Homeಕರ್ನಾಟಕ​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

- Advertisement -
- Advertisement -


​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.

​ಭೂಸ್ವಾಧೀನದ ವಿರುದ್ಧ ತಿರುಗಿಬಿದ್ದ ಬಿಡದಿ ರೈತರು ಕಳೆದ ಒಂದು ವರ್ಷದಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಬಿಎಂಆರ್‌ಡಿಎ (ಅಥವಾ ಜಿಬಿಎ) ಟೌನ್‌ಶಿಪ್‌ಗಾಗಿ ಬೈರಮಂಗಲ, ಕೆಂಚಗಾರನಹಳ್ಳಿ ಗ್ರಾಮ ಪಂಚಾಯಿತಿಗಳ 26 ಹಳ್ಳಿಗಳ ಸುಮಾರು 9600 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ಥಳೀಯ ರೈತರು ಗಟ್ಟಿ ಧ್ವನಿಯಲ್ಲಿ ವಿರೋಧಿಸುತ್ತಿದ್ದಾರೆ. ವಾಸ್ತವವಾಗಿ ಇಲ್ಲಿನ ಬಹುಪಾಲು ಕುಟುಂಬಗಳು ರೈತಾಪಿ ಕುಟುಂಬಗಳಾಗಿದ್ದು, ವೃಷಭಾವತಿ ಜಲಾಶಯಕ್ಕೆ (ರಿಸರ್ವಾಯರ್) ಹೊಂದಿಕೊಂಡಂತಿರುವ ಈ ಭೂಮಿಗಳಲ್ಲಿ ತೋಟಗಾರಿಕೆ ಬೆಳೆಗಳಾದ ತೆಂಗು, ಅಡಿಕೆ, ಮಾವು ಸೇರಿದಂತೆ ರೇಷ್ಮೆಯಂತಹ ವಾಣಿಜ್ಯ ಬೆಳೆಗಳು, ಹಲವು ಬಗೆಯ ಸೊಪ್ಪು, ಹಣ್ಣು, ತರಕಾರಿಗಳು ಹೇರಳವಾಗಿ ಬೆಳೆಯುವ ಪ್ರದೇಶವಾಗಿದೆ. ಹಾಲು ಇಲ್ಲಿನ ಮತ್ತೊಂದು ಬಹುಮುಖ್ಯ ಕೃಷಿ ಉತ್ಪಾದನೆಯಾಗಿದೆ.

​ಕಳೆದ 20 ವರ್ಷಗಳಿಂದಲೂ ಸುದ್ದಿಯಲ್ಲಿರುವ ಈ ಟೌನ್‌ಶಿಪ್ ಯೋಜನೆಯು ಎಲ್ಲಾ ಪಕ್ಷಗಳ ಸರ್ಕಾರಗಳ ಅವಧಿಯನ್ನೂ ದಾಟಿ ಬಂದಿದ್ದು, ಇದೇ ಕಾರಣಕ್ಕೆ ಪರಸ್ಪರ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ.
​ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಭೂಸ್ವಾಧೀನಕ್ಕೆ ನೋಟಿಫಿಕೇಶನ್ ಮಾಡಿದ್ದು, ಆ ಭೂಮಿಯನ್ನು ಕೆಂಪು ವಲಯವಾಗಿ ಮೀಸಲಿರಿಸಿ ಯಾವುದೇ ರೀತಿಯ ಅಭಿವೃದ್ಧಿಯಾಗದಂತೆ ತಡೆ ಹಿಡಿದಿದ್ದರು. ಆದರೆ, ಇಂದು “ನಾವು ರೈತರ ಪರ, ಭೂಮಿ ಉಳಿಸುತ್ತೇವೆ” ಎಂದು ಸರಣಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಇದನ್ನೇ ದಾಳವಾಗಿ ಬಳಸಿಕೊಳ್ಳುತ್ತಿರುವ ಪ್ರಭಾವಿ ರಾಜಕಾರಣಿ, ಜಿಬಿಎ ನೇತೃತ್ವ ವಹಿಸಿರುವ ಡಿಕೆಶಿ, “ಟೌನ್‌ಶಿಪ್ ಮಾಡಿಯೇ ಸಿದ್ದ” ಎಂದು ಮುನ್ನುಗ್ಗುತ್ತಿದ್ದಾರೆ.

​ಎರಡೂ ಪಕ್ಷಗಳು ಪ್ರತಿದಿನ ಒಂದಿಲ್ಲೊಂದು ದಾಳ ಉರುಳಿಸುತ್ತಿವೆ. ಡಿಕೆಶಿ ಕೆಲವು ರೈತರನ್ನು ಕರೆದು “ಭೂಮಿ ನೀಡಲು ಸಿದ್ಧ” ಎಂದು ಹೇಳಿಕೆ ಕೊಡಿಸಿ, “80% ರೈತರು ಭೂಸ್ವಾಧೀನಕ್ಕೆ ಒಪ್ಪಿದ್ದಾರೆ” ಎಂದು ಪತ್ರಿಕಾಗೋಷ್ಠಿ ನಡೆಸಿದರೆ, ಜೆಡಿಎಸ್ ನಾಯಕರು ಗ್ರಾಮಗಳಿಗೆ ಭೇಟಿ ನೀಡಿ ಜನಾಭಿಪ್ರಾಯ ಸಂಗ್ರಹಣೆ ನಡೆಸುವ ನೆಪದಲ್ಲಿ ರೋಡ್ ಶೋ ನಡೆಸಿ, “ರೈತರು ಭೂಸ್ವಾಧೀನದ ವಿರುದ್ಧವಿದ್ದಾರೆ, ನಾವು ಅವರ ಜೊತೆಗಿದ್ದೇವೆ” ಎಂದಿದ್ದಾರೆ. ರೈತರು ಮಾತ್ರ, “ಡಿಕೆಶಿ ಸುಳ್ಳು ಹೇಳುತ್ತಿದ್ದಾರೆ, ಅವರ ಮಾತು ನಿಜವಾಗಿದ್ದರೆ ಭೂಮಿ ನೀಡಲು ಒಪ್ಪಿರುವ 80% ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಿ” ಎಂದು ಸವಾಲು ಹಾಕಿದ್ದಾರೆ.ದಿಯ ಈ ಟೌನ್‌ಶಿಪ್ ಯೋಜನೆ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದರೆ, ಈ ರಾಜಕಾರಣಿಗಳ ಪ್ರತಿಷ್ಠೆಯ ಬರಾಟೆಯ ಮಧ್ಯೆ ನಲುಗುತ್ತಿರುವುದು ಮಾತ್ರ ಸಾಮಾನ್ಯ ರೈತರು.

​ಇಲ್ಲಿರುವುದು ಸಣ್ಣ ಮತ್ತು ಅತಿ ಸಣ್ಣ ರೈತರಾದರೂ, ಮೊದಲಿನಿಂದಲೂ ನೀರಾವರಿ ಪ್ರದೇಶವಾಗಿರುವುದರಿಂದ ಮತ್ತು ಬೆಂಗಳೂರಿಗೆ ಹೊಂದಿಕೊಂಡಂತಿರುವುದರಿಂದ, ಈ ಭಾಗದ ಬಹುಪಾಲು ಕುಟುಂಬಗಳು ಆರ್ಥಿಕವಾಗಿ ಸದೃಢವಾಗಿವೆ.

​ಇವೆಲ್ಲವುಗಳ ಮಧ್ಯೆ ರೈತರು ಯಾವುದೇ ಕಾರಣಕ್ಕೂ ಭೂಮಿಯನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಬಿಡದಿ ರೈತರಿಗೆ ರಾಜ್ಯದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ಕರ್ನಾಟಕ ಪ್ರಾಂತ್ಯ ರೈತಸಂಘ, ಕರ್ನಾಟಕ ರಾಜ್ಯ ರೈತಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿದಂತೆ ಹೋರಾಟಗಾರರು, ಬರಹಗಾರರು, ಪ್ರಗತಿಪರರು ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಪ್ರತಿದಿನ ಹೋರಾಟದ ಕಾವು ಹೆಚ್ಚುತ್ತಿದ್ದು ಇದು ನೇರವಾಗಿ ಡಿಕೆಶಿ ವಿರುದ್ಧ ತಿರುಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ರಮೇಶ್‌ ಚೀಮಾಚನಹಳ್ಳಿ

ದೇವನಹಳ್ಳಿ ಭೂ ಸ್ವಾದೀನ ವಿರೋಧಿ ಹೋರಾಟದ ಮುಂಚೂಣಿ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ರಮೇಶ್‌ ಚೀಮಾಚನಹಳ್ಳಿ
ರಮೇಶ್‌ ಚೀಮಾಚನಹಳ್ಳಿ
ದೇವನಹಳ್ಳಿ ಭೂ ಸ್ವಾದೀನ ವಿರೋಧಿ ಹೋರಾಟದ ಮುಂಚೂಣಿ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರು
- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...