಭೆಯ ಮಳೆಗಾಲದ ಅಧಿವೇಶನದಲ್ಲಿ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ. ತಿದ್ದುಪಡಿಯ ನಿರ್ದಿಷ್ಟ ಅಂಶಗಳ ಬಗ್ಗೆ ಸಾರ್ವಜನಿಕವಾಗಿ ಯಾವ ಮಾಹಿತಿಯನ್ನು ಸಹ ಬಿಟ್ಟುಕೊಟ್ಟಿಲ್ಲ. ತಿದ್ದುಪಡಿಯ ಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕೆಂಬ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ. ಮೇಲ್ನೋಟಕ್ಕೆ ಮುಖ್ಯ ಮಾಹಿತಿ ಆಯುಕ್ತರ ಸಂಬಳ ನೀಡುವ ಅಧಿಕಾರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವ ತಿದ್ದುಪಡಿ ಮಾತ್ರವೇ ಎಂದು ಹೇಳುತ್ತಿದ್ದರೂ, ಅಧಿಕೃತ ಪ್ರಕಟಣೆ ಮಾಡದೇ ಇಷ್ಟೊಂದು ಗೌಪ್ಯತೆ ಕಾಪಾಡುತ್ತಿರುವುದರಿಂದ ಸಹಜವಾಗಿಯೇ ಗುಮಾನಿ ಹೆಚ್ಚಾಗಿದೆ.
ಮಾಹಿತಿ ಹಕ್ಕು ಕಾಯ್ದೆ ನಿಸ್ಸಂಶಯವಾಗಿ ದೇಶದ ಪ್ರತಿಯೊಬ್ಬ ಜನರ ಪ್ರಶ್ನಿಸುವ ಹಕ್ಕನ್ನು ಸಶಕ್ತಗೊಳಿಸುವ ಜನಪರ ಕಾಯ್ದೆಯಾಗಿದೆ. ಒಂದು ಅಂದಾಜಿನ ಪ್ರಕಾರ ಪ್ರತಿವರ್ಷ ಸುಮಾರು 6 ಮಿಲಿಯನ್ ಮಾಹಿತಿ ಹಕ್ಕು ಅರ್ಜಿಗಳು ಸಲ್ಲಿಕೆಯಾಗುತ್ತವೆ. ಪ್ರಪಂಚದಲ್ಲೇ ವ್ಯಾಪಕವಾದ ಪಾರದರ್ಶಕತೆಗೆ ಹೆಸರಾದ ಕಾಯ್ದೆ ಇದಾಗಿದೆ. ಬಡ ಗ್ರಾಮೀಣ ಮತ್ತು ನಗರ ನಿವಾಸಿಗಳು ತಮ್ಮ ಮೂಲಭೂತ ಅಧಿಕಾರವನ್ನು ತಿಳಿಯಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆರ್‍ಟಿಐ ಅರ್ಜಿ ಸಲ್ಲಿಸಿದ್ದಾರೆಂದು ರಾಷ್ಟ್ರೀಯ ಮೌಲ್ಯಮಾಪನ ಸರ್ವೇ ಗುರುತಿಸಿದೆ. ಗ್ರಾಮಪಂಚಾಯ್ತಿಯಿಂದ ಹಿಡಿದು ದೇಶದ ದೊಡ್ಡ ದೊಡ್ಡ ಸಂಸ್ಥೆಗಳನ್ನು ಪ್ರಶ್ನಿಸುವ, ಪಾರದರ್ಶಕತೆಯನ್ನು ಕೇಳುವ ಮತ್ತು ಯಾವುದೇ ಮಾಹಿತಿ ಪಡೆಯುವ ಅತ್ಯುತ್ತಮ ಕಾಯ್ದೆ ಇದಾಗಿದೆ.
ಮೊದಲ ಬಾರಿಗೆ 2017ರ ಏಪ್ರಿಲ್‍ನಲ್ಲಿ ಈ ಸರ್ಕಾರವು ತಿದ್ದುಪಡಿಯಾಗಬೇಕಿರುವ ಕರಡು ನಿಯಮಗಳನ್ನು ಮುಂದಿಟ್ಟಿತು. ಅದರಲ್ಲಿ ಅರ್ಜಿ ಸಲ್ಲಿಸಿದ ವ್ಯಕ್ತಿ ಒಂದು ವೇಳೆ ಮರಣ ಹೊಂದಿದ್ದಲ್ಲಿ ಆ ಅರ್ಜಿಯನ್ನು ವಜಾ ಮಾಡುವ ಅಧಿಕಾರವನ್ನು ನೀಡುವುದು ಒಂದಾಗಿದೆ. ಎರಡನೆಯದಾಗಿ, ಮಾಹಿತಿ ಆಯೋಗದ ಮುಖ್ಯಾಧಿಕಾರಿಗಳಿಗೆ ಸಂಬಳ ನೀಡುವ ನಿರ್ಧಾರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೀಡಿದರೆ ಆಯೋಗದ ಸ್ವಾಯತ್ತತೆಗೆ ಧಕ್ಕೆ ಬರುವುದಲ್ಲದೇ ಅವರ ಸ್ವಾತಂತ್ರ್ಯವನ್ನು ನಿಯಂತ್ರಣದಲ್ಲಿಟ್ಟಂತಾಗುತ್ತದೆ. ಈಗಾಗಲೇ ರಾಷ್ಟ್ರೀಯ ಭದ್ರತೆ, ವೈಯಕ್ತಿಕ ಗೌಪ್ಯತೆ, ಕಾಪಿರೈಟ್ ಇತ್ಯಾದಿಗಳ ನೆಪದಲ್ಲಿ 2016-17ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ.35ರಷ್ಟು ಅರ್ಜಿಗಳನ್ನು ಮಾಹಿತಿ ನೀಡದೇ ವಜಾ ಮಾಡಲಾಗಿದೆ. ಇದೇ ರೀತಿಯ ತಿದ್ದುಪಡಿಗಳಾದಲ್ಲಿ ಶೇ.100ರಷ್ಟು ಅರ್ಜಿಗಳು ವಜಾಗೊಳ್ಳುವ ಕಾಲ ದೂರವಿಲ್ಲ.
ದೇಶವನ್ನು ಕೊಳ್ಳೆ ಹೊಡೆಯುತ್ತಿರುವ ಕಾರ್ಪೊರೇಟ್ ಕುಳಗಳ ದೊಡ್ಡ ದೊಡ್ಡ ಹಗರಣಗಳು ಬೆಳಕಿಗೆ ಬಾರದಂತೆ ತಡೆಯುವ ದುರುದ್ದೇಶದಿಂದಲೇ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಹಲವು ಸಂಘಟನೆಗಳು ಆರೋಪ ಮಾಡಿವೆ. ಜೊತೆಗೆ ದೇಶಾದ್ಯಂತ ನೂರಾರು ಭ್ರಷ್ಟಾಚಾರ ವಿರೋಧಿ ಮತ್ತು ಜನಪರ ಸಂಘಟನೆಗಳು ಈ ತಿದ್ದುಪಡಿಯ ವಿರುದ್ಧ ಹೋರಾಟಕ್ಕಿಳಿದಿವೆ. ಎನ್‍ಸಿಪಿಆರ್‍ಐ (ಜನರ ಮಾಹಿತಿ ಹಕ್ಕಿಗಾಗಿ ರಾಷ್ಟ್ರೀಯ ಆಂದೋಲನ) ಈ ಹೋರಾಟದಲ್ಲಿ ಮೂಂಚೂಣಿಯಲ್ಲಿದ್ದು ಎನ್‍ಎಪಿಎಂ, ಎಸಿಟಿ, ಎನ್‍ಆರ್‍ಪಿಸಿ, ಎನ್‍ಎಫ್‍ಐಡಬ್ಲೂ ಮುಂತಾದ ಸಂಘಟನೆಗಳು ಜುಲೈ 18ರಂದು ಅಧಿವೇಶನದ ಆರಂಭದ ದಿನವೇ ದೆಹಲಿಯಲ್ಲಿ ಬೃಹತ್ ರ್ಯಾಲಿ ಮತ್ತು ‘ಜನ್ ಮಂಚ್’ ಹೋರಾಟ ನಡೆಸಿವೆ.
ಉದ್ದೇಶಿತ ತಿದ್ದುಪಡಿಯನ್ನು ಕೈಬಿಡುವುದು ಮತ್ತು ವಿಶಲ್ ಬ್ಲೋಯರ್ಸ್ ಪ್ರೊಟೆಕ್ಷನ್ ಆಕ್ಟ್ ತಕ್ಷಣದಿಂದ ಜಾರಿಗೆ ತರುವುದು, ಚುನಾವಣಾ ಬಾಂಡ್ (ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವವರ ಮಾಹಿತಿಯನ್ನು ಸಾರ್ವಜನಿಕಗೊಳಿಸದಿರುವುದು) ಪದ್ದತಿಯನ್ನು ಕೈಬಿಡುವುದು ಮತ್ತು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳಿಗೆ ಕೂಡಲೇ ಮುಖ್ಯಸ್ಥರನ್ನು ನೇಮಿಸುವಂತೆ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ಈ ಹೋರಾಟದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತರಾಗಿ ದುಡಿದು ಕೊಲೆಯಾದ ನೂರಾರು ಕುಟುಂಬಗಳ ಸದಸ್ಯರು ಭಾಗವಹಿಸುತ್ತಿರುವುದು ಮಹತ್ವದ ಸಂಗತಿಯಾಗಿದೆ. ಇತ್ತೀಚೆಗೆ ಬಿಹಾರದಲ್ಲಿ ಭ್ರಷ್ಟಾಚಾರವನ್ನು ಬಯಲುಗೊಳಿಸಿದ್ದಕ್ಕಾಗಿ ಕೊಲೆಗೀಡಾದ ರಾಜೇಂದರ್ ಸಿಂಗ್ ಮತ್ತು ವಾಲ್ಮೀಕಿ ಯಾದವ್‍ರವರ ಕುಟುಂಬ ಕೂಡ ಜನ್ ಮಂಚ್‍ನಲ್ಲಿ ಭಾಗವಹಿಸಿದೆ. ವ್ಯಾಪಂ ಹಗರಣವನ್ನು ಬೆಳಕಿಗೆ ತರುವಲ್ಲಿ ಮುಖ್ಯ ಪಾತ್ರ ವಹಿಸಿದ ಆಶಿಶ್ ಚತುರ್ವೇದಿ ಕೂಡ ಹೋರಾಟದಲ್ಲಿದ್ದಾರೆ.
ಕರ್ನಾಟಕವೂ ಈ ನಿಟ್ಟಿನಲ್ಲಿ ಕ್ರಿಯಾಶೀಲಗೊಳ್ಳುವ ಅಗತ್ಯವಿದೆ.

– ಮುತ್ತುರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...