Homeಮುಖಪುಟಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

- Advertisement -
- Advertisement -

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ ನೀಡಿದರು.

ನವದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯನ್ನುದ್ದೇಶಿಸಿ ಅವರು, 2026ರ ಏಪ್ರಿಲ್ 17ರಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ನಡೆಸಿದ ಜಂಟಿ ಹೋರಾಟವನ್ನು ಸ್ಮರಿಸಿದರು. ಕೇಂದ್ರ ಸರ್ಕಾರ ಪ್ರಸ್ತಾಪಿಸಿದ್ದ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಸೋಲಿಸುವ ಮೂಲಕ ಮೈತ್ರಿಕೂಟವು ತನ್ನ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಹೇಳಿದರು. ಅಲ್ಲದೆ, ವಿರೋಧ ಪಕ್ಷಗಳು ಇದೇ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸಿಕೊಳ್ಳಬೇಕು ಎಂದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಲಕ್ಷಾಂತರ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಖರ್ಗೆ ಆರೋಪಿಸಿದರು. ಕೇಂದ್ರ ಸರ್ಕಾರ ಸಂವಿಧಾನದ ಮೇಲಿನ ದಾಳಿಗಳನ್ನು ಮುಂದುವರೆಸಿದೆ, ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ಬಿಜೆಪಿಯೇತರ ಸರ್ಕಾರಗಳ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ದೂರಿದರು.

“ಸಂವಿಧಾನದ ಮೇಲಿನ ದಾಳಿಯು ನಿರಂತರವಾಗಿ ಮುಂದುವರಿದಿದೆ” ಎಂದು ಹೇಳಿದ ಖರ್ಗೆ, ತನಿಖಾ ಸಂಸ್ಥೆಗಳನ್ನು “ರಾಜಕೀಯ ವಿರೋಧಿಗಳನ್ನು ಹೆದರಿಸುವ ಸಾಧನಗಳಾಗಿ ನಿರಂತರವಾಗಿ ಬಳಸಲಾಗುತ್ತಿದೆ” ಎಂದು ಆರೋಪಿಸಿದರು.

ದೇಶದಾದ್ಯಂತ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಎದುರಿಸುತ್ತಲೇ ಇದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಬಿಜೆಪಿಯೇತರ ಆಡಳಿತದ ಸರ್ಕಾರಗಳು ತಾರತಮ್ಯ ಎದುರಿಸುತ್ತಿವೆ ಎಂದು ಖರ್ಗೆ ಆರೋಪಿಸಿದರು. ನಾಗರಿಕರನ್ನು ಬಾಧಿಸುವ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲು ವಿರೋಧ ಪಕ್ಷಗಳು ಒಗ್ಗಟ್ಟಾಗಿರಬೇಕು ಎಂದು ಅವರು ಕರೆ ನೀಡಿದರು.

ಪರೀಕ್ಷಾ ವ್ಯವಸ್ಥೆಯ ಹಗರಣಗಳಿಂದ ಲಕ್ಷಾಂತರ ಯುವಕರ ಆಶೋತ್ತರಗಳಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಹೇಳುವ ಮೂಲಕ ಖರ್ಗೆ ಅವರು ನಿರುದ್ಯೋಗ ಮತ್ತು ನೇಮಕಾತಿ ಕುರಿತು ಕಳವಳ ವ್ಯಕ್ತಪಡಿಸಿದರು. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಪ್ರಸ್ತಾಪಿಸಿದ ಅವರು, ಹೆಚ್ಚುತ್ತಿರುವ ಆಡಳಿತಾತ್ಮಕ ವೈಫಲ್ಯಗಳ ವಿರುದ್ಧ ವಿರೋಧ ಪಕ್ಷಗಳು ಸಂಘಟಿತವಾಗಿ ಪ್ರತಿಕ್ರಿಯಿಸಬೇಕು ಎಂದು ಕರೆ ನೀಡಿದರು.

ದುರ್ಬಲ ಹೂಡಿಕೆ, ಖಾಸಗಿ ಏಕಸ್ವಾಮ್ಯದ ಬೆಳವಣಿಗೆ, ಎಂಎಸ್‌ಎಂಇಗಳು ಎದುರಿಸುತ್ತಿರುವ ಸವಾಲುಗಳು ಮತ್ತು ದಮನಿತ ಸಮುದಾಯಗಳ ಮೇಲಿನ ದೌರ್ಜನ್ಯಗಳ ಕುರಿತು ಖರ್ಗೆ ಮತ್ತಷ್ಟು ಕಳವಳ ವ್ಯಕ್ತಪಡಿಸಿದರು. ಭಾರತದ ಸುದೀರ್ಘ ಇತಿಹಾಸದ ಮೌಲ್ಯಗಳು ಮತ್ತು ನಿಲುವುಗಳೊಂದಿಗೆ ಕೇಂದ್ರ ಸರ್ಕಾರವು ರಾಜಿ ಮಾಡಿಕೊಂಡಿದೆ ಎಂದು ಪ್ರತಿಪಾದಿಸುವ ಮೂಲಕ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿದರು.

ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 23 ವಿರೋಧ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಭಾಗವಹಿಸಿದ್ದರು.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐಎನ್‌ಸಿ), ಸಮಾಜವಾದಿ ಪಾರ್ಟಿ (ಎಸ್‌ಪಿ), ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಿವಸೇನಾ (ಯುಬಿಟಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಲಿಬರೇಶನ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ವಿಡುದಲೈ ಚಿರುತ್ತೈಗಳ್ ಕಚ್ಚಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ಕೇರಳ ಕಾಂಗ್ರೆಸ್, ಕೇರಳ ಕಾಂಗ್ರೆಸ್ (ಎಂ), ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿ, ಭಾರತ ಆದಿವಾಸಿ ಪಾರ್ಟಿ, ಲೋಕದಳ, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಮತ್ತು ಶೇತ್ಕರಿ ಕಾಮಗಾರ್ ಪಕ್ಷಗಳ ಪ್ರತಿನಿಧಿಗಳು ಇಂಡಿಯಾ ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ್ದರು.











ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...