Homeಕರ್ನಾಟಕಸೋಮಶೇಖರ ರೆಡ್ಡಿ ವಿರುದ್ಧ ದೇಶದ್ರೋಹದ ದೂರು ದಾಖಲಿಸಿ: ಸಿದ್ದರಾಮಯ್ಯ ಒತ್ತಾಯ...

ಸೋಮಶೇಖರ ರೆಡ್ಡಿ ವಿರುದ್ಧ ದೇಶದ್ರೋಹದ ದೂರು ದಾಖಲಿಸಿ: ಸಿದ್ದರಾಮಯ್ಯ ಒತ್ತಾಯ…

ಸಂವಿಧಾನವಿರೋಧಿ ಭಾಷಣ ಮಾಡಿದ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ವಿರುದ್ಧ ಕಾಂಗ್ರೆಸ್‌ನಿಂದ ದೂರು ದಾಖಲು..

- Advertisement -
- Advertisement -

ಪ್ರಚೋದನಾತ್ಮಕ ಹೇಳಿಕೆ ನೀಡಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಿರುವ ಶಾಸಕ ಸೋಮಶೇಖರ ರೆಡ್ಡಿಯವರ ವಿರುದ್ಧ ದೇಶದ್ರೋಹದ ಕ್ರಿಮಿನಲ್ ಕೇಸು ದಾಖಲಿಸುವಂತೆ ಕಾಂಗ್ರೆಸ್ ಮುಖಂಡರ ನಿಯೋಗ ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿದೆ.

ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ರಾಜುರವರು ರಜೆಯಿದ್ದ ಕಾರಣ ಅವರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ದೂರು ಸ್ವೀಕರಿಸಿದ್ದಾರೆ.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ “ಸೋಮಶೇಖರ ರೆಡ್ಡಿಯವರ ಮಾತುಗಳು ಬಿಜೆಪಿಯ ಮನಸ್ಥಿತಿಯನ್ನು ತಿಳಿಸುತ್ತವೆ. ಬಹಳ ಸ್ಪಷ್ಟವಾಗಿ ಒಂದು ಕೋಮನ್ನು ಗುರಿಯಾಗಿಟ್ಟುಕೊಂಡು ಸೋಮಶೇಖರ ರೆಡ್ಡಿ ಮಾತಾಡಿದ್ದಾರೆ. ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶದ ಉದ್ದಗಲಕ್ಕೂ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಧರ್ಮದ ಜನರು ಜಾತ್ಯತೀತವಾಗಿ, ಪಕ್ಷಾತೀತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಿರುವಾಗ ಇವರು ಕೋಮುಗಲಭೆಗೆ ಪ್ರಚೋದನೆ ಮಾಡುತ್ತಿದ್ದಾರೆ. ಇದು ದೇಶದ್ರೋಹದ ಕೆಲಸವಾಗಿದೆ” ಎಂದಿದ್ದಾರೆ.

ಸೋಮಶೇಖರ ರೆಡ್ಡಿ ಭಾಷಣ ಸಂಪೂರ್ಣವಾಗಿ ಸಂವಿಧಾನಕ್ಕೆ ವಿರುದ್ಧವಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವ ಒಬ್ಬ ಶಾಸಕ ಇಂತವರೇ ಸಂವಿಧಾನ ವಿರುದ್ಧವಾಗಿ ಪ್ರಚೋದನಾಕಾರಿಯಾಗಿ ಮಾತಾಡಿದ್ದಾರೆ, ಕೋಮುಗಲಭೆಗೆ ಆಸ್ಪದ ಕೊಡುವ ಮಾತುಗಳನ್ನಾಡಿದ್ದಾರೆ. ಕೂಡಲೇ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿ ಅರೆಸ್ಟ್‌ ಮಾಡಬೇಕಿತ್ತು. ಮಾಡಿಲ್ಲ, ಇಂದು ಪ್ರತಿಭಟನೆ ಮಾಡಿದ ಮೇಲೆ, ನಾವು ದೂರು ಕೊಡಲು ಬಂದಾಗ ಮಾತ್ರ ದೂರು ದಾಖಲಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೂರಿನಲ್ಲಿ ಯಾವು ಸೆಕ್ಷನ್‌ಗಳನ್ನು ಹಾಕಿದ್ದಾರೆ ಗೊತ್ತಿಲ್ಲ. ಇವರನ್ನು ಸುಮ್ಮನೆ ಬಿಟ್ಟರೆ ಸಮಾಜಕ್ಕೆ ಬಹಳ ಅಪಾಯಕಾರಿಯಾಗುತ್ತದೆ. ಆದರೆ ದೇಶದ್ರೋಹದ ಆಧಾರದಲ್ಲಿ ಸೆಕ್ಷನ್‌ಗಳನ್ನು ಹಾಕಿ ಬಂಧಿಸಬೇಕೆಂದು ಒತ್ತಾಯ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಶಾಂತಿ ಕಾಪಾಡಿ

ಈ ಘಟನೆಯಿಂದ ಕೆರಳಿ ಯಾರು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ. ಶಾಂತಿಯಿಂದ ವರ್ತಿಸಿ. ಕಾನೂನು ಇದೆ, ಅದರ ರೀತಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ನಂಬಿದ್ದೇನೆ. ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ ಆಗ ಮುಂದಿನ ನಡೆಯನ್ನು ತೀರ್ಮಾನಿಸೋಣ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಅವರೊಂದಿಗೆ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಈಶ್ವರ ಖಂಡ್ರೆ ದಿನೇಶ್ ಗುಂಡೂರಾವ್‌, ವಿ.ಎಸ್‌ ಉಗ್ರಪ್ಪ, ಜಮೀರ್‌ ಅಹ್ಮದ್‌ ಖಾನ್‌, ಪುಷ್ಪ ಅಮರನಾಥ್, ಹಂಪನಗೌಡ ಬಾದರ್ಲಿ ಮತ್ತಿತರರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...