HomeಮುಖಪುಟCBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

- Advertisement -
- Advertisement -

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ ಮಂಗಳವಾರ (ಜೂ.3) ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಖುದ್ದು ಹಾಜರಾಗಿದ್ದಾರೆ.

ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಆಗಿ ಮೌಲ್ಯಮಾಪನ ಮಾಡಲು ಈ ವರ್ಷ ಹೊಸ ವ್ಯವಸ್ಥೆಯನ್ನು ಪರಿಚಯಿಸಿತ್ತು. ಈ ವ್ಯವಸ್ಥೆಯ ಜಾರಿಯ ನಂತರ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಮೌಲ್ಯಮಾಪನ ದೋಷಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಜಾರ್ಖಂಡ್‌ನ ರಾಂಚಿಯ ನಿವಾಸಿಯಾದ ಸಾರ್ಥಕ್ ಸಿದ್ಧಾಂತ್, ತನಗೂ ಕೂಡ ಮರುಮೌಲ್ಯಮಾಪನದ ವೇಳೆ ಮಸುಕಾದ ಮತ್ತು ಅಪೂರ್ಣವಾದ ಡಿಜಿಟಲ್ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳು ಸಿಕ್ಕಾಗ ಅದರ ಬೆನ್ನು ಬಿದ್ದಿದ್ದರು.

ನೂರಾರು ಅಧಿಕೃತ ಪ್ರೊಕ್ಯೂರ್‌ಮೆಂಟ್ ದಾಖಲೆಗಳು ಮತ್ತು ಟೆಂಡರ್ ಪತ್ರಗಳನ್ನು ಪರಿಶೀಲಿಸಿದ ಸಾರ್ಥಕ್, ಸಿಬಿಎಸ್ಇ ಮೂರು ಹಂತಗಳಲ್ಲಿ ಟೆಂಡರ್ ನಿಯಮಗಳನ್ನು ಹೇಗೆ ಬದಲಾಯಿಸಿದೆ ಎಂಬುದನ್ನು ಪತ್ತೆಹಚ್ಚಿ ತನ್ನ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದರು.

ಹೈದರಾಬಾದ್ ಮೂಲದ ‘ಕೋಯೆಂಪ್ಟ್ ಎಜು ಟೆಕ್’ ಎಂಬ ಖಾಸಗಿ ವೆಂಡರ್ ಸಂಸ್ಥೆಗೆ ಲಾಭ ಮಾಡಿಕೊಡಲು ಸಿಬಿಎಸ್ಇ ಅರ್ಹತಾ ಮಾನದಂಡಗಳು ಮತ್ತು ತಾಂತ್ರಿಕ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಸಾರ್ಥಕ್ ಕನಿಷ್ಠ 15ಕ್ಕೂ ಹೆಚ್ಚು ಲೋಪದೋಷಗಳನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರು.

ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ನೇತೃತ್ವದ ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿತ್ತು.

ಸಾರ್ಥಕ್ ಸಿದ್ಧಾಂತ್ ಸಿಬಿಎಸ್‌ಸಿಯ ಖರೀದಿ ನಿಯಮಗಳ ಉಲ್ಲಂಘನೆ ಮತ್ತು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಯ ಕೊರತೆಯ ಬಗ್ಗೆ ಸಂಸದರ ಮುಂದೆ ದೃಢವಾದ ಪ್ರೆಸೆಂಟೇಶನ್ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾರ್ಥಕ್ ಅವರ ಈ ಸಾಹಸ ಮತ್ತು ಧೈರ್ಯ ಪ್ರಸ್ತುತ ದೇಶದಾದ್ಯಂತ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದು, ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಿಬಿಎಸ್ಇ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಸಾರ್ಥಕ್ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿರುವ ದಿಗ್ವಿಜಯ್ ಸಿಂಗ್, ‘ಆನ್ ಸ್ಕ್ರೀನ್ ಮಾರ್ಕಿಂಗ್ ವ್ಯವಸ್ಥೆಯಿಂದ ತೊಂದರೆ ಅನುಭವಿಸಿರುವುದಾಗಿ ಹೇಳಿರುವ ಸಾರ್ಥಕ್ ಸಿದ್ಧಾಂತ್ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮಂಡಿಸಿದ್ದಾರೆ. ಈ ವಿಷಯದ ಬಗ್ಗೆ ಸಿಬಿಎಸ್‌ಸಿಯ ಪ್ರತಿಕ್ರಿಯೆಯನ್ನೂ ನಾವು ನಿರೀಕ್ಷಿಸುತ್ತಿದ್ದೇವೆ. ಸಿಬಿಎಸ್‌ಸಿ ನೀಡುವ ಉತ್ತರದ ಆಧಾರದಲ್ಲಿ ಸಮಿತಿಯು ಮುಂದಿನ ನಿರ್ಧಾರ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.

ಲೋಕಸಭೆಯ 21 ಸದಸ್ಯರು ಹಾಗೂ ರಾಜ್ಯಸಭೆಯ 10 ಸದಸ್ಯರನ್ನು ಒಳಗೊಂಡಿರುವ ಈ ಸಂಸದೀಯ ಸ್ಥಾಯಿ ಸಮಿತಿಯ ನೇತೃತ್ವವನ್ನು ದಿಗ್ವಿಜಯ್ ಸಿಂಗ್ ವಹಿಸಿದ್ದಾರೆ. ಸಿಬಿಎಸ್‌ಸಿಯ ಆನ್ ಸ್ಕ್ರೀನ್ ಮಾರ್ಕಿಂಗ್ ಪೋರ್ಟಲ್ ಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 9 ಮತ್ತು 10ನೇ ತರಗತಿಗಳಲ್ಲಿ ತ್ರಿಭಾಷಾ ಸೂತ್ರದ ಅನುಷ್ಠಾನದ ಕುರಿತು ವ್ಯಕ್ತವಾಗಿರುವ ಕಳವಳಗಳನ್ನೂ ಸಮಿತಿ ಪರಿಶೀಲಿಸುತ್ತಿದೆ.

ಪ್ರಸ್ತುತ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬಿಎಸ್‌ಸಿ ಅಧ್ಯಕ್ಷರ ಅಭಿಪ್ರಾಯಗಳನ್ನೂ ಸಮಿತಿ ಆಲಿಸಿದೆ ಎಂದು ವರದಿಗಳು ತಿಳಿಸಿವೆ.

ಸಂಸದೀಯ ಸಮಿತಿಯ ಮುಂದೆ ಸಾಕ್ಷ್ಯಾಧಾರ ಅಥವಾ ಅಗತ್ಯ ಮಾಹಿತಿಯನ್ನು ಸಲ್ಲಿಸಲು ಯಾವುದೇ ಅಧಿಕಾರಿ ವಿಫಲರಾದರೆ ಅಥವಾ ಸಮಿತಿಯ ಕಾರ್ಯಕ್ಕೆ ಸಹಕರಿಸದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಲೋಕಸಭೆಯ ಹಕ್ಕುಚ್ಯುತಿ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅವಕಾಶವಿದೆ.

ಏನಿದು ಆನ್-ಸ್ಕ್ರೀನ್ ಮಾರ್ಕಿಂಗ್ ?

ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಎನ್ನುವುದು ವಿದ್ಯಾರ್ಥಿಗಳ ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಕಂಪ್ಯೂಟರ್ ಸ್ಕ್ರೀನ್ (ತೆರೆ) ಮೇಲೆಯೇ ಡಿಜಿಟಲ್ ಆಗಿ ಮೌಲ್ಯಮಾಪನ ಮಾಡುವ ಒಂದು ಆಧುನಿಕ ತಂತ್ರಜ್ಞಾನ ವ್ಯವಸ್ಥೆಯಾಗಿದೆ.

ಸಿಬಿಎಸ್ಇ ಸೇರಿದಂತೆ ಪ್ರಮುಖ ಪರೀಕ್ಷಾ ಮಂಡಳಿಗಳು ಮೌಲ್ಯಮಾಪನ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಪಾರದರ್ಶಕತೆ ತರಲು ಈ ವ್ಯವಸ್ಥೆಯನ್ನು ಬಳಸುತ್ತಿವೆ.

ವಿದ್ಯಾರ್ಥಿಗಳು ಬರೆದ ಭೌತಿಕ ಉತ್ತರ ಪತ್ರಿಕೆಗಳನ್ನು ಮೊದಲು ಹೈ-ಸ್ಪೀಡ್ ಸ್ಕ್ಯಾನರ್‌ಗಳ ಮೂಲಕ ಡಿಜಿಟಲ್ ಪ್ರತಿಗಳಾಗಿ (PDF/Image) ಪರಿವರ್ತಿಸಲಾಗುತ್ತದೆ.

ಸ್ಕ್ಯಾನ್ ಮಾಡಿದ ಈ ಪ್ರತಿಗಳನ್ನು ಅತ್ಯಂತ ಸುರಕ್ಷಿತವಾದ ಕೇಂದ್ರೀಕೃತ ಸರ್ವರ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮೌಲ್ಯಮಾಪಕರು (ಶಿಕ್ಷಕರು) ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಪರದೆಯ ಮೇಲೆ ಉತ್ತರ ಪತ್ರಿಕೆಗಳನ್ನು ನೋಡಿ, ಡಿಜಿಟಲ್ ಪೆನ್ ಅಥವಾ ಮೌಸ್ ಬಳಸಿ ತಪ್ಪು-ಒಪ್ಪುಗಳನ್ನು ಗುರುತಿಸುತ್ತಾರೆ.

ಪ್ರತಿ ಪ್ರಶ್ನೆಗೆ ಬರುವ ಅಂಕಗಳನ್ನು ಸಾಫ್ಟ್‌ವೇರ್‌ನಲ್ಲೇ ನೇರವಾಗಿ ನಮೂದಿಸಲಾಗುತ್ತದೆ. ಸಿಸ್ಟಮ್ ಸ್ವಯಂಚಾಲಿತವಾಗಿ ಒಟ್ಟು ಅಂಕಗಳನ್ನು ಲೆಕ್ಕ ಹಾಕುತ್ತದೆ.

ಮೌಲ್ಯಮಾಪನ ಮುಗಿದ ತಕ್ಷಣ ಅಂಕಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಆಗುವುದರಿಂದ ಫಲಿತಾಂಶ ಬೇಗ ಸಿಗುತ್ತದೆ. ಕಂಪ್ಯೂಟರ್ ತಾನಾಗಿಯೇ ಒಟ್ಟು ಅಂಕಗಳನ್ನು ಕೂಡುವುದರಿಂದ ಶಿಕ್ಷಕರು ಮಾಡುವ ಗಣಿತದ ತಪ್ಪುಗಳು ಇಲ್ಲಿ ಇರುವುದಿಲ್ಲ ಎನ್ನಲಾಗುತ್ತದೆ.

ಸಾಫ್ಟ್‌ವೇರ್‌ನಲ್ಲಿ ಎಲ್ಲ ಪ್ರಶ್ನೆಗಳಿಗೂ ಅಂಕ ನೀಡುವವರೆಗೂ ಸಬ್ಮಿಟ್ ಮಾಡಲು ಸಾಧ್ಯವಾಗದ ಕಾರಣ, ಯಾವುದೇ ಉತ್ತರ ಮೌಲ್ಯಮಾಪನವಾಗದೆ ಬಿಟ್ಟುಹೋಗುವ ಸಾಧ್ಯತೆ ಇರುವುದಿಲ್ಲ. ಭೌತಿಕ ಉತ್ತರ ಪತ್ರಿಕೆಗಳು ಕಳೆದುಹೋಗುವ ಅಥವಾ ಹಾನಿಯಾಗುವ ಭಯ ಇರುವುದಿಲ್ಲ.

ಸಾರ್ಥಕ್ ಸಿದ್ಧಾಂತ್ ಪ್ರಕರಣದಲ್ಲಿ ಉಂಟಾದ ಸಮಸ್ಯೆಗಳೇನು?

ಒಎಸ್‌ಎಂ ತಂತ್ರಜ್ಞಾನ ಒಳ್ಳೆಯದೇ ಆದರೂ, ಸಿಬಿಎಸ್ಇ ಬಳಸಿದ ವೆಂಡರ್ ಸಾಫ್ಟ್‌ವೇರ್‌ನಲ್ಲಿ ಗಂಭೀರ ಲೋಪಗಳಿದ್ದವು ಎಂದು ಸಾರ್ಥಕ್ ಆರೋಪಿಸಿದ್ದಾರೆ.

ಪೇಪರ್‌ಗಳನ್ನು ಸರಿಯಾಗಿ ಸ್ಕ್ಯಾನ್ ಮಾಡದ ಕಾರಣ ಶಿಕ್ಷಕರಿಗೆ ಉತ್ತರಗಳು ಸ್ಪಷ್ಟವಾಗಿ ಕಾಣಿಸದೆ ತಪ್ಪು ಮೌಲ್ಯಮಾಪನವಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಅವರಿಗೆ ಅಪೂರ್ಣ ಮತ್ತು ಕತ್ತರಿಸಿದ ಡಿಜಿಟಲ್ ಪ್ರತಿಗಳು ಸಿಕ್ಕಿವೆ. ಸಾಫ್ಟ್‌ವೇರ್ ಸರ್ವರ್‌ಗಳು ಸರಿಯಾಗಿ ಕೆಲಸ ಮಾಡದೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಸಾರ್ಥಕ್ ಹೇಳಿದ್ದಾರೆ.
















 

 

 

 

 

  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...